AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್, ಮಹೇಶ್ ಬಾಬು, ಪ್ರಭಾಸ್ ಬಗ್ಗೆ ಅಲ್ಲು ಅರ್ಜುನ್ ಹೇಳಿದ್ದೇನು?

Allu Arjun: ಅಲ್ಲು ಅರ್ಜುನ್ ಮತ್ತು ಪವನ್ ಕಲ್ಯಾಣ್ ನಡುವೆ ಕೋಲ್ಡ್ ವಾರ್ ನಡೆಯುತ್ತಿದೆ. ಆದರೆ ‘ಪುಷ್ಪ 2’ ಸಿನಿಮಾ ಬಿಡುಗಡೆ ಹತ್ತಿರ ಬಂದಿರುವ ಕಾರಣ ಇದೀಗ ತಮ್ಮ ಜಗಳಕ್ಕೆ ತೇಪೆ ಹಾಕಲು ಮುಂದಾಗಿದಂತಿದೆ ಅಲ್ಲು ಅರ್ಜುನ್.

ಪವನ್ ಕಲ್ಯಾಣ್, ಮಹೇಶ್ ಬಾಬು, ಪ್ರಭಾಸ್ ಬಗ್ಗೆ ಅಲ್ಲು ಅರ್ಜುನ್ ಹೇಳಿದ್ದೇನು?
ಮಂಜುನಾಥ ಸಿ.
|

Updated on: Nov 15, 2024 | 4:00 PM

Share

ಪವನ್ ಕಲ್ಯಾಣ್ ಹಾಗೂ ಅಲ್ಲು ಅರ್ಜುನ್ ನಡುವೆ ಕೋಲ್ಡ್ ವಾರ್ ಜಾರಿಯಲ್ಲಿದೆ. ಪವನ್ ಕಲ್ಯಾಣ್ ಚುನಾವಣೆಗೆ ನಿಂತಿದ್ದಾಗ, ಎದುರಾಳಿ ಪಕ್ಷದ ಅಭ್ಯರ್ಥಿಯ ಪರವಾಗಿ ಅಲ್ಲು ಅರ್ಜುನ್ ಪ್ರಚಾರ ಮಾಡಿದ್ದರು. ಇದು ಇಬ್ಬರ ನಡುವೆ ಮುನಿಸಿಗೆ ಕಾರಣವಾಗಿತ್ತು. ಅದಾದ ಬಳಿಕವೂ ಸಹ ಪವನ್ ಕಲ್ಯಾಣ್, ‘ಪುಷ್ಪ’ ಸಿನಿಮಾ ಬಗ್ಗೆ ಋಣಾತ್ಮಕವಾಗಿ ಮಾತನಾಡಿದರು. ಅದಾದ ಬಳಿಕ ಅಲ್ಲು ಅರ್ಜುನ್ ಸಹ ಅದಕ್ಕೆ ಮತ್ತೊಂದು ಕಾರ್ಯಕ್ರಮದಲ್ಲಿ ಕೌಂಟರ್ ಕೊಟ್ಟಿದ್ದರು. ಆದರೆ ಇದೀಗ ‘ಪುಷ್ಪ 2’ ಸಿನಿಮಾ ಬಿಡುಗಡೆ ಹತ್ತಿರ ಬರುತ್ತಿದ್ದಂತೆ ಅಲ್ಲು ಅರ್ಜುನ್, ಮುನಿಸಿಗೆ ತೇಪೆ ಹಾಕುವ ಪ್ರಯತ್ನ ಮಾಡಿದ್ದಾರೆ. ಪವನ್ ಕಲ್ಯಾಣ್ ಬಗ್ಗೆ ಸಿಹಿಯಾದ ಮಾತುಗಳನ್ನಾಡಿದ್ದಾರೆ.

ಅಲ್ಲು ಅರ್ಜುನ್ ಇತ್ತೀಚೆಗೆ ತಮ್ಮದೇ ಆದ ಆಹಾ ಒಟಿಟಿಯಲ್ಲಿ ಬಾಲಕೃಷ್ಣ ನಡೆಸಿಕೊಡುವ ಟಾಕ್ ಶೋಗೆ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಬಾಲಕೃಷ್ಣ, ಕೆಲವು ತೆಲುಗು ಸಿನಿಮಾ ನಾಯಕರ ಚಿತ್ರಗಳನ್ನು ತೋರಿಸಿ ಇವರ ಬಗ್ಗೆ ನಿಮ್ಮ ಅಭಿಪ್ರಾಯ ಹೇಳಬೇಕು ಎಂದರು. ಪವನ್ ಕಲ್ಯಾಣ್ ಸೇರಿದಂತೆ ಇನ್ನೂ ಕೆಲವು ನಟರ ಚಿತ್ರಗಳನ್ನು ಅಲ್ಲು ಅರ್ಜುನ್​ಗೆ ತೋರಿಸಲಾಯ್ತು. ಈ ವೇಳೆ ಪವನ್ ಅನ್ನು ಕೊಂಡಾಡಿದರು ಅಲ್ಲು ಅರ್ಜುನ್.

ಇದನ್ನೂ ಓದಿ:ಸುದೀಪ್ ತಾಯಿ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪವನ್ ಕಲ್ಯಾಣ್

ಪವನ್ ಕಲ್ಯಾಣ್ ಚಿತ್ರ ನೋಡುತ್ತಲೇ, ತುಸು ಗಂಭೀರವಾದ ಅಲ್ಲು ಅರ್ಜುನ್, ‘ನಾನು ಹಲವು ರಾಜಕೀಯ ನಾಯಕರನ್ನು, ಸಿನಿಮಾ ಇನ್ನಿತರೆ ಕ್ಷೇತ್ರಗಳ ನಾಯಕರನ್ನು ಫಾಲೋ ಮಾಡುತ್ತೇನೆ ಹಲವು ಧೈರ್ಯವಂತ ನಾಯಕರು ನನಗೆ ಗೊತ್ತಿದ್ದಾರೆ. ಆದರೆ ನಾನು ಹತ್ತಿರದಿಂದ ನೋಡಿದ ಅತ್ಯಂತ ಧೈರ್ಯವಂತ ನಾಯಕ ಯಾರಾದರೂ ಇದ್ದರೆ ಅದು ಪವನ್ ಕಲ್ಯಾಣ್. ಅವರಿಗೆ ಭಯವೆಂದರೆ ಗೊತ್ತಿಲ್ಲ. ದಾರಿ ಯಾವುದೇ ಆದರೂ ಸಹ ಧೈರ್ಯವಾಗಿ ನಡೆದುಕೊಂಡು ಹೋಗಿಬಿಡುತ್ತಾರೆ’ ಎಂದರು.

ಆ ಬಳಿಕ ಮಹೇಶ್ ಬಾಬು ಚಿತ್ರ ತೋರಿಸಿದಾಗ, ‘ಮಹೇಶ್ ಬಾಬು ಅಂದದ ಬಗ್ಗೆ ಹಲವರು ಮಾತನಾಡುತ್ತಾರೆ. ಹೌದು ಅದು ನಿಜ, ಆದರೆ ಅದು ದೈವದತ್ತವಾಗಿ ಬಂದಿದೆ. ನನಗೆ ಅವರ ಕಮ್​ಬ್ಯಾಕ್​ಗಳು ಬಹಳ ಇಷ್ಟ. ಅವರು ಯಾವಾಗಲಾದರೂ ಫೇಲ್ಯೂರ್ ಆದರೆ ಆ ನಂತರ ಅವರು ಕಮ್ ಬ್ಯಾಕ್ ಮಾಡುವ ರೀತಿ ಅತ್ಯದ್ಭುತ. ಅದು ನನಗೆ ಬಹಳ ಇಷ್ಟ’ ಎಂದಿದ್ದಾರೆ ಅಲ್ಲು ಅರ್ಜುನ್.

ಬಳಿಕ ಪ್ರಭಾಸ್ ಫೋಟೊ ತೋರಿಸಿದಾಗ, ‘ಪ್ರಭಾಸ್ ನನಗೆ ವರ್ಷಗಳಿಂದಲೂ ಗೊತ್ತು, ನಾವಿಬ್ಬರೂ ಬಹಳ ಆತ್ಮೀಯ ಗೆಳೆಯರು, ಪ್ರಭಾಸ್ ಬಗ್ಗೆ ಒಂದೇ ಮಾತು ಹೇಳುತ್ತೀನಿ, ಆತ ಆರು ಅಡಿ ಬಂಗಾರ’ ಎಂದರು. ‘ನಾನು ಪ್ರತಿ ಡಿಸೆಂಬರ್​ಗೆ ಮನೆಯಲ್ಲಿ ಕ್ರಿಸ್​ಮಸ್ ಟ್ರೀಡೆಕೋರೇಟ್ ಮಾಡುತ್ತೀನಿ, ಈ ವಿಷಯ ಅವನಿಗೆ ತಿಳಿದು, ಯೂರೋಪ್​ನಿಂದ ಒಂದು ವಿಶೇಷ ಕಿಟ್ ಒಂದನ್ನು ತಂದು ಕೊಟ್ಟ. ನನ್ನಂತೆ ಆತನಿಗೂ ಮರ-ಗಿಡಗಳೆಂದರೆ ಇಷ್ಟ, ನಾನು ಕೊಟ್ಟ ಗಿಡವನ್ನು ಅವನ ಫಾರ್ಮ್​ಹೌಸ್​ನಲ್ಲಿ ಹಾಕಿದ್ದಾನೆ’ ಎಂದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್