AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತಕ್ಕೂ ಕಾಲಿಟ್ಟ ‘ಬಿಗ್​ ಬಾಸ್​ ಒಟಿಟಿ’; ಕನ್ನಡಿಗರಲ್ಲೂ ಹೆಚ್ಚಿತು ಕುತೂಹಲ

Bigg Boss OTT: ಈ ಕಾರ್ಯಕ್ರಮ ಟಿವಿಯಲ್ಲಿ ಪ್ರಸಾರ ಆಗುವುದಿಲ್ಲ. ಆಟದ ವೈಖರಿ ಇನ್ನಷ್ಟು ಭಿನ್ನವಾಗಿ ಇರುತ್ತದೆ. ಸ್ಪರ್ಧಿಗಳಿಗೆ ಕೊಂಚ ಬೋಲ್ಡ್​ ಆದಂತಹ ಟಾಸ್ಕ್​ಗಳನ್ನು ನೀಡಲಾಗುತ್ತದೆ.

ದಕ್ಷಿಣ ಭಾರತಕ್ಕೂ ಕಾಲಿಟ್ಟ ‘ಬಿಗ್​ ಬಾಸ್​ ಒಟಿಟಿ’; ಕನ್ನಡಿಗರಲ್ಲೂ ಹೆಚ್ಚಿತು ಕುತೂಹಲ
ಬಿಗ್ ಬಾಸ್ ಒಟಿಟಿ
Follow us
TV9 Web
| Updated By: ಮದನ್​ ಕುಮಾರ್​

Updated on: Dec 26, 2021 | 7:55 AM

ಬಿಗ್​ ಬಾಸ್​ (Bigg Boss) ರಿಲಿಯಾಟಿ ಶೋಗೆ ಅದರದ್ದೇ ಆದ ಪ್ರೇಕ್ಷಕರ ವರ್ಗ ಇದೆ. ಹಿಂದಿ, ತೆಲುಗು, ಕನ್ನಡ, ಮಲಯಾಳಂ, ತಮಿಳು ಮುಂತಾದ ಭಾಷೆಯಲ್ಲಿ ಈ ಕಾರ್ಯಕ್ರಮ ಯಶಸ್ವಿ ಆಗಿದೆ. ಹಲವು ಸೀಸನ್​ಗಳಲ್ಲಿ ನಡೆದುಕೊಂಡು ಬಂದಿರುವ ಈ ಶೋನಿಂದಾಗಿ ಸ್ಟಾರ್​ ಆದವರ ಸಂಖ್ಯೆ ದೊಡ್ಡದಿದೆ. ಈ ವರ್ಷದಿಂದ ಹಿಂದಿ ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಒಂದಷ್ಟು ಬದಲಾವಣೆಗಳು ಆದವು. ಇದೇ ಮೊದಲ ಬಾರಿಗೆ ‘ಬಿಗ್​ ಬಾಸ್​ ಒಟಿಟಿ’ (Bigg Boss OTT) ಎಂಬ ಕಾನ್ಸೆಪ್ಟ್​ ಪರಿಚಯಿಸಲಾಯಿತು. ಅದೀಗ ದಕ್ಷಿಣ ಭಾರತಕ್ಕೂ ಕಾಲಿಟ್ಟಿದೆ. ಅಕ್ಕಿನೇನಿ ನಾಗಾರ್ಜುನ (Akkineni Nagarjuna) ಅವರು ‘ತೆಲುಗು ಬಿಗ್​ ಬಾಸ್​ ಒಟಿಟಿ’ (Bigg Boss Telugu OTT) ನಡೆಸಿಕೊಡಲಿದ್ದಾರೆ. ಹಾಗಾದರೆ ಕನ್ನಡದಲ್ಲಿ ಈ ವರ್ಷನ್​ ಶುರುವಾಗುವುದು ಯಾವಾಗ ಎಂಬ ಕೌತುಕ ಕೂಡ ನಿರ್ಮಾಣ ಆಗಿದೆ.

ಮೊದಲ ಲಾಕ್​ಡೌನ್​ ಬಳಿಕ ಮನರಂಜನಾ ಕ್ಷೇತ್ರದಲ್ಲಿ ಭಾರಿ ಬದಲಾವಣೆಗಳಾದವು. ಚಿತ್ರಮಂದಿರಗಳಿಗಿಂತಲೂ ಹೆಚ್ಚಾಗಿ ಒಟಿಟಿ ಪ್ಲಾಟ್​ಫಾರ್ಮ್ ಮೂಲಕ ಸಿನಿಮಾ ನೋಡುವವರ ಸಂಖ್ಯೆ ಹೆಚ್ಚಿತು. ನೆಟ್​ಫ್ಲಿಕ್ಸ್​, ಅಮೇಜಾನ್​ ಪ್ರೈಂ ವಿಡಿಯೋ, ಜೀ5, ಡಿಸ್ನಿ ಪ್ಲಸ್​ ಹಾಟ್ ಸ್ಟಾರ್​ ಮುಂತಾದ ಒಟಿಟಿ ವೇದಿಕೆಗಳ ವ್ಯವಹಾರ ವೃದ್ಧಿಸಿತು. ಹಲವು ಸ್ಟಾರ್​ ನಟರ ಸಿನಿಮಾಗಳು ಕೂಡ ನೇರವಾಗಿ ಒಟಿಟಿ ಮೂಲಕ ಬಿಡುಗಡೆಯಾಗಿ ಒಳ್ಳೆಯ ಲಾಭ ಮಾಡಿಕೊಂಡ ಉದಾಹರಣೆ ಇದೆ. ಅದೇ ರೀತಿ ಬಿಗ್​ ಬಾಸ್​ ರಿಯಾಲಿಟಿ ಶೋ ಕೂಡ ಒಟಿಟಿ ಪ್ಲಾಟ್​ಫಾರ್ಮ್​ ಮೇಲೆ ಕಣ್ಣಿಟ್ಟಿತು.

ಕರಣ್​ ಜೋಹರ್​ ಅವರು ‘ಹಿಂದಿ ಬಿಗ್​ ಬಾಸ್​ ಒಟಿಟಿ’ ಮೊದಲ ಸೀಸನ್​ ನಡೆಸಿಕೊಟ್ಟರು. ಈಗ ನಾಗಾರ್ಜುನ ಅವರು ತೆಲುಗಿನಲ್ಲೇ ಶುರು ಮಾಡಲು ಸಜ್ಜಾಗಿದ್ದಾರೆ. ಈ ಕಾರ್ಯಕ್ರಮ ಟಿವಿಯಲ್ಲಿ ಪ್ರಸಾರ ಆಗುವುದಿಲ್ಲ. ಹಾಗಾಗಿ ಆಟದ ವೈಖರಿ ಇನ್ನಷ್ಟು ಭಿನ್ನವಾಗಿ ಇರುತ್ತದೆ. ಸ್ಪರ್ಧಿಗಳು ಹೆಚ್ಚು ಮುಚ್ಚುಮರೆ ಇಲ್ಲದೆ ನಡೆದುಕೊಳ್ಳುತ್ತಾರೆ. ಕೊಂಚ ಬೋಲ್ಡ್​ ಆದ ಟಾಸ್ಕ್​ಗಳು ಇರುತ್ತವೆ. ಈ ಎಲ್ಲ ಕಾರಣಗಳಿಂದಾಗಿ ಒಟಿಟಿ ಪ್ರೇಕ್ಷಕರನ್ನು ‘ತೆಲುಗು ಬಿಗ್​ ಬಾಸ್​ ಒಟಿಟಿ’ ಕಾರ್ಯಕ್ರಮ ಸೆಳೆದುಕೊಳ್ಳುವ ನಿರೀಕ್ಷೆ ಇದೆ.

ಇದರಲ್ಲಿ ಯಾರೆಲ್ಲ ಭಾಗವಹಿಸುತ್ತಾರೆ? ಯಾವಾಗಿಂದ ಶೋ ಆರಂಭ ಆಗಲಿದೆ ಎಂಬಿತ್ಯಾದಿ ಮಾಹಿತಿ ಇನ್ನಷ್ಟೇ ಲಭ್ಯ ಆಗಬೇಕಿದೆ. ಒಮಿಕ್ರಾನ್​ ಹರಡುವ ಭೀತಿ ಇರುವುದರಿಂದ ದೊಡ್ಡ ಮಟ್ಟದಲ್ಲಿ ರಿಯಾಲಿಟಿ ಶೋ ಆಯೋಜನೆ ಮಾಡುವುದು ಕಷ್ಟ ಕೂಡ ಹೌದು. ಹಾಗಾಗಿ ಮುಂದೇನಾಗುತ್ತದೆ ಎಂಬ ಪ್ರಶ್ನೆ ಎಲ್ಲ ಮನದಲ್ಲೂ ಮೂಡಿದೆ.

ಇದನ್ನೂ ಓದಿ:

ರಮೋಲಾ ‘ಕನ್ನಡತಿ’ ಧಾರಾವಾಹಿ ತೊರೆದಿದ್ದೇಕೆ? ಸಾನಿಯಾ ಪಾತ್ರ ಮಾಡೋರು ಯಾರು? ಇಲ್ಲಿದೆ ಉತ್ತರ

‘ಮುಸ್ಲಿಂ ಹುಡುಗನನ್ನು ಮದುವೆ ಆಗಲ್ಲ’: ಬಲವಾದ ಕಾರಣ ನೀಡಿದ ಮುಸ್ಲಿಂ ನಟಿ ಉರ್ಫಿ ಜಾವೇದ್​

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ