AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಬ್ ಸೀರಿಸ್ ಆರಂಭಕ್ಕೂ ಮೊದಲೇ ಬಂತು 120 ಕೋಟಿ ರೂಪಾಯಿ ಡೀಲ್; ಆರ್ಯನ್ ಖಾನ್ ನಿರ್ಧಾರವೇ ಬೇರೆ

ಶಾರುಖ್ ಖಾನ್​ಗೆ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಮಗನಿಗೆ ಒಳ್ಳೆಯ ನೆಲೆ ಸಿಗಬೇಕು ಎಂಬ ಕನಸು ಕಂಡಿದ್ದಾರೆ ಶಾರುಖ್ ಖಾನ್. ಈ ಕಾರಣದಿಂದಲೇ ಮಗನ ನಿರ್ದೇಶನದ ವೆಬ್​ ಸೀರಿಸ್​ಗೆ ತಾವೇ ಬಂಡವಾಳ ಹೂಡುತ್ತಿದ್ದಾರೆ. ಹಾಗಂತ ಅವರು ಮಗನ ನಿರ್ಧಾರದಲ್ಲಿ ಮೂಗು ತೂರಿಸುತ್ತಿಲ್ಲ.

ವೆಬ್ ಸೀರಿಸ್ ಆರಂಭಕ್ಕೂ ಮೊದಲೇ ಬಂತು 120 ಕೋಟಿ ರೂಪಾಯಿ ಡೀಲ್; ಆರ್ಯನ್ ಖಾನ್ ನಿರ್ಧಾರವೇ ಬೇರೆ
ಶಾರುಖ್​-ಆರ್ಯನ್
ರಾಜೇಶ್ ದುಗ್ಗುಮನೆ
|

Updated on: Aug 10, 2023 | 6:30 AM

Share

ಶಾರುಖ್ ಖಾನ್ ಮಗ ಆರ್ಯನ್ ಖಾನ್ (Aryan Khan) ಅವರು ಡ್ರಗ್ ಕೇಸ್ ಮೂಲಕ ಸಾಕಷ್ಟು ಸುದ್ದಿ ಆಗಿದ್ದರು. ಅವರು ಡ್ರಗ್ ಕೇಸ್​ನಲ್ಲಿ ಸಿಕ್ಕಿ ಬಿದ್ದಿದ್ದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈಗ ಆರ್ಯನ್ ಖಾನ್ ಅವರು ಸಿನಿಮಾ ವಿಚಾರದಲ್ಲಿ ಸುದ್ದಿ ಆಗುತ್ತಿದ್ದಾರೆ. ಅವರು ವೆಬ್ ಸೀರಿಸ್ ಒಂದನ್ನು ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಇದಕ್ಕಾಗಿ ಆರ್ಯನ್ ಖಾನ್ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಅಚ್ಚರಿಯ ವಿಚಾರ ಎಂದರೆ ಈ ವೆಬ್ ಸೀರಿಸ್ ಆರಂಭ ಆಗುವುದಕ್ಕೂ ಮೊದಲೇ ಆರ್ಯನ್ ಖಾನ್​ಗೆ 120 ಕೋಟಿ ರೂಪಾಯಿ ಡೀಲ್ ಬಂದಿದೆ. ಆದರೆ, ಈ ಡೀಲ್​ನ ಅವರು ರಿಜೆಕ್ಟ್ ಮಾಡಿದ್ದಾರೆ.

ಆರ್ಯನ್ ಖಾನ್ ಅವರದ್ದು ಸಿನಿ ಕುಟುಂಬ. ಶಾರುಖ್ ಖಾನ್​ಗೆ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಮಗನಿಗೆ ಒಳ್ಳೆಯ ನೆಲೆ ಸಿಗಬೇಕು ಎಂಬ ಕನಸು ಕಂಡಿದ್ದಾರೆ ಶಾರುಖ್ ಖಾನ್. ಈ ಕಾರಣದಿಂದಲೇ ಮಗನ ನಿರ್ದೇಶನದ ವೆಬ್​ ಸೀರಿಸ್​ಗೆ ತಾವೇ ಬಂಡವಾಳ ಹೂಡುತ್ತಿದ್ದಾರೆ. ರೆಡ್ ಚಿಲ್ಲೀಸ್ ಎಂಟರ್​ಟೇನ್​ಮೆಂಟ್ ಮೂಲಕ ಆರ್ಯನ್ ಖಾನ್ ಮೊದಲ ವೆಬ್ ಸೀರಿಸ್ ಸಿದ್ಧವಾಗಲಿದೆ. ಶಾರುಖ್ ಖಾನ್ ಅವರು ಬಂಡವಾಳ ಹೂಡುತ್ತಿದ್ದರೂ, ಮಗನ ನಿರ್ಧಾರದಲ್ಲಿ ಮೂಗು ತೂರಿಸುತ್ತಿಲ್ಲ.

ಒಟಿಟಿ ಪ್ಲಾಟ್​ಫಾರ್ಮ್ ಒಂದು ಆರ್ಯನ್ ಖಾನ್ ವೆಬ್​ ಸೀರಿಸ್​ನ ಕೊಂಡುಕೊಳ್ಳಲು 120 ಕೋಟಿ ರೂಪಾಯಿ ಡೀಲ್​ನೊಂದಿಗೆ ಬಂದಿತ್ತು. ಆರ್ಯನ್ ಖಾನ್ ಮೊದಲ ವೆಬ್ ಸೀರಿಸ್ ಎಂದಾಗ ಸಹಜವಾಗಿಯೇ ನಿರೀಕ್ಷೆ ಇರುತ್ತದೆ. ಈ ಕಾರಣಕ್ಕೆ ಇಷ್ಟು ದೊಡ್ಡ ಮೊತ್ತದ ಹಣವನ್ನು ಆಫರ್ ಮಾಡಲಾಗಿತ್ತು. ಆದರೆ, ಆರ್ಯನ್ ಖಾನ್ ಅವರು ಇದಕ್ಕೆ ಒಪ್ಪಿಲ್ಲ.

ಇದನ್ನೂ ಓದಿ: ‘ಡಾನ್​ 3’ಗೆ ರಣವೀರ್ ಸಿಂಗ್ ಎಂಟ್ರಿ; ಶಾರುಖ್ ಖಾನ್ ಹೊರ ನಡೆದ ವಿಚಾರ ಖಚಿತವಾಯ್ತು

ವೆಬ್ ಸೀರಿಸ್ ಶೂಟ್ ಆಗಿ, ಪೋಸ್ಟ್ ಪ್ರೊಡಕ್ಷನ್ ಮುಗಿದು ಪೂರ್ತಿ ಕಾಪಿ ಸಿದ್ಧವಾಗುವರೆಗೂ ಇದರ ಹಕ್ಕನ್ನು ಯಾರಿಗೂ ಮಾರದೇ ಇರಲು ಆರ್ಯನ್ ಖಾನ್ ನಿರ್ಧರಿಸಿದ್ದಾರೆ. ವೆಬ್​ ಸೀರಿಸ್​ನ ಒಟಿಟಿ ಪ್ಲಾಟ್​ಫಾರ್ಮ್​ನವರಿಗೆ ತೋರಿಸಿದ ಬಳಿಕವೇ ಅದನ್ನು ಮಾರಾಟ ಮಾಡಬೇಕು ಎಂಬುದು ಆರ್ಯನ್ ಖಾನ್ ಉದ್ದೇಶ. ಈ ಕಾರಣದಿಂದಲೇ ಅವರು ಇಷ್ಟು ದೊಡ್ಡ ಮೊತ್ತದ ಡೀಲ್​ನ ರಿಜೆಕ್ಟ್ ಮಾಡಿದ್ದಾರೆ. ಇದಕ್ಕೆ ಶಾರುಖ್ ಖಾನ್ ಕೂಡ ಬೆಂಬಲವಾಗಿ ನಿಂತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​