AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಿತ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ತೆಗೆದುಹಾಕಿದ ನೆಟ್​ಫ್ಲಿಕ್ಸ್

ಇಳೆಯರಾಜ ಅವರು ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಮೇಲೆ ಕಾಪಿರೈಟ್ ಉಲ್ಲಂಘನೆ ಕೇಸ್ ಹಾಕಿದ್ದಾರೆ. ಈ ಸಿನಿಮಾದ ಪ್ರಸಾರ ನಿಲ್ಲಿಸುವಂತೆ ಮದ್ರಾಸ್ ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿದೆ. ಹಾಗಾಗಿ ನೆಟ್​ಫ್ಕಿಕ್ಸ್ ಒಟಿಟಿಯಲ್ಲಿ ಈಗ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಸದ್ಯಕ್ಕೆ ಲಭ್ಯವಿಲ್ಲ.

ಅಜಿತ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ತೆಗೆದುಹಾಕಿದ ನೆಟ್​ಫ್ಲಿಕ್ಸ್
Ajith Kumar
ಮದನ್​ ಕುಮಾರ್​
|

Updated on: Sep 17, 2025 | 8:40 PM

Share

ಕಾಲಿವುಡ್ ನಟ ಅಜಿತ್ ಕುಮಾರ್ (Ajith Kumar) ಅಭಿನಯದ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಈ ವರ್ಷ ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಆಯಿತು. ಬಳಿಕ ಈ ಚಿತ್ರ ಒಟಿಟಿ ಅಂಗಳಕ್ಕೂ ಕಾಲಿಟ್ಟಿತು. ಇಷ್ಟು ದಿನಗಳ ಕಾಲ ಈ ಸಿನಿಮಾವನ್ನು ಒಟಿಟಿಯಲ್ಲಿ ನೋಡಿ ಪ್ರೇಕ್ಷಕರು ಎಂಜಾಯ್ ಮಾಡಿದ್ದಾರೆ. ಆದರೆ ಈಗ ಈ ಸಿನಿಮಾವನ್ನು ನೆಟ್​ಫ್ಲಿಕ್ಸ್ (Netflix) ತೆಗೆದುಹಾಕಿದೆ. ಇದರಿಂದ ಅಜಿತ್ ಕುಮಾರ್ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ. ಅಷ್ಟಕ್ಕೂ ‘ಗುಡ್ ಬ್ಯಾಡ್ ಅಗ್ಲಿ’ (Good Bad Ugly) ಸಿನಿಮಾವನ್ನು ಒಟಿಟಿಯಿಂದ ತೆಗೆದುಹಾಕಲು ಕಾರಣ ಏನು? ಕಾಪಿರೈಟ್ ಉಲ್ಲಂಘನೆ!

ಕಾಪಿರೈಟ್ ಉಲ್ಲಂಘನೆಯಿಂದ ಒಟಿಟಿ ಪ್ಲಾಟ್​ಫಾರ್ಮ್​​ಗಳಿಗೆ ತೊಂದರೆ ಆಗುತ್ತಿದೆ. ಒಂದು ವೇಳೆ ಕಾಪಿರೈಟ್ ಉಲ್ಲಂಘನೆ ಆಗಿರುವುದು ಕಂಡುಬಂದರೆ ಕಾನೂನಿನ ಪ್ರಕಾರ ಅಂತಹ ಸಿನಿಮಾಗಳ ಪ್ರಸಾರವನ್ನು ನಿಲ್ಲಿಸುವುದು ಅನಿವಾರ್ಯ ಆಗುತ್ತದೆ. ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾದ ಪ್ರಸಾರ ಹಕ್ಕುಗಳನ್ನು ಹೊಂದಿರುವ ನೆಟ್​ಫ್ಲಿಕ್ಸ್ ಕೂಡ ಈಗ ಕಾನೂನಿಗೆ ತಲೆಬಾಗಿ ಈ ಚಿತ್ರದ ಪ್ರಸಾರವನ್ನು ನಿಲ್ಲಿಸಿದೆ.

‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾವನ್ನು ನಿರ್ಮಾಣ ಮಾಡಿದೆ. ಈ ಚಿತ್ರದಲ್ಲಿ ಇಳೆಯರಾಜ ಅವರ ಹಾಡುಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಇದೆ. ಹಾಗಾಗಿ 5 ಕೋಟಿ ರೂಪಾಯಿ ಹಣ ನೀಡಬೇಕು ಮತ್ತು ಕ್ಷಮೆ ಕೇಳಬೇಕು ಎಂದು ಇಳೆಯರಾಜ ಒತ್ತಾಯಿಸಿದ್ದರು. ಬಳಿಕ ಈ ಸಿನಿಮಾ ಮೇಲೆ ಅವರು ಕೇಸ್ ಹಾಕಿದರು.

ಆ ಹಾಡುಗಳನ್ನು ಬಳಸಲು ತಮ್ಮ ಬಳಿ ಅನುಮತಿ ಇದೆ ಎಂದು ನಿರ್ಮಾಪಕರು ವಾದಿಸಿದರು. ಆದರೆ ಸೂಕ್ತ ದಾಖಲೆ ನೀಡಲಿಲ್ಲ. ಹಾಗಾಗಿ ಮದ್ರಾಸ್ ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿತು. ಈ ಸಿನಿಮಾದ ವಿತರಣೆ ಹಾಗೂ ಪ್ರಸಾರವನ್ನು ಕೂಡಲೇ ಎಲ್ಲ ಪ್ಲಾಟ್​ಫಾರ್ಮ್​​ಗಳಲ್ಲಿ ನಿಲ್ಲಿಸಬೇಕು ಎಂದು ಆದೇಶಿಸಲಾಯಿತು. ಅದರ ಅನ್ವಯ ನೆಟ್​ಫ್ಲಿಕ್ಸ್​ನಿಂದ ಈ ಸಿನಿಮಾವನ್ನು ತೆಗೆದುಹಾಕಲಾಗಿದೆ.

ಇದನ್ನೂ ಓದಿ: ಮತ್ತೊಂದು ಹೊಸ ಕಾರು ಖರೀದಿಸಿದ ನಟ ಅಜಿತ್ ಕುಮಾರ್, ಬೆಲೆ ಎಷ್ಟು?

ಅಧಿಕ್​ ರವಿಚಂದ್ರನ್ ಅವರು ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜಿತ್ ಕುಮಾರ್, ತ್ರಿಶಾ, ಅರ್ಜುನ್ ದಾಸ್, ಜಾಕಿ ಶ್ರಾಫ್, ಸುನಿಲ್, ಶೈನ್ ಟಾಮ್ ಚಾಕೋ, ಟಿನು ಆನಂದ್, ಪ್ರಿಯಾ ಪ್ರಕಾಶ್ ವಾರಿಯರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯಕ್ಕೆ ಈ ಸಿನಿಮಾ ನೆಟ್​ಫ್ಲಿಕ್ಸ್ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು