AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನ ಬಗ್ಗೆ ಅವಹೇಳನಕಾರಿ ಡೈಲಾಗ್; ವಿರೋಧದ ಬಳಿಕ ಸಿನಿಮಾನ ಡಿಲೀಟ್ ಮಾಡಿದ ನೆಟ್​ಫ್ಲಿಕ್ಸ್

‘ಅನ್ನಪೂರ್ಣಿ’ ಸಿನಿಮಾ ರಿಲೀಸ್ ಬಳಿಕ BycottNetflix ಹ್ಯಾಶ್​ ಟ್ಯಾಗ್ ಟ್ರೆಂಡ್ ಆಗಿತ್ತು. ಶಿವಸೇನೆ ಮಾಜಿ ನಾಯಕ ರಮೇಶ್ ಸೋಲಂಕಿ ಕೇಸ್ ಕೂಡ ದಾಖಲಿಸಿದ್ದರು. ಇದಾದ ಬಳಿಕ ನೆಟ್​ಫ್ಲಿಕ್ಸ್ ಎಚ್ಚೆತ್ತುಕೊಂಡಿದ್ದು, ಸಿನಿಮಾನ ಡಿಲೀಟ್ ಮಾಡಿದೆ.

ರಾಮನ ಬಗ್ಗೆ ಅವಹೇಳನಕಾರಿ ಡೈಲಾಗ್; ವಿರೋಧದ ಬಳಿಕ ಸಿನಿಮಾನ ಡಿಲೀಟ್ ಮಾಡಿದ ನೆಟ್​ಫ್ಲಿಕ್ಸ್
ಅನ್ನಪೂರ್ಣಿ ಸಿನಿಮಾದ ದೃಶ್ಯ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 11, 2024 | 3:22 PM

Share

ತಮಿಳಿನ ‘ಅನ್ನಪೂರ್ಣಿ: ದಿ ಗಾಡೆಸ್ ಆಫ್ ಫುಡ್’ ಸಿನಿಮಾ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಸಿನಿಮಾದಲ್ಲಿ ರಾಮನ ಬಗ್ಗೆ ಇರುವ ಒಂದು ಅವಹೇಳನಕಾರಿ ಡೈಲಾಗ್ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಇದನ್ನು ಅನೇಕರು ವಿರೋಧಿಸಿದ್ದರು. BycottNetflix ಹ್ಯಾಶ್​ ಟ್ಯಾಗ್ ಟ್ರೆಂಡ್ ಆಗಿತ್ತು. ಶಿವಸೇನೆ ಮಾಜಿ ನಾಯಕ ರಮೇಶ್ ಸೋಲಂಕಿ ಕೇಸ್ ಕೂಡ ದಾಖಲಿಸಿದ್ದರು. ಇದಾದ ಬಳಿಕ ನೆಟ್​ಫ್ಲಿಕ್ಸ್ ಎಚ್ಚೆತ್ತುಕೊಂಡಿದ್ದು, ಸಿನಿಮಾನ ಡಿಲೀಟ್ ಮಾಡಿದೆ. ನಿರ್ಮಾಣ ಸಂಸ್ಥೆ ಜೀ ಸ್ಟುಡಿಯೋ (Zee Studio) ಕ್ಷಮೆ ಕೇಳಿದೆ.

ಕಳೆದ ವರ್ಷ ಡಿಸೆಂಬರ್ 1ರಂದು ಥಿಯೇಟರ್​​ನಲ್ಲಿ ‘ಅನ್ನಪೂರ್ಣಿ’ ಚಿತ್ರ ಬಿಡುಗಡೆ ಆಯಿತು. ನಂತರ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಕಂಡಿತು. ಈ ಚಿತ್ರದಲ್ಲಿ ಬರುವ ಒಂದು ದೃಶ್ಯ ಸೆನ್ಸೇಷನ್ ಸೃಷ್ಟಿ ಮಾಡಿತ್ತು. ‘ವನವಾಸದ ಸಮಯದಲ್ಲಿ ರಾಮ, ಸೀತೆ ಹಾಗೂ ಲಕ್ಷ್ಮಣ ಹಸಿವಾದಾಗ ಪ್ರಾಣಿನ ಬೇಟೆ ಆಡಿ ಸೇವಿಸಿದ್ದರು. ರಾಮಾಯಣದಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ’ ಎಂಬ ಸಂಭಾಷಣೆಗೆ ಅನೇಕರು ಟೀಕೆ ಮಾಡಿದ್ದರು.  ಹಿಂದೂ ಭಾವನೆಗೆ ದಕ್ಕೆ ಉಂಟಾಗಿದೆ ಎಂದು ಅನೇಕರು ಹೇಳಿದ್ದರು.

‘ಹಿಂದೂ ಅರ್ಚಕನ ಮಗಳು ಬಿರಿಯಾನಿ ಮಾಡಲು ನಮಾಜ್ ಮಾಡುತ್ತಾಳೆ. ಸಿನಿಮಾದಲ್ಲಿ ಲವ್ ಜಿಹಾದ್ ಪ್ರಮೋಷನ್. ಕಥಾ ನಾಯಕ ಶ್ರೀರಾಮ ಕೂಡ ಮಾಂಸಹಾರಿ ಎಂದು ಹೇಳುವ ಮೂಲಕ ನಾಯಕಿಗೆ ಮಾಂಸ ತಿನ್ನುವಂತೆ ಪ್ರೇರೇಪಿಸಿದ್ದಾನೆ. ಇದು ಹಿಂದೂ ಭಾವನೆಗೆ ಧಕ್ಕೆ ತಂದಂತಾಗಿದೆ’ ಎಂದು ರಮೇಶ್ ಸೋಲಂಕಿ ಹೇಳಿದ್ದರು. ನಯನತಾರಾ, ಜೈ, ನೀಲೇಶ್ ಕೃಷ್ಣ, ನಿರ್ಮಾಪಕ ಜತಿನ್ ಸೇತಿ, ಆರ್​ ರವೀಂದ್ರನ್, ಪುನಿತ್, ಜೀ ಸ್ಟುಡಿಯೋ ಮುಖ್ಯ ಬಿಸ್ನೆಸ್ ಆಫೀಸರ್ ಶರೀಖ್ ಪಟೇಲ್ ಹಾಗೂ ನೆಟ್​ಫ್ಲಿಕ್ಸ್​ನ ಇಂಡಿಯಾದ ಮುಖ್ಯಸ್ಥೆ ಮೋನಿಕಾ ಶೆರ್ಗಿಲ್ ವಿರುದ್ಧ ಕೇಸ್ ದಾಖಲಾಗಿತ್ತು.

ಈ ವಿವಾದದ ಬಳಿಕ ನೆಟ್​ಫ್ಲಿಕ್ಸ್ ಎಚ್ಚೆತ್ತುಕೊಂಡಿದೆ. ಈಗಾಗಲೇ ಸಿನಿಮಾನ ತೆಗೆಯಲಾಗಿದೆ. ವಿಶ್ವ ಹಿಂದೂ ಪರಿಷತ್​ಗೆ ಜೀ ಸ್ಟುಡಿಯೋ ಕ್ಷಮೆ ಕೇಳಿದೆ. ಜೊತೆಗೆ ವಿವಾದಾತ್ಮಕ ದೃಶ್ಯವನ್ನು ತೆಗೆಯುವ ಭರವಸೆ ನೀಡಿದೆ. ‘ನಮಗೆ ಧಾರ್ಮಿಕ ಭಾವನೆಗೆ ಹಾನಿ ಮಾಡುವ ಯಾವುದೇ ಉದ್ದೇಶ ಇಲ್ಲ. ನಾವು ಕ್ಷಮೆ ಕೇಳುತ್ತೇವೆ’ ಎಂದು ನಿರ್ಮಾಣ ಸಂಸ್ಥೆ ಜೀ ಸ್ಟುಡಿಯೋ ತಿಳಿಸಿದೆ.

ಇದನ್ನೂ ಓದಿ: ‘ರಾಮನೂ ಮಾಂಸಾಹಾರ ಸೇವನೆ ಮಾಡಿದ್ದ’; ನಯನತಾರಾ ಸಿನಿಮಾ ಡೈಲಾಗ್ ವಿರುದ್ಧ ಎದ್ದಿದೆ ಅಪಸ್ವರ

ಅನ್ನಪೂರ್ಣಿ (ನಯನತಾರಾ) ಸಾಂಪ್ರದಾಯಿಕ ಕುಟುಂಬದಲ್ಲಿ ಹುಟ್ಟಿದವಳು. ಅವಳಿಗೆ ಅಡುಗೆ ಮಾಡುವ ಪ್ಯಾಷನ್ ಇರುತ್ತದೆ. ಸಂಪ್ರದಾಯ ಹಾಗೂ ಪ್ಯಾಷನ್ ಮಧ್ಯೆ ಸಿಕ್ಕಿ ಆಕೆ ಒದ್ದಾಡುತ್ತಾಳೆ. ಕಥಾ ನಾಯಕಿಗೆ ಮುಸ್ಲಿಂ ಧರ್ಮದ ಯುವಕನ ಜೊತೆ ಪ್ರೀತಿ ಆಗುತ್ತದೆ. ಇದನ್ನು ಅನೇಕರು ವಿರೋಧಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ