AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Angry Young Men: ಬಾಲಿವುಡ್​ ದಿಗ್ಗಜರ ಸಾಕ್ಷ್ಯಚಿತ್ರದಲ್ಲಿ ರಾಕಿಂಗ್​ ಸ್ಟಾರ್​ ಯಶ್​; ಇದು ಯಶಸ್ಸು

‘ಆ್ಯಂಗ್ರಿ ಯಂಗ್​ ಮೆನ್​’ ಡಾಕ್ಯುಮೆಂಟರಿಯಲ್ಲಿ ಸಲೀಂ ಖಾನ್​ ಹಾಗೂ ಜಾವೇದ್​ ಅಖ್ತರ್​ ಅವರ ಜೀವನದ ವಿವರಗಳು ಇವೆ. ಇದಕ್ಕಾಗಿ ಹಲವು ಸೆಲೆಬ್ರಿಟಿಗಳು ಸಂದರ್ಶನ ನೀಡಿದ್ದಾರೆ. ಇಷ್ಟು ವರ್ಷಗಳ ಕಾಲ ಸಾಕಷ್ಟು ಸಂದರ್ಶನಗಳನ್ನು ನೀಡಿರುವ ಸಲ್ಮಾನ್​ ಖಾನ್​ ಅವರು ಇದೇ ಮೊದಲ ಬಾರಿಗೆ ತಾವು ನರ್ವಸ್​ ಆಗಿರುವುದಾಗಿ ಹೇಳಿದ್ದಾರೆ. ಈ ಸಾಕ್ಷ್ಯಚಿತ್ರದಲ್ಲಿ ಯಶ್​ ಸಂದರ್ಶನವೂ ಇದೆ.

Angry Young Men: ಬಾಲಿವುಡ್​ ದಿಗ್ಗಜರ ಸಾಕ್ಷ್ಯಚಿತ್ರದಲ್ಲಿ ರಾಕಿಂಗ್​ ಸ್ಟಾರ್​ ಯಶ್​; ಇದು ಯಶಸ್ಸು
ಯಶ್​, ಸಲೀಂ, ಜಾವೇದ್​
ಮದನ್​ ಕುಮಾರ್​
|

Updated on: Aug 13, 2024 | 7:34 PM

Share

ಭಾರತೀಯ ಸಿನಿಮಾ ಇತಿಹಾಸದಲ್ಲಿ ಸಲೀಂ ಮತ್ತು ಜಾವೇದ್​ ಅವರ ಕೊಡುಗೆ ದೊಡ್ಡದು. ಚಿತ್ರಕಥೆ, ಸಂಭಾಷಣೆ ಮೂಲಕ ಹಲವಾರು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಈ ದಿಗ್ಗಜರದ್ದು. ಜೊತೆಯಾಗಿ 24 ಸಿನಿಮಾಗಳನ್ನು ಅವರಿಬ್ಬರು ಮಾಡಿದರು. ಆ ಪೈಕಿ 20 ಸಿನಿಮಾಗಳು ಬ್ಲಾಕ್​ ಬಸ್ಟರ್​ ಆದವು. ತೆರೆ ಹಿಂದೆ ಇದ್ದುಕೊಂಡು ಸ್ಟಾರ್​ ಪಟ್ಟ ಪಡೆದ ಹೆಗ್ಗಳಿಕೆ ಈ ಬರಹಗಾರರದ್ದು. ಈಗ ಸಲೀಂ ಮತ್ತು ಜಾವೇದ್​ ಬಗ್ಗೆ ಹೊಸ ಸಾಕ್ಷ್ಯಚಿತ್ರ ಸಿದ್ಧವಾಗಿದೆ. ಇದರಲ್ಲಿ ಕನ್ನಡದ ಹೆಮ್ಮೆಯ ನಟ ಯಶ್​ ಕೂಡ ಕಾಣಿಸಿಕೊಂಡಿದ್ದಾರೆ ಎಂಬುದು ವಿಶೇಷ.

ಸಲೀಂ-ಜಾವೇದ್​ ಜೋಡಿಯ ಬಗ್ಗೆ ಮೂಡಿಬಂದಿರುವ ಈ ಡಾಕ್ಯುಮೆಂಟರಿಗೆ ‘ಆ್ಯಂಗ್ರಿ ಯಂಗ್​ ಮೆನ್​’ ಎಂದು ಹೆಸರು ಇಡಲಾಗಿದೆ. ಇದರಲ್ಲಿ ಸಲ್ಮಾನ್​ ಖಾನ್​, ಫರ್ಹಾನ್​ ಅಖ್ತರ್​, ಅಮಿತಾಭ್​ ಬಚ್ಚನ್​, ಕರಣ್​ ಜೋಹರ್​, ಆಮಿರ್​ ಖಾನ್​ ಮುಂತಾದ ಘಟಾನುಘಟಿ ಸೆಲೆಬ್ರಿಟಿಗಳ ಸಂದರ್ಶನ ಇದೆ. ಇವರ ಜೊತೆ ಯಶ್​ ಕೂಡ ಸಂದರ್ಶನ ನೀಡಿದ್ದಾರೆ. ಇಂಥ ಸ್ಟಾರ್​ ಕಲಾವಿದರ ನಡುವೆ ಯಶ್​ ಅವರು ಸ್ಥಾನ ಪಡೆದಿರುವುದು ಅವರ ಅಭಿಮಾನಿಗಳಿಗೆ ಹೆಮ್ಮೆ ತಂದಿದೆ.

ಇದನ್ನೂ ಓದಿ: ‘ಟಾಕ್ಸಿಕ್​’ ಸಿನಿಮಾ ಮುಹೂರ್ತದಲ್ಲಿ ಹೇಗಿತ್ತು ಯಶ್​ ಗತ್ತು? ವಿಡಿಯೋ ನೋಡಿ..

ಯಶ್​ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಛಾಪು ಮೂಡಿಸಿದ್ದಾರೆ. ಹಿಂದಿ ಸಿನಿಮಾ ಪ್ರೇಕ್ಷಕರು ಯಶ್​ಗೆ ಅಭಿಮಾನಿಗಳಾಗಿದ್ದಾರೆ. ಬಾಲಿವುಡ್​ ದಿಗ್ಗಜರಾದ ಸಲೀಂ ಮತ್ತು ಜಾವೇದ್​ ಬಗ್ಗೆ ಯಶ್​ ಅವರು ತಮ್ಮ ಅನಿಸಿಕೆಗಳನ್ನು ‘ಆ್ಯಂಗ್ರಿ ಯಂಗ್​ ಮೆನ್​’ ಸಾಕ್ಷ್ಯಚಿತ್ರದಲ್ಲಿ ಹೇಳಿಕೊಂಡಿದ್ದಾರೆ. ಇದರ ಟ್ರೇಲರ್​ ಬಿಡುಗಡೆ ಆಗಿದೆ. ಅಮೇಜಾನ್​ ಪ್ರೈಂ ವಿಡಿಯೋ ಮೂಲಕ ಆಗಸ್ಟ್​ 20ರಂದು ಈ ಡಾಕ್ಯುಮೆಂಟರಿ ಬಿಡುಗಡೆ ಆಗಲಿದೆ.

ಸಲೀಂ ಖಾನ್​ ಮತ್ತು ಜಾವೇದ್​ ಅಖ್ತರ್​ ಅವರು ಜೊತೆಯಾಗಿ ‘ದೀವಾರ್​’, ‘ಶೋಲೆ’, ‘ಡಾನ್​’, ‘ಮಿಸ್ಟರ್​ ಇಂಡಿಯಾ’, ‘ಝಂಜೀರ್​’ ಮುಂತಾದ ಸಿನಿಮಾಗಳನ್ನು ನೀಡಿದ್ದಾರೆ. ಒಂದು ಹಂತದ ನಂತರ ಅವರಿಬ್ಬರು ಜೊತೆಯಾಗಿ ಕೆಲಸ ಮಾಡುವುದನ್ನು ನಿಲ್ಲಿಸಿದರು. ಆಗ ಇಡೀ ಬಾಲಿವುಡ್​ಗೆ ಶಾಕ್​ ಆಗಿತ್ತು. ಆ ರೀತಿಯ ಹಲವು ಇಂಟರೆಸ್ಟಿಂಗ್ ಘಟನೆಗಳು ‘ಆ್ಯಂಗ್ರಿ ಯಂಗ್​ ಮೆನ್’ ಡಾಕ್ಯುಮೆಂಟರಿಯಲ್ಲಿ ಇವೆ ಎಂಬುದನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ‘ನಾನು ಸಂದರ್ಶನ ನೀಡುವಾಗ ಇದೇ ಮೊದಲ ಬಾರಿಗೆ ನರ್ವಸ್​ ಆಗುತ್ತಿದ್ದೇನೆ’ ಎಂದು ಸಲ್ಮಾನ್​ ಖಾನ್​ ಹೇಳಿದ್ದಾರೆ. ತಂದೆ (ಸಲೀಂ ಖಾನ್​) ಬಗ್ಗೆ ಅವರು ಮನಸಾರೆ ಮಾತನಾಡಿದ್ದಾರೆ. ಹಾಗಾಗಿ ಈ ಸಾಕ್ಷ್ಯಚಿತ್ರ ನಿರೀಕ್ಷೆ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ