AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryavardhan Guruji: ‘ಬಿಗ್​ ಬಾಸ್​ ನಿಂಗೆ ಅನ್ನ ಕೊಟ್ಟಿರಬಹುದು, ಆದ್ರೆ ಅನ್ನ ಮಾಡಿಕೊಟ್ಟಿದ್ದು ನಾನು’: ಗುರೂಜಿ ಸಖತ್​ ಪಂಚ್​

Bigg Boss Kannada OTT: ಬಿಗ್​ ಬಾಸ್​ಗೆ ಬರುವುದಕ್ಕೂ ಮುನ್ನ ಸಂಖ್ಯಾಶಾಸ್ತ್ರ ಹೇಳುವ ಮೂಲಕ ಆರ್ಯವರ್ಧನ್​ ಗುರೂಜಿ ಗುರುತಿಸಿಕೊಂಡಿದ್ದರು. ಅನೇಕ ಬಾರಿ ಅವರು ಟ್ರೋಲ್​ ಆಗಿದ್ದುಂಟು.

Aryavardhan Guruji: ‘ಬಿಗ್​ ಬಾಸ್​ ನಿಂಗೆ ಅನ್ನ ಕೊಟ್ಟಿರಬಹುದು, ಆದ್ರೆ ಅನ್ನ ಮಾಡಿಕೊಟ್ಟಿದ್ದು ನಾನು’: ಗುರೂಜಿ ಸಖತ್​ ಪಂಚ್​
ಆರ್ಯವರ್ಧನ್ ಗುರೂಜಿ
TV9 Web
| Edited By: |

Updated on:Sep 14, 2022 | 11:58 AM

Share

‘ಬಿಗ್​ ಬಾಸ್ ಕನ್ನಡ ಒಟಿಟಿ’​ (Bigg Boss Kannada OTT) ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳು ಕೊನೇ ವಾರವನ್ನು ಕಳೆಯುತ್ತಿದ್ದಾರೆ. ಸದ್ಯ ಎಂಟು ಜನರ ನಡುವೆ ಪೈಪೋಟಿ ನಡೆಯುತ್ತಿದೆ. ಆರನೇ ವಾರದಲ್ಲೂ ಕೂಡ ಸ್ಪರ್ಧಿಗಳು ಉತ್ಸಾಹ ಕಳೆದುಕೊಂಡಿಲ್ಲ. ಆರ್ಯವರ್ಧನ್​ ಗುರೂಜಿ (Aryavardhan Guruji) ಅವರು ಎಲ್ಲರಿಗಿಂತ ಹೆಚ್ಚು ಫನ್​ ನೀಡುತ್ತಿದ್ದಾರೆ. ಅವರ ಮಾತುಗಳು ಪ್ರತಿಯೊಬ್ಬರಲ್ಲೂ ನಗು ಉಕ್ಕಿಸುತ್ತಿವೆ. ಯಾವುದೇ ವಿಚಾರ ಪ್ರಸ್ತಾಪವಾದರೂ ಕೂಡ ಅವರು ತಮ್ಮ ಪೂರ್ವಾಶ್ರಮದ ಬೇಕರಿ ಬಗ್ಗೆ ಮಾತನಾಡುತ್ತಾರೆ. ಸಿಟ್ಟು ಬಂದರೆ ಹಳ್ಳಿ ಭಾಷೆಯಲ್ಲಿ ಬೈಯ್ದು ಬಿಸಾಕುತ್ತಾರೆ. ತಮಗೆ ಅನಿಸಿದ್ದನ್ನು ನೇರವಾಗಿ ಹೇಳುತ್ತಾರೆ. ಕೆಲವೊಮ್ಮೆ ಬಿಗ್​ ಬಾಸ್​ ಹೇಳೋದೇ ಒಂದು, ಗುರೂಜಿ ಅರ್ಥ ಮಾಡಿಕೊಳ್ಳೋದೇ ಮತ್ತೊಂದು ಈ ಎಲ್ಲ ಕಾರಣದಿಂದಾಗಿ ಅವರ ವ್ಯಕ್ತಿತ್ವ ದೊಡ್ಮನೆಯಲ್ಲಿ ಸಖತ್​ ಇಂಟರೆಸ್ಟಿಂಗ್​ ಎನಿಸಿದೆ.

ಬೇರೆ ಎಲ್ಲ ಸ್ಪರ್ಧಿಗಳಿಗಿಂತಲೂ ಆರ್ಯವರ್ಧನ್​ ಭಿನ್ನವಾಗಿದ್ದಾರೆ. ಅವರು ಯಾವ ವಿರುದ್ಧವೂ ದ್ವೇಷ ಕಟ್ಟಿಕೊಂಡಿಲ್ಲ. ಎಲ್ಲರ ಜೊತೆಯೂ ಬೆರೆಯುತ್ತಿದ್ದಾರೆ. ವಿಶೇಷ ಏನೆಂದರೆ, ಅಡುಗೆ ಮನೆಯಲ್ಲಿ ಅವರು ಹೆಚ್ಚು ಸಮಯ ಕಳೆದಿದ್ದಾರೆ. ಬೇಕರಿಯಲ್ಲಿ ಕೆಲಸ ಮಾಡಿ ಅಭ್ಯಾಸ ಇದ್ದಿದ್ದರಿಂದ ಅವರಿಗೆ ಹಲವು ಅಡುಗೆ ಬಗ್ಗೆ ತಿಳಿದಿದೆ. ಯಾವುದೇ ಬೇಸರ ಇಲ್ಲದೇ ಅವರು ಅಡುಗೆ ಮನೆ ಕಾರ್ಯವನ್ನು ನಿಭಾಯಿಸುತ್ತಾರೆ.

ಇದನ್ನೂ ಓದಿ
Image
ದೊಡ್ಮನೆಯಲ್ಲಿ ಎದೆ ಬಡಿದುಕೊಂಡು ಅತ್ತ ಜಯಶ್ರೀ; ಬಿಗ್​ ಬಾಸ್​ ಶೋನಲ್ಲಿ ಅಂಥದ್ದೇನಾಯ್ತು?
Image
BBK: ಬಿಗ್​ ಬಾಸ್​ಗೆ ಅವಮಾನ ಮಾಡಿದ ಸೋನು ಗೌಡ; ಮುಲಾಜಿಲ್ಲದೇ ಕ್ಲಾಸ್​ ತೆಗೆದುಕೊಂಡ ಕಿಚ್ಚ ಸುದೀಪ್​
Image
ಬಿಗ್​ ಬಾಸ್​ನಲ್ಲಿ ಹುಡುಗರಿಗೆ ಹೊರಗಿನಿಂದ ಸಿಗುತ್ತಿದೆ ಆ ಒಂದು ವಸ್ತು; ಸೋನು ಹೇಳಿಯೇ ಬಿಟ್ರು
Image
‘ಬಿಗ್​ ಬಾಸ್​ ಒಟಿಟಿ’ ಮನೆಯೊಳಗೆ ನಿಜವಾಗಿ ಏನೆಲ್ಲ ನಡೆಯಿತು? ಎಲ್ಲವನ್ನೂ ವಿವರಿಸಿದ ಸ್ಫೂರ್ತಿ ಗೌಡ

ಕಲರ್ಸ್​ ಸೂಪರ್​ ವಾಹಿನಿ ಒಂದು ಪ್ರೋಮೋ ಹಂಚಿಕೊಂಡಿದೆ. ಅದರಲ್ಲಿ ಆರ್ಯವರ್ಧನ್​ ಗುರೂಜಿ ಅವರ ಮಾತುಗಳು ಕಾಮಿಡಿ ಕಿಕ್​ ನೀಡುವಂತಿವೆ. ‘ರಾಕಿ ರಾಕಿ ರಾಕಿ, ನಿಮ್ಮ ವೋಟ್​ ನನಗೆ ಹಾಕಿ’ ಎಂದು ಅವರು ಪ್ರಾಸ ನುಡಿದಿದ್ದಾರೆ. ‘ನನ್ನ ಕೈಯಲ್ಲಿ ಅನ್ನ ತಿಂದಿದ್ದೀಯ. ಒಂದೇ ಒಂದು ವೋಟ್​ ಕೊಡು. ಬಿಗ್​ ಬಾಸ್​ ನಿನಗೆ ಅನ್ನ ಕೊಟ್ಟಿರಬಹುದು. ಆದರೆ ಅನ್ನ ಮಾಡಿ ಹಾಕಿದವನು ನಾನು’ ಎಂದು ಗುರೂಜಿ ಹೇಳಿದ್ದಾರೆ.

ಬಿಗ್​ ಬಾಸ್​ಗೆ ಬರುವುದಕ್ಕೂ ಮುನ್ನ ಸಂಖ್ಯಾಶಾಸ್ತ್ರ ಹೇಳುವ ಮೂಲಕ ಆರ್ಯವರ್ಧನ್​ ಗುರೂಜಿ ಗುರುತಿಸಿಕೊಂಡಿದ್ದರು. ಅನೇಕ ಬಾರಿ ಅವರು ಟ್ರೋಲ್​ ಆಗಿದ್ದುಂಟು. ‘ಬಿಗ್​ ಬಾಸ್ ಕನ್ನಡ ಒಟಿಟಿ’​ ಮೂಲಕ ಅವರ ಜನಪ್ರಿಯತೆ ಹೆಚ್ಚಿದೆ. ಅವರ ಸ್ವಭಾವ ಏನೆಂಬುದನ್ನು ವೀಕ್ಷಕರು ಹತ್ತಿರದಿಂದ ನೋಡಿದಂತಾಗಿದೆ.

ಸದ್ಯ ಬಿಗ್​ ಬಾಸ್​ ಮನೆಯಲ್ಲಿ ಆರ್ಯವರ್ಧನ್​ ಗುರೂಜಿ, ರಾಕೇಶ್​ ಅಡಿಗ, ಜಯಶ್ರೀ ಆರಾಧ್ಯ, ಸೋನು ಶ್ರೀನಿವಾಸ್​ ಗೌಡ, ಜಶ್ವಂತ್​, ರೂಪೇಶ್​ ಶೆಟ್ಟಿ, ಸಾನ್ಯಾ ಅಯ್ಯರ್​, ಸೋಮಣ್ಣ ಮಾಚಿಮಾಡ ಇದ್ದಾರೆ. ಇವರ ಪೈಕಿ ನಾಲ್ಕು ಜನರು ಟಿವಿಯಲ್ಲಿ ಪ್ರಸಾರವಾಗುವ ‘ಬಿಗ್​ ಬಾಸ್​ ಕನ್ನಡ 9ನೇ ಸೀಸನ್​’ನಲ್ಲಿ ಸ್ಪರ್ಧಿಸುವ ಅವಕಾಶ ಪಡೆಯಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:53 am, Wed, 14 September 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ