AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಗೂಬಾಯಿ ಕಾಠಿಯಾವಾಡಿ’ ಒಟಿಟಿ ರಿಲೀಸ್​ ವಿಳಂಬ; ಇನ್ನೂ ಎಷ್ಟು ತಿಂಗಳು ಕಾಯಬೇಕು?

ಫೆಬ್ರವರಿ 25ರಂದು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರ ತೆರೆಕಂಡು ಶನಿವಾರಕ್ಕೆ 9 ದಿನ ಆಗಿದೆ. 9 ದಿನದಲ್ಲಿ ಭಾರತದ ಬಾಕ್ಸ್ ಆಫೀಸ್​ನಲ್ಲಿ 82 ಕೋಟಿ ರೂಪಾಯಿ ಬಾಚಿಕೊಂಡಿದೆ.

‘ಗಂಗೂಬಾಯಿ ಕಾಠಿಯಾವಾಡಿ’ ಒಟಿಟಿ ರಿಲೀಸ್​ ವಿಳಂಬ; ಇನ್ನೂ ಎಷ್ಟು ತಿಂಗಳು ಕಾಯಬೇಕು?
ಆಲಿಯಾ ಭಟ್
TV9 Web
| Edited By: |

Updated on:Mar 06, 2022 | 7:50 PM

Share

ಆಲಿಯಾ ಭಟ್​ (Alia Bhatt) ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ (Gangubai Kathiawadi) ಬಾಕ್ಸ್​ ಆಫೀಸ್​ನಲ್ಲಿ ಮ್ಯಾಜಿಕ್​ ಮಾಡಿದೆ. ಈ ಚಿತ್ರ ಅಂದುಕೊಂಡ ಮಟ್ಟಕ್ಕಿಂತಲೂ ಉತ್ತಮ ಗಳಿಕೆ ಮಾಡುತ್ತಿದೆ. ಭಾರತದ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಬರೋಬ್ಬರಿ 82 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಕಾರಣಕ್ಕೆ ಸಿನಿಮಾ ಒಟಿಟಿಯಲ್ಲಿ ತೆರೆಗೆ ಬರೋದು ಮತ್ತಷ್ಟು ವಿಳಂಬ ಆಗಲಿದೆ. ಒಟಿಟಿಯಲ್ಲಿ ಸಿನಿಮಾ ಕಣ್ತುಂಬಿಕೊಳ್ಳಬೇಕು ಎಂದು ಕಾದು ಕೂತವರಿಗೆ ಈ ವಿಚಾರ ಬೇಸರ ತರಿಸಿದೆ. ಹಾಗಾದರೆ, ಈ ಸಿನಿಮಾ ಒಟಿಟಿಯಲ್ಲಿ ತೆರೆಗೆ ಬರೋದು ಯಾವಾಗ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಫೆಬ್ರವರಿ 25ರಂದು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರ ತೆರೆಕಂಡು ಶನಿವಾರಕ್ಕೆ 9 ದಿನ ಆಗಿದೆ. 9 ದಿನದಲ್ಲಿ ಭಾರತದ ಬಾಕ್ಸ್ ಆಫೀಸ್​ನಲ್ಲಿ 82 ಕೋಟಿ ರೂಪಾಯಿ ಬಾಚಿಕೊಂಡಿದೆ. ಮಹಾರಾಷ್ಟ್ರದ ಮುಂಬೈ ಸೇರಿ ಹಲವು ಕಡೆಗಳಲ್ಲಿ ಶೆ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಇದೆ. ಆದಾಗ್ಯೂ, ಸಿನಿಮಾ ಒಳ್ಳೆಯ ರೀತಿಯಲ್ಲಿ ಕಲೆಕ್ಷನ್ ಮಾಡುತ್ತಿರುವುದು ಚಿತ್ರತಂಡದ ಸಂತಸ ಹೆಚ್ಚಿಸಿದೆ.

ಫೆಬ್ರವರಿ 25ಕ್ಕೆ ಸಿನಿಮಾ ತೆರೆಗೆ ಬಂದಿದೆ. ಇದಾದ ಒಂದು ತಿಂಗಳ ಬಳಿಕ ಸಿನಿಮಾ ಒಟಿಟಿಯಲ್ಲಿ ರಿಲೀಸ್​ ಮಾಡೋಕೆ ಡೀಲ್​ ಮಾಡಿಕೊಳ್ಳಲಾಗಿತ್ತು. ನೆಟ್​ಫ್ಲಿಕ್ಸ್​ ಒಟಿಟಿ ಹಕ್ಕನ್ನು ಪಡೆದುಕೊಂಡಿದೆ. ಆದರೆ, ಈಗ ಚಿತ್ರತಂಡ ನೆಟ್​ಫ್ಲಿಕ್ಸ್​ಗೆ ವಿಶೇಷ ಮನವಿ ಮಾಡಿಕೊಂಡಿದ್ದು, ಎರಡು ತಿಂಗಳು ಬಿಟ್ಟು ಸಿನಿಮಾ ರಿಲೀಸ್ ಮಾಡೋಕೆ ಕೋರಿದೆ. ಹೀಗಾಗಿ, ಏಪ್ರಿಲ್​ 25ರ ಸುಮಾರಿಗೆ ಈ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್​ ಆಗಲಿದೆ.

ಖ್ಯಾತ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಅವರ ಬತ್ತಳಿಕೆಯಿಂದ ಬಂದಿರುವ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಆಲಿಯಾ ಭಟ್​ ಅವರು ಅಭಿನಯಿಸಿದ್ದು, ಅತಿಥಿ ಪಾತ್ರದಲ್ಲಿ ಅಜಯ್​ ದೇವಗನ್​ ಕಾಣಿಸಿಕೊಂಡಿದ್ದಾರೆ. ಹಲವು ಕಾರಣಗಳಿಂದಾಗಿ ಈ ಸಿನಿಮಾ ಸದ್ದು ಮಾಡಿದೆ. ಗಂಗೂಬಾಯಿ ಕಾಠಿಯಾವಾಡಿ ಜೀವನ ಆಧರಿಸಿ ಈ ಚಿತ್ರ ಮೂಡಿಬಂದಿದ್ದು, ಆಲಿಯಾ ಭಟ್​ ಅವರು ವೇಶ್ಯೆ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಆಲಿಯಾಗೆ ಬಾಲಿವುಡ್​ನಲ್ಲಿ ಭರ್ಜರಿ ಡಿಮ್ಯಾಂಡ್​ ಇದೆ. ಈಗಾಗಲೇ ಅವರು ಹಲವು ಹಿಟ್​ ಸಿನಿಮಾಗಳನ್ನು ನೀಡಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರ ಸೂಪರ್​ ಹಿಟ್​ ಸಿನಿಮಾಗಳ ಸಾಲಿಗೆ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರ ಕೂಡ ಸೇರಿಕೊಂಡಿದೆ. ಈ ಚಿತ್ರಕ್ಕಾಗಿ ಅವರು ತೆಗೆದುಕೊಂಡ ಸಂಭಾವನೆ ಎಷ್ಟು ಎಂಬ ಬಗ್ಗೆ ಮಾಹಿತಿ ಹರಿದಾಡುತ್ತಿದೆ. ಮೂಲಗಳ ಪ್ರಕಾರ ಆಲಿಯಾ ಭಟ್​ ಅವರು ಬರೋಬ್ಬರಿ 20 ಕೋಟಿ ರೂಪಾಯಿಯನ್ನು ಜೇಬಿಗೆ ಇಳಿಸಿಕೊಂಡಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ:‘ಗಂಗೂಬಾಯಿ..’ ಚಿತ್ರಕ್ಕೆ 20 ಕೋಟಿ ರೂ. ಸಂಬಳ ಪಡೆದ ಆಲಿಯಾ ಭಟ್; ಅಜಯ್​ ದೇವಗನ್​ಗೆ ಸಿಕ್ಕಿದ್ದೆಷ್ಟು? 

ಆಲಿಯಾ ಭಟ್​ ಬಾಯ್​ಫ್ರೆಂಡ್ ​ಮೇಲೆ ಕಣ್ಣಿಟ್ಟ ಪೂಜಾ ಹೆಗ್ಡೆ; ಏನಿದು ಹೊಸ ಕಥೆ?

Published On - 7:42 pm, Sun, 6 March 22

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ