AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cuttputlli: ಒಟಿಟಿಯಲ್ಲಿ ಅಕ್ಷಯ್​ ಕುಮಾರ್​ ಚಿತ್ರಕ್ಕೆ ಗೆಲುವು; ಪೂರ್ತಿ ಬದಲಾಗುತ್ತಾ ಸ್ಟಾರ್​ ನಟನ ಭವಿಷ್ಯದ ಪ್ಲ್ಯಾನ್​?

Akshay Kumar: ಚಿತ್ರಮಂದಿರಕ್ಕಿಂತಲೂ ಒಟಿಟಿಯಲ್ಲಿ ಅಕ್ಷಯ್​ ಕುಮಾರ್​ಗೆ ಹೆಚ್ಚು ಯಶಸ್ಸು ಸಿಗುತ್ತಿದೆ. ಅವರ ಮುಂಬರುವ ಸಿನಿಮಾಗಳು ಕೂಡ ಒಟಿಟಿ ಹಾದಿ ಹಿಡಿಯುವ ಸಾಧ್ಯತೆ ದಟ್ಟವಾಗಿದೆ.

Cuttputlli: ಒಟಿಟಿಯಲ್ಲಿ ಅಕ್ಷಯ್​ ಕುಮಾರ್​ ಚಿತ್ರಕ್ಕೆ ಗೆಲುವು; ಪೂರ್ತಿ ಬದಲಾಗುತ್ತಾ ಸ್ಟಾರ್​ ನಟನ ಭವಿಷ್ಯದ ಪ್ಲ್ಯಾನ್​?
ಅಕ್ಷಯ್ ಕುಮಾರ್
TV9 Web
| Updated By: ಮದನ್​ ಕುಮಾರ್​|

Updated on: Sep 15, 2022 | 8:25 AM

Share

ಸಿನಿಮಾ ಪ್ರೇಕ್ಷಕರ ಅಭಿರುಚಿ ಬದಲಾಗಿದೆ. ಚಿತ್ರಮಂದಿರದ ಬದಲು ಒಟಿಟಿಯಲ್ಲಿ ಮನರಂಜನೆ ಬಯಸುವವರ ಸಂಖ್ಯೆ ಹೆಚ್ಚಿದೆ. ಹಾಗಾಗಿ ಕೆಲವು ಸಿನಿಮಾಗಳನ್ನು ನೇರವಾಗಿ ಒಟಿಟಿಯಲ್ಲಿ ರಿಲೀಸ್​ ಮಾಡಲಾಗುತ್ತದೆ. ಚಿತ್ರಮಂದಿರದಲ್ಲಿ ಸೋತ ಸಿನಿಮಾಗಳು ಒಟಿಟಿಯಲ್ಲಿ ಸೂಪರ್​ ಹಿಟ್​ ಆದ ಉದಾಹರಣೆ ಕೂಡ ಇದೆ. ಅಕ್ಷಯ್​ ಕುಮಾರ್ (Akshay Kumar) ಅವರಿಗೆ ಈ ವರ್ಷ ಚಿತ್ರಮಂದಿರದಲ್ಲಿ ನಿರೀಕ್ಷಿತ ಮಟ್ಟದ ಗೆಲುವು ಸಿಕ್ಕಿಲ್ಲ. ಆದರೆ ಒಟಿಟಿ ಪ್ಲಾಟ್​ಫಾರ್ಮ್ ಅವರ ಕೈ ಹಿಡಿದಿದೆ. ಇತ್ತೀಚೆಗೆ ಅವರು ನಟಿಸಿದ ‘ಕಟ್​ಪುಟ್ಲಿ’ (Cuttputlli) ಸಿನಿಮಾ ನೇರವಾಗಿ ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​ ಮೂಲಕ ರಿಲೀಸ್​ ಆಯಿತು. ಆ ಚಿತ್ರವನ್ನು ಜನರು ಕೋಟ್ಯಂತರ ಬಾರಿ ವೀಕ್ಷಿಸಿದ್ದಾರೆ. ಆ ಮೂಲಕ ಅಕ್ಷಯ್​ ಕುಮಾರ್​ ಅವರ ಚಿತ್ರಗಳಿಗೆ ಒಟಿಟಿಯಲ್ಲಿ (OTT Platform) ದೊಡ್ಡ ಮಟ್ಟದ ಬೇಡಿಕೆ ಇದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಅಕ್ಷಯ್​ ಕುಮಾರ್​ ಸಿನಿಮಾಗಳು ಮಿನಿಮಮ್​ ಬಿಸ್ನೆಸ್​ ಮಾಡುತ್ತವೆ ಎಂಬುದು ನಂಬಿಕೆ. ಹಾಗಿದ್ದರೂ ಕೂಡ ಚಿತ್ರಮಂದಿರದಲ್ಲಿ ರಿಲೀಸ್​ ಆದ ‘ಬಚ್ಚನ್​ ಪಾಂಡೆ’, ‘ಸಾಮ್ರಾಟ್​ ಪೃಥ್ವಿರಾಜ್​’ ಹಾಗೂ ‘ರಕ್ಷಾ ಬಂಧನ್​’ ಚಿತ್ರಗಳು ಹೀನಾಯವಾಗಿ ಸೋತಿದ್ದು ಬೇಸರದ ಸಂಗತಿ. ಹಾಗಾಗಿ ಚಿತ್ರಮಂದಿರದಲ್ಲಿ ರಿಲೀಸ್​ ಮಾಡಿ ದುಡ್ಡು ಕಳೆದುಕೊಳ್ಳುವುದು ಬೇಡ ಎಂಬ ಉದ್ದೇಶದಿಂದ ‘ಕಟ್​ಪುಟ್ಲಿ’ ಚಿತ್ರವನ್ನು ನೇರವಾಗಿ ಒಟಿಟಿಯಲ್ಲಿ ರಿಲೀಸ್ ಮಾಡಲಾಯಿತು. ಈ ಪ್ಲ್ಯಾನ್​ನಿಂದ ಅಕ್ಷಯ್​ ಕುಮಾರ್​ಗೆ ಗೆಲುವು ಸಿಕ್ಕಿದೆ.

ಅಕ್ಷಯ್​ ಕುಮಾರ್​ ಅವರು ಸಿನಿಮಾ ಮಾಡುವ ಶೈಲಿಯ ಬಗ್ಗೆ ಅನೇಕರಿಗೆ ತಕರಾರು ಇದೆ. ಅವರು ತುಂಬ ಗಡಿಬಿಡಿಯಲ್ಲಿ ಸಿನಿಮಾ ಕೆಲಸಗಳನ್ನು ಮುಗಿಸುತ್ತಾರೆ. ವರ್ಷಕ್ಕೆ ಮೂರು, ನಾಲ್ಕು ಸಿನಿಮಾ ಮಾಡಬೇಕು ಎಂಬ ಹಪಾಹಪಿ ಅವರಿಗೆ ಇದೆ. ಇದರಿಂದ ಚಿತ್ರದ ಗುಣಮಟ್ಟ ಹಾಳಾಗುತ್ತದೆ ಎಂದು ಅನೇಕರು ಟೀಕಿಸುತ್ತಿದ್ದಾರೆ. ಅದೇನೇ ಇದ್ದರೂ ಅವರಿಗೆ ಇರುವ ಡಿಮ್ಯಾಂಡ್​ ಕಿಂಚಿತ್ತೂ ಕಡಿಮೆ ಆಗಿಲ್ಲ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ
Image
Akshay Kumar: ವರದಕ್ಷಿಣೆ ಪಿಡುಗಿಗೆ ಅಕ್ಷಯ್​ ಕುಮಾರ್ ಪ್ರೋತ್ಸಾಹ? ಸರ್ಕಾರಿ ಜಾಹೀರಾತಿನಲ್ಲಿ ದೊಡ್ಡ ಎಡವಟ್ಟು
Image
Cuttputlli: ತಪ್ಪು ತಿದ್ದಿಕೊಂಡ ಅಕ್ಷಯ್​ ಕುಮಾರ್​; ಒಂದು ನಿರ್ಧಾರದಿಂದ ಆಯ್ತು ನೂರಾರು ಕೋಟಿ ರೂ. ಲಾಭ
Image
ಅಕ್ಷಯ್​ ಕುಮಾರ್​ಗೆ 3ನೇ ಸೋಲು; ಭಾರತ ಬಿಟ್ಟು ಕೆನಡಾಗೆ ಪಲಾಯನ ಮಾಡುವ ಪ್ಲ್ಯಾನ್​ ನೆನಪಿಸಿದ ನೆಟ್ಟಿಗರು
Image
Akshay Kumar: ಸೋದರಿಯನ್ನು ನೆನೆದು ಎಲ್ಲರ ಎದುರು ಕಣ್ಣೀರು ಹಾಕಿದ ಅಕ್ಷಯ್​ ಕುಮಾರ್​; ವಿಡಿಯೋ ವೈರಲ್​

ಚಿತ್ರಮಂದಿರಕ್ಕಿಂತಲೂ ಒಟಿಟಿಯಲ್ಲಿ ಅಕ್ಷಯ್​ ಕುಮಾರ್​ಗೆ ಹೆಚ್ಚು ಯಶಸ್ಸು ಸಿಕ್ಕಿರುವುದರಿಂದ ಅವರ ಮುಂಬರುವ ಸಿನಿಮಾಗಳು ಕೂಡ ಒಟಿಟಿ ಹಾದಿ ಹಿಡಿಯುವ ಸಾಧ್ಯತೆ ದಟ್ಟವಾಗಿದೆ. ಭವಿಷ್ಯದ ಪ್ಲ್ಯಾನ್​ನಲ್ಲಿ ಅಕ್ಷಯ್​ ಕುಮಾರ್​ ಅವರು ದೊಡ್ಡ ಬದಲಾವಣೆ ಮಾಡಿಕೊಳ್ಳಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ‘ರಾಮ್​ ಸೇತು’, ‘ಕ್ಯಾಪ್ಸೂಲ್​ ಗಿಲ್​’, ‘ಓಹ್​ ಮೈ ಗಾಡ್​ 2’, ‘ಗೋರ್ಖಾ’, ‘ಸೂರರೈ ಪೋಟ್ರು’ ಚಿತ್ರದ ರಿಮೇಕ್​ ಸೇರಿದಂತೆ ಹಲವು ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ