AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್​ಗೂ ಮೊದಲೇ ನಡೆಯಿತು ‘ಕಾಂತಾರ: ಅಧ್ಯಾಯ 1’ ಒಟಿಟಿ ಬಿಸ್ನೆಸ್; ಮಾಹಿತಿ ನೀಡಿದ ಪ್ರೈಮ್ ವಿಡಿಯೋ

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಸಣ್ಣ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ಈ ಚಿತ್ರ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಂಡಿದೆ.

ಶೂಟಿಂಗ್​ಗೂ ಮೊದಲೇ ನಡೆಯಿತು ‘ಕಾಂತಾರ: ಅಧ್ಯಾಯ 1’ ಒಟಿಟಿ ಬಿಸ್ನೆಸ್; ಮಾಹಿತಿ ನೀಡಿದ ಪ್ರೈಮ್ ವಿಡಿಯೋ
ರಿಷಬ್
ರಾಜೇಶ್ ದುಗ್ಗುಮನೆ
|

Updated on: Mar 21, 2024 | 12:25 PM

Share

ಅಮೇಜಾನ್ ಪ್ರೈಮ್ (Amazon Prime Video) ವಿಡಿಯೋ ಇತ್ತೀಚೆಗೆ ದೊಡ್ಡ ಈವೆಂಟ್ ಒಂದನ್ನು ನಡೆಸಿದೆ. ಈ ಕಾರ್ಯಕ್ರಮದಲ್ಲಿ ಮುಂಬರುವ ಸಿನಿಮಾಗಳು ಹಾಗೂ ವೆಬ್ ಸೀರಿಸ್ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಈ ವೇಳೆ ‘ಕಾಂತಾರ: ಚಾಪ್ಟರ್ 1’ ಬಗ್ಗೆಯೂ ಮಾಹಿತಿ ನೀಡಲಾಯಿತು. ಈ ಚಿತ್ರದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ವೇದಿಕೆ ಏರಿ ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ಈ ಚಿತ್ರದ ಶೂಟ್ ಆರಂಭಕ್ಕೂ ಮೊದಲೇ ಸಿನಿಮಾದ ಒಟಿಟಿ ಬಿಸ್ನೆಸ್ ನಡೆದಿದೆ ಎನ್ನಲಾಗುತ್ತಿದೆ.

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಸಣ್ಣ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ಈ ಚಿತ್ರ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಂಡಿದೆ. ಒಟಿಟಿಯಲ್ಲೂ ಸಿನಿಮಾ ದಾಖಲೆ ಬರೆದಿದೆ. ಈಗ ‘ಕಾಂತಾರ: ಚಾಪ್ಟರ್ 1’ ಕೂಡ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ರಿಲೀಸ್ ಆಗುವ ಬಗ್ಗೆ ಮಾಹಿತಿ ಸಿಕ್ಕಿದೆ.

ಅಮೇಜಾನ್ ಪ್ರೈಮ್ ವಿಡಿಯೋ

ಅಮೇಜಾನ್ ಪ್ರೈಮ್ ವಿಡಿಯೋ ಈವೆಂಟ್​ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲೂ ಪೋಸ್ಟರ್ ಹಂಚಿಕೊಂಡಿರುವ ಅಮೇಜಾನ್ ಪ್ರೈಮ್ ವಿಡಿಯೋದವರು, ‘ಥಿಯೇಟರ್​ನಲ್ಲಿ ರಿಲೀಸ್ ಆದ ಬಳಿಕ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಸಿನಿಮಾ ವೀಕ್ಷಿಸಬಹುದು’ ಎಂದು ಮಾಹಿತಿ ನೀಡಿದ್ದಾರೆ. ಆದರೆ, ಪಕ್ಕಾ ರಿಲೀಸ್ ಡೇಟ್ ತಿಳಿಸಿಲ್ಲ.

ಇದನ್ನೂ ಓದಿ: ‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿ ನೀವು ನಟಿಸಬಹುದು; ಅವಕಾಶದ ಬಾಗಿಲು ತೆರೆದ ಹೊಂಬಾಳೆ

‘ಕಾಂತಾರ: ಅಧ್ಯಾಯ 1’ರ ಶೂಟಿಂಗ್ ಇನ್ನೂ ಆರಂಭ ಆಗಿಲ್ಲ. ಆಗಲೇ ಸಿನಿಮಾದ ಒಟಿಟಿಯಲ್ಲಿ ಬಿಸ್ನೆಸ್ ಮಾಡಿದೆ. ಅಮೇಜಾನ್ ಪ್ರೈಮ್ ವಿಡಿಯೋದವರು ಪಾತ್ರವರ್ಗದಲ್ಲಿ ರಿಷಬ್ ಜೊತೆ ಕಿಶೋರ್ ಕುಮಾರ್ ಹಾಗೂ ಅಚ್ಯುತ್ ಕುಮಾರ್ ಹೆಸರನ್ನು ಉಲ್ಲೇಖಿಸಿದ್ದಾರೆ. ಈ ಮೂಲಕ ಅವರು ನಟಿಸುತ್ತಿರುವ ವಿಚಾರ ಖಚಿತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?