AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೀರಾಮಂಡಿ’ ವಿಚಾರದಲ್ಲಿ ಸುಳ್ಳು ಹೇಳಿದ್ರಾ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ

ಯಾವುದೇ ಸೀರಿಸ್ ಹಿಟ್ ಆದರೂ ಅದರ ಬಗ್ಗೆ ಒಂದಷ್ಟು ವಾರಗಳ ಕಾಲ ಚರ್ಚೆ ಇರುತ್ತದೆ. ಆದರೆ, ‘ಹೀರಾಮಂಡಿ’ ಸೀರಿಸ್​ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿಲ್ಲ. ಇದನ್ನು ನೋಡಿದ ಅನೇಕರು ಮಿಶ್ರಪ್ರತಿಕ್ರಿಯೆ ನೀಡಿದ್ದಾರೆ. ಆದರೆ, ಬನ್ಸಾಲಿ ಹೇಳೋದೇ ಬೇರೆ.

‘ಹೀರಾಮಂಡಿ’ ವಿಚಾರದಲ್ಲಿ ಸುಳ್ಳು ಹೇಳಿದ್ರಾ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ
ಬನ್ಸಾಲಿ
ರಾಜೇಶ್ ದುಗ್ಗುಮನೆ
|

Updated on: May 22, 2024 | 2:27 PM

Share

ಸಂಜಯ್ ಲೀಲಾ ಬನ್ಸಾಲಿ (Sanjay Leela Bhansali) ಸಿನಿಮಾಗಳು ರಿಲೀಸ್ ಆದರೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದ ಕಾಲ ಒಂದಿತ್ತು. ಅವರ ನಿರ್ದೇಶನದಲ್ಲಿ ಮೂಡಿ ಬಂದ ‘ಗಂಗೂಬಾಯಿ​ ಕಾಠಿಯಾವಾಡಿ’ ಅಂದುಕೊಂಡ ಮಟ್ಟದಲ್ಲಿ ಗಮನ ಸೆಳೆದಿಲ್ಲ. ಈಗ ಅವರ ನಿರ್ದೇಶನದಲ್ಲಿ ‘ಹೀರಾಮಂಡಿ’ ವೆಬ್ ಸಿರೀಸ್ ಮೂಡಿ ಬಂದಿದೆ. ಆದರೆ, ಅಂದುಕೊಂಡ ಮಟ್ಟದಲ್ಲಿ ಈ ಸೀರಿಸ್ ಹೈಪ್ ಸೃಷ್ಟಿ ಮಾಡಿಲ್ಲ. ಈ ಬಗ್ಗೆ ನಿರ್ದೇಶಕ ಬನ್ಸಾಲಿ ಮಾತನಾಡಿದ್ದಾರೆ. ಅವರು ಈ ವಿಚಾರದಲ್ಲಿ ಸುಳ್ಳು ಹೇಳಿದರೇ ಎನ್ನುವ ಪ್ರಶ್ನೆ ಮೂಡಿದಿದೆ.

ಯಾವುದೇ ಸೀರಿಸ್ ಹಿಟ್ ಆದರೂ ಅದರ ಬಗ್ಗೆ ಒಂದಷ್ಟು ವಾರಗಳ ಕಾಲ ಚರ್ಚೆ ಇರುತ್ತದೆ. ಆದರೆ, ‘ಹೀರಾಮಂಡಿ’ ಸೀರಿಸ್​ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿಲ್ಲ. ಇದನ್ನು ನೋಡಿದ ಅನೇಕರು ಮಿಶ್ರಪ್ರತಿಕ್ರಿಯೆ ನೀಡಿದ್ದಾರೆ. ಆದರೆ, ಬನ್ಸಾಲಿ ಹೇಳೋದೇ ಬೇರೆ. ‘ಜನರ ಪ್ರತಿಕ್ರಿಯೆ ನೋಡಿ ಖುಷಿಯಾಗಿದೆ. ಒಂದೇ ಸ್ಟ್ರೆಚ್​ನಲ್ಲಿ ಈ ಸೀರಿಸ್​ನ ಎರಡು ಬಾರಿ, ಮೂರು ಬಾರಿ ನೋಡಿದವರು ಇದ್ದಾರೆ. ಈ ರೀತಿ ಪ್ರತಿಕ್ರಿಯೆ ಸಿಕ್ಕಿದ್ದು ಖುಷಿ ನೀಡಿದೆ. ಸಿನಿಮಾ ನೋಡಿ ನಾನಾ ರೀತಿಯ ಕಂಟೆಂಟ್​ಗಳನ್ನು ವಿಶ್ವಾದ್ಯಂತ ಸಿದ್ಧಪಡಿಸಲಾಗುತ್ತಿದೆ’ ಎಂದಿದ್ದಾರೆ ಬನ್ಸಾಲಿ.

‘ಈ ಸರಣಿಯ ಮ್ಯೂಸಿಕ್ ಜನರಿಗೆ ಇಷ್ಟ ಆಗಿದೆ. ಒಟಿಟಿಯಲ್ಲಿ ಈ ರೀತಿಯ ಶೋಗಳು ಅಪರೂಪ. ಈ ಭಾವನಾತ್ಮಕ ಪಯಣಕ್ಕೆ ಅನೇಕರು ಕನೆಕ್ಟ್ ಆಗಿದ್ದಾರೆ’ ಎಂದು ಬನ್ಸಾಲಿ ಹೇಳಿದ್ದಾರೆ. ನಿಜಕ್ಕೂ ಪ್ರೇಕ್ಷಕರು ಈ ಸೀರಿಸ್​ನ ಎರಡು-ಮೂರು ಬಾರಿ ನೋಡಿದ್ದಾರಾ ಎನ್ನುವ ಪ್ರಶ್ನೆಯನ್ನು ಅನೇಕರು ಕೇಳಿದ್ದಾರೆ. ಈ ವಿಚಾರದಲ್ಲಿ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ.

ಇದನ್ನೂ ಓದಿ: ‘ಹೀರಾಮಂಡಿ’ ಸೀರಿಸ್​ಗೆ ನಿರ್ದೇಶಕ ಬನ್ಸಾಲಿ ಹಾಗೂ ಸ್ಟಾರ್ ಕಲಾವಿದರು ಪಡೆದ ಸಂಭಾವನೆ ಎಷ್ಟು?

‘ಹೀರಾಮಂಡಿ: ದಿ ಡೈಮಂಡ್ ಬಜಾರ್’ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಮೊದಲ ವೆಬ್ ಸೀರಿಸ್​. ಈ ಸೀರಿಸ್ ಮೂಲಕ ಅವರು ಒಟಿಟಿಗೆ ಕಾಲಿಟ್ಟಿದ್ದಾರೆ. ನೆಟ್​ಫ್ಲಿಕ್ಸ್​ನಲ್ಲಿ ಈ ಸೀರಿಸ್ ಪ್ರಸಾರ ಕಂಡಿದೆ. ಈ ಸೀರಿಸ್​ನಲ್ಲಿ ರಿಚಾ ಚಡ್ಡಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್ ಹೈದರಿ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?