AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush OTT Release: ಯಾವ ಒಟಿಟಿಯಲ್ಲಿ ಬರಲಿದೆ ‘ಆದಿಪುರುಷ್​’ ಸಿನಿಮಾ? ಡೇಟ್​ ಬಗ್ಗೆ ಶುರುವಾಗಿದೆ ಚರ್ಚೆ

Amazon Prime Video: ಪ್ರಭಾಸ್​, ಕೃತಿ ಸನೋನ್​, ಸೈಫ್​ ಅಲಿ ಖಾನ್​ ಮುಂತಾದ ಸ್ಟಾರ್​ ನಟರು ‘ಆದಿಪುರುಷ್​’ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹಾಗಾಗಿ ಭಾರಿ ಮೊತ್ತಕ್ಕೆ ಒಟಿಟಿ ಡೀಲ್​ ಮುಗಿದಿದೆ.

Adipurush OTT Release: ಯಾವ ಒಟಿಟಿಯಲ್ಲಿ ಬರಲಿದೆ ‘ಆದಿಪುರುಷ್​’ ಸಿನಿಮಾ? ಡೇಟ್​ ಬಗ್ಗೆ ಶುರುವಾಗಿದೆ ಚರ್ಚೆ
ಪ್ರಭಾಸ್​
ಮದನ್​ ಕುಮಾರ್​
|

Updated on: Jun 16, 2023 | 4:33 PM

Share

ಇದು ಒಟಿಟಿ ಜಮಾನಾ. ಮನೆಯಲ್ಲೇ ಕುಳಿತು ಹೊಸ ಸಿನಿಮಾಗಳನ್ನು ನೋಡಲು ಪ್ರೇಕ್ಷಕರು ಬಯಸುತ್ತಾರೆ. ಚಿತ್ರಮಂದಿರದಲ್ಲಿ ಬಿಡುಗಡೆಯಾದ ಸಿನಿಮಾಗಳು ಆದಷ್ಟು ಬೇಗ ಒಟಿಟಿಗೆ ಬರಲಿ ಎಂದು ಕಾಯುವಂತಹ ಕಾಲ ಇದು. ಮೊದಲ ಲಾಕ್​ಡೌನ್​ ಬಳಿಕ ಒಟಿಟಿ (OTT) ಬಳಕೆ ಹೆಚ್ಚಾಯಿತು. ಈಗ ಎಲ್ಲ ಒಟಿಟಿ ಸಂಸ್ಥೆಗಳ ನಡುವೆ ಪೈಪೋಟಿ ಇದೆ. ಸ್ಟಾರ್​ ನಟರ ಸಿನಿಮಾಗಳನ್ನು ಜನರಿಗೆ ತಲುಪಿಸುವಲ್ಲಿ ಈ ಸಂಸ್ಥೆಗಳು ಹಣಾಹಣಿ ನಡೆಸುತ್ತವೆ. ಇಂದು (ಜೂನ್​ 16) ಚಿತ್ರಮಂದಿರದಲ್ಲಿ ಬಿಡುಗಡೆ ಆಗಿರುವ ಆದಿಪುರುಷ್​’ ಸಿನಿಮಾ (Adipurush) ಯಾವಾಗ ಒಟಿಟಿಗೆ ಬರಲಿದೆ ಎಂದು ಪ್ರೇಕ್ಷಕರು ಕಾಯುತ್ತಿದ್ದಾರೆ. ‘ಅಮೇಜಾನ್​ ಪ್ರೈಂ ವಿಡಿಯೋ’ (Amazon Prime Video) ಪಾಲಿಗೆ ಈ ಸಿನಿಮಾದ ಒಟಿಟಿ ಪ್ರಸಾರ ಹಕ್ಕುಗಳು ಸಿಕ್ಕಿವೆ. ಪ್ರಭಾಸ್​, ಕೃತಿ ಸನೋನ್​, ಸೈಫ್​ ಅಲಿ ಖಾನ್​ ಮುಂತಾದ ಸ್ಟಾರ್​ ನಟರು ಈ ಚಿತ್ರದಲ್ಲಿ ಅಭಿನಯಿಸಿರುವುದರಿಂದ ಭಾರಿ ಮೊತ್ತಕ್ಕೆ ಒಟಿಟಿ ಡೀಲ್​ ಮುಗಿದಿದೆ ಎಂದು ಹೇಳಲಾಗುತ್ತಿದೆ. ಆದಷ್ಟು ಬೇಗ ಒಟಿಟಿ ರಿಲೀಸ್​ ಡೇಟ್​ ಬಹಿರಂಗ ಆಗಲಿ ಎಂದು ಪ್ರೇಕ್ಷಕರು ಕಾಯುತ್ತಿದ್ದಾರೆ.

ಮೂಲಗಳ ಪ್ರಕಾರ ಆಗಸ್ಟ್​ 2ನೇ ವಾರದಲ್ಲಿ ‘ಆದಿಪುರುಷ್​’ ಚಿತ್ರವು ಒಟಿಟಿಗೆ ಬರಲಿದೆ. ಇದು ಹೈಬಜೆಟ್​ ಸಿನಿಮಾ ಆದ್ದರಿಂದ ಚಿತ್ರಮಂದಿರದಲ್ಲಿ ಹೆಚ್ಚು ಕಲೆಕ್ಷನ್​ ಮಾಡಬೇಕಾದ ಅನಿವಾರ್ಯತೆ ಇದೆ. ಒಂದು ವಾರದಲ್ಲಿ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದರ ಆಧಾರದ ಮೇಲೆ ಎಲ್ಲವೂ ನಿರ್ಧಾರ ಆಗಲಿದೆ. ಒಂದು ವೇಳೆ ದಿನದಿಂದ ದಿನಕ್ಕೆ ಕಲೆಕ್ಷನ್​ ಹೆಚ್ಚಾದರೆ ಒಟಿಟಿ ರಿಲೀಸ್​ ತಡವಾಗುತ್ತದೆ. ಕಲೆಕ್ಷನ್​ ಕುಸಿದರೆ ಕೆಲವೇ ವಾರಗಳಲ್ಲಿ ಈ ಸಿನಿಮಾ ಒಟಿಟಿಗೆ ಬರುವ ಸಾಧ್ಯತೆ ಇರುತ್ತದೆ. ಇದು 3ಡಿ ಸಿನಿಮಾ ಆದ್ದರಿಂದ ದೊಡ್ಡ ಪರದೆಯಲ್ಲೇ ನೋಡಬೇಕು ಎಂಬ ಉದ್ದೇಶದಿಂದ ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಿದ್ದಾರೆ.

ಇದನ್ನೂ ಓದಿ: ಹನುಮಂತನಿಗೆ ಕಾಯ್ದಿರಿಸಿದ ಸೀಟ್ ಮೇಲೆ ಕುಳಿತು ‘ಆದಿಪುರುಷ್’ ವೀಕ್ಷಣೆ; ನಡೆಯಿತು ಮಾರಣಾಂತಿಕ ಹಲ್ಲೆ

ಹಿಂದಿ ಪ್ರೇಕ್ಷಕರ ವಲಯದಲ್ಲಿ ‘ಆದಿಪುರುಷ್​’ ಸಿನಿಮಾದ ಹವಾ ಜೋರಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಕೆಲವು ಮಾಲ್​ಗಳಲ್ಲಿ ‘ಆದಿಪುರುಷ್​’ ಸಿನಿಮಾದ ಟಿಕೆಟ್​ಗಳು 2250 ರೂಪಾಯಿಗೆ ಮಾರಾಟ ಆಗಿವೆ. ಅಷ್ಟು ದುಬಾರಿ ಬೆಲೆ ಇದ್ದರೂ ಕೂಡ ಜನರು ಮುಗಿಬಿದ್ದು ಟಿಕೆಟ್​ ಖರೀದಿ ಮಾಡಿದ್ದಾರೆ. ಮೊದಲ ದಿನ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಆಗಿದೆ. ಆದ್ದರಿಂದ ಶುಕ್ರವಾರ (ಜೂನ್​ 16) ಈ ಸಿನಿಮಾಗೆ 85 ಕೋಟಿ ರೂಪಾಯಿ ಕಲೆಕ್ಷನ್​ ಆಗಲಿದೆ ಎಂದು ಕೆಲವರು ಅಂದಾಜಿಸಿದ್ದಾರೆ. ಕೇರಳ ಮತ್ತು ತಮಿಳುನಾಡಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಜನರು ಚಿತ್ರಮಂದಿರಕ್ಕೆ ಬಂದಿಲ್ಲ. ಹಾಗಾಗಿ ಗಲ್ಲಾಪೆಟ್ಟಿಗೆ ಗಳಿಕೆ ಮೇಲೆ ಹೊಡೆತ ಬೀಳಬಹುದು. ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ‘ಆದಿಪುರುಷ್​’ ಚಿತ್ರತಂಡದವರು ಸರಿಯಾದ ರೀತಿಯಲ್ಲಿ ಪ್ರಚಾರ ಮಾಡಿಲ್ಲ. ಆದ್ದರಿಂದ ಇಲ್ಲಿ ಕಲೆಕ್ಷನ್​ ತಗ್ಗಬಹುದು.

ಇದನ್ನೂ ಓದಿ: Adipurush Movie: ‘ಓಂ ರಾವತ್​ ದಯವಿಟ್ಟು ನಿಮ್ಮ ಅಡ್ರೆಸ್ ಕೊಡಿ’; ‘ಆದಿಪುರುಷ್’ ಸಿನಿಮಾ ನೋಡಿ ಸಿಟ್ಟಾದ ಫ್ಯಾನ್ಸ್

ಓಂ ರಾವತ್​ ಅವರು ‘ಆದಿಪುರುಷ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜಯ್​ ದೇವಗನ್ ನಟಿಸಿದ್ದ ‘ತಾಜಾಜಿ’ ಸಿನಿಮಾವನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿದ್ದ ಅವರು ಈಗ ‘ಆದಿಪುರುಷ್​’ ವಿಚಾರದಲ್ಲಿ ಟ್ರೋಲ್ ಆಗುತ್ತಿದ್ದಾರೆ. ಕೆಲವರಿಗೆ ಈ ಸಿನಿಮಾ ಇಷ್ಟ ಆಗಿಲ್ಲ. ರಾಮಾಯಣವನ್ನು ಓಂ ರಾವತ್​ ಅವರು ಚಿತ್ರಿಸಿದ ರೀತಿಗೆ ಟೀಕೆ ವ್ಯಕ್ತವಾಗುತ್ತಿದೆ. ರಾಮ-ರಾವಣನ ನಡುವಿನ ಯುದ್ಧ ಒಂದು ರೀತಿಯಲ್ಲಿ ವಿಡಿಯೋ ಗೇಮ್​ ಇದ್ದಂತೆ ಇದೆ ಎಂದು ಕೆಲವರು ವ್ಯಂಗ್ಯ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!