AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ5ನಲ್ಲಿ ಬರ್ತಿದೆ ಕನ್ನಡ ಮಿನಿ ಸೀಸನ್; ‘ಅಯ್ಯನ ಮನೆ’ ಹೆಸರಿನ ಹೊಸ ಪ್ರಯತ್ನ

ಜೀ5 ಒಟಿಟಿಯಲ್ಲಿ ‘ಅಯ್ಯನ ಮನೆ’ ಎಂಬ ಹೊಸ ಕನ್ನಡ ಮಿನಿ-ವೆಬ್ ಸರಣಿ ಬಿಡುಗಡೆಯಾಗುತ್ತಿದೆ. ರಮೇಶ್ ಇಂದಿರಾ ನಿರ್ದೇಶನದ ಈ ಸರಣಿಯಲ್ಲಿ ಖುಷಿ ರವಿ, ಅಕ್ಷಯ್ ನಾಯಕ್ ಮತ್ತು ಮಾನಸಿ ಸುಧೀರ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಏಳು ಎಪಿಸೋಡ್‌ಗಳ ಸರಣಿಯು ಏಪ್ರಿಲ್ 25 ರಿಂದ ವೀಕ್ಷಣೆಗೆ ಲಭ್ಯವಾಗಲಿದೆ.

ಜೀ5ನಲ್ಲಿ ಬರ್ತಿದೆ ಕನ್ನಡ ಮಿನಿ ಸೀಸನ್; ‘ಅಯ್ಯನ ಮನೆ’ ಹೆಸರಿನ ಹೊಸ ಪ್ರಯತ್ನ
ಅಯ್ಯನ ಮನೆ
ರಾಜೇಶ್ ದುಗ್ಗುಮನೆ
|

Updated on: Apr 11, 2025 | 12:58 PM

Share

ಸದ್ಯ ಹಲವು ಒಟಿಟಿಗಳಲ್ಲಿ ವೆಬ್​ ಸೀರಿಸ್ ಪ್ರಸಾರ ಮಾಡುವ ಟ್ರೆಂಡ್ ಜೋರಾಗಿದೆ. ಇದಕ್ಕೆ ದೊಡ್ಡ ವೀಕ್ಷಕ ವರ್ಗ ಕೂಡ ಇದೆ. ಈಗ ಜೀ5 (Zee 5) ಕಡೆಯಿಂದ ಒಂದು ಹೊಸ ಪ್ರಯೋಗ ನಡೆದಿದೆ. ಕನ್ನಡ ಸಿನಿಮಾ ಪ್ರೇಮಿಗಳಿಗಾಗಿ ಈ ಒಟಿಟಿ ಮಿನಿ ವೆಬ್ ಸೀರೀಸ್ ಪರಿಚಯಿಸಿದೆ. ಜೀ5 ಕಡೆಯಿಂದ ಬರುತ್ತಿರುವ ಮೊದಲ ಕನ್ನಡ ಮಿನಿ ಸೀರಿಸ್ ಅನ್ನೋದು ವಿಶೇಷ. ಇದನ್ನು ಖ್ಯಾತ ನಟ ರಮೇಶ್ ಇಂದಿರಾ ಅವರು ನಿರ್ದೇಶನ ಮಾಡಿದ್ದಾರೆ. ಈ ಸರಣಿಗೆ ‘ಅಯ್ಯನ ಮನೆ’ ಎನ್ನುವ ಟೈಟಲ್ ಇಡಲಾಗಿದೆ.

‘ಅಯ್ಯನ ಮನೆ’ ಸರಣಿಯನ್ನು ಶೃತಿ ನಾಯ್ಡು ಅವರು ಬಂಡವಾಳ ಹೂಡಿದ್ದಾರೆ. ಕೇವಲ ಏಳು ಎಪಿಸೋಡ್ ಹೊಂದಿರುವ ವೆಬ್ ಸೀರೀಸ್ ವೀಕೆಂಡ್​ ವೀಕ್ಷಣೆಗೆ ಒಳ್ಳೆಯ ಆಯ್ಕೆ ಆಗಬಹುದು. ಖುಷಿ ರವಿ, ಅಕ್ಷಯ್ ನಾಯಕ್, ಮಾನಸಿ ಸುಧೀರ್ ಈ ಸರಣಿಯಲ್ಲಿ ನಟಿಸಿದ್ದಾರೆ. ಭಯ, ನಂಬಿಕೆ ಮತ್ತು ವಿಧಿ ನಡುವಿನ ಘರ್ಷಣೆಯ ಕಥೆ ಹೇಳಲಿದೆ. ಈ ಸರಣಿ ಏಪ್ರಿಲ್ 25ರಿಂದ ಜೀ5ನಲ್ಲಿ ಸ್ಟ್ರೀಮ್ ಆಗಲಿದೆ.

ಚಿಕ್ಕಮಗಳೂರಿನ ‘ಅಯ್ಯನ ಮನೆ’ ಕುಟುಂಬದಲ್ಲಿ ನಡೆಯುವ ಕಾಲ್ಪನಿಕ ಕಥೆ. ಇದು ಮಿಸ್ಟ್ರರಿ ವಿಚಾರಗಳನ್ನು ಒಳಗೊಂಡಿದೆ. ಈಗಾಗಲೇ ಹಲವು ಹಿಟ್ ಚಿತ್ರ ಕೊಟ್ಟುರುವ ರಮೇಶ್ ಇಂದಿರಾ ಹೊಸ ಬಗೆಯ ಕಥೆಯ ಮೂಲಕ ಒಟಿಟಿ ಪ್ರೇಕ್ಷಕರನ್ನು ತಲುಪಲಿದ್ದಾರೆ.

ಇದನ್ನೂ ಓದಿ
Image
‘ನೀವು ಬಿಡಿ ದುಬಾರಿ ನಟಿ’ ಎಂದವರಿಗೆ ರಶ್ಮಿಕಾ ಮಂದಣ್ಣ ಕೊಟ್ಟ ಉತ್ತರವೇನು?
Image
Agnyathavasi Review: ಕೊಲೆಯ ಮಧ್ಯೆ ‘ಅಜ್ಞಾತದ’ ಕಥೆ; ಬಗೆದಷ್ಟು ವಿಶೇಷತೆ
Image
ದೇಶಭಕ್ತಿ ಸಿನಿಮಾಗೆ ‘ಎ’ ಪ್ರಮಾಣ ಪತ್ರ ನೀಡಿದ ಸೆನ್ಸಾರ್ ಮಂಡಳಿ; ಕಾರಣ ಏನು?
Image
ಕಂಗನಾ ಮನೆಗೆ 1 ಲಕ್ಷ ರೂ. ಕರೆಂಟ್ ಬಿಲ್ ಬಂದಿದ್ದು ನಿಜವೇ? ಕಳ್ಳಾಟ ಬಯಲು

ಈ ವೆಬ್ ಸರಣಿ ಬಗ್ಗೆ ಮಾತನಾಡಿರೋ ರಮೇಶ್ ಇಂದಿರಾ, ‘ಅಯ್ಯನ ಮನೆ ರೋಚಕತೆ ಜೊತೆಗೆ ಭಯ, ನಂಬಿಕೆ ಮತ್ತು ಕೌಂಟುಂಬಿಕ ಕಥೆಯೊನ್ನು ಒಳಗೊಂಡಿದೆ. ಈ ವೆಬ್ ಸರಣಿ ಕರ್ನಾಟಕ ಸಂಸ್ಕೃತಿ, ಸಂಪ್ರದಾಯದವನ್ನು ಅನಾವರಣ ಮಾಡುತ್ತದೆ. ಅಯ್ಯನ ಮನೆ ವೆಬ್ ಸರಣಿ ಪ್ರೇಕ್ಷಕರಿಗೆ ಥ್ರಿಲ್ ನೀಡುತ್ತದೆ’ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ದೇವರಾಜ್ ‘ಕರಾವಳಿ’ಯಲ್ಲಿ ದೊಡ್ಡವರಾದ ರಮೇಶ್ ಇಂದಿರಾ

ಜಾಜಿ ಪಾತ್ರದಲ್ಲಿ ಖುಷಿ ರವಿ ಕಾಣಿಸಿಕೊಂಡಿದ್ದಾರೆ. ಮುಗ್ಧ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಂಡಿರೋ ಇವರು, ಗಂಡನ ಪ್ರೀತಿಯ ಹೆಂಡತಿ. ಸಂಪ್ರದಾಯ ಪಾಲಿಸುವ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಇದು ಅವರಿಗೆ ಭಾವನಾತ್ಮಕ ಪ್ರಯಾಣ ಆಗಿತ್ತಂತೆ. ಅವರು ಕೂಡ ಈ ವೆಬ್ ಸರಣಿ ನೋಡಲು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ