AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿ ಸಂಸ್ಥೆಯಿಂದ 135 ಕೋಟಿ ರೂಪಾಯಿ ಬಾಚಿದ ಅಕ್ಷಯ್​ ಕುಮಾರ್ ಕುಮಾರ್ ಸಿನಿಮಾ

ಅಕ್ಷಯ್​ ಕುಮಾರ್ ನಟನೆಯ ‘ಬೆಲ್​ ಬಾಟಂ’ ಚಿತ್ರಕ್ಕೆ ವಷು ಭಗ್ನಾನಿ ಬಂಡವಾಳ ಹೂಡಿದ್ದರು. ಈ ಸಿನಿಮಾವನ್ನು ನೇರವಾಗಿ ಒಟಿಟಿಗೆ ತೆರೆಗೆ ತರದೆ ಚಿತ್ರಮಂದಿರದಲ್ಲಿ ರಿಲೀಸ್​ ಮಾಡುವ ಸಾಹಸವನ್ನು ವಿಷ್ಣು ಮಾಡಿದ್ದರು. ಆದರೆ, ಇದರಿಂದ ಅವರು ಕೈ ಸುಟ್ಟುಕೊಂಡಿದ್ದರು.

ಒಟಿಟಿ ಸಂಸ್ಥೆಯಿಂದ 135 ಕೋಟಿ ರೂಪಾಯಿ ಬಾಚಿದ ಅಕ್ಷಯ್​ ಕುಮಾರ್ ಕುಮಾರ್ ಸಿನಿಮಾ
ಅಕ್ಷಯ್​ ಕುಮಾರ್
TV9 Web
| Edited By: |

Updated on: Mar 12, 2022 | 1:28 PM

Share

ಅಕ್ಷಯ್​ ಕುಮಾರ್ (Akshay Kumar) ನಟನೆಯ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಮೋಡಿ ಮಾಡುತ್ತವೆ. ಅವರ ಸಿನಿಮಾಗಳು ಒಟಿಟಿಗೆ ಕಾಲಿಡಲಿ ಅಥವಾ ಚಿತ್ರಮಂದಿರಕ್ಕೆ ಲಗ್ಗೆ ಇಡಲಿ, ಪ್ರೇಕ್ಷಕರು ಮುಗಿಬಿದ್ದು ಸಿನಿಮಾ ವೀಕ್ಷಣೆ ಮಾಡುತ್ತಾರೆ. ಈಗ ರಂಜಿತ್​ ತಿವಾರಿ ನಿರ್ದೇಶನದ ಅವರ ಮುಂದಿನ ಥ್ರಿಲ್ಲರ್ ಸಿನಿಮಾ ‘ಮಿಷನ್​ ಸಿಂಡರೆಲ್ಲಾ’ (Mission Cinderella) ಚಿತ್ರ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಈ ಸಿನಿಮಾವನ್ನು ನಿರ್ಮಾಪಕ ವಷು ಹಾಗೂ ಜಾಕಿ ಭಗ್ನಾನಿ ಅವರು 135 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ ಎಂದು ವರದಿ ಆಗಿದೆ. ಅಕ್ಷಯ್​ ಕುಮಾರ್ ನಟನೆಯ ‘ಅತ್ರಂಗಿ ರೇ’ ಸಿನಿಮಾ ನೇರವಾಗಿ ಒಟಿಟಿ ಹಾದಿ ಹಿಡಿದಿತ್ತು. ಈಗ ಅವರ ನಟನೆಯ ಎರಡನೇ ಸಿನಿಮಾ ನೇರವಾಗಿ ಒಟಿಟಿಯತ್ತ ಮುಖ ಮಾಡಿದೆ. ಡಿಸ್ನಿ + ಹಾಟ್​ಸ್ಟಾರ್ ‘ಮಿಷನ್​ ಸಿಂಡರೆಲ್ಲಾ’ ಚಿತ್ರದ ಡಿಜಿಟಲ್​ ಹಕ್ಕನ್ನು 135 ಕೋಟಿ ರೂಪಾಯಿಗೆ ಖರೀದಿ ಮಾಡಿದೆ. ಅಕ್ಷಯ್​ ವೃತ್ತಿ ಜೀವನದಲ್ಲಿ ಅವರ ಸಿನಿಮಾ ಒಟಿಟಿಗೆ ಇಷ್ಟು ದೊಡ್ಡ ಮೊತ್ತಕ್ಕೆ ಸೇಲ್​ ಆಗಿರುವುದು ಇದೇ ಮೊದಲು. ಮೇ ತಿಂಗಳಲ್ಲಿ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ.

‘ಮಿಷನ್​ ಸಿಂಡರೆಲ್ಲಾ’ ಸಿನಿಮಾದ ಮ್ಯೂಸಿಕ್ ಹಕ್ಕು ಈಗಾಗಲೇ ಸೇಲ್ ಆಗಿದೆ. ಇದರಿಂದ ಚಿತ್ರಕ್ಕೆ 20 ಕೋಟಿ ರೂಪಾಯಿ ಸಿಕ್ಕಿದೆ. ಕೆಲವೇ ತಿಂಗಳಲ್ಲಿ ಕೊವಿಡ್ ನಾಲ್ಕನೆ ಅಲೆ ಕಾಣಿಸಿಕೊಳ್ಳಲಿದೆ ಎಂದು ತಜ್ಞರು  ವರದಿ ಬಿಡುಗಡೆ ಮಾಡಿದ್ದಾರೆ. ಹೀಗಾದರೆ, ಸಿನಿಮಾ ರಿಲೀಸ್​ ಸಾಧ್ಯವಾಗದೆ ಇರಬಹುದು. ಈ ಕಾರಣಕ್ಕೆ ನಿರ್ಮಾಪಕರು ರಿಸ್ಕ್​ ತೆಗೆದುಕೊಳ್ಳದೆ ನೇರವಾಗಿ ಒಟಿಟಿ ಹಾದಿ ಹಿಡಿದಿದ್ದಾರೆ.

ಅಕ್ಷಯ್​ ಕುಮಾರ್ ನಟನೆಯ ‘ಬೆಲ್​ ಬಾಟಂ’ ಚಿತ್ರಕ್ಕೆ ವಷು ಭಗ್ನಾನಿ ಬಂಡವಾಳ ಹೂಡಿದ್ದರು. ಈ ಸಿನಿಮಾವನ್ನು ನೇರವಾಗಿ ಒಟಿಟಿಗೆ ತೆರೆಗೆ ತರದೆ ಚಿತ್ರಮಂದಿರದಲ್ಲಿ ರಿಲೀಸ್​ ಮಾಡುವ ಸಾಹಸವನ್ನು ವಿಷ್ಣು ಮಾಡಿದ್ದರು. ಆದರೆ, ಇದರಿಂದ ಅವರು ಕೈ ಸುಟ್ಟುಕೊಂಡಿದ್ದರು. ಈಗ ಅಕ್ಷಯ್​ ಕುಮಾರ್ ಜತೆ ಅವರು ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ. ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ವಷು ಹಾಗೂ ಅಕ್ಷಯ್​ ಇಟ್ಟಾಗಿ ಕೆಲಸ ಮಾಡುತ್ತಿದ್ದಾರೆ.

ಅಕ್ಷಯ್​ ಕುಮಾರ್​ಗೆ ಬಾಲಿವುಡ್​ನಲ್ಲಿ ಭಾರೀ ಬೇಡಿಕೆ ಇದೆ. ಈ ಕಾರಣಕ್ಕೆ ಸಿನಿಮಾ 135 ಕೋಟಿ ರೂಪಾಯಿಗೆ ಸೇಲ್​ ಆಗಿದೆ ಎಂದು ಚಿತ್ರತಂಡದವರು ಅಭಿಪ್ರಾಯ ಪಟ್ಟಿದ್ದಾರೆ. ಇತ್ತೀಚೆಗಷ್ಟೇ ಅಕ್ಷಯ್​ ಕುಮಾರ್​ ಅವರು ‘ರಾಮ್​ ಸೇತು’ ಸಿನಿಮಾದ ಶೂಟಿಂಗ್​ ಮುಗಿಸಿದ್ದಾರೆ. ‘ಗೋರ್ಖ’, ‘ಪೃಥ್ವಿರಾಜ್​’, ‘ರಕ್ಷಾ ಬಂಧನ್​’, ‘ಓಹ್​ ಮೈ ಗಾಡ್​ 2’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಅವರ ನಟನೆಯ ‘ಬಚ್ಚನ್​ ಪಾಂಡೆ’ ಸಿನಿಮಾ ರಿಲೀಸ್​ಗೆ ರೆಡಿ ಇದೆ.

ಇದನ್ನೂ ಓದಿ: ನೀರಜ್​ ಚೋಪ್ರಾಗೆ ಸಿನಿಮಾ ಆಫರ್​; ಅಕ್ಷಯ್​ ಕುಮಾರ್ ಬಯೋಪಿಕ್​ ಬಗ್ಗೆ ಏನಿದು ಅಪ್​ಡೇಟ್​?

ಅಕ್ಷಯ್​ ಕುಮಾರ್ ಸಿನಿಮಾ ಬ್ಯಾನ್​ ಮಾಡಿದ ಮೂರು ಪ್ರಮುಖ ರಾಷ್ಟ್ರಗಳು; ಬಾಕ್ಸ್​ ಆಫೀಸ್​ ಕಲೆಕ್ಷನ್​ಗೆ ಹೊಡೆತ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ