AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಪ್ಪು ನನ್ನದೇ’: ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದ ಸೋಲಿಗೆ ಕಾರಣ ತಿಳಿಸಿದ ಆಮಿರ್ ಖಾನ್​

ಸಿನಿಮಾ ಸೋತಾಗ ಅದರ ಹೊಣೆಯನ್ನು ಬೇರೆಯವರಿಗೆ ಹೊರಿಸುವವರೇ ಹೆಚ್ಚು. ಆದರೆ ಆಮಿರ್​ ಖಾನ್​ ಅವರು ಆ ರೀತಿ ಅಲ್ಲ. ತಮ್ಮ ಸಿನಿಮಾದ ಸೋಲಿನ ಹೊಣೆಯನ್ನು ತಾವೇ ಹೊತ್ತುಕೊಂಡಿದ್ದಾರೆ. ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದ ಸೋಲಿನ ಬಗ್ಗೆ ಆಮಿರ್​ ಖಾನ್​ ಅವರು ಮುಕ್ತವಾಗಿ ಮಾತನಾಡಿದ್ದಾರೆ. ‘ದಿ ಗ್ರೇಟ್​ ಇಂಡಿಯನ್​ ಕಪಿಲ್​ ಶೋ’ ಕಾರ್ಯಕ್ರಮದಲ್ಲಿ ಈ ವಿಚಾರ ಚರ್ಚೆ ಆಗಿದೆ.

‘ತಪ್ಪು ನನ್ನದೇ’: ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದ ಸೋಲಿಗೆ ಕಾರಣ ತಿಳಿಸಿದ ಆಮಿರ್ ಖಾನ್​
ಆಮಿರ್​ ಖಾನ್​
ಮದನ್​ ಕುಮಾರ್​
|

Updated on: Apr 30, 2024 | 9:16 PM

Share

ನಟ ಆಮಿರ್​ ಖಾನ್​ ಅವರಿಗೆ ಇತ್ತೀಚಿನ ವರ್ಷಗಳಲ್ಲಿ ಸರಿಯಾದ ಗೆಲುವು ಸಿಕ್ಕಿಲ್ಲ. ‘ಲಾಲ್​ ಸಿಂಗ್​ ಚಡ್ಡಾ’ (Laal Singh Chaddha) ಸಿನಿಮಾ ಮೇಲೆ ಅವರು ಭಾರಿ ಭರವಸೆ ಇಟ್ಟುಕೊಂಡಿದ್ದರು. 2022ರಲ್ಲಿ ತೆರೆಕಂಡ ಆ ಸಿನಿಮಾ ಹೀನಾಯವಾಗಿ ಸೋತಿತು. ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಚಿತ್ರವನ್ನು ಆಮಿರ್​ ಖಾನ್​ ಅವರು ಹಿಂದಿಗೆ ‘ಲಾಲ್​ ಸಿಂಗ್​ ಚಡ್ಡಾ’ ಶೀರ್ಷಿಕೆಯಲ್ಲಿ ರಿಮೇಕ್​ ಮಾಡಿದರು. ಭಾರಿ ಪ್ರೀತಿ ಇಟ್ಟುಕೊಂಡು ಮಾಡಿದ್ದ ಆ ಸಿನಿಮಾ ಯಾಕೆ ಸೋತಿತು ಎಂಬುದನ್ನು ಈಗ ಆಮಿರ್ ಖಾನ್​ (Aamir Khan) ಅವರು ವಿವರಿಸಿದ್ದಾರೆ. ಸೋಲಿನ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ.

ಕಪಿಲ್​ ಶರ್ಮಾ ನಡೆಸಿಕೊಡುವ ‘ದಿ ಗ್ರೇಟ್​ ಇಂಡಿಯನ್​ ಕಪಿಲ್​ ಶೋ’ ಕಾರ್ಯಕ್ರಮಕ್ಕೆ ಆಮಿರ್​ ಖಾನ್​ ಅವರು ಅತಿಥಿಯಾಗಿ ಬಂದಿದ್ದಾರೆ. ಕಳೆದ ಶನಿವಾರ ನೆಟ್​ಫ್ಲಿಕ್ಸ್​ನಲ್ಲಿ ಅವರ ಎಪಿಸೋಡ್​ ಪ್ರಸಾರ ಆಯಿತು. ಅದರ ಕೆಲವು ತುಣುಕುಗಳನ್ನು ಸೋಶಿಯಲ್​ ಮೀಡಿಯಾದಲ್ಲೂ ಹಂಚಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಬಂದ ಕೆಲವು ಪ್ರೇಕ್ಷಕರ ಎದುರಿನಲ್ಲಿ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದ ಸೋಲಿನ ಬಗ್ಗೆ ಆಮಿರ್​ ಖಾನ್​ ಮಾತನಾಡಿದ್ದಾರೆ.

‘ನಾನು ಆ ಸಿನಿಮಾದಲ್ಲಿ ನನ್ನ ಅಭಿನಯದ ಪಿಚ್​ ಸ್ವಲ್ಪ ಜಾಸ್ತಿ ಮಾಡಿಕೊಂಡಿದ್ದೆ. ಅದು ಸರಿಯಾಗಿ ಮೂಡಿಬರಲಿಲ್ಲ. ಅದರಿಂದಾಗಿ ಇಡೀ ಸಿನಿಮಾಗೆ ತೊಂದರೆ ಆಯಿತು. ಅದರ ಪೂರ್ತಿ ಭಾರ ನನ್ನ ಮೇಲೆ ಇತ್ತು. ನಾನೇ ತಪ್ಪು ಮಾಡಿದೆ’ ಎಂದು ಆಮಿರ್​ ಖಾನ್​ ಅವರು ಹೇಳಿದ್ದಾರೆ. ಅಲ್ಲದೇ ವೃತ್ತಿಜೀವನದಲ್ಲಿ ತಮ್ಮ ತಪ್ಪುಗಳಿಂದ ಹೆಚ್ಚು ಕಲಿತಿರುವುದಾಗಿ ಆಮಿರ್​ ಖಾನ್​ ತಿಳಿಸಿದ್ದಾರೆ.

ಇದನ್ನೂ ಓದಿ: ‘ನನ್ನ ಮಕ್ಕಳೇ ನನ್ನ ಮಾತು ಕೇಳಲ್ಲ’: ಆಮಿರ್​ ಖಾನ್​ ಹೀಗೆ ಹೇಳಿದ್ದು ಯಾಕೆ?

ಖಾಸಗಿ ಲೈಫ್​ನ ಅನೇಕ ಸಂಗತಿಗಳ ಬಗ್ಗೆಯೂ ಆಮಿರ್​ ಖಾನ್​ ಅವರು ‘ದಿ ಗ್ರೇಟ್​ ಇಂಡಿಯನ್​ ಕಪಿಲ್​ ಶೋ’ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಈಗ ಅವರು ‘ಸಿತಾರೆ ಜಮೀನ್​ ಪರ್​’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ದರ್ಶೀಲ್​ ಸಫಾರಿ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ. ಅಭಿಮಾನಿಗಳಿಗೆ ಈ ಕಾಂಬಿನೇಷನ್​ ಬಗ್ಗೆ ತುಂಬ ನಿರೀಕ್ಷೆ ಇದೆ. ಆ ಸಿನಿಮಾ ಮೂಲಕವಾದರೂ ಆಮಿರ್​ ಖಾನ್​ ಗೆಲ್ಲುತ್ತಾರಾ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್