AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ನಿರೂಪಣೆಗೆ ಸಲ್ಮಾನ್​ ಖಾನ್​ ಬದಲು ಅನಿಲ್​ ಕಪೂರ್​ ಆಯ್ಕೆ; ಪ್ರೋಮೋ ವೈರಲ್​

‘ಜಿಯೋ ಸಿನಿಮಾ’ ಒಟಿಟಿಯಲ್ಲಿ ‘ಬಿಗ್​ ಬಾಸ್​ ಒಟಿಟಿ 3’ ಆರಂಭ ಆಗಲಿದೆ. ಈ ಕಾರ್ಯಕ್ರಮವನ್ನು ಸಲ್ಮಾನ್​ ಖಾನ್​ ನಿರೂಪಣೆ ಮಾಡುತ್ತಿಲ್ಲ. ಅವರ ಬದಲು ಅನಿಲ್​ ಕಪೂರ್​ ಅವರು ಆಯ್ಕೆ ಆಗಿದ್ದಾರೆ. ಅನಿಲ್​ ಕಪೂರ್​ ಅವರಿಗೆ ಇದು ಹೊಸ ಅನುಭವ. ಈ ಜವಾಬ್ದಾರಿಯನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಬಿಗ್​ ಬಾಸ್​ ನಿರೂಪಣೆಗೆ ಸಲ್ಮಾನ್​ ಖಾನ್​ ಬದಲು ಅನಿಲ್​ ಕಪೂರ್​ ಆಯ್ಕೆ; ಪ್ರೋಮೋ ವೈರಲ್​
ಅನಿಲ್​ ಕಪೂರ್​, ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: May 31, 2024 | 8:43 PM

Share

ನಟ ಸಲ್ಮಾನ್​ ಖಾನ್​ (Salman Khan) ಅವರು ಹಲವು ವರ್ಷಗಳಿಂದ ಬಿಗ್​ ಬಾಸ್​ ಕಾರ್ಯಕ್ರಮದ ನಿರೂಪಣೆ ಮಾಡುತ್ತಾ ಬಂದಿದ್ದಾರೆ. ಕಳೆದ ವರ್ಷ ಅವರು ‘ಬಿಗ್​ ಬಾಸ್​ ಒಟಿಟಿ 2’ ಕೂಡ ನಡೆಸಿಕೊಟ್ಟಿದ್ದರು. ಆದರೆ ಈ ಬಾರಿ ಒಟಿಟಿ ವರ್ಷನ್​ನಿಂದ ದೂರ ಉಳಿಯಲು ಅವರು ನಿರ್ಧರಿಸಿದ್ದಾರೆ. ಅವರ ಬದಲಿಗೆ ಅನಿಲ್​ ಕಪೂರ್​ ಅವರ ಎಂಟ್ರಿ ಆಗಿದೆ. ಹೌದು, ಹಿಂದಿಯ ‘ಬಿಗ್​ ಬಾಸ್​ ಒಟಿಟಿ 3’ (Bigg Boss OTT 3) ಕಾರ್ಯಕ್ರಮವನ್ನು ಈ ಬಾರಿ ಅನಿಲ್​ ಕಪೂರ್​ (Anil Kapoor) ನಡೆಸಿಕೊಡಲಿದ್ದಾರೆ. ಈ ವಿಷಯ ತಿಳಿಸಲು ಹೊಸ ಪ್ರೋಮೋ ಹಂಚಿಕೊಳ್ಳಲಾಗಿದೆ. ಇದನ್ನು ಅನಿಲ್​ ಕಪೂರ್​ ಪುತ್ರಿ ಸೋನಂ ಕಪೂರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಬಿಡುಗಡೆ ಆಗಿರುವ ಈ ಪ್ರೋಮೋದಲ್ಲಿ ಅನಿಲ್​ ಕಪೂರ್​ ಅವರ ಮುಖ ಕಾಣಿಸಿಲ್ಲ. ಆದರೆ ಧ್ವನಿ ಕೇಳಿಸಿದೆ. ಹಾಗಾಗಿ ಇದು ಪಕ್ಕಾ ಅನಿಲ್​ ಕಪೂರ್​ ಎಂಬುದು ಖಚಿತವಾಗಿದೆ. ಅಲ್ಲದೇ ಸೋನಂ ಕಪೂರ್​ ಅವರು ಪ್ರೋಮೋ ಶೇರ್​ ಮಾಡಿಕೊಂಡು, ‘ಪ್ರತಿಭಾವಂತ, ಪರಿಶ್ರಮಿ ಮತ್ತು ಹ್ಯಾಂಡ್ಸಮ್​ ವ್ಯಕ್ತಿಯನ್ನು ಅವರು ಆಯ್ಕೆ ಮಾಡಿಕೊಂಡಿದ್ದಾರೆ’ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ಬಿಗ್​ ಬಾಸ್​ ಒಟಿಟಿ ಮೊದಲ ಸೀಸನ್​ ಅನ್ನು ಕರಣ್​ ಜೋಹರ್​ ನಿರೂಪಣೆ ಮಾಡಿದ್ದರು. ಆದರೆ ಎರಡನೇ ಸೀಸನ್​ಗೆ ಸಲ್ಮಾನ್​ ಖಾನ್​ ಎಂಟ್ರಿ ಆಗಿತ್ತು. ಮೂರನೇ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಕಂದರ್​’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ‘ಬಿಗ್​ ಬಾಸ್​ ಒಟಿಟಿ ಸೀಸನ್​ 3’ ನಿರೂಪಣೆಯ ಜವಾಬ್ದಾರಿ ಹೊತ್ತುಕೊಂಡರೆ ಸಮಯ ಹೊಂದಿಸುವುದು ಸುಲಭವಲ್ಲ. ಹಾಗಾಗಿ ಅವರು ಒಟಿಟಿ ವರ್ಷನ್​ನ ನಿರೂಪಣೆಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕಿಸ್ಸಿಂಗ್​ ಸೀನ್​ ಮಾಡಲ್ಲ ಅಂತ ಸಲ್ಮಾನ್​ ಖಾನ್​ ಸುಳ್ಳು ಹೇಳಿದ್ರಾ? ಫೋಟೋ ವೈರಲ್​

ಇದು ವಿವಾದಾತ್ಮಕ ಶೋ. ಹೊರ ಜಗತ್ತಿನಲ್ಲಿ ಕಾಂಟ್ರಿವರ್ಸಿ ಮಾಡಿಕೊಂಡ ವ್ಯಕ್ತಿಗಳೇ ಹೆಚ್ಚಾಗಿ ಈ ಕಾರ್ಯಕ್ರಮಕ್ಕೆ ಬರುತ್ತಾರೆ. ಅಂಥವರನ್ನು ಹ್ಯಾಂಡಲ್​ ಮಾಡುವುದು ಸುಲಭವಲ್ಲ. ಅನೇಕ ಬಾರಿ ಸಲ್ಮಾನ್​ ಖಾನ್​ ಅವರು ಕೋಪ ಮಾಡಿಕೊಂಡಿದ್ದುಂಟು. ಸ್ಪರ್ಧಿಗಳ ಎದುರು ಅವರು ಕಿರುಚಾಡಿದ್ದೂ ಇದೆ. ಈ ಬಾರಿ ಅನಿಲ್​ ಕಪೂರ್​ಗೆ ನಿರೂಪಣೆಯ ಜವಾಬ್ದಾರಿ ನೀಡಲಾಗಿದೆ. ಅವರು ಇದನ್ನು ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?