AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಪ್ಪು ನನ್ನದೇ’: ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದ ಸೋಲಿಗೆ ಕಾರಣ ತಿಳಿಸಿದ ಆಮಿರ್ ಖಾನ್​

ಸಿನಿಮಾ ಸೋತಾಗ ಅದರ ಹೊಣೆಯನ್ನು ಬೇರೆಯವರಿಗೆ ಹೊರಿಸುವವರೇ ಹೆಚ್ಚು. ಆದರೆ ಆಮಿರ್​ ಖಾನ್​ ಅವರು ಆ ರೀತಿ ಅಲ್ಲ. ತಮ್ಮ ಸಿನಿಮಾದ ಸೋಲಿನ ಹೊಣೆಯನ್ನು ತಾವೇ ಹೊತ್ತುಕೊಂಡಿದ್ದಾರೆ. ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದ ಸೋಲಿನ ಬಗ್ಗೆ ಆಮಿರ್​ ಖಾನ್​ ಅವರು ಮುಕ್ತವಾಗಿ ಮಾತನಾಡಿದ್ದಾರೆ. ‘ದಿ ಗ್ರೇಟ್​ ಇಂಡಿಯನ್​ ಕಪಿಲ್​ ಶೋ’ ಕಾರ್ಯಕ್ರಮದಲ್ಲಿ ಈ ವಿಚಾರ ಚರ್ಚೆ ಆಗಿದೆ.

‘ತಪ್ಪು ನನ್ನದೇ’: ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದ ಸೋಲಿಗೆ ಕಾರಣ ತಿಳಿಸಿದ ಆಮಿರ್ ಖಾನ್​
ಆಮಿರ್​ ಖಾನ್​
ಮದನ್​ ಕುಮಾರ್​
|

Updated on: Apr 30, 2024 | 9:16 PM

Share

ನಟ ಆಮಿರ್​ ಖಾನ್​ ಅವರಿಗೆ ಇತ್ತೀಚಿನ ವರ್ಷಗಳಲ್ಲಿ ಸರಿಯಾದ ಗೆಲುವು ಸಿಕ್ಕಿಲ್ಲ. ‘ಲಾಲ್​ ಸಿಂಗ್​ ಚಡ್ಡಾ’ (Laal Singh Chaddha) ಸಿನಿಮಾ ಮೇಲೆ ಅವರು ಭಾರಿ ಭರವಸೆ ಇಟ್ಟುಕೊಂಡಿದ್ದರು. 2022ರಲ್ಲಿ ತೆರೆಕಂಡ ಆ ಸಿನಿಮಾ ಹೀನಾಯವಾಗಿ ಸೋತಿತು. ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಚಿತ್ರವನ್ನು ಆಮಿರ್​ ಖಾನ್​ ಅವರು ಹಿಂದಿಗೆ ‘ಲಾಲ್​ ಸಿಂಗ್​ ಚಡ್ಡಾ’ ಶೀರ್ಷಿಕೆಯಲ್ಲಿ ರಿಮೇಕ್​ ಮಾಡಿದರು. ಭಾರಿ ಪ್ರೀತಿ ಇಟ್ಟುಕೊಂಡು ಮಾಡಿದ್ದ ಆ ಸಿನಿಮಾ ಯಾಕೆ ಸೋತಿತು ಎಂಬುದನ್ನು ಈಗ ಆಮಿರ್ ಖಾನ್​ (Aamir Khan) ಅವರು ವಿವರಿಸಿದ್ದಾರೆ. ಸೋಲಿನ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ.

ಕಪಿಲ್​ ಶರ್ಮಾ ನಡೆಸಿಕೊಡುವ ‘ದಿ ಗ್ರೇಟ್​ ಇಂಡಿಯನ್​ ಕಪಿಲ್​ ಶೋ’ ಕಾರ್ಯಕ್ರಮಕ್ಕೆ ಆಮಿರ್​ ಖಾನ್​ ಅವರು ಅತಿಥಿಯಾಗಿ ಬಂದಿದ್ದಾರೆ. ಕಳೆದ ಶನಿವಾರ ನೆಟ್​ಫ್ಲಿಕ್ಸ್​ನಲ್ಲಿ ಅವರ ಎಪಿಸೋಡ್​ ಪ್ರಸಾರ ಆಯಿತು. ಅದರ ಕೆಲವು ತುಣುಕುಗಳನ್ನು ಸೋಶಿಯಲ್​ ಮೀಡಿಯಾದಲ್ಲೂ ಹಂಚಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಬಂದ ಕೆಲವು ಪ್ರೇಕ್ಷಕರ ಎದುರಿನಲ್ಲಿ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದ ಸೋಲಿನ ಬಗ್ಗೆ ಆಮಿರ್​ ಖಾನ್​ ಮಾತನಾಡಿದ್ದಾರೆ.

‘ನಾನು ಆ ಸಿನಿಮಾದಲ್ಲಿ ನನ್ನ ಅಭಿನಯದ ಪಿಚ್​ ಸ್ವಲ್ಪ ಜಾಸ್ತಿ ಮಾಡಿಕೊಂಡಿದ್ದೆ. ಅದು ಸರಿಯಾಗಿ ಮೂಡಿಬರಲಿಲ್ಲ. ಅದರಿಂದಾಗಿ ಇಡೀ ಸಿನಿಮಾಗೆ ತೊಂದರೆ ಆಯಿತು. ಅದರ ಪೂರ್ತಿ ಭಾರ ನನ್ನ ಮೇಲೆ ಇತ್ತು. ನಾನೇ ತಪ್ಪು ಮಾಡಿದೆ’ ಎಂದು ಆಮಿರ್​ ಖಾನ್​ ಅವರು ಹೇಳಿದ್ದಾರೆ. ಅಲ್ಲದೇ ವೃತ್ತಿಜೀವನದಲ್ಲಿ ತಮ್ಮ ತಪ್ಪುಗಳಿಂದ ಹೆಚ್ಚು ಕಲಿತಿರುವುದಾಗಿ ಆಮಿರ್​ ಖಾನ್​ ತಿಳಿಸಿದ್ದಾರೆ.

ಇದನ್ನೂ ಓದಿ: ‘ನನ್ನ ಮಕ್ಕಳೇ ನನ್ನ ಮಾತು ಕೇಳಲ್ಲ’: ಆಮಿರ್​ ಖಾನ್​ ಹೀಗೆ ಹೇಳಿದ್ದು ಯಾಕೆ?

ಖಾಸಗಿ ಲೈಫ್​ನ ಅನೇಕ ಸಂಗತಿಗಳ ಬಗ್ಗೆಯೂ ಆಮಿರ್​ ಖಾನ್​ ಅವರು ‘ದಿ ಗ್ರೇಟ್​ ಇಂಡಿಯನ್​ ಕಪಿಲ್​ ಶೋ’ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಈಗ ಅವರು ‘ಸಿತಾರೆ ಜಮೀನ್​ ಪರ್​’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ದರ್ಶೀಲ್​ ಸಫಾರಿ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ. ಅಭಿಮಾನಿಗಳಿಗೆ ಈ ಕಾಂಬಿನೇಷನ್​ ಬಗ್ಗೆ ತುಂಬ ನಿರೀಕ್ಷೆ ಇದೆ. ಆ ಸಿನಿಮಾ ಮೂಲಕವಾದರೂ ಆಮಿರ್​ ಖಾನ್​ ಗೆಲ್ಲುತ್ತಾರಾ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ