ಜಿಯೋ ಸಿನಿಮಾದಲ್ಲಿ ‘ಅಸುರ್ 2’ ಪ್ರಸಾರ ಆರಂಭ; ಆದರೆ, ಪೂರ್ತಿ ಸೀರಿಸ್ ನೋಡೋಕೆ ಆಗಲ್ಲ

‘ಅಸುರ್ 2’ ನೋಡಿದ ಅನೇಕರು ಮೆಚ್ಚಿಕೊಂಡಿದ್ದಾರೆ. ಟ್ವಿಟರ್​ನಲ್ಲಿ ಈ ಬಗ್ಗೆ ವಿಮರ್ಶೆ ತಿಳಿಸಿದ್ದಾರೆ. ಮೊದಲ ದಿನ ಅಷ್ಟೂ ಎಪಿಸೋಡ್​ಗಳನ್ನು ನೋಡುವ ಅವಕಾಶವನ್ನು ಜೀಯೋ ಸಿನಿಮಾದವರು ನೀಡಿಲ್ಲ.

ಜಿಯೋ ಸಿನಿಮಾದಲ್ಲಿ ‘ಅಸುರ್ 2’ ಪ್ರಸಾರ ಆರಂಭ; ಆದರೆ, ಪೂರ್ತಿ ಸೀರಿಸ್ ನೋಡೋಕೆ ಆಗಲ್ಲ
ಅಸುರ್ 2
Follow us
| Updated By: ರಾಜೇಶ್ ದುಗ್ಗುಮನೆ

Updated on: Jun 01, 2023 | 11:38 AM

2020ರಲ್ಲಿ ಪ್ರಸಾರ ಕಂಡಿದ್ದ ‘ಅಸುರ್’ (Asur) ವೆಬ್ ಸೀರಿಸ್​ಗೆ ಸೀಕ್ವೆಲ್ ಸಿದ್ಧಗೊಂಡಿದ್ದು, ಇಂದಿನಿಂದ (ಜೂನ್ 1) ಪ್ರಸಾರ ಆರಂಭಿಸಿದೆ. ಕ್ರೈಮ್ ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬಂದ ಮೊದಲ ಸರಣಿ ವೀಕ್ಷಕರಿಗೆ ಇಷ್ಟವಾಗಿತ್ತು. ಎರಡನೇ ಸೀರಿಸ್​ನ ಟ್ರೇಲರ್​ ಜನರಿಗೆ ಇಷ್ಟವಾಗಿತ್ತು. ಅದೇ ರೀತಿಯಲ್ಲಿ ಸೀರಿಸ್ ಮೂಡಿ ಬಂದಿದೆ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಗಿದೆ. ಆದರೆ, ಮೊದಲ ದಿನ ಅಷ್ಟೂ ಎಪಿಸೋಡ್​ಗಳನ್ನು ನೋಡುವ ಅವಕಾಶವನ್ನು ಜೀಯೋ ಸಿನಿಮಾದವರು (Jio Cinema) ನೀಡಿಲ್ಲ.

ಇತ್ತೀಚೆಗೆ ವಾರಕ್ಕೆ ಒಂದು, ದಿನಕ್ಕೆ ಒಂದು ಎಪಿಸೋಡ್ ಪ್ರಸಾರ ಮಾಡುವ ಟ್ರೆಂಡ್ ಜೋರಾಗಿದೆ. ‘ಅಸುರ್ 2’ ವಿಚಾರದಲ್ಲಿ ಇದೇ ತಂತ್ರ ಬಳಕೆ ಆಗಿದೆ. ಮೊದಲ ದಿನ ಎರಡು ಎಪಿಸೋಡ್ ಪ್ರಸಾರ ಕಂಡಿದೆ. ಆ ಬಳಿಕ ಜೂನ್ 2ರಿಂದ ಜೂನ್ 7ರವರೆಗೆ ನಿತ್ಯ ಒಂದೊಂದು ಎಪಿಸೋಡ್ ಪ್ರಸಾರ ಕಾಣಲಿದೆ. ಈ ಮೂಲಕ ಜೂನ್ 7ರಂದು ನೀವು ಅಷ್ಟೂ ಎಪಿಸೋಡ್​ ನೋಡಬಹುದಾಗಿದೆ.

‘ಅಸುರ್​’ ಸೀರಿಸ್​ನಲ್ಲಿ ಅರ್ಷದ್ ವರ್ಸಿ, ಬರುಣ್ ಸೋಬ್ತಿ ಮೊದಲಾದವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಸರಣಿ ಕೊಲೆಗಳು ನಡೆಯುತ್ತಿರುತ್ತವೆ. ಇದೆಲ್ಲವನ್ನೂ ಮಾಡುತ್ತಿರುವುದು ಅಸುರ ಅನ್ನೋದು ಗೊತ್ತಾಗುತ್ತದೆ. ಈ ಅಸುರ ಯಾರು ಎಂಬುದನ್ನು ಹುಡುಕಿ ಹೊರಡುತ್ತಾನೆ ನಿಖಿಲ್ ನಾಯರ್ (ಬರುಣ್ ಸೋಬ್ತಿ). ಆತ ಫಾರೆನ್ಸಿಕ್​ ಎಕ್ಸ್​ಪರ್ಟ್. ನಿಖಿಲ್​ಗೆ ಧನಂಜಯ್ ರಜಪೂತ್ (ಅರ್ಷದ್) ಸಹಕಾರವೂ ಸಿಗುತ್ತದೆ. ಆದರೆ, ಅಸುರ ಸಿಗುವುದಿಲ್ಲ. ಎರಡನೇ ಪಾರ್ಟ್​ನಲ್ಲೂ ಅಸುರನ ಹುಡುಕಾಟ ಮುಂದುವರಿದಿದೆ.

ಇದನ್ನೂ ಓದಿ: Asur 2: ಸೀಕ್ವೆಲ್​​ನಲ್ಲೂ ಮುಂದುವರಿದ ‘ಅಸುರ’ನ ಹುಡುಕಾಟ; ಇದು ಡಿಜಿಟಲ್ ವಾರ್

‘ಅಸುರ್ 2’ ನೋಡಿದ ಅನೇಕರು ಮೆಚ್ಚಿಕೊಂಡಿದ್ದಾರೆ. ಟ್ವಿಟರ್​ನಲ್ಲಿ ಈ ಬಗ್ಗೆ ವಿಮರ್ಶೆ ತಿಳಿಸಿದ್ದಾರೆ. ಕಳೆದ ಬಾರಿ ‘ಅಸುರ್’ ವೂಟ್​ನಲ್ಲಿ ಲಭ್ಯವಿತ್ತು. ಈ ಬಾರಿ ‘ಜಿಯೋ ಸಿನಿಮಾಸ್’ ಮೂಲಕ ಪ್ರಸಾರ ಕಂಡಿದೆ. ಇಷ್ಟು ದಿನ ಜನರು ಐಪಿಎಲ್​ನಲ್ಲಿ ಬ್ಯುಸಿ ಇದ್ದರು. ಈ ಕಾರಣಕ್ಕೆ ಐಪಿಎಲ್ ಮುಗಿದ ಬಳಿಕ ‘ಅಸುರ್ 2’ ರಿಲೀಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು