AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jyothika: 50ನೇ ಚಿತ್ರದ ಬಿಡುಗಡೆಯ ಸಂಭ್ರಮದಲ್ಲಿ ಜ್ಯೋತಿಕಾ; ಅಚ್ಚರಿಯ ಗಿಫ್ಟ್ ನೀಡಿದ ಆಮೆಜಾನ್ ಪ್ರೈಮ್

Udanpirappe: ಕಾಲಿವುಡ್​ನ ಖ್ಯಾತ ನಟಿ ಜ್ಯೋತಿಕಾ ತಮ್ಮ 50ನೇ ಚಿತ್ರದ ಬಿಡುಗಡೆಯ ಸಂಭ್ರಮದಲ್ಲಿದ್ದಾರೆ. ಈ ವೇಳೆ ಆಮೆಜಾನ್ ಪ್ರೈಮ್ ವಿಡಿಯೋ ಅವರಿಗೆ ವಿಶೇಷ ರೀತಿಯಲ್ಲಿ ಶುಭಕೋರಿದೆ.

Jyothika: 50ನೇ ಚಿತ್ರದ ಬಿಡುಗಡೆಯ ಸಂಭ್ರಮದಲ್ಲಿ ಜ್ಯೋತಿಕಾ; ಅಚ್ಚರಿಯ ಗಿಫ್ಟ್ ನೀಡಿದ ಆಮೆಜಾನ್ ಪ್ರೈಮ್
ಮರಳು ಶಿಲ್ಪ (ಎಡ), ಉಡನ್​ಪಿರಪ್ಪೆ ಚಿತ್ರದಲ್ಲಿ ಜ್ಯೋತಿಕಾ (ಬಲ)
Follow us
TV9 Web
| Updated By: shivaprasad.hs

Updated on: Oct 14, 2021 | 4:07 PM

ನಟಿಯರ ವೃತ್ತಿ ಬದುಕಿನಲ್ಲಿ 50ನೇ ಚಿತ್ರದ ಸಾಧನೆ ಬಹಳ ಅಪೂರ್ವವಾದದ್ದು. ಕಾಲಿವುಡ್​ನ ಖ್ಯಾತ ನಟಿ ಜ್ಯೋತಿಕಾ ಸದ್ಯ ಇದೇ ಹಾದಿಯಲ್ಲಿದ್ದಾರೆ. ಅವರ ಅಭಿನಯದ 50ನೇ ಚಿತ್ರ ‘ಉಡನ್​ಪಿರಪ್ಪೆ’ ಇಂದು ಬಿಡುಗಡೆಯಾಗಿದೆ. ವಿಶೇಷವೆಂದರೆ ಜ್ಯೋತಿಕಾರ ಈ ಹಿಂದಿನ ಚಿತ್ರದಂತೆ ಇದೂ ಕೂಡ ನೇರವಾಗಿ ಆಮೆಜಾನ್ ಪ್ರೈಮ್​ ಮೂಲಕ ನೇರವಾಗಿ ಒಟಿಟಿ ಬಿಡುಗಡೆ ಕಂಡಿದೆ. ಈ ವಿಶೇಷ ಸಂದರ್ಭದಲ್ಲಿ ಆಮೆಜಾನ್ ಪ್ರೈಮ್ ವಿಡಿಯೋ ಜ್ಯೋತಿಕಾ ಅವರಿಗೆ ಸರ್ಪ್ರೈಸ್ ಗಿಫ್ಟ್ ಒಂದನ್ನು ನೀಡಿದೆ. ಏನದು? ಇಲ್ಲಿದೆ ಮಾಹಿತಿ.

ಚೆನ್ನೈನ ಮರೀನಾ ಬೀಚ್​ನಲ್ಲಿಮರಳು ಶಿಲ್ಪದ ಮುಖಾಂತರ ಜ್ಯೋತಿಕಾರ 50ನೇ ಚಿತ್ರಕ್ಕೆ ಆಮೆಜಾನ್ ಪ್ರೈಮ್ ಶುಭಾಶಯ ಕೋರಿದೆ. ಸಾಮಾನ್ಯವಾಗಿ ಆನ್​ಲೈನ್ ವೇದಿಕೆಗಳು ಡಿಜಿಟಲ್ ವೇದಿಕೆಗಳಲ್ಲಿ ಪೋಸ್ಟರ್​, ಟೀಸರ್​ ಮೊದಲಾದವುಗಳ ಮೂಲಕ ಶುಭಕೋರುವುದು ವಾಡಿಕೆ. ಆದರೆ ಆಮೆಜಾನ್ ಪ್ರೈಮ್ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಖ್ಯಾತ ಕಲಾವಿದೆಗೆ ಗೌರವ ಸಲ್ಲಿಸಿದೆ. ಇದು ಜ್ಯೋತಿಕಾರಿಗೆ ಬಹಳ ಇಷ್ಟವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಧನ್ಯವಾದ ಸಮರ್ಪಿಸಿದ್ದಾರೆ.

ಖ್ಯಾತ ಮರೀನಾ ಬೀಚ್​ನಲ್ಲಿ ನಿತ್ಯವೂ ಸಾವಿರಾರು ಮಂದಿ ಓಡಾಡುತ್ತಾರೆ. ಅಲ್ಲಿ ಜ್ಯೋತಿಕಾರಿಗೆ ವಿಶೇಷ ಕಲಾ ಪ್ರದರ್ಶನದ ಮುಖಾಂತರ ಪ್ರೈಮ್ ಶುಭಕೋರಿದ್ದು, ಜ್ಯೋತಿಕಾರಿಗೆ ಬಹಳ ಸಂತಸ ಉಂಟುಮಾಡಿದೆ. ಅವರು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ನಿಮ್ಮ ಪ್ರೀತಿ ಹಾಗೂ ಗೌರವಕ್ಕೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಜ್ಯೋತಿಕಾ ಹಂಚಿಕೊಂಡಿರುವ ಪೋಸ್ಟ್ ಇಲ್ಲಿದೆ:

View this post on Instagram

A post shared by Jyotika (@jyotika)

ಈ ಮರಳು ಶಿಲ್ಪ ಸದ್ಯ ಮರೀನಾ ಬೀಚ್​ನ ಆಕರ್ಷಣೆಯಾಗಿದ್ದು, ಇದನ್ನು ನೋಡಲು ಜನರು ಆಗಮಿಸುತ್ತಿದ್ದಾರೆ. ಈ ಶಿಲ್ಪವು ಅಕ್ಟೋಬರ್ 17ರವರೆಗೆ ನೋಡುಗರಿಗೆ ಲಭ್ಯವಿರಲಿದೆ. ‘ಉದನ್​ಪಿರಪ್ಪೆ’ ಚಿತ್ರವನ್ನು ಇರಾ ಸರವಣನ್ ನಿರ್ದೇಶಿಸಿದ್ದು, ಜ್ಯೋತಿಕಾ, ಶಶಿಕುಮಾರ್, ಸೂರಿ ಮೊದಲಾದ ತಾರೆಯರು ನಟಿಸಿದ್ದಾರೆ. ಈ ಚಿತ್ರವು ತೆಲುಗಿಗೂ ಡಬ್ ಆಗಿದ್ದು, ‘ರಕ್ತ ಸಂಬಂಧಮ್’ ಎಂಬ ಹೆಸರಿನಲ್ಲಿ ವೀಕ್ಷಕರಿಗೆ ಲಭ್ಯವಿದೆ.

ಇದನ್ನೂ ಓದಿ:

Salaga Movie Review: ‘ಸಲಗ’ ತುಂಬಾ ರಗಡ್​ ಆಗಿದೆ ಎಚ್ಚರಿಕೆ! ದುನಿಯಾ ವಿಜಯ್​ಗೆ ಮಾಸ್​ ಪ್ರೇಕ್ಷಕರೇ ಟಾರ್ಗೆಟ್​

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ