AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾಖಾಹಾರಿ’ ರೀತಿಯೇ ಗಮನ ಸೆಳೆದ ‘ಅಜ್ಞಾತವಾಸಿ’ ಈಗ ಒಟಿಟಿಗೆ; ಇಲ್ಲಿದೆ ವಿವರ

ರಂಗಾಯಣ ರಘು ಅಭಿನಯದ ಕನ್ನಡ ಕ್ರೈಮ್ ಥ್ರಿಲ್ಲರ್ ‘ಅಜ್ಞಾತವಾಸಿ’ ಚಿತ್ರವು ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಸ್ಟ್ರೀಮಿಂಗ್ ಆಗಲು ರೆಡಿ ಆಗಿದೆ. ಏಪ್ರಿಲ್ 11 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ ಈ ಚಿತ್ರವು ಒಟಿಟಿಯಲ್ಲಿ ಭರ್ಜರಿ ಪ್ರೇಕ್ಷಕರನ್ನು ಸೆಳೆಯುವ ನಿರೀಕ್ಷೆಯಿದೆ. ಜನಾರ್ಧನ್ ಚಿಕ್ಕಣ್ಣ ನಿರ್ದೇಶನದ ಈ ಚಿತ್ರವು ಕುತೂಹಲಕಾರಿ ಕಥಾವಸ್ತುವನ್ನು ಹೊಂದಿದೆ.

‘ಶಾಖಾಹಾರಿ’ ರೀತಿಯೇ ಗಮನ ಸೆಳೆದ ‘ಅಜ್ಞಾತವಾಸಿ’ ಈಗ ಒಟಿಟಿಗೆ; ಇಲ್ಲಿದೆ ವಿವರ
ಅಜ್ಞಾತವಾಸಿ
ರಾಜೇಶ್ ದುಗ್ಗುಮನೆ
|

Updated on:May 17, 2025 | 2:27 PM

Share

ಥಿಯೇಟರ್​ನಲ್ಲಿ ರಿಲೀಸ್ ಆದ ಸಿನಿಮಾಗಳು ಒಟಿಟಿಯಲ್ಲಿ ಯಾವಾಗ ಬರುತ್ತವೆ ಎಂದು ಪ್ರೇಕ್ಷಕರು ಕಾಯುತ್ತಾ ಇರುತ್ತಾರೆ. ಈಗ ಕನ್ನಡದ ಚಿತ್ರ ‘ಅಜ್ಞಾತವಾಸಿ’ (Agnyathavasi ) ಒಟಿಟಿಗೆ ಬರೋಕೆ ರೆಡಿ ಆಗಿದೆ. ಥಿಯೇಟರ್​ನಲ್ಲಿ ಗಮನ ಸೆಳೆದ ಈ ಚಿತ್ರವು ಒಟಿಟಿಯಲ್ಲಿ ಧೂಳೆಬ್ಬಿಸಲು ರೆಡಿ ಆಗಿದೆ. ಹಾಗಾದರೆ, ‘ಅಜ್ಞಾತವಾಸಿ’ ಸಿನಿಮಾ ಒಟಿಟಿಗೆ ಯಾವಾಗ ಬರಲಿದೆ? ಆ ಪ್ರಶ್ನೆಗೆ ಜೀ5 ಕಡೆಯಿಂದಲೇ ಅಧಿಕೃತ ಉತ್ತರ ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

‘ಅಜ್ಞಾತವಾಸಿ’ ಸಿನಿಮಾ ಏಪ್ರಿಲ್ 11ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ರಂಗಾಯಣ ರಘು, ಸಿದ್ದು ಮೂಲಿಮನಿ, ಶರತ್ ಲೋಹಿತಾಶ್ವ, ಪಾವನಾ ಗೌಡ, ರವಿಶಂಕರ್ ಗೌಡ ಇತರರು ನಟಿಸಿದ್ದಾರೆ. ‘ಗುಲ್ಟೂ’ ಚಿತ್ರವನ್ನು ನಿರ್ದೇಶನ ಮಾಡಿದ್ದ ಜನಾರ್ಧನ್ ಚಿಕ್ಕಣ್ಣ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಖ್ಯಾತ ನಿರ್ದೇಶಕ ಹೇಮಂತ್ ರಾವ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕ್ರೈಮ್ ಡ್ರಾಮಾ ಮಿಸ್ಟರಿಯನ್ನು ಈ ಚಿತ್ರ ಒಳಗೊಂಡಿದೆ. ಈ ಸಿನಿಮಾ ಈಗ ಒಟಿಟಿಗೆ ಬರುತ್ತಿದೆ. ಆ ಬಗ್ಗೆ ಜೀ5 ಮಾಹಿತಿ ನೀಡಿದೆ.

ಇದನ್ನೂ ಓದಿ
Image
ಅಮಿತಾಭ್​ಗೆ 200 ಜನರಿಂದ ರಕ್ತದಾನ; ಅವರ ಜೀವನವನ್ನೇ ನಾಶ ಮಾಡಿತು ಆ ಘಟನೆ
Image
ದಾದಾಸಾಹೇಬ್ ಫಾಲ್ಕೆ ಬಯೋಪಿಕ್ ಮಾಡ ಹೊರಟ ರಾಜಮೌಳಿಗೆ ಹಿನ್ನಡೆ
Image
ಸುಳ್ಳು ಹೇಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಚೈತ್ರಾ ಕುಂದಾಪುರ ತಂದೆ
Image
ಸಿನಿಮಾ ರಂಗದ ಹರಿಕಾರ ದಾದಾಸಾಹೇಬ್ ಫಾಲ್ಕೆ ಬಯೋಪಿಕ್​ನಲ್ಲಿ ಜೂ.ಎನ್​ಟಿಆರ್?

ಸಾಮಾನ್ಯವಾಗಿ ಸಿನಿಮಾಗಳು ವೀಕೆಂಡ್​ನಲ್ಲಿ ಪ್ರಸಾರ ಕಾಣುತ್ತವೆ. ಆದರೆ, ‘ಅಜ್ಞಾತವಾಸಿ’ ಸಿನಿಮಾ ಬುಧವಾರ (ಮೇ 28) ಪ್ರಸಾರ ಆರಂಭಿಸಲಿದೆ. ಒಟಿಟಿಯಲ್ಲಿ ವಾರದ ದಿನ ಚಿತ್ರದ ಬಗ್ಗೆ ಟಾಕ್ ಶುರುವಾದರೆ ವೀಕೆಂಡ್​ನಲ್ಲಿ ಹೆಚ್ಚಿನ ವೀಕ್ಷಣೆ ಪಡೆದುಕೊಳ್ಳಲಿದೆ. ಈ ತಂತ್ರದ ಮೇಲೆ ಸಿನಿಮಾನ ಮೇ 28ರಂದು ತೆರೆಗೆ ತರಲಾಗುತ್ತಿದೆ.  ಇನ್ನೊಂದು ದೃಷ್ಟಿಯಲ್ಲಿ ನೋಡೋದಾದರೆ ಸಿನಿಮಾ ರಿಲೀಸ್ ಆಗಿ ಏಳು ವಾರಗಳ ಬಳಿಕ ಚಿತ್ರ ಒಟಿಟಿಗೆ ಬರುತ್ತಿದೆ. ಈ ರೀತಿಯಲ್ಲಿ ಜೀ5 ಹಾಗೂ ನಿರ್ಮಾಪಕರ ಮಧ್ಯೆ ಒಪ್ಪಂದ ಆಗಿರಬಹುದು ಎಂದು ಕೂಡ ಹೇಳಲಾಗುತ್ತಿದೆ.

‘ಶಾಖಾಹಾರಿ’ ಸಿನಿಮಾ ಮೂಲಕ ರಂಗಾಯಣ ರಘು ಗಮನ ಸೆಳೆದವರು. ‘ಗುಳ್ಟು’ ರೀತಿಯ ಚಿತ್ರ ಕೊಟ್ಟವರು ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ ಮತ್ತೊಂದು ಕಡೆ. ಇವರಿಬ್ಬರೂ ಸೇರಿ ‘ಅಜ್ಞಾತವಾಸಿ’ ಸಿನಿಮಾ ಮಾಡಿದ್ದಾರೆ. ‘ಅಜ್ಞಾತವಾಸಿ’ ಸಿನಿಮಾದ ಕಥೆ ಒಂದು ಹಳ್ಳಿಯಲ್ಲಿ ಸಾಗುತ್ತದೆ.

ಇದನ್ನೂ ಓದಿ: Agnyathavasi Review: ಕೊಲೆಯ ಮಧ್ಯೆ ‘ಅಜ್ಞಾತದ’ ಕಥೆ; ಬಗೆದಷ್ಟು ವಿಶೇಷತೆ

‘ಅಜ್ಞಾತವಾಸಿ’ ಸಿನಿಮಾದಲ್ಲಿ ನಿಧಾನಗತಿಯಲ್ಲಿ ಸಾಗುತ್ತದೆ. ಆದರೆ, ಎಲ್ಲಿಯೂ ಬೋರ್ ಹೊಡೆಸುವುದಿಲ್ಲ. ಒಮ್ಮೆ ವೇಗ ಪಡೆದುಕೊಂಡ ಬಳಿಕ ಈ ಚಿತ್ರ ಸಾಕಷ್ಟು ಕುತೂಹಲ ಮೂಡಿಸುತ್ತದೆ. ಈ ಸಿನಿಮಾನ ಥಿಯೇಟರ್​ನಲ್ಲಿ ಮಿಸ್ ಮಾಡಿಕೊಂಡವರು ಕೆಲವೇ ದಿನಗಳಲ್ಲಿ ಒಟಿಟಿಯಲ್ಲಿ ವೀಕ್ಷಿಸಬಹುದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:21 pm, Sat, 17 May 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ