AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರತನ್​ ಟಾಟಾ ಕುಟುಂಬ ಶ್ರೀಮಂತರಾಗಿದ್ದು ಹೇಗೆ? ಈ ವೆಬ್​ ಸಿರೀಸ್​ನಲ್ಲಿ ಸಿಗಲಿದೆ ಸಂಪೂರ್ಣ ವಿವರ

Ratan Tata Web Series: ರತನ್​ ಟಾಟಾ ಸೇರಿದಂತೆ ಅವರ ಕುಟುಂಬದ ಹಲವು ಸದಸ್ಯರ ಪಾತ್ರದಲ್ಲಿ ನಟಿಸಲು ಖ್ಯಾತ ಮತ್ತು ಪ್ರತಿಭಾವಂತ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಬೇಕಿದೆ. ವೆಬ್​ ಸರಣಿ ಬಗ್ಗೆ ಕೌತುಕ ನಿರ್ಮಾಣ ಆಗಿದೆ.

ರತನ್​ ಟಾಟಾ ಕುಟುಂಬ ಶ್ರೀಮಂತರಾಗಿದ್ದು ಹೇಗೆ? ಈ ವೆಬ್​ ಸಿರೀಸ್​ನಲ್ಲಿ ಸಿಗಲಿದೆ ಸಂಪೂರ್ಣ ವಿವರ
ರತನ್ ಟಾಟಾ
TV9 Web
| Edited By: |

Updated on: Jan 30, 2022 | 9:03 AM

Share

ಭಾರತದಲ್ಲೀಗ ವೆಬ್​ ಸಿರೀಸ್​ಗಳ (Web Series) ಟ್ರೆಂಡ್​ ಜೋರಾಗಿದೆ. ಅದೇ ರೀತಿ ಬಯೋಪಿಕ್​ಗಳು ಸಹ ಸೌಂಡು ಮಾಡುತ್ತಿವೆ. ಎಲ್ಲ ಭಾಷೆಯಲ್ಲಿಯೂ ಒಳ್ಳೊಳ್ಳೆಯ ಕಥೆಗಳನ್ನು ಆಧರಿಸಿ ವೆಬ್​ ಸರಣಿ ನಿರ್ಮಾಣ ಮಾಡಲಾಗುತ್ತಿದೆ. ನಿಜಜೀವನದಲ್ಲಿ ಸಾಧನೆ ಮಾಡಿದ ಅನೇಕರ ಬದುಕಿನ ವಿವರಗಳು ವೆಬ್​ ಸಿರೀಸ್​ ಮೂಲಕ ಬಿತ್ತರಗೊಳ್ಳುತ್ತಿದೆ. ಈಗ ರತನ್​ ಟಾಟಾ (Ratan Tata) ಅವರ ಜೀವನವನ್ನು ಆಧರಿಸಿ ಒಂದು ವೆಬ್​ ಸಿರೀಸ್​ ಮಾಡಲು ಪ್ಲ್ಯಾನ್​ ಸಿದ್ಧವಾಗುತ್ತಿದೆ. ಈ ಬಗ್ಗೆ ಗುಸುಗುಸು ಸುದ್ದಿ ಹರಿದಾಡುತ್ತಿದೆ. ಕೋಟ್ಯಂತರ ಜನರಿಗೆ ರತನ್​ ಟಾಟಾ ಮಾದರಿ. ‘ಟಾಟಾ ಗ್ರೂಪ್​’ ಕಂಪನಿ ಮೂಲಕ ಅಪಾರ ಸಾಧನೆ ಮಾಡಿದ ಅವರ ಬಗ್ಗೆ ತಿಳಿದುಕೊಳ್ಳಲು ಎಲ್ಲರಿಗೂ ಆಸಕ್ತಿ ಇದೆ. ಹಾಗಾಗಿ ರತನ್​ ಟಾಟಾ ಮತ್ತು ಅವರ ಕುಟುಂಬದ (Ratan Tata Family) ಕುರಿತು ವೆಬ್​ ಸಿರೀಸ್​ ನಿರ್ಮಾಣ ಮಾಡಲು ಪ್ರೊಡಕ್ಷನ್​ ಕಂಪನಿಯೊಂದು ಮುಂದೆ ಬಂದಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವುದೊಂದೇ ಬಾಕಿ ಇದೆ. ರತನ್​ ಟಾಟಾ ಪಾತ್ರದಲ್ಲಿ ಯಾರು ನಟಿಸುತ್ತಾರೆ ಎಂಬ ಕೌತುಕ ಈಗ ನಿರ್ಮಾಣ ಆಗಿದೆ.

‘ಆಲ್​ಮೈಟಿ ಮೋಷನ್​ ಪಿಕ್ಚರ್’ ಸಂಸ್ಥೆಯು ರತನ್​ ಟಾಟಾ ಅವರ ಜೀವನವನ್ನು ಆಧರಿಸಿ ವೆಬ್​ ಸಿರೀಸ್​ ಮಾಡಲು ಸಿದ್ಧವಾಗಿದೆ. ‘The Tatas: How A Family Built A Business and A Nation’ ಪುಸ್ತಕದಲ್ಲಿ ರತನ್​ ಟಾಟಾ ಅವರ ಜೀವನದ ಬಗ್ಗೆ ವಿವರಗಳಿವೆ. ಆ ಪುಸ್ತಕದ ಹಕ್ಕುಗಳನ್ನು ‘ಆಲ್​ಮೈಟಿ ಮೋಷನ್​ ಪಿಕ್ಚರ್’ ಸಂಸ್ಥೆ ಖರೀದಿಸಿದೆ ಎಂದು ಬಾಲಿವುಡ್​ ಹಂಗಾಮ ವರದಿ ಮಾಡಿದೆ. ಖ್ಯಾತ ಲೇಖಕ, ಪತ್ರಕರ್ತ ಗಿರೀಶ್​ ಕುಬೇರ್​ ಅವರು ಈ ಪುಸ್ತಕ ಬರೆದಿದ್ದಾರೆ. ಇದರ ಹಕ್ಕುಗಳನ್ನು ತಾವು ಖರೀದಿಸಿರುವುದಾಗಿ ‘ಆಲ್​ಮೈಟಿ ಮೋಷನ್​ ಪಿಕ್ಚರ್’ ಸಂಸ್ಥೆಯ ಮುಖ್ಯಸ್ಥೆ ಪ್ರಬ್ಲೀನ್​ ಕೌರ್​ ಸಂಧು ಅವರು ಒಂದು ವೆಬ್​ಸೈಟ್​ಗೆ ಮಾಹಿತಿ ನೀಡಿದ್ದಾರೆ. ತಾವು ನಿರ್ಮಾಣ ಮಾಡಲಿರುವ ವೆಬ್​ ಸಿರೀಸ್​ನಲ್ಲಿ ರತನ್​ ಟಾಟಾ ಅವರ ಪೂರ್ವಜರ ಬಗ್ಗೆಯೂ ತೋರಿಸಲಾಗುವುದು ಎಂದು ಅವರು ಹೇಳಿದ್ದಾರೆ. ಮೂರು ಸೀಸನ್​ಗಳಲ್ಲಿ ಈ ವೆಬ್​ ಸರಣಿ ಮೂಡಿಬರಲಿದೆ ಎಂದು ವರದಿ ಆಗಿದೆ.

ಈ ಕುರಿತಂತೆ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಸ್ಕ್ರಿಪ್ಟ್​ ಕೆಲಸ ಪೂರ್ಣಗೊಂಡ ಬಳಿಕ ಕಲಾವಿದರ ಆಯ್ಕೆ ಪ್ರಕ್ರಿಯೆ ಶುರುವಾಗಲಿದೆ. ರತನ್​ ಟಾಟಾ ಸೇರಿದಂತೆ ಅವರ ಕುಟುಂಬದ ಹಲವು ಸದಸ್ಯರ ಪಾತ್ರದಲ್ಲಿ ನಟಿಸಲು ಖ್ಯಾತ ಮತ್ತು ಪ್ರತಿಭಾವಂತ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಬೇಕಿದೆ. ಯಾಕೆಂದರೆ ಈ ವೆಬ್​ ಸರಣಿಯ ಬಗ್ಗೆ ಇಡೀ ದೇಶವೇ ಕುತೂಹಲ ಇಟ್ಟುಕೊಂಡಿದೆ. ಒಳ್ಳೆಯ ಕಲಾವಿದರ ಆಯ್ಕೆಯಿಂದ ತೂಕ ಹೆಚ್ಚಲಿದೆ ಅಂತ ಮೂಲಗಳು ತಿಳಿಸಿವೆ ಎಂದು ಬಾಲಿವುಡ್​ ಹಂಗಾಮ ವರದಿ ಪ್ರಕಟಿಸಿದೆ.

ಇದನ್ನೂ ಓದಿ:

ಪುನೀತ್​ ಕುರಿತು ಸಿದ್ಧವಾಗಲಿದೆ ಬಯೋಪಿಕ್​? ನಿರ್ದೇಶಕ ಸಂತೋಷ್​ ಆನಂದ್​ರಾಮ್​ ನೀಡಿದ್ರು ಸೂಚನೆ

ಕಪಿಲ್​ ಶರ್ಮಾ ಕುರಿತು ಬಯೋಪಿಕ್​; ಅಧಿಕೃತ ಘೋಷಣೆ ಮಾಡಿದ ಚಿತ್ರತಂಡ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ