AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್, ಮಹೇಶ್ ಬಾಬು, ಪ್ರಭಾಸ್ ಬಗ್ಗೆ ಅಲ್ಲು ಅರ್ಜುನ್ ಹೇಳಿದ್ದೇನು?

Allu Arjun: ಅಲ್ಲು ಅರ್ಜುನ್ ಮತ್ತು ಪವನ್ ಕಲ್ಯಾಣ್ ನಡುವೆ ಕೋಲ್ಡ್ ವಾರ್ ನಡೆಯುತ್ತಿದೆ. ಆದರೆ ‘ಪುಷ್ಪ 2’ ಸಿನಿಮಾ ಬಿಡುಗಡೆ ಹತ್ತಿರ ಬಂದಿರುವ ಕಾರಣ ಇದೀಗ ತಮ್ಮ ಜಗಳಕ್ಕೆ ತೇಪೆ ಹಾಕಲು ಮುಂದಾಗಿದಂತಿದೆ ಅಲ್ಲು ಅರ್ಜುನ್.

ಪವನ್ ಕಲ್ಯಾಣ್, ಮಹೇಶ್ ಬಾಬು, ಪ್ರಭಾಸ್ ಬಗ್ಗೆ ಅಲ್ಲು ಅರ್ಜುನ್ ಹೇಳಿದ್ದೇನು?
ಮಂಜುನಾಥ ಸಿ.
|

Updated on: Nov 15, 2024 | 4:00 PM

Share

ಪವನ್ ಕಲ್ಯಾಣ್ ಹಾಗೂ ಅಲ್ಲು ಅರ್ಜುನ್ ನಡುವೆ ಕೋಲ್ಡ್ ವಾರ್ ಜಾರಿಯಲ್ಲಿದೆ. ಪವನ್ ಕಲ್ಯಾಣ್ ಚುನಾವಣೆಗೆ ನಿಂತಿದ್ದಾಗ, ಎದುರಾಳಿ ಪಕ್ಷದ ಅಭ್ಯರ್ಥಿಯ ಪರವಾಗಿ ಅಲ್ಲು ಅರ್ಜುನ್ ಪ್ರಚಾರ ಮಾಡಿದ್ದರು. ಇದು ಇಬ್ಬರ ನಡುವೆ ಮುನಿಸಿಗೆ ಕಾರಣವಾಗಿತ್ತು. ಅದಾದ ಬಳಿಕವೂ ಸಹ ಪವನ್ ಕಲ್ಯಾಣ್, ‘ಪುಷ್ಪ’ ಸಿನಿಮಾ ಬಗ್ಗೆ ಋಣಾತ್ಮಕವಾಗಿ ಮಾತನಾಡಿದರು. ಅದಾದ ಬಳಿಕ ಅಲ್ಲು ಅರ್ಜುನ್ ಸಹ ಅದಕ್ಕೆ ಮತ್ತೊಂದು ಕಾರ್ಯಕ್ರಮದಲ್ಲಿ ಕೌಂಟರ್ ಕೊಟ್ಟಿದ್ದರು. ಆದರೆ ಇದೀಗ ‘ಪುಷ್ಪ 2’ ಸಿನಿಮಾ ಬಿಡುಗಡೆ ಹತ್ತಿರ ಬರುತ್ತಿದ್ದಂತೆ ಅಲ್ಲು ಅರ್ಜುನ್, ಮುನಿಸಿಗೆ ತೇಪೆ ಹಾಕುವ ಪ್ರಯತ್ನ ಮಾಡಿದ್ದಾರೆ. ಪವನ್ ಕಲ್ಯಾಣ್ ಬಗ್ಗೆ ಸಿಹಿಯಾದ ಮಾತುಗಳನ್ನಾಡಿದ್ದಾರೆ.

ಅಲ್ಲು ಅರ್ಜುನ್ ಇತ್ತೀಚೆಗೆ ತಮ್ಮದೇ ಆದ ಆಹಾ ಒಟಿಟಿಯಲ್ಲಿ ಬಾಲಕೃಷ್ಣ ನಡೆಸಿಕೊಡುವ ಟಾಕ್ ಶೋಗೆ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಬಾಲಕೃಷ್ಣ, ಕೆಲವು ತೆಲುಗು ಸಿನಿಮಾ ನಾಯಕರ ಚಿತ್ರಗಳನ್ನು ತೋರಿಸಿ ಇವರ ಬಗ್ಗೆ ನಿಮ್ಮ ಅಭಿಪ್ರಾಯ ಹೇಳಬೇಕು ಎಂದರು. ಪವನ್ ಕಲ್ಯಾಣ್ ಸೇರಿದಂತೆ ಇನ್ನೂ ಕೆಲವು ನಟರ ಚಿತ್ರಗಳನ್ನು ಅಲ್ಲು ಅರ್ಜುನ್​ಗೆ ತೋರಿಸಲಾಯ್ತು. ಈ ವೇಳೆ ಪವನ್ ಅನ್ನು ಕೊಂಡಾಡಿದರು ಅಲ್ಲು ಅರ್ಜುನ್.

ಇದನ್ನೂ ಓದಿ:ಸುದೀಪ್ ತಾಯಿ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪವನ್ ಕಲ್ಯಾಣ್

ಪವನ್ ಕಲ್ಯಾಣ್ ಚಿತ್ರ ನೋಡುತ್ತಲೇ, ತುಸು ಗಂಭೀರವಾದ ಅಲ್ಲು ಅರ್ಜುನ್, ‘ನಾನು ಹಲವು ರಾಜಕೀಯ ನಾಯಕರನ್ನು, ಸಿನಿಮಾ ಇನ್ನಿತರೆ ಕ್ಷೇತ್ರಗಳ ನಾಯಕರನ್ನು ಫಾಲೋ ಮಾಡುತ್ತೇನೆ ಹಲವು ಧೈರ್ಯವಂತ ನಾಯಕರು ನನಗೆ ಗೊತ್ತಿದ್ದಾರೆ. ಆದರೆ ನಾನು ಹತ್ತಿರದಿಂದ ನೋಡಿದ ಅತ್ಯಂತ ಧೈರ್ಯವಂತ ನಾಯಕ ಯಾರಾದರೂ ಇದ್ದರೆ ಅದು ಪವನ್ ಕಲ್ಯಾಣ್. ಅವರಿಗೆ ಭಯವೆಂದರೆ ಗೊತ್ತಿಲ್ಲ. ದಾರಿ ಯಾವುದೇ ಆದರೂ ಸಹ ಧೈರ್ಯವಾಗಿ ನಡೆದುಕೊಂಡು ಹೋಗಿಬಿಡುತ್ತಾರೆ’ ಎಂದರು.

ಆ ಬಳಿಕ ಮಹೇಶ್ ಬಾಬು ಚಿತ್ರ ತೋರಿಸಿದಾಗ, ‘ಮಹೇಶ್ ಬಾಬು ಅಂದದ ಬಗ್ಗೆ ಹಲವರು ಮಾತನಾಡುತ್ತಾರೆ. ಹೌದು ಅದು ನಿಜ, ಆದರೆ ಅದು ದೈವದತ್ತವಾಗಿ ಬಂದಿದೆ. ನನಗೆ ಅವರ ಕಮ್​ಬ್ಯಾಕ್​ಗಳು ಬಹಳ ಇಷ್ಟ. ಅವರು ಯಾವಾಗಲಾದರೂ ಫೇಲ್ಯೂರ್ ಆದರೆ ಆ ನಂತರ ಅವರು ಕಮ್ ಬ್ಯಾಕ್ ಮಾಡುವ ರೀತಿ ಅತ್ಯದ್ಭುತ. ಅದು ನನಗೆ ಬಹಳ ಇಷ್ಟ’ ಎಂದಿದ್ದಾರೆ ಅಲ್ಲು ಅರ್ಜುನ್.

ಬಳಿಕ ಪ್ರಭಾಸ್ ಫೋಟೊ ತೋರಿಸಿದಾಗ, ‘ಪ್ರಭಾಸ್ ನನಗೆ ವರ್ಷಗಳಿಂದಲೂ ಗೊತ್ತು, ನಾವಿಬ್ಬರೂ ಬಹಳ ಆತ್ಮೀಯ ಗೆಳೆಯರು, ಪ್ರಭಾಸ್ ಬಗ್ಗೆ ಒಂದೇ ಮಾತು ಹೇಳುತ್ತೀನಿ, ಆತ ಆರು ಅಡಿ ಬಂಗಾರ’ ಎಂದರು. ‘ನಾನು ಪ್ರತಿ ಡಿಸೆಂಬರ್​ಗೆ ಮನೆಯಲ್ಲಿ ಕ್ರಿಸ್​ಮಸ್ ಟ್ರೀಡೆಕೋರೇಟ್ ಮಾಡುತ್ತೀನಿ, ಈ ವಿಷಯ ಅವನಿಗೆ ತಿಳಿದು, ಯೂರೋಪ್​ನಿಂದ ಒಂದು ವಿಶೇಷ ಕಿಟ್ ಒಂದನ್ನು ತಂದು ಕೊಟ್ಟ. ನನ್ನಂತೆ ಆತನಿಗೂ ಮರ-ಗಿಡಗಳೆಂದರೆ ಇಷ್ಟ, ನಾನು ಕೊಟ್ಟ ಗಿಡವನ್ನು ಅವನ ಫಾರ್ಮ್​ಹೌಸ್​ನಲ್ಲಿ ಹಾಕಿದ್ದಾನೆ’ ಎಂದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ