AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತಕ್ಕೂ ಕಾಲಿಟ್ಟ ‘ಬಿಗ್​ ಬಾಸ್​ ಒಟಿಟಿ’; ಕನ್ನಡಿಗರಲ್ಲೂ ಹೆಚ್ಚಿತು ಕುತೂಹಲ

Bigg Boss OTT: ಈ ಕಾರ್ಯಕ್ರಮ ಟಿವಿಯಲ್ಲಿ ಪ್ರಸಾರ ಆಗುವುದಿಲ್ಲ. ಆಟದ ವೈಖರಿ ಇನ್ನಷ್ಟು ಭಿನ್ನವಾಗಿ ಇರುತ್ತದೆ. ಸ್ಪರ್ಧಿಗಳಿಗೆ ಕೊಂಚ ಬೋಲ್ಡ್​ ಆದಂತಹ ಟಾಸ್ಕ್​ಗಳನ್ನು ನೀಡಲಾಗುತ್ತದೆ.

ದಕ್ಷಿಣ ಭಾರತಕ್ಕೂ ಕಾಲಿಟ್ಟ ‘ಬಿಗ್​ ಬಾಸ್​ ಒಟಿಟಿ’; ಕನ್ನಡಿಗರಲ್ಲೂ ಹೆಚ್ಚಿತು ಕುತೂಹಲ
ಬಿಗ್ ಬಾಸ್ ಒಟಿಟಿ
TV9 Web
| Edited By: |

Updated on: Dec 26, 2021 | 7:55 AM

Share

ಬಿಗ್​ ಬಾಸ್​ (Bigg Boss) ರಿಲಿಯಾಟಿ ಶೋಗೆ ಅದರದ್ದೇ ಆದ ಪ್ರೇಕ್ಷಕರ ವರ್ಗ ಇದೆ. ಹಿಂದಿ, ತೆಲುಗು, ಕನ್ನಡ, ಮಲಯಾಳಂ, ತಮಿಳು ಮುಂತಾದ ಭಾಷೆಯಲ್ಲಿ ಈ ಕಾರ್ಯಕ್ರಮ ಯಶಸ್ವಿ ಆಗಿದೆ. ಹಲವು ಸೀಸನ್​ಗಳಲ್ಲಿ ನಡೆದುಕೊಂಡು ಬಂದಿರುವ ಈ ಶೋನಿಂದಾಗಿ ಸ್ಟಾರ್​ ಆದವರ ಸಂಖ್ಯೆ ದೊಡ್ಡದಿದೆ. ಈ ವರ್ಷದಿಂದ ಹಿಂದಿ ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಒಂದಷ್ಟು ಬದಲಾವಣೆಗಳು ಆದವು. ಇದೇ ಮೊದಲ ಬಾರಿಗೆ ‘ಬಿಗ್​ ಬಾಸ್​ ಒಟಿಟಿ’ (Bigg Boss OTT) ಎಂಬ ಕಾನ್ಸೆಪ್ಟ್​ ಪರಿಚಯಿಸಲಾಯಿತು. ಅದೀಗ ದಕ್ಷಿಣ ಭಾರತಕ್ಕೂ ಕಾಲಿಟ್ಟಿದೆ. ಅಕ್ಕಿನೇನಿ ನಾಗಾರ್ಜುನ (Akkineni Nagarjuna) ಅವರು ‘ತೆಲುಗು ಬಿಗ್​ ಬಾಸ್​ ಒಟಿಟಿ’ (Bigg Boss Telugu OTT) ನಡೆಸಿಕೊಡಲಿದ್ದಾರೆ. ಹಾಗಾದರೆ ಕನ್ನಡದಲ್ಲಿ ಈ ವರ್ಷನ್​ ಶುರುವಾಗುವುದು ಯಾವಾಗ ಎಂಬ ಕೌತುಕ ಕೂಡ ನಿರ್ಮಾಣ ಆಗಿದೆ.

ಮೊದಲ ಲಾಕ್​ಡೌನ್​ ಬಳಿಕ ಮನರಂಜನಾ ಕ್ಷೇತ್ರದಲ್ಲಿ ಭಾರಿ ಬದಲಾವಣೆಗಳಾದವು. ಚಿತ್ರಮಂದಿರಗಳಿಗಿಂತಲೂ ಹೆಚ್ಚಾಗಿ ಒಟಿಟಿ ಪ್ಲಾಟ್​ಫಾರ್ಮ್ ಮೂಲಕ ಸಿನಿಮಾ ನೋಡುವವರ ಸಂಖ್ಯೆ ಹೆಚ್ಚಿತು. ನೆಟ್​ಫ್ಲಿಕ್ಸ್​, ಅಮೇಜಾನ್​ ಪ್ರೈಂ ವಿಡಿಯೋ, ಜೀ5, ಡಿಸ್ನಿ ಪ್ಲಸ್​ ಹಾಟ್ ಸ್ಟಾರ್​ ಮುಂತಾದ ಒಟಿಟಿ ವೇದಿಕೆಗಳ ವ್ಯವಹಾರ ವೃದ್ಧಿಸಿತು. ಹಲವು ಸ್ಟಾರ್​ ನಟರ ಸಿನಿಮಾಗಳು ಕೂಡ ನೇರವಾಗಿ ಒಟಿಟಿ ಮೂಲಕ ಬಿಡುಗಡೆಯಾಗಿ ಒಳ್ಳೆಯ ಲಾಭ ಮಾಡಿಕೊಂಡ ಉದಾಹರಣೆ ಇದೆ. ಅದೇ ರೀತಿ ಬಿಗ್​ ಬಾಸ್​ ರಿಯಾಲಿಟಿ ಶೋ ಕೂಡ ಒಟಿಟಿ ಪ್ಲಾಟ್​ಫಾರ್ಮ್​ ಮೇಲೆ ಕಣ್ಣಿಟ್ಟಿತು.

ಕರಣ್​ ಜೋಹರ್​ ಅವರು ‘ಹಿಂದಿ ಬಿಗ್​ ಬಾಸ್​ ಒಟಿಟಿ’ ಮೊದಲ ಸೀಸನ್​ ನಡೆಸಿಕೊಟ್ಟರು. ಈಗ ನಾಗಾರ್ಜುನ ಅವರು ತೆಲುಗಿನಲ್ಲೇ ಶುರು ಮಾಡಲು ಸಜ್ಜಾಗಿದ್ದಾರೆ. ಈ ಕಾರ್ಯಕ್ರಮ ಟಿವಿಯಲ್ಲಿ ಪ್ರಸಾರ ಆಗುವುದಿಲ್ಲ. ಹಾಗಾಗಿ ಆಟದ ವೈಖರಿ ಇನ್ನಷ್ಟು ಭಿನ್ನವಾಗಿ ಇರುತ್ತದೆ. ಸ್ಪರ್ಧಿಗಳು ಹೆಚ್ಚು ಮುಚ್ಚುಮರೆ ಇಲ್ಲದೆ ನಡೆದುಕೊಳ್ಳುತ್ತಾರೆ. ಕೊಂಚ ಬೋಲ್ಡ್​ ಆದ ಟಾಸ್ಕ್​ಗಳು ಇರುತ್ತವೆ. ಈ ಎಲ್ಲ ಕಾರಣಗಳಿಂದಾಗಿ ಒಟಿಟಿ ಪ್ರೇಕ್ಷಕರನ್ನು ‘ತೆಲುಗು ಬಿಗ್​ ಬಾಸ್​ ಒಟಿಟಿ’ ಕಾರ್ಯಕ್ರಮ ಸೆಳೆದುಕೊಳ್ಳುವ ನಿರೀಕ್ಷೆ ಇದೆ.

ಇದರಲ್ಲಿ ಯಾರೆಲ್ಲ ಭಾಗವಹಿಸುತ್ತಾರೆ? ಯಾವಾಗಿಂದ ಶೋ ಆರಂಭ ಆಗಲಿದೆ ಎಂಬಿತ್ಯಾದಿ ಮಾಹಿತಿ ಇನ್ನಷ್ಟೇ ಲಭ್ಯ ಆಗಬೇಕಿದೆ. ಒಮಿಕ್ರಾನ್​ ಹರಡುವ ಭೀತಿ ಇರುವುದರಿಂದ ದೊಡ್ಡ ಮಟ್ಟದಲ್ಲಿ ರಿಯಾಲಿಟಿ ಶೋ ಆಯೋಜನೆ ಮಾಡುವುದು ಕಷ್ಟ ಕೂಡ ಹೌದು. ಹಾಗಾಗಿ ಮುಂದೇನಾಗುತ್ತದೆ ಎಂಬ ಪ್ರಶ್ನೆ ಎಲ್ಲ ಮನದಲ್ಲೂ ಮೂಡಿದೆ.

ಇದನ್ನೂ ಓದಿ:

ರಮೋಲಾ ‘ಕನ್ನಡತಿ’ ಧಾರಾವಾಹಿ ತೊರೆದಿದ್ದೇಕೆ? ಸಾನಿಯಾ ಪಾತ್ರ ಮಾಡೋರು ಯಾರು? ಇಲ್ಲಿದೆ ಉತ್ತರ

‘ಮುಸ್ಲಿಂ ಹುಡುಗನನ್ನು ಮದುವೆ ಆಗಲ್ಲ’: ಬಲವಾದ ಕಾರಣ ನೀಡಿದ ಮುಸ್ಲಿಂ ನಟಿ ಉರ್ಫಿ ಜಾವೇದ್​

Follow Us
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ