AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಿತ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ತೆಗೆದುಹಾಕಿದ ನೆಟ್​ಫ್ಲಿಕ್ಸ್

ಇಳೆಯರಾಜ ಅವರು ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಮೇಲೆ ಕಾಪಿರೈಟ್ ಉಲ್ಲಂಘನೆ ಕೇಸ್ ಹಾಕಿದ್ದಾರೆ. ಈ ಸಿನಿಮಾದ ಪ್ರಸಾರ ನಿಲ್ಲಿಸುವಂತೆ ಮದ್ರಾಸ್ ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿದೆ. ಹಾಗಾಗಿ ನೆಟ್​ಫ್ಕಿಕ್ಸ್ ಒಟಿಟಿಯಲ್ಲಿ ಈಗ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಸದ್ಯಕ್ಕೆ ಲಭ್ಯವಿಲ್ಲ.

ಅಜಿತ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ತೆಗೆದುಹಾಕಿದ ನೆಟ್​ಫ್ಲಿಕ್ಸ್
Ajith Kumar
ಮದನ್​ ಕುಮಾರ್​
|

Updated on: Sep 17, 2025 | 8:40 PM

Share

ಕಾಲಿವುಡ್ ನಟ ಅಜಿತ್ ಕುಮಾರ್ (Ajith Kumar) ಅಭಿನಯದ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಈ ವರ್ಷ ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಆಯಿತು. ಬಳಿಕ ಈ ಚಿತ್ರ ಒಟಿಟಿ ಅಂಗಳಕ್ಕೂ ಕಾಲಿಟ್ಟಿತು. ಇಷ್ಟು ದಿನಗಳ ಕಾಲ ಈ ಸಿನಿಮಾವನ್ನು ಒಟಿಟಿಯಲ್ಲಿ ನೋಡಿ ಪ್ರೇಕ್ಷಕರು ಎಂಜಾಯ್ ಮಾಡಿದ್ದಾರೆ. ಆದರೆ ಈಗ ಈ ಸಿನಿಮಾವನ್ನು ನೆಟ್​ಫ್ಲಿಕ್ಸ್ (Netflix) ತೆಗೆದುಹಾಕಿದೆ. ಇದರಿಂದ ಅಜಿತ್ ಕುಮಾರ್ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ. ಅಷ್ಟಕ್ಕೂ ‘ಗುಡ್ ಬ್ಯಾಡ್ ಅಗ್ಲಿ’ (Good Bad Ugly) ಸಿನಿಮಾವನ್ನು ಒಟಿಟಿಯಿಂದ ತೆಗೆದುಹಾಕಲು ಕಾರಣ ಏನು? ಕಾಪಿರೈಟ್ ಉಲ್ಲಂಘನೆ!

ಕಾಪಿರೈಟ್ ಉಲ್ಲಂಘನೆಯಿಂದ ಒಟಿಟಿ ಪ್ಲಾಟ್​ಫಾರ್ಮ್​​ಗಳಿಗೆ ತೊಂದರೆ ಆಗುತ್ತಿದೆ. ಒಂದು ವೇಳೆ ಕಾಪಿರೈಟ್ ಉಲ್ಲಂಘನೆ ಆಗಿರುವುದು ಕಂಡುಬಂದರೆ ಕಾನೂನಿನ ಪ್ರಕಾರ ಅಂತಹ ಸಿನಿಮಾಗಳ ಪ್ರಸಾರವನ್ನು ನಿಲ್ಲಿಸುವುದು ಅನಿವಾರ್ಯ ಆಗುತ್ತದೆ. ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾದ ಪ್ರಸಾರ ಹಕ್ಕುಗಳನ್ನು ಹೊಂದಿರುವ ನೆಟ್​ಫ್ಲಿಕ್ಸ್ ಕೂಡ ಈಗ ಕಾನೂನಿಗೆ ತಲೆಬಾಗಿ ಈ ಚಿತ್ರದ ಪ್ರಸಾರವನ್ನು ನಿಲ್ಲಿಸಿದೆ.

‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾವನ್ನು ನಿರ್ಮಾಣ ಮಾಡಿದೆ. ಈ ಚಿತ್ರದಲ್ಲಿ ಇಳೆಯರಾಜ ಅವರ ಹಾಡುಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಇದೆ. ಹಾಗಾಗಿ 5 ಕೋಟಿ ರೂಪಾಯಿ ಹಣ ನೀಡಬೇಕು ಮತ್ತು ಕ್ಷಮೆ ಕೇಳಬೇಕು ಎಂದು ಇಳೆಯರಾಜ ಒತ್ತಾಯಿಸಿದ್ದರು. ಬಳಿಕ ಈ ಸಿನಿಮಾ ಮೇಲೆ ಅವರು ಕೇಸ್ ಹಾಕಿದರು.

ಆ ಹಾಡುಗಳನ್ನು ಬಳಸಲು ತಮ್ಮ ಬಳಿ ಅನುಮತಿ ಇದೆ ಎಂದು ನಿರ್ಮಾಪಕರು ವಾದಿಸಿದರು. ಆದರೆ ಸೂಕ್ತ ದಾಖಲೆ ನೀಡಲಿಲ್ಲ. ಹಾಗಾಗಿ ಮದ್ರಾಸ್ ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿತು. ಈ ಸಿನಿಮಾದ ವಿತರಣೆ ಹಾಗೂ ಪ್ರಸಾರವನ್ನು ಕೂಡಲೇ ಎಲ್ಲ ಪ್ಲಾಟ್​ಫಾರ್ಮ್​​ಗಳಲ್ಲಿ ನಿಲ್ಲಿಸಬೇಕು ಎಂದು ಆದೇಶಿಸಲಾಯಿತು. ಅದರ ಅನ್ವಯ ನೆಟ್​ಫ್ಲಿಕ್ಸ್​ನಿಂದ ಈ ಸಿನಿಮಾವನ್ನು ತೆಗೆದುಹಾಕಲಾಗಿದೆ.

ಇದನ್ನೂ ಓದಿ: ಮತ್ತೊಂದು ಹೊಸ ಕಾರು ಖರೀದಿಸಿದ ನಟ ಅಜಿತ್ ಕುಮಾರ್, ಬೆಲೆ ಎಷ್ಟು?

ಅಧಿಕ್​ ರವಿಚಂದ್ರನ್ ಅವರು ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜಿತ್ ಕುಮಾರ್, ತ್ರಿಶಾ, ಅರ್ಜುನ್ ದಾಸ್, ಜಾಕಿ ಶ್ರಾಫ್, ಸುನಿಲ್, ಶೈನ್ ಟಾಮ್ ಚಾಕೋ, ಟಿನು ಆನಂದ್, ಪ್ರಿಯಾ ಪ್ರಕಾಶ್ ವಾರಿಯರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯಕ್ಕೆ ಈ ಸಿನಿಮಾ ನೆಟ್​ಫ್ಲಿಕ್ಸ್ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು