AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್​ಗೂ ಮೊದಲೇ ನಡೆಯಿತು ‘ಕಾಂತಾರ: ಅಧ್ಯಾಯ 1’ ಒಟಿಟಿ ಬಿಸ್ನೆಸ್; ಮಾಹಿತಿ ನೀಡಿದ ಪ್ರೈಮ್ ವಿಡಿಯೋ

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಸಣ್ಣ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ಈ ಚಿತ್ರ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಂಡಿದೆ.

ಶೂಟಿಂಗ್​ಗೂ ಮೊದಲೇ ನಡೆಯಿತು ‘ಕಾಂತಾರ: ಅಧ್ಯಾಯ 1’ ಒಟಿಟಿ ಬಿಸ್ನೆಸ್; ಮಾಹಿತಿ ನೀಡಿದ ಪ್ರೈಮ್ ವಿಡಿಯೋ
ರಿಷಬ್
ರಾಜೇಶ್ ದುಗ್ಗುಮನೆ
|

Updated on: Mar 21, 2024 | 12:25 PM

Share

ಅಮೇಜಾನ್ ಪ್ರೈಮ್ (Amazon Prime Video) ವಿಡಿಯೋ ಇತ್ತೀಚೆಗೆ ದೊಡ್ಡ ಈವೆಂಟ್ ಒಂದನ್ನು ನಡೆಸಿದೆ. ಈ ಕಾರ್ಯಕ್ರಮದಲ್ಲಿ ಮುಂಬರುವ ಸಿನಿಮಾಗಳು ಹಾಗೂ ವೆಬ್ ಸೀರಿಸ್ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಈ ವೇಳೆ ‘ಕಾಂತಾರ: ಚಾಪ್ಟರ್ 1’ ಬಗ್ಗೆಯೂ ಮಾಹಿತಿ ನೀಡಲಾಯಿತು. ಈ ಚಿತ್ರದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ವೇದಿಕೆ ಏರಿ ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ಈ ಚಿತ್ರದ ಶೂಟ್ ಆರಂಭಕ್ಕೂ ಮೊದಲೇ ಸಿನಿಮಾದ ಒಟಿಟಿ ಬಿಸ್ನೆಸ್ ನಡೆದಿದೆ ಎನ್ನಲಾಗುತ್ತಿದೆ.

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಸಣ್ಣ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ಈ ಚಿತ್ರ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಂಡಿದೆ. ಒಟಿಟಿಯಲ್ಲೂ ಸಿನಿಮಾ ದಾಖಲೆ ಬರೆದಿದೆ. ಈಗ ‘ಕಾಂತಾರ: ಚಾಪ್ಟರ್ 1’ ಕೂಡ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ರಿಲೀಸ್ ಆಗುವ ಬಗ್ಗೆ ಮಾಹಿತಿ ಸಿಕ್ಕಿದೆ.

ಅಮೇಜಾನ್ ಪ್ರೈಮ್ ವಿಡಿಯೋ

ಅಮೇಜಾನ್ ಪ್ರೈಮ್ ವಿಡಿಯೋ ಈವೆಂಟ್​ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲೂ ಪೋಸ್ಟರ್ ಹಂಚಿಕೊಂಡಿರುವ ಅಮೇಜಾನ್ ಪ್ರೈಮ್ ವಿಡಿಯೋದವರು, ‘ಥಿಯೇಟರ್​ನಲ್ಲಿ ರಿಲೀಸ್ ಆದ ಬಳಿಕ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಸಿನಿಮಾ ವೀಕ್ಷಿಸಬಹುದು’ ಎಂದು ಮಾಹಿತಿ ನೀಡಿದ್ದಾರೆ. ಆದರೆ, ಪಕ್ಕಾ ರಿಲೀಸ್ ಡೇಟ್ ತಿಳಿಸಿಲ್ಲ.

ಇದನ್ನೂ ಓದಿ: ‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿ ನೀವು ನಟಿಸಬಹುದು; ಅವಕಾಶದ ಬಾಗಿಲು ತೆರೆದ ಹೊಂಬಾಳೆ

‘ಕಾಂತಾರ: ಅಧ್ಯಾಯ 1’ರ ಶೂಟಿಂಗ್ ಇನ್ನೂ ಆರಂಭ ಆಗಿಲ್ಲ. ಆಗಲೇ ಸಿನಿಮಾದ ಒಟಿಟಿಯಲ್ಲಿ ಬಿಸ್ನೆಸ್ ಮಾಡಿದೆ. ಅಮೇಜಾನ್ ಪ್ರೈಮ್ ವಿಡಿಯೋದವರು ಪಾತ್ರವರ್ಗದಲ್ಲಿ ರಿಷಬ್ ಜೊತೆ ಕಿಶೋರ್ ಕುಮಾರ್ ಹಾಗೂ ಅಚ್ಯುತ್ ಕುಮಾರ್ ಹೆಸರನ್ನು ಉಲ್ಲೇಖಿಸಿದ್ದಾರೆ. ಈ ಮೂಲಕ ಅವರು ನಟಿಸುತ್ತಿರುವ ವಿಚಾರ ಖಚಿತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು