AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಜೆಟ್​ ವೆಬ್​ ಸರಣಿಯಲ್ಲಿ ಅಕ್ಕಿನೇನಿ ನಾಗಾರ್ಜುನ? ಒಟ್ಟಿಗೆ ಒಟಿಟಿಗೆ ಕಾಲಿಡಲಿದ್ದಾರೆ ಅಪ್ಪ-ಮಗ?

ಅಕ್ಕಿನೇನಿ ನಾಗಾರ್ಜುನ ಹಾಗೂ ನಾಗ ಚೈತನ್ಯ ನಟನೆಯ ‘ಬಂಗಾರ್ರಾಜು’ ಚಿತ್ರ ಇತ್ತೀಚೆಗೆ ತೆರೆಗೆ ಬಂದು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿದೆ. ಸಂಕ್ರಾಂತಿ ಸಂದರ್ಭದಲ್ಲಿ ತೆರೆಗೆ ಬಂದ ಈ ಚಿತ್ರ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿದೆ. ಅಪ್ಪ-ಮಗನನ್ನು ಒಟ್ಟಿಗೆ ತೆರೆಮೇಲೆ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ.

ಬಿಗ್​ ಬಜೆಟ್​ ವೆಬ್​ ಸರಣಿಯಲ್ಲಿ ಅಕ್ಕಿನೇನಿ ನಾಗಾರ್ಜುನ? ಒಟ್ಟಿಗೆ ಒಟಿಟಿಗೆ ಕಾಲಿಡಲಿದ್ದಾರೆ ಅಪ್ಪ-ಮಗ?
ಅಕ್ಕಿನೇನಿ ನಾಗಾರ್ಜುನ-ನಾಗ ಚೈತನ್ಯ
TV9 Web
| Edited By: |

Updated on: Feb 08, 2022 | 6:00 AM

Share

ಅಕ್ಕಿನೇನಿ ನಾಗಾರ್ಜುನ (Akkineni Nagarjuna) ಅವರು ಹಲವು ಸಮಯದಿಂದ ಚಿತ್ರರಂಗದಲ್ಲಿದ್ದಾರೆ. ತಮ್ಮ ವೃತ್ತಿ ಜೀವನದಲ್ಲಿ ಹಲವು ಹಿಟ್​ ಚಿತ್ರಗಳನ್ನು ಅವರು ನೀಡಿದ್ದಾರೆ. ಅವರ ಮಗ ನಾಗ ಚೈತನ್ಯ (Naga Chaitanya) ಕೂಡ ಟಾಲಿವುಡ್​ನ ಬೇಡಿಕೆಯ ನಟ. ಅವರಿಗೂ ದೊಡ್ಡ ಅಭಿಮಾನಿ ಬಳಗ ಇದೆ. ಅಪ್ಪನ ನೆರಳಲ್ಲಿ ಬೆಳೆಯದೇ, ತಮ್ಮದೇ ಆದ ಸ್ವಂತ ಇಮೇಜ್​ ಕ್ರಿಯೇಟ್​ ಮಾಡಿಕೊಂಡಿದ್ದಾರೆ ಅವರು. ಈಗ ಇಬ್ಬರೂ ಒಟಿಟಿ ಮೇಲೆ ಕಣ್ಣಿಟ್ಟಿದ್ದಾರೆ. ಹಾಗಂತ, ಇಬ್ಬರೂ ಒಂದೇ ವೆಬ್​ ಸರಣಿಯಲ್ಲಿ ನಟಿಸುತ್ತಿಲ್ಲ. ಇಬ್ಬರೂ ಬೇರೆಬೇರೆ ವೆಬ್​ ಸೀರಿಸ್​ನಲ್ಲಿ ನಟಿಸೋಕೆ ರೆಡಿ ಆಗಿದ್ದಾರೆ. ಆದರೆ, ಈ ವೆಬ್​ ಸೀರಿಸ್​ಗಳು ಒಟ್ಟಿಗೆ ತೆರೆಗೆ ಬರುವ ನಿರೀಕ್ಷೆ ಇದೆ.

ಅಕ್ಕಿನೇನಿ ನಾಗಾರ್ಜುನ ಹಾಗೂ ನಾಗ ಚೈತನ್ಯ ನಟನೆಯ ‘ಬಂಗಾರ್ರಾಜು’ ಚಿತ್ರ ಇತ್ತೀಚೆಗೆ ತೆರೆಗೆ ಬಂದು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿದೆ. ಸಂಕ್ರಾಂತಿ ಸಂದರ್ಭದಲ್ಲಿ ತೆರೆಗೆ ಬಂದ ಈ ಚಿತ್ರ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿದೆ. ಅಪ್ಪ-ಮಗನನ್ನು ಒಟ್ಟಿಗೆ ತೆರೆಮೇಲೆ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಈಗ ಇವರ ಗಮನ ಒಟಿಟಿ ಮೇಲೆ ನೆಟ್ಟಿದೆ.

‘ದೂಥ’ ವೆಬ್​ ಸರಣಿಯಲ್ಲಿ ನಾಗ ಚೈತನ್ಯ ನಟಿಸಲಿದ್ದಾರೆ ಎನ್ನಲಾಗಿದೆ. ವೆಬ್​ ಸೀರಿಸ್​ನ ಟೈಟಲ್​ ಸದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಇದೊಂದು ಭಿನ್ನ ಕಾನ್ಸೆಪ್ಟ್​ನಲ್ಲಿ ಮೂಡಿ ಬರುತ್ತಿರುವ ವೆಬ್​ ಸರಣಿ ಎನ್ನಲಾಗಿದೆ. ಇದೊಂದು ಹಾರರ್​ ಥ್ರಿಲ್ಲರ್​ ವೆಬ್​ ಸರಣಿ ಇರಬಹುದು ಎಂಬುದು ಹಲವರ ಊಹೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

ಅದೇ ರೀತಿಯಲ್ಲಿ, ಡಿಸ್ನಿ ಪ್ಲಸ್ ಹಾಟ್​ ಸ್ಟಾರ್​ ಒಟಿಟಿ ಪ್ಲಾಟ್​ಫಾರ್ಮ್​ ಅಕ್ಕಿನೇನಿ ನಾಗಾರ್ಜುನ ಅವರಿಗೆ ವೆಬ್ ಸೀರಿಸ್​ ಆಫರ್​ ಒಂದನ್ನು ನೀಡಿದೆ ಎನ್ನಲಾಗುತ್ತಿದೆ. ಇದರಲ್ಲಿ ನಟಿಸೋಕೆ ಅವರು ಗ್ರೀನ್​ ಸಿಗ್ನಲ್​ ನೀಡಿದ್ದಾರೆ. ಇದನ್ನು ಯಾರು ನಿರ್ದೇಶನ ಮಾಡುತ್ತಿದ್ದಾರೆ? ಯಾವ ಶೈಲಿಯಲ್ಲಿ ವೆಬ್​ ಸರಣಿ ಮೂಡಿ ಬರುತ್ತಿದೆ ಎನ್ನುವ ವಿಚಾರ ಇನ್ನಷ್ಟೇ ಅಧಿಕೃತವಾಗಬೇಕಿದೆ.

ಕೊವಿಡ್ ಕಾಣಿಸಿಕೊಂಡ ನಂತರದಲ್ಲಿ ಎಲ್ಲರೂ ಒಟಿಟಿಯತ್ತ ಹೆಚ್ಚು ಆಕರ್ಷಿತರಾದರು. ಚಿತ್ರಮಂದಿರಗಳು ಹಲವು ತಿಂಗಳ ಕಾಲ ಮುಚ್ಚಿದ್ದರಿಂದ ಅನೇಕ ನಿರ್ಮಾಪಕರಿಗೆ ಒಟಿಟಿ ಆಯ್ಕೆ ಅನಿವಾರ್ಯವಾಗಿತ್ತು. ಒಟಿಟಿ ವ್ಯಾಪ್ತಿ ಹೆಚ್ಚಿದಂತೆ ವೆಬ್​ ಸೀರಿಸ್​ ಕ್ರೇಜ್​ ಹೆಚ್ಚುತ್ತಾ ಬಂತು. ಸ್ಟಾರ್​ ನಟರುಗಳು ವೆಬ್​ ಸೀರಿಸ್​ನಲ್ಲಿ ನಟಿಸೋಕೆ ಆದ್ಯತೆ ಕೊಡೋಕೆ ಆರಂಭಿಸಿದರು. ಅದೇ ರೀತಿ ಅಕ್ಕಿನೇನಿ ನಾಗಾರ್ಜುನ ಕೂಡ ವೆಬ್​ ಸೀರಿಸ್​ ಲೋಕಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ.

ಇದನ್ನೂ ಓದಿ: ಸಮಂತಾ ಹಾದಿಯಲ್ಲಿ ನಾಗ ಚೈತನ್ಯ; ಹೊಸ ಪ್ರಯತ್ನಕ್ಕೆ ಸಿಗಲಿದೆಯೇ ಯಶಸ್ಸು?

‘ಸಮಂತಾ ಬಗ್ಗೆ ನಾನು ಯಾವುದೇ ಹೇಳಿಕೆ ನೀಡಿಲ್ಲ’; ಕಿಡಿಕಾರಿದ ಅಕ್ಕಿನೇನಿ ನಾಗಾರ್ಜುನ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ