AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಿತ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ತೆಗೆದುಹಾಕಿದ ನೆಟ್​ಫ್ಲಿಕ್ಸ್

ಇಳೆಯರಾಜ ಅವರು ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಮೇಲೆ ಕಾಪಿರೈಟ್ ಉಲ್ಲಂಘನೆ ಕೇಸ್ ಹಾಕಿದ್ದಾರೆ. ಈ ಸಿನಿಮಾದ ಪ್ರಸಾರ ನಿಲ್ಲಿಸುವಂತೆ ಮದ್ರಾಸ್ ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿದೆ. ಹಾಗಾಗಿ ನೆಟ್​ಫ್ಕಿಕ್ಸ್ ಒಟಿಟಿಯಲ್ಲಿ ಈಗ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಸದ್ಯಕ್ಕೆ ಲಭ್ಯವಿಲ್ಲ.

ಅಜಿತ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ತೆಗೆದುಹಾಕಿದ ನೆಟ್​ಫ್ಲಿಕ್ಸ್
Ajith Kumar
ಮದನ್​ ಕುಮಾರ್​
|

Updated on: Sep 17, 2025 | 8:40 PM

Share

ಕಾಲಿವುಡ್ ನಟ ಅಜಿತ್ ಕುಮಾರ್ (Ajith Kumar) ಅಭಿನಯದ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಈ ವರ್ಷ ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಆಯಿತು. ಬಳಿಕ ಈ ಚಿತ್ರ ಒಟಿಟಿ ಅಂಗಳಕ್ಕೂ ಕಾಲಿಟ್ಟಿತು. ಇಷ್ಟು ದಿನಗಳ ಕಾಲ ಈ ಸಿನಿಮಾವನ್ನು ಒಟಿಟಿಯಲ್ಲಿ ನೋಡಿ ಪ್ರೇಕ್ಷಕರು ಎಂಜಾಯ್ ಮಾಡಿದ್ದಾರೆ. ಆದರೆ ಈಗ ಈ ಸಿನಿಮಾವನ್ನು ನೆಟ್​ಫ್ಲಿಕ್ಸ್ (Netflix) ತೆಗೆದುಹಾಕಿದೆ. ಇದರಿಂದ ಅಜಿತ್ ಕುಮಾರ್ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ. ಅಷ್ಟಕ್ಕೂ ‘ಗುಡ್ ಬ್ಯಾಡ್ ಅಗ್ಲಿ’ (Good Bad Ugly) ಸಿನಿಮಾವನ್ನು ಒಟಿಟಿಯಿಂದ ತೆಗೆದುಹಾಕಲು ಕಾರಣ ಏನು? ಕಾಪಿರೈಟ್ ಉಲ್ಲಂಘನೆ!

ಕಾಪಿರೈಟ್ ಉಲ್ಲಂಘನೆಯಿಂದ ಒಟಿಟಿ ಪ್ಲಾಟ್​ಫಾರ್ಮ್​​ಗಳಿಗೆ ತೊಂದರೆ ಆಗುತ್ತಿದೆ. ಒಂದು ವೇಳೆ ಕಾಪಿರೈಟ್ ಉಲ್ಲಂಘನೆ ಆಗಿರುವುದು ಕಂಡುಬಂದರೆ ಕಾನೂನಿನ ಪ್ರಕಾರ ಅಂತಹ ಸಿನಿಮಾಗಳ ಪ್ರಸಾರವನ್ನು ನಿಲ್ಲಿಸುವುದು ಅನಿವಾರ್ಯ ಆಗುತ್ತದೆ. ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾದ ಪ್ರಸಾರ ಹಕ್ಕುಗಳನ್ನು ಹೊಂದಿರುವ ನೆಟ್​ಫ್ಲಿಕ್ಸ್ ಕೂಡ ಈಗ ಕಾನೂನಿಗೆ ತಲೆಬಾಗಿ ಈ ಚಿತ್ರದ ಪ್ರಸಾರವನ್ನು ನಿಲ್ಲಿಸಿದೆ.

‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾವನ್ನು ನಿರ್ಮಾಣ ಮಾಡಿದೆ. ಈ ಚಿತ್ರದಲ್ಲಿ ಇಳೆಯರಾಜ ಅವರ ಹಾಡುಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಇದೆ. ಹಾಗಾಗಿ 5 ಕೋಟಿ ರೂಪಾಯಿ ಹಣ ನೀಡಬೇಕು ಮತ್ತು ಕ್ಷಮೆ ಕೇಳಬೇಕು ಎಂದು ಇಳೆಯರಾಜ ಒತ್ತಾಯಿಸಿದ್ದರು. ಬಳಿಕ ಈ ಸಿನಿಮಾ ಮೇಲೆ ಅವರು ಕೇಸ್ ಹಾಕಿದರು.

ಆ ಹಾಡುಗಳನ್ನು ಬಳಸಲು ತಮ್ಮ ಬಳಿ ಅನುಮತಿ ಇದೆ ಎಂದು ನಿರ್ಮಾಪಕರು ವಾದಿಸಿದರು. ಆದರೆ ಸೂಕ್ತ ದಾಖಲೆ ನೀಡಲಿಲ್ಲ. ಹಾಗಾಗಿ ಮದ್ರಾಸ್ ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿತು. ಈ ಸಿನಿಮಾದ ವಿತರಣೆ ಹಾಗೂ ಪ್ರಸಾರವನ್ನು ಕೂಡಲೇ ಎಲ್ಲ ಪ್ಲಾಟ್​ಫಾರ್ಮ್​​ಗಳಲ್ಲಿ ನಿಲ್ಲಿಸಬೇಕು ಎಂದು ಆದೇಶಿಸಲಾಯಿತು. ಅದರ ಅನ್ವಯ ನೆಟ್​ಫ್ಲಿಕ್ಸ್​ನಿಂದ ಈ ಸಿನಿಮಾವನ್ನು ತೆಗೆದುಹಾಕಲಾಗಿದೆ.

ಇದನ್ನೂ ಓದಿ: ಮತ್ತೊಂದು ಹೊಸ ಕಾರು ಖರೀದಿಸಿದ ನಟ ಅಜಿತ್ ಕುಮಾರ್, ಬೆಲೆ ಎಷ್ಟು?

ಅಧಿಕ್​ ರವಿಚಂದ್ರನ್ ಅವರು ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜಿತ್ ಕುಮಾರ್, ತ್ರಿಶಾ, ಅರ್ಜುನ್ ದಾಸ್, ಜಾಕಿ ಶ್ರಾಫ್, ಸುನಿಲ್, ಶೈನ್ ಟಾಮ್ ಚಾಕೋ, ಟಿನು ಆನಂದ್, ಪ್ರಿಯಾ ಪ್ರಕಾಶ್ ವಾರಿಯರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯಕ್ಕೆ ಈ ಸಿನಿಮಾ ನೆಟ್​ಫ್ಲಿಕ್ಸ್ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ