AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Netflix: ‘ನವರಸ’ ಚಿತ್ರ ಬಿಡುಗಡೆಯಾದ ಬೆನ್ನಲ್ಲೇ ನೆಟ್​ಫ್ಲಿಕ್ಸ್ ಬ್ಯಾನ್ ಮಾಡಬೇಕು ಎಂಬ ಕೂಗೆದ್ದಿರುವುದೇಕೆ?

Navarasa: ನವರಸ ಚಿತ್ರವು ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆಯಾದ ಬೆನ್ನಲ್ಲೇ ನೆಟ್​ಫ್ಲಿಕ್ಸ್ ಬ್ಯಾನ್ ಆಗಬೇಕು ಎಂಬ ಕೂಗೆದ್ದಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Netflix: ‘ನವರಸ’ ಚಿತ್ರ ಬಿಡುಗಡೆಯಾದ ಬೆನ್ನಲ್ಲೇ ನೆಟ್​ಫ್ಲಿಕ್ಸ್ ಬ್ಯಾನ್ ಮಾಡಬೇಕು ಎಂಬ ಕೂಗೆದ್ದಿರುವುದೇಕೆ?
ನವರಸ ಚಿತ್ರದ ಪೋಸ್ಟರ್(ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Aug 08, 2021 | 10:18 AM

Share

ಶುಕ್ರವಾರ (ಆಗಸ್ಟ್ 6)ರಂದು ನೆಟ್​ಫ್ಲಿಕ್ಸ್ 9 ಕತೆಗಳುಳ್ಳ ‘ನವರಸ’(Navarasa) ಚಿತ್ರವನ್ನು ಬಿಡುಗಡೆಗೊಳಿಸಿತ್ತು. ಖ್ಯಾತ ನಿರ್ದೇಶಕ, ನಿರ್ಮಾಪಕ ಮಣಿರತ್ನಂ ನಿರ್ಮಿಸಿರುವ ಈ ಚಿತ್ರ ವಿಮರ್ಶಕರಿಂದ ಮೆಚ್ಚುಗೆಗೂ ಪಾತ್ರವಾಗಿತ್ತು. ಆದರೆ ಈಗ ನೆಟ್​ಫ್ಲಿಕ್ಸನ್ನೇ ಬ್ಯಾನ್ ಮಾಡಬೇಕು ಎಂಬ ಕೂಗು ಎದ್ದಿದೆ. ಟ್ವಿಟರ್​ನಲ್ಲಿ ಈ ಕುರಿತು ಬರೆದುಕೊಂಡಿರುವ ‘ರಾಜಾ ಅಕಾಡೆಮಿ’(Raza Academy) ನೆಟ್​ಫ್ಲಿಕ್ಸ್ ತಮಿಳು ಪತ್ರಿಕೆಯೊಂದಕ್ಕೆ ನೀಡಿರುವ ಜಾಹಿರಾತಿನಲ್ಲಿ ಮುಸ್ಲಿಮರ ಭಾವನೆಗೆ ಧಕ್ಕೆಯಾಗಿದೆ ಎಂಬ ಆರೋಪ ಮಾಡಿದೆ.

ನೆಟ್​ಫ್ಲಿಕ್ಸ್ ಬಿಡುಗಡೆ ಮಾಡಿರುವ ಪೋಸ್ಟರ್: 

Inmai

ವಿವಾದಕ್ಕೀಡಾಗಿರುವ ‘ಇನ್ಮಯಿ’ ಚಿತ್ರದ ಪೋಸ್ಟರ್ (ಕೃಪೆ: Netflix)

ಚಿತ್ರ ಬಿಡುಗಡೆಯಾದ ಆಗಸ್ಟ್ 6ರ ಮಧ್ಯರಾತ್ರಿಯಿಂದಲೇ  #BanNetflix ಎಂಬ ಹ್ಯಾಶ್ ಟ್ಯಾಗ್ ಟ್ವಿಟರ್​ನಲ್ಲಿ ಟ್ರೆಂಡ್ ಆಗಿದೆ. ಸಿದ್ಧಾರ್ಥ್ ಮತ್ತು ಪಾರ್ವತಿ ಕಾಣಿಸಿಕೊಂಡಿರುವ ‘ಇನ್ಮಯಿ’(Inmai) ಚಿತ್ರದ ಪೋಸ್ಟರ್​ನಲ್ಲಿ ಕುರಾನ್ ಅನ್ನು ಬಳಸಿಕೊಂಡು ಧಾರ್ಮಿಕ ಭಾವನೆಗಳಿಗೆ ಅಪಚಾರ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಈ ಚಿತ್ರವನ್ನು ರತೀಂದ್ರನ್ ಆರ್ ಪ್ರಸಾದ್ ನಿರ್ದೇಶನ ಮಾಡಿದ್ದಾರೆ. ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಕಾರಣದಿಂದಾಗಿ, ನೆಟ್​ಫ್ಲಿಕ್ಸ್​ ಅನ್ನು ಬ್ಯಾನ್ ಮಾಡಬೇಕು ಎಂಬ ಕೂಗು ಟ್ವಿಟರ್​ನಲ್ಲಿ ಜೋರಾಗಿದೆ.

‘ರಾಜಾ ಅಕಾಡೆಮಿ’ ಈ ಕುರಿತು ಟ್ವೀಟ್ ಮಾಡಿದ್ದು, ‘ನೆಟ್​ಫ್ಲಿಕ್ಸ್ ಮುಸ್ಲಿಮರ ಪವಿತ್ರ ಗ್ರಂಥವಾದ ಕುರಾನ್​ಗೆ ಅವಮಾನವಾಗುವಂತೆ ಅದನ್ನು ಜಾಹಿರಾತಿನಲ್ಲಿ ಬಳಸಿಕೊಂಡಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮಕ್ಕೆ ನಾವು ಆಗ್ರಹಿಸುತ್ತೇವೆ’ ಎಂದು ಟ್ವೀಟ್ ಮಾಡಿದೆ.

ಆ ಟ್ವೀಟ್ ಇಲ್ಲಿದೆ:

ಈ ಟ್ವೀಟ್​ನ ನಂತರ ಜಾಗತಿಕವಾಗಿ ಬ್ಯಾನ್ ನೆಟ್​ಫ್ಲಿಕ್ಸ್ ಎಂಬ ಹ್ಯಾಶ್ ಟ್ಯಾಗ್ ಟ್ವಿಟರ್​ನಲ್ಲಿ ಟ್ರೆಂಡ್ ಆಗಿದೆ.

ಇದನ್ನೂ ಓದಿ:

Viral Video: ವಿಡಿಯೋ ಮಾಡ್ತಾ ಮಾಡ್ತಾ ಈಜುಕೊಳಕ್ಕೆ ಬಿದ್ದ ಕ್ಯಾಮರಾ ಮ್ಯಾನ್​​; ವಧು – ವರ ಕಂಗಾಲು! ವಿಡಿಯೋ ವೈರಲ್​

(After Navarasa Movie release Ban Netflix trend in twitter here is the reason)

Published On - 10:17 am, Sun, 8 August 21

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ