AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಳ್ಳ ಸ್ವಾಮೀಜಿ ಎನ್ನಬೇಕೆ?’ ಎಂದ ಸೋನು; ಆರ್ಯವರ್ಧನ್​ ಗುರೂಜಿ ತಿರುಗೇಟಿಗೆ ವೈರಲ್ ಹುಡುಗಿ ಗಪ್​ಚುಪ್​​

ಮನೆ ಮಂದಿ ಕುಳಿತು ಹರಟೆ ಹೊಡೆಯುತ್ತಿದ್ದರು. ಈ ವೇಳೆ ಆರ್ಯವರ್ಧನ್​ಗೆ ‘ಡವ್​ ರಾಜ್​’ ಎಂಬ ಶಬ್ದ ಬಳಕೆ ಮಾಡಿದರು ಸೋನು. ಇದನ್ನು ಕೇಳಿ ಆರ್ಯವರ್ಧನ್ ಗುರೂಜಿ ಸಿಟ್ಟಾದರು. ‘ಡವ್​ ರಾಜ’ ಅಂದ್ರೆ ಸರಿ ಇರಲ್ಲ ಎಂದು ನೇರವಾಗಿ ಹೇಳಿದರು.

‘ಕಳ್ಳ ಸ್ವಾಮೀಜಿ ಎನ್ನಬೇಕೆ?’ ಎಂದ ಸೋನು; ಆರ್ಯವರ್ಧನ್​ ಗುರೂಜಿ ತಿರುಗೇಟಿಗೆ ವೈರಲ್ ಹುಡುಗಿ ಗಪ್​ಚುಪ್​​
ಆರ್ಯವರ್ಧನ್-ಸೋನು
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 12, 2022 | 8:24 PM

Share

‘ಬಿಗ್ ಬಾಸ್ ಕನ್ನಡ ಒಟಿಟಿ’ (Bigg Boss Kannada OTT) ಮೊದಲ ಸೀಸನ್ ಕೊನೆಯ ವಾರಕ್ಕೆ ಬಂದು ನಿಂತಿದೆ. ಈಗಿರುವ ಎಂಟು ಸ್ಪರ್ಧಿಗಳ ಪೈಕಿ ನಾಲ್ಕು ಮಂದಿ ಮಾತ್ರ ಟಿವಿ ಸೀಸನ್​ಗೆ ತೆರಳಲಿದ್ದಾರೆ. ಕಡಿಮೆ ಸದಸ್ಯರು ಇರುವ ಕಾರಣಕ್ಕೆ ದೊಡ್ಮನೆ ಬಿಕೋ ಎನ್ನುತ್ತಿದೆ. ಮನೆಯಲ್ಲಿ ಸ್ಪರ್ಧಿಗಳ ಸಂಖ್ಯೆ ಕಡಿಮೆ ಆದರೂ ಜಗಳ ಮಾತ್ರ ಕಡಿಮೆ ಆಗುತ್ತಿಲ್ಲ. ಅದರಲ್ಲೂ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಸುಖಾಸುಮ್ಮನೆ ಕಿರಿಕ್ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಆರ್ಯವರ್ಧನ್ ಗುರೂಜಿ ಜತೆ ದೊಡ್ಡ ಜಗಳವನ್ನೇ ಮಾಡಿದ್ದಾರೆ.

ಮನೆ ಮಂದಿ ಕುಳಿತು ಹರಟೆ ಹೊಡೆಯುತ್ತಿದ್ದರು. ಈ ವೇಳೆ ಆರ್ಯವರ್ಧನ್​ಗೆ ‘ಡವ್​ ರಾಜ್​’ ಎಂಬ ಶಬ್ದ ಬಳಕೆ ಮಾಡಿದರು ಸೋನು. ಇದನ್ನು ಕೇಳಿ ಆರ್ಯವರ್ಧನ್ ಗುರೂಜಿ ಸಿಟ್ಟಾದರು. ‘ಡವ್​ ರಾಜ’ ಅಂದ್ರೆ ಸರಿ ಇರಲ್ಲ ಎಂದು ನೇರವಾಗಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸೋನು ಗೌಡ ‘ಹಾಗಿದ್ರೆ ನಾನು ನಿಮಗೆ ಕಳ್ಳ ಸ್ವಾಮೀಜಿ’ ಎಂದು ಹೇಳಲೇ ಎಂಬುದಾಗಿ ಕೇಳಿದ್ದಾರೆ. ಇದಕ್ಕೆ ಗುರೂಜಿ ಹೆಚ್ಚೇನು ಪ್ರತಿಕ್ರಿಯೆ ನೀಡಿಲ್ಲ. ಆದರೆ, ಮನೆ ಮಂದಿಗೆ ಈ ವಿಚಾರ ಹೆಚ್ಚು ಇಷ್ಟ ಆಗಿಲ್ಲ. ಈ ಬಗ್ಗೆ ಎಲ್ಲರೂ ಪ್ರಶ್ನೆ ಮಾಡಿದ್ದಾರೆ.

‘ಸೋನು ಅವರು ವಯಸ್ಸಿನಲ್ಲಿ ಹಿರಿಯರು. ಅವರಿಗೆ ನೀನು ಈ ರೀತಿ ಹೇಳಿದ್ದು ಸರಿ ಅಲ್ಲ’ ಎಂದು ಸಾನ್ಯಾ ಅಯ್ಯರ್​ ಹೇಳಿದರು. ಇದಕ್ಕೆ ಸೋನು ಬೇಸರ ಮಾಡಿಕೊಂಡರು. ‘ಕಳ್ಳ ಸ್ವಾಮೀಜಿ ಎಂದು ಹೇಳಬೇಕೆ ಎಂಬುದಷ್ಟೇ ನನ್ನ ಪ್ರಶ್ನೆ. ನಾನು ಅವರಿಗೆ ಕಳ್ಳ ಸ್ವಾಮೀಜಿ ಎಂದು ಹೇಳಿಲ್ಲ’ ಎಂಬುದಾಗಿ ಸೋನು ವಾದ ಮಾಡೋಕೆ ಬಂದರು. ಈ ವಿಚಾರದಿಂದ ಗುರೂಜಿ ಸಿಟ್ಟಾದರು.

ಇದನ್ನೂ ಓದಿ
Image
Sonu Srinivas Gowda: ‘ಬಿಗ್ ಬಾಸ್’ ಮನೆಯಲ್ಲಿ ಕಳಪೆ ಆಟ ತೋರಿದ ಸೋನು ಶ್ರೀನಿವಾಸ್ ಗೌಡಗೆ ಶಿಕ್ಷೆ
Image
‘ಬಿಗ್ ಬಾಸ್​ಗೆ ಬಂದಿದ್ದು ಆಟ ಆಡೋಕೆ, ಶೋಕಿ ಮಾಡೋಕೆ’: ಸೋನು ಶ್ರೀನಿವಾಸ್ ಗೌಡ
Image
Sonu Srinivas Gowda: ಮೂಡ್ ಇಲ್ಲ ಅಂದ್ರೆ ಸೋನು ಶ್ರೀನಿವಾಸ್​ ಗೌಡ 3 ದಿನ ಸ್ನಾನ ಮಾಡಲ್ಲ; ಎಲ್ಲರ ಎದುರು ಸತ್ಯ ಬಯಲು
Image
Sonu Srinivas Gowda: ಸೋನು ಶ್ರೀನಿವಾಸ್​ ಗೌಡ ಫೋನ್​ ನಂಬರ್​ ಏನು? ಅದ್ರಲ್ಲೂ ಚಾಲಕಿತನ ತೋರಿದ ರೀಲ್ಸ್​ ಬೆಡಗಿ

ಇದನ್ನೂ ಓದಿ: ‘ನನಗಾಗಿ 24ರ ಪ್ರಾಯದ ಹುಡುಗನನ್ನು ಕಳಿಸು’: ಸೋನು ಶ್ರೀನಿವಾಸ್​ ಗೌಡ ವಿಶೇಷ ಮನವಿ

‘ಸುಖಾ ಸುಮ್ಮನೆ ನನ್ನ ಸುದ್ದಿಗೆ ಬರಬೇಡ. ನಾನು ನನ್ನದೇ ಲಿಮಿಟ್​ನಲ್ಲಿ ಇರ್ತೀನಿ. ನನಗೆ ಸಿಟಿ ಲೈಫ್​ ಒಗ್ಗಿಲ್ಲ. ಹೀಗಾಗಿ, ಹಳ್ಳಿ ಲೈಫ್​ನಲ್ಲಿ ನಾನು ಬದುಕುತ್ತಾ ಇದ್ದೀನಿ. ನನ್ನ ಭಾಷೆಗಳು ಕೂಡ ಅದೇ ರೀತಿ ಇದೆ. ನಾನು ಬಳಕೆ ಮಾಡುವಷ್ಟು ಕೆಟ್ಟ ಶಬ್ದ ಯಾರೂ ಬಳಕೆ ಮಾಡೋಕೆ ಆಗಲ್ಲ. ಕೆಟ್ಟ ಶಬ್ದ ಹೆಚ್ಚು ಬಳಕೆ ಮಾಡುವ ಸ್ಪರ್ಧೆ ಇಟ್ಟರೆ ನಾನೇ ಮೊದಲು ಬರುತ್ತೇನೆ’ ಎಂದಿದ್ದಾರೆ ಗುರೂಜಿ. ಇದಕ್ಕೆ ಸೋನು ಗೌಡ ಗಪ್​ಚುಪ್ ಆಗಿದ್ದಾರೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!