AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryavardhan Guruji: ಈ ಬಾರಿ ‘ಬಿಗ್ ಬಾಸ್​’ ಗೆಲ್ಲೋರು ಯಾರು? ಮೊದಲ ದಿನವೇ ಭವಿಷ್ಯ ನುಡಿದ ಆರ್ಯವರ್ಧನ್​ ಗುರೂಜಿ

Bigg Boss OTT Kannada : ‘ನನ್ನ ಸಂಖ್ಯಾಶಾಸ್ತ್ರ ಎಂದಿಗೂ ತಪ್ಪಾಗಿಲ್ಲ. ನಾನು ಹೇಳಿದ್ದನ್ನೇ ಮಾಡುತ್ತೇನೆ, ಮಾಡಿದ್ದನ್ನೇ ಹೇಳುತ್ತೇನೆ. ನಾನು ಗೌಡ. ನನ್ನ ಹಾಗೆ ಬಿರಿಯಾನಿ ಯಾರ ಬಳಿಯೂ ಮಾಡೋಕೆ ಸಾಧ್ಯವಿಲ್ಲ’ ಎಂದರು ಆರ್ಯವರ್ಧನ್​.

Aryavardhan Guruji: ಈ ಬಾರಿ ‘ಬಿಗ್ ಬಾಸ್​’ ಗೆಲ್ಲೋರು ಯಾರು? ಮೊದಲ ದಿನವೇ ಭವಿಷ್ಯ ನುಡಿದ ಆರ್ಯವರ್ಧನ್​ ಗುರೂಜಿ
ಆರ್ಯವರ್ಧನ್
TV9 Web
| Edited By: |

Updated on: Aug 06, 2022 | 7:48 PM

Share

‘ಬಿಗ್​ ಬಾಸ್ ಒಟಿಟಿ’ (Bigg Boss OTT) ಆರಂಭ ಆಗಿದೆ. ಸಂಜೆ 7 ಗಂಟೆಗೆ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಸುದೀಪ್ ಅವರು ಈ ಶೋಅನ್ನು ನಡೆಸಿಕೊಡುತ್ತಿದ್ದಾರೆ. ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ (Aryavardhan Guruji) ಅವರು ‘ಬಿಗ್​ ಬಾಸ್​ ಒಟಿಟಿ’ಗೆ ಎಂಟ್ರಿ ಕೊಟ್ಟಿದ್ದಾರೆ. ಸಂಖ್ಯಾಶಾಸ್ತ್ರದ ಮೂಲಕ ಗಮನ ಸೆಳೆದವರು ಆರ್ಯವರ್ಧನ್ ಗುರೂಜಿ. ಅವರು ಮೊದಲ ದಿನವೇ ವೇದಿಕೆ ಏರಿದಾಗ ಗೆಲ್ಲೋರು ಯಾರು ಎಂಬುದನ್ನು ಪ್ರಿಡಿಕ್ಟ್ ಮಾಡಿ ಸುದೀಪ್ ಎದುರು ಹೇಳಿದ್ದಾರೆ. ಇದನ್ನು ಕೇಳಿ ಸುದೀಪ್ ಅಚ್ಚರಿ ಹೊರ ಹಾಕಿದ್ದಾರೆ.

ಆರ್ಯವರ್ಧನ್​ ಗುರೂಜಿ ಸಾಕಷ್ಟು ಫೇಮಸ್. ಸಂಖ್ಯಾಶಾಸ್ತ್ರದ ಮೂಲಕ ಭವಿಷ್ಯ ಹೇಳುತ್ತಾರೆ ಆರ್ಯವರ್ಧನ್​. ಅವರು ಐಪಿಎಲ್ ಸಂದರ್ಭದಲ್ಲಿ ಖಾಸಗಿ ವಾಹಿನಿಯ ಕಾರ್ಯಕ್ರಮವೊಂದಕ್ಕೆ ತೆರಳಿ ಯಾವ ತಂಡ ಗೆಲ್ಲುತ್ತದೆ, ಯಾವ ತಂಡ ಸೋಲುತ್ತದೆ ಎಂಬುದನ್ನು ಊಹಿಸಿ ಹೇಳುತ್ತಿದ್ದರು. ಅವರ ಪ್ರಿಡಿಕ್ಷನ್ ಅನೇಕ ಬಾರಿ ತಪ್ಪಾಗಿದೆ. ಈ ವಿಚಾರ ಇಟ್ಟುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಗಳಿಸಿದ ಅವರು ಈಗ ಬಿಗ್ ಬಾಸ್ ಮೂಲಕ ಮನರಂಜನೆ ನೀಡಲಿದ್ದಾರೆ.

ಸುದೀಪ್​ ಜತೆ ‘ಬಿಗ್​​ ಬಾಸ್’ ವೇದಿಕೆ ಏರಿದ ಆರ್ಯವರ್ಧನ್​ ಅವರು, ಹಲವು ವಿಚಾರ ಹಂಚಿಕೊಂಡರು. ‘ನನ್ನ ಸಂಖ್ಯಾಶಾಸ್ತ್ರ ಎಂದಿಗೂ ತಪ್ಪಾಗಿಲ್ಲ. ನಾನು ಹೇಳಿದ್ದನ್ನೇ ಮಾಡುತ್ತೇನೆ, ಮಾಡಿದ್ದನ್ನೇ ಹೇಳುತ್ತೇನೆ. ನಾನು ಗೌಡ. ನನ್ನ ಹಾಗೆ ಬಿರಿಯಾನಿ ಯಾರ ಬಳಿಯೂ ಮಾಡೋಕೆ ಸಾಧ್ಯವಿಲ್ಲ’ ಎಂದರು ಆರ್ಯವರ್ಧನ್​.

ಇದನ್ನೂ ಓದಿ
Image
Bigg Boss OTT Kannada: ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಸ್ಪರ್ಧಿಗಳು ಇವರೇ..!
Image
ಬೋಲ್ಡ್​ ಫೋಟೋ ಮೂಲಕ ಗಮನ ಸೆಳೆದ ಸೋನು ಈಗ ಬಿಗ್​ ಬಾಸ್​ಗೆ ಎಂಟ್ರಿ; ಇಲ್ಲಿದೆ ಗ್ಯಾಲರಿ
Image
Aryavardhan Guruji: ಜಿಂಗಲಕಾ ಲಕಾ ಲಕಾ: ‘ಬಿಗ್ ಬಾಸ್’ ಮನೆ ಸೇರಿದ ಈ ಆರ್ಯವರ್ಧನ್​ ಗುರೂಜಿ ಯಾರು?
Image
Aryavardhan Guruji: ‘ಬಿಗ್ ಬಾಸ್ ಒಟಿಟಿ’ಯ ಮೊದಲ ಸ್ಪರ್ಧಿಯಾಗಿ ಮನೆ ಸೇರಿದ ಆರ್ಯವರ್ಧನ್​ ಗುರೂಜಿ

ಇದನ್ನೂ ಓದಿ: ‘ಬಿಗ್ ಬಾಸ್ ಒಟಿಟಿ’ ಎರಡನೇ ಸ್ಪರ್ಧಿಯಾಗಿ ಸೋನು ಶ್ರೀನಿವಾಸ್ ಗೌಡ ಎಂಟ್ರಿ

ಈ ಬಾರಿ ‘ಬಿಗ್​ ಬಾಸ್’ ಯಾರು ಗೆಲ್ಲಲಿದ್ದಾರೆ? ಇದನ್ನು ಸಂಖ್ಯಾಶಾಸ್ತ್ರದ ಮೂಲಕ ಹೇಳಿ ಎಂಬ ಪ್ರಶ್ನೆಯನ್ನು ಸುದೀಪ್ ಅವರು ಆರ್ಯವರ್ಧನ್​ ಅವರಿಗೆ ಕೇಳಿದರು. ‘6ನೇ ಸ್ಪರ್ಧಿಯಾಗಿ ಬಿಗ್ ಬಾಸ್​​ ಮನೆ ಸೇರುವ ವ್ಯಕ್ತಿಗೆ ಗೆಲ್ಲುವ ಸಾಧ್ಯತೆ ಹೆಚ್ಚು. 3,5ಈ ಸಂಖ್ಯೆಯವರಿಗೂ ಗೆಲ್ಲುವ ಸಾಧ್ಯತೆ ಇದೆ’ ಎಂದಿದ್ದಾರೆ ಆರ್ಯವರ್ಧನ್​.

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ