ಬಿಗ್​ ಬಾಸ್​ ನಿರೂಪಣೆಗೆ ಸಲ್ಮಾನ್​ ಖಾನ್​ ಬದಲು ಅನಿಲ್​ ಕಪೂರ್​ ಆಯ್ಕೆ; ಪ್ರೋಮೋ ವೈರಲ್​

‘ಜಿಯೋ ಸಿನಿಮಾ’ ಒಟಿಟಿಯಲ್ಲಿ ‘ಬಿಗ್​ ಬಾಸ್​ ಒಟಿಟಿ 3’ ಆರಂಭ ಆಗಲಿದೆ. ಈ ಕಾರ್ಯಕ್ರಮವನ್ನು ಸಲ್ಮಾನ್​ ಖಾನ್​ ನಿರೂಪಣೆ ಮಾಡುತ್ತಿಲ್ಲ. ಅವರ ಬದಲು ಅನಿಲ್​ ಕಪೂರ್​ ಅವರು ಆಯ್ಕೆ ಆಗಿದ್ದಾರೆ. ಅನಿಲ್​ ಕಪೂರ್​ ಅವರಿಗೆ ಇದು ಹೊಸ ಅನುಭವ. ಈ ಜವಾಬ್ದಾರಿಯನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಬಿಗ್​ ಬಾಸ್​ ನಿರೂಪಣೆಗೆ ಸಲ್ಮಾನ್​ ಖಾನ್​ ಬದಲು ಅನಿಲ್​ ಕಪೂರ್​ ಆಯ್ಕೆ; ಪ್ರೋಮೋ ವೈರಲ್​
ಅನಿಲ್​ ಕಪೂರ್​, ಸಲ್ಮಾನ್​ ಖಾನ್​
Follow us
|

Updated on: May 31, 2024 | 8:43 PM

ನಟ ಸಲ್ಮಾನ್​ ಖಾನ್​ (Salman Khan) ಅವರು ಹಲವು ವರ್ಷಗಳಿಂದ ಬಿಗ್​ ಬಾಸ್​ ಕಾರ್ಯಕ್ರಮದ ನಿರೂಪಣೆ ಮಾಡುತ್ತಾ ಬಂದಿದ್ದಾರೆ. ಕಳೆದ ವರ್ಷ ಅವರು ‘ಬಿಗ್​ ಬಾಸ್​ ಒಟಿಟಿ 2’ ಕೂಡ ನಡೆಸಿಕೊಟ್ಟಿದ್ದರು. ಆದರೆ ಈ ಬಾರಿ ಒಟಿಟಿ ವರ್ಷನ್​ನಿಂದ ದೂರ ಉಳಿಯಲು ಅವರು ನಿರ್ಧರಿಸಿದ್ದಾರೆ. ಅವರ ಬದಲಿಗೆ ಅನಿಲ್​ ಕಪೂರ್​ ಅವರ ಎಂಟ್ರಿ ಆಗಿದೆ. ಹೌದು, ಹಿಂದಿಯ ‘ಬಿಗ್​ ಬಾಸ್​ ಒಟಿಟಿ 3’ (Bigg Boss OTT 3) ಕಾರ್ಯಕ್ರಮವನ್ನು ಈ ಬಾರಿ ಅನಿಲ್​ ಕಪೂರ್​ (Anil Kapoor) ನಡೆಸಿಕೊಡಲಿದ್ದಾರೆ. ಈ ವಿಷಯ ತಿಳಿಸಲು ಹೊಸ ಪ್ರೋಮೋ ಹಂಚಿಕೊಳ್ಳಲಾಗಿದೆ. ಇದನ್ನು ಅನಿಲ್​ ಕಪೂರ್​ ಪುತ್ರಿ ಸೋನಂ ಕಪೂರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಬಿಡುಗಡೆ ಆಗಿರುವ ಈ ಪ್ರೋಮೋದಲ್ಲಿ ಅನಿಲ್​ ಕಪೂರ್​ ಅವರ ಮುಖ ಕಾಣಿಸಿಲ್ಲ. ಆದರೆ ಧ್ವನಿ ಕೇಳಿಸಿದೆ. ಹಾಗಾಗಿ ಇದು ಪಕ್ಕಾ ಅನಿಲ್​ ಕಪೂರ್​ ಎಂಬುದು ಖಚಿತವಾಗಿದೆ. ಅಲ್ಲದೇ ಸೋನಂ ಕಪೂರ್​ ಅವರು ಪ್ರೋಮೋ ಶೇರ್​ ಮಾಡಿಕೊಂಡು, ‘ಪ್ರತಿಭಾವಂತ, ಪರಿಶ್ರಮಿ ಮತ್ತು ಹ್ಯಾಂಡ್ಸಮ್​ ವ್ಯಕ್ತಿಯನ್ನು ಅವರು ಆಯ್ಕೆ ಮಾಡಿಕೊಂಡಿದ್ದಾರೆ’ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ಬಿಗ್​ ಬಾಸ್​ ಒಟಿಟಿ ಮೊದಲ ಸೀಸನ್​ ಅನ್ನು ಕರಣ್​ ಜೋಹರ್​ ನಿರೂಪಣೆ ಮಾಡಿದ್ದರು. ಆದರೆ ಎರಡನೇ ಸೀಸನ್​ಗೆ ಸಲ್ಮಾನ್​ ಖಾನ್​ ಎಂಟ್ರಿ ಆಗಿತ್ತು. ಮೂರನೇ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಕಂದರ್​’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ‘ಬಿಗ್​ ಬಾಸ್​ ಒಟಿಟಿ ಸೀಸನ್​ 3’ ನಿರೂಪಣೆಯ ಜವಾಬ್ದಾರಿ ಹೊತ್ತುಕೊಂಡರೆ ಸಮಯ ಹೊಂದಿಸುವುದು ಸುಲಭವಲ್ಲ. ಹಾಗಾಗಿ ಅವರು ಒಟಿಟಿ ವರ್ಷನ್​ನ ನಿರೂಪಣೆಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕಿಸ್ಸಿಂಗ್​ ಸೀನ್​ ಮಾಡಲ್ಲ ಅಂತ ಸಲ್ಮಾನ್​ ಖಾನ್​ ಸುಳ್ಳು ಹೇಳಿದ್ರಾ? ಫೋಟೋ ವೈರಲ್​

ಇದು ವಿವಾದಾತ್ಮಕ ಶೋ. ಹೊರ ಜಗತ್ತಿನಲ್ಲಿ ಕಾಂಟ್ರಿವರ್ಸಿ ಮಾಡಿಕೊಂಡ ವ್ಯಕ್ತಿಗಳೇ ಹೆಚ್ಚಾಗಿ ಈ ಕಾರ್ಯಕ್ರಮಕ್ಕೆ ಬರುತ್ತಾರೆ. ಅಂಥವರನ್ನು ಹ್ಯಾಂಡಲ್​ ಮಾಡುವುದು ಸುಲಭವಲ್ಲ. ಅನೇಕ ಬಾರಿ ಸಲ್ಮಾನ್​ ಖಾನ್​ ಅವರು ಕೋಪ ಮಾಡಿಕೊಂಡಿದ್ದುಂಟು. ಸ್ಪರ್ಧಿಗಳ ಎದುರು ಅವರು ಕಿರುಚಾಡಿದ್ದೂ ಇದೆ. ಈ ಬಾರಿ ಅನಿಲ್​ ಕಪೂರ್​ಗೆ ನಿರೂಪಣೆಯ ಜವಾಬ್ದಾರಿ ನೀಡಲಾಗಿದೆ. ಅವರು ಇದನ್ನು ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್