AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryavardhan Guruji: ಬಿಗ್​ ಬಾಸ್​ ಕನ್ನಡ 9ನೇ ಸೀಸನ್​ಗೆ ಎಂಟ್ರಿ ಪಡೆದ ಮೊದಲ ಸ್ಪರ್ಧಿ ಆರ್ಯವರ್ಧನ್​ ಗುರೂಜಿ

Bigg Boss Kannada season 9: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಫಿನಾಲೆಯಲ್ಲಿ ಆರ್ಯವರ್ಧನ್​ ಗುರೂಜಿ ಎಮೋಷನಲ್​ ಆಗಿ ಮಾತನಾಡಿದರು. ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ಕ್ಕೆ ಆಯ್ಕೆ ಆಗಿರುವ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

Aryavardhan Guruji: ಬಿಗ್​ ಬಾಸ್​ ಕನ್ನಡ 9ನೇ ಸೀಸನ್​ಗೆ ಎಂಟ್ರಿ ಪಡೆದ ಮೊದಲ ಸ್ಪರ್ಧಿ ಆರ್ಯವರ್ಧನ್​ ಗುರೂಜಿ
ಆರ್ಯವರ್ಧನ್ ಗುರೂಜಿ
TV9 Web
| Edited By: |

Updated on:Sep 16, 2022 | 9:14 PM

Share

‘ನಾನು ಅಂದ್ರೆ ನಂಬರ್​, ನಂಬರ್​ ಅಂದ್ರೆ ನಾನು’ ಎಂದು ಹೇಳುತ್ತಲೇ ಫೇಮಸ್​ ಆದ ಆರ್ಯವರ್ಧನ್​ ಗುರೂಜಿ ಅವರು ‘ಬಿಗ್​ ಬಾಸ್​ ಕನ್ನಡ ಒಟಿಟಿ’ (Bigg Boss Kannada OTT) ಶೋಗೆ ಬಂದು ಎಲ್ಲರನ್ನೂ ರಂಜಿಸಿದ್ದಾರೆ. ಈಗ ಅವರು ಟಿವಿ ಸೀಸನ್​ಗೆ ಎಂಟ್ರಿ ನೀಡುವ ಮೊದಲ ಸ್ಪರ್ಧಿಯಾಗಿ ಆಯ್ಕೆ ಆಗಿದ್ದಾರೆ. ಶುಕ್ರವಾರ (ಸೆ.16) ಸಂಜೆ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಫಿನಾಲೆ ನಡೆದಿದೆ. ಅದರಲ್ಲಿ ಕಿಚ್ಚ ಸುದೀಪ್​ ಅವರು ಈ ವಿಷಯ ಘೋಷಿಸಿದ್ದಾರೆ. ಟಿವಿಯಲ್ಲಿ ನಡೆಯಲಿರುವ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ (Bigg Boss Kannada season 9) ಸ್ಪರ್ಧಿಸಲು ಆರ್ಯವರ್ಧನ್​ ಗುರೂಜಿ (Aryavardhan Guruji) ಅವರು ಚಾನ್ಸ್​ ಪಡೆದಿದ್ದಾರೆ. ಈ ವಿಷಯ ಕೇಳುತ್ತಿದ್ದಂತೆಯೇ ಅವರ ಸಖತ್​ ಎಮೋಷನಲ್​ ಆದರು. ಅವರನ್ನು ಇಷ್ಟಪಡುವ ಎಲ್ಲ ವೀಕ್ಷಕರಿಗೂ ಖುಷಿ ಆಗಿದೆ.

ಸೆಪ್ಟೆಂಬರ್​ 24ರ ಸಂಜೆ 6 ಗಂಟೆಗೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರ ಗ್ರ್ಯಾಂಡ್​ ಪ್ರೀಮಿಯರ್​ ಆಗಲಿದೆ. ನಂತರ ಪ್ರತಿ ದಿನ 9 ಗಂಟೆಗೆ ಸಂಚಿಕೆಗಳು ಪ್ರಸಾರ ಆಗಲಿವೆ. ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋನಲ್ಲಿ ಆಯ್ಕೆ ಆದ ಸ್ಪರ್ಧಿಗಳ ಜೊತೆಗೆ ಹಳೇ ಸೀಸನ್​ನ ವ್ಯಕ್ತಿಗಳು ಕೂಡ ಇರಲಿದ್ದಾರೆ. ಅಲ್ಲದೇ, 9 ಮಂದಿ ಹೊಸ ಸ್ಪರ್ಧಿಗಳು ಎಂಟ್ರಿ ನೀಡಲಿದ್ದಾರೆ.

ಆರ್ಯವರ್ಧನ್​ ಅವರ ವ್ಯಕ್ತಿತ್ವ ಅನೇಕರಿಗೆ ಇಷ್ಟ ಆಗಿದೆ. ಅವರು ಮಾತನಾಡುವ ರೀತಿ ಎಲ್ಲರಿಗೂ ನಗು ತರಿಸುತ್ತದೆ. ಹೆಚ್ಚೇನೂ ಫಿಲ್ಟರ್​ ಇಲ್ಲದೇ ಮಾತನಾಡುವ ಶೈಲಿ ಗಮನ ಸೆಳೆಯುತ್ತಿದೆ. ಸುದೀಪ್​ ಹೇಳುವುದೇ ಒಂದು, ಆರ್ಯವರ್ಧನ್​ ಅರ್ಥ ಮಾಡಿಕೊಳ್ಳುವುದೇ ಮತ್ತೊಂದು. ಆ ಕಾರಣದಿಂದಲೂ ಪ್ರತಿ ವಾರದ ಪಂಚಾಯಿತಿಯಲ್ಲಿ ಅವರ ಮಾತುಗಳು ಕಾಮಿಡಿ ಕಿಕ್​ ನೀಡುತ್ತವೆ. ಅದು ಟಿವಿ ಸೀಸನ್​ನಲ್ಲೂ ಮುಂದುವರಿಯುವ ನಿರೀಕ್ಷೆ ಇದೆ.

ಇದನ್ನೂ ಓದಿ
Image
BBK: ‘ನೀನು ಹಾಲು ಇದ್ದಂಗೆ, ಒಮ್ಮೆಲೆ ಉಕ್ಕುತ್ತೀಯ’: ಸೋನು ಗೌಡ ವ್ಯಕ್ತಿತ್ವವನ್ನು ಈ ರೀತಿ ಬಣ್ಣಿಸಿದ ಗುರೂಜಿ
Image
Aryavardhan Guruji: ಬದಲಾಯ್ತು ಗುರೂಜಿ ಗೆಟಪ್​; ಬಿಗ್​ ಬಾಸ್​ ಮನೆಯಲ್ಲಿ ಈ ಪರಿ ಚೇಂಜ್​ ಆದ ಆರ್ಯವರ್ಧನ್​
Image
ಆರ್ಯವರ್ಧನ್​ ಗುರೂಜಿ ಕುಟುಂಬದ ಆಸ್ತಿ 5 ಸಾವಿರ ಕೋಟಿ ರೂಪಾಯಿ; ಶಾಕ್​ ಆದ ಸ್ಪರ್ಧಿಗಳು
Image
Aryavardhan Guruji: ಈ ಬಾರಿ ‘ಬಿಗ್ ಬಾಸ್​’ ಗೆಲ್ಲೋರು ಯಾರು? ಮೊದಲ ದಿನವೇ ಭವಿಷ್ಯ ನುಡಿದ ಆರ್ಯವರ್ಧನ್​ ಗುರೂಜಿ

‘ಬಿಗ್​ ಬಾಸ್​ ಕನ್ನಡ ಒಟಿಟಿ’ ಫಿನಾಲೆ ದಿನ ಆರ್ಯವರ್ಧನ್​ ಗುರೂಜಿ ಅವರ ಮಗಳು ಕೂಡ ವೇದಿಕೆಗೆ ಬಂದಿಳು. ಆಕೆಯನ್ನು ನೋಡಿ ಗುರೂಜಿ ಸಖತ್​ ಎಮೋಷನಲ್​ ಆದರು. ವೇದಿಕೆ ಮೇಲೆ ಸುದೀಪ್​ ಜತೆ ನಿಂತುಕೊಂಡ ಮಗಳನ್ನು ನೋಡಿ ಅವರು ತುಂಬ ಹೆಮ್ಮೆಪಟ್ಟುಕೊಂಡರು. ‘ನನ್ನ ಮಾತುಗಳನ್ನು ಅರ್ಥ ಮಾಡಿಕೊಂಡ ಸುದೀಪ್​ ಸರ್​ಗೆ ನಾನು ಧನ್ಯವಾದ ಹೇಳುತ್ತೇನೆ. ವೋಟ್​ ಹಾಕಿದವರಿಗೆ ಜೀವನ ಪೂರ್ತಿ ಚಿರಋಣಿ ಆಗಿರುತ್ತೇನೆ’ ಎಂದು ಆರ್ಯವರ್ಧನ್​ ಗುರೂಜಿ ಅವರು ಎಮೋಷನಲ್​ ಆಗಿ ಮಾತನಾಡಿದರು. ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ಕ್ಕೆ ಆಯ್ಕೆ ಆಗಿರುವ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:14 pm, Fri, 16 September 22

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ