AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ5ನಲ್ಲಿ ಬರ್ತಿದೆ ಕನ್ನಡ ಮಿನಿ ಸೀಸನ್; ‘ಅಯ್ಯನ ಮನೆ’ ಹೆಸರಿನ ಹೊಸ ಪ್ರಯತ್ನ

ಜೀ5 ಒಟಿಟಿಯಲ್ಲಿ ‘ಅಯ್ಯನ ಮನೆ’ ಎಂಬ ಹೊಸ ಕನ್ನಡ ಮಿನಿ-ವೆಬ್ ಸರಣಿ ಬಿಡುಗಡೆಯಾಗುತ್ತಿದೆ. ರಮೇಶ್ ಇಂದಿರಾ ನಿರ್ದೇಶನದ ಈ ಸರಣಿಯಲ್ಲಿ ಖುಷಿ ರವಿ, ಅಕ್ಷಯ್ ನಾಯಕ್ ಮತ್ತು ಮಾನಸಿ ಸುಧೀರ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಏಳು ಎಪಿಸೋಡ್‌ಗಳ ಸರಣಿಯು ಏಪ್ರಿಲ್ 25 ರಿಂದ ವೀಕ್ಷಣೆಗೆ ಲಭ್ಯವಾಗಲಿದೆ.

ಜೀ5ನಲ್ಲಿ ಬರ್ತಿದೆ ಕನ್ನಡ ಮಿನಿ ಸೀಸನ್; ‘ಅಯ್ಯನ ಮನೆ’ ಹೆಸರಿನ ಹೊಸ ಪ್ರಯತ್ನ
ಅಯ್ಯನ ಮನೆ
Follow us
ರಾಜೇಶ್ ದುಗ್ಗುಮನೆ
|

Updated on: Apr 11, 2025 | 12:58 PM

ಸದ್ಯ ಹಲವು ಒಟಿಟಿಗಳಲ್ಲಿ ವೆಬ್​ ಸೀರಿಸ್ ಪ್ರಸಾರ ಮಾಡುವ ಟ್ರೆಂಡ್ ಜೋರಾಗಿದೆ. ಇದಕ್ಕೆ ದೊಡ್ಡ ವೀಕ್ಷಕ ವರ್ಗ ಕೂಡ ಇದೆ. ಈಗ ಜೀ5 (Zee 5) ಕಡೆಯಿಂದ ಒಂದು ಹೊಸ ಪ್ರಯೋಗ ನಡೆದಿದೆ. ಕನ್ನಡ ಸಿನಿಮಾ ಪ್ರೇಮಿಗಳಿಗಾಗಿ ಈ ಒಟಿಟಿ ಮಿನಿ ವೆಬ್ ಸೀರೀಸ್ ಪರಿಚಯಿಸಿದೆ. ಜೀ5 ಕಡೆಯಿಂದ ಬರುತ್ತಿರುವ ಮೊದಲ ಕನ್ನಡ ಮಿನಿ ಸೀರಿಸ್ ಅನ್ನೋದು ವಿಶೇಷ. ಇದನ್ನು ಖ್ಯಾತ ನಟ ರಮೇಶ್ ಇಂದಿರಾ ಅವರು ನಿರ್ದೇಶನ ಮಾಡಿದ್ದಾರೆ. ಈ ಸರಣಿಗೆ ‘ಅಯ್ಯನ ಮನೆ’ ಎನ್ನುವ ಟೈಟಲ್ ಇಡಲಾಗಿದೆ.

‘ಅಯ್ಯನ ಮನೆ’ ಸರಣಿಯನ್ನು ಶೃತಿ ನಾಯ್ಡು ಅವರು ಬಂಡವಾಳ ಹೂಡಿದ್ದಾರೆ. ಕೇವಲ ಏಳು ಎಪಿಸೋಡ್ ಹೊಂದಿರುವ ವೆಬ್ ಸೀರೀಸ್ ವೀಕೆಂಡ್​ ವೀಕ್ಷಣೆಗೆ ಒಳ್ಳೆಯ ಆಯ್ಕೆ ಆಗಬಹುದು. ಖುಷಿ ರವಿ, ಅಕ್ಷಯ್ ನಾಯಕ್, ಮಾನಸಿ ಸುಧೀರ್ ಈ ಸರಣಿಯಲ್ಲಿ ನಟಿಸಿದ್ದಾರೆ. ಭಯ, ನಂಬಿಕೆ ಮತ್ತು ವಿಧಿ ನಡುವಿನ ಘರ್ಷಣೆಯ ಕಥೆ ಹೇಳಲಿದೆ. ಈ ಸರಣಿ ಏಪ್ರಿಲ್ 25ರಿಂದ ಜೀ5ನಲ್ಲಿ ಸ್ಟ್ರೀಮ್ ಆಗಲಿದೆ.

ಚಿಕ್ಕಮಗಳೂರಿನ ‘ಅಯ್ಯನ ಮನೆ’ ಕುಟುಂಬದಲ್ಲಿ ನಡೆಯುವ ಕಾಲ್ಪನಿಕ ಕಥೆ. ಇದು ಮಿಸ್ಟ್ರರಿ ವಿಚಾರಗಳನ್ನು ಒಳಗೊಂಡಿದೆ. ಈಗಾಗಲೇ ಹಲವು ಹಿಟ್ ಚಿತ್ರ ಕೊಟ್ಟುರುವ ರಮೇಶ್ ಇಂದಿರಾ ಹೊಸ ಬಗೆಯ ಕಥೆಯ ಮೂಲಕ ಒಟಿಟಿ ಪ್ರೇಕ್ಷಕರನ್ನು ತಲುಪಲಿದ್ದಾರೆ.

ಇದನ್ನೂ ಓದಿ
Image
‘ನೀವು ಬಿಡಿ ದುಬಾರಿ ನಟಿ’ ಎಂದವರಿಗೆ ರಶ್ಮಿಕಾ ಮಂದಣ್ಣ ಕೊಟ್ಟ ಉತ್ತರವೇನು?
Image
Agnyathavasi Review: ಕೊಲೆಯ ಮಧ್ಯೆ ‘ಅಜ್ಞಾತದ’ ಕಥೆ; ಬಗೆದಷ್ಟು ವಿಶೇಷತೆ
Image
ದೇಶಭಕ್ತಿ ಸಿನಿಮಾಗೆ ‘ಎ’ ಪ್ರಮಾಣ ಪತ್ರ ನೀಡಿದ ಸೆನ್ಸಾರ್ ಮಂಡಳಿ; ಕಾರಣ ಏನು?
Image
ಕಂಗನಾ ಮನೆಗೆ 1 ಲಕ್ಷ ರೂ. ಕರೆಂಟ್ ಬಿಲ್ ಬಂದಿದ್ದು ನಿಜವೇ? ಕಳ್ಳಾಟ ಬಯಲು

ಈ ವೆಬ್ ಸರಣಿ ಬಗ್ಗೆ ಮಾತನಾಡಿರೋ ರಮೇಶ್ ಇಂದಿರಾ, ‘ಅಯ್ಯನ ಮನೆ ರೋಚಕತೆ ಜೊತೆಗೆ ಭಯ, ನಂಬಿಕೆ ಮತ್ತು ಕೌಂಟುಂಬಿಕ ಕಥೆಯೊನ್ನು ಒಳಗೊಂಡಿದೆ. ಈ ವೆಬ್ ಸರಣಿ ಕರ್ನಾಟಕ ಸಂಸ್ಕೃತಿ, ಸಂಪ್ರದಾಯದವನ್ನು ಅನಾವರಣ ಮಾಡುತ್ತದೆ. ಅಯ್ಯನ ಮನೆ ವೆಬ್ ಸರಣಿ ಪ್ರೇಕ್ಷಕರಿಗೆ ಥ್ರಿಲ್ ನೀಡುತ್ತದೆ’ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ದೇವರಾಜ್ ‘ಕರಾವಳಿ’ಯಲ್ಲಿ ದೊಡ್ಡವರಾದ ರಮೇಶ್ ಇಂದಿರಾ

ಜಾಜಿ ಪಾತ್ರದಲ್ಲಿ ಖುಷಿ ರವಿ ಕಾಣಿಸಿಕೊಂಡಿದ್ದಾರೆ. ಮುಗ್ಧ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಂಡಿರೋ ಇವರು, ಗಂಡನ ಪ್ರೀತಿಯ ಹೆಂಡತಿ. ಸಂಪ್ರದಾಯ ಪಾಲಿಸುವ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಇದು ಅವರಿಗೆ ಭಾವನಾತ್ಮಕ ಪ್ರಯಾಣ ಆಗಿತ್ತಂತೆ. ಅವರು ಕೂಡ ಈ ವೆಬ್ ಸರಣಿ ನೋಡಲು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್