AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ‘ಟಾಕೀಸ್​’ ಲಾಂಚ್​ ಮಾಡಿದ ಶಿವಣ್ಣ; ಇದರಲ್ಲಿ ಇದ್ದಾರೆ ಸಾವಿರಕ್ಕೂ ಹೆಚ್ಚು ಕಲಾವಿದರು

‘ಟಾಕೀಸ್​’ ಮೂಲಕ ಕನ್ನಡದ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರಿಗೆ ಅವಕಾಶ ಸಿಗಲಿದೆ. ಇದರ ಬಗ್ಗೆ ಶಿವರಾಜ್​ಕುಮಾರ್​ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಕನ್ನಡದ ‘ಟಾಕೀಸ್​’ ಲಾಂಚ್​ ಮಾಡಿದ ಶಿವಣ್ಣ; ಇದರಲ್ಲಿ ಇದ್ದಾರೆ ಸಾವಿರಕ್ಕೂ ಹೆಚ್ಚು ಕಲಾವಿದರು
ಶಿವರಾಜ್​ಕುಮಾರ್​, ರತ್ನಾಕರ್​ ಕಾಮತ್​
TV9 Web
| Edited By: |

Updated on: May 03, 2022 | 7:05 AM

Share

ಹೊಸ ಪ್ರಯತ್ನಗಳಿಗೆ ನಟ ಶಿವರಾಜ್​ಕುಮಾರ್​ (Shivarajkumar) ಅವರು ಸದಾ ಬೆಂಬಲವಾಗಿ ನಿಲ್ಲುತ್ತಾರೆ. ಹೊಸ ತಂಡಗಳ ಆಹ್ವಾನಕ್ಕೆ ಅವರು ಓಗೊಟ್ಟು ಬರುತ್ತಾರೆ. ಆ ಮೂಲಕ ಕನ್ನಡ ಚಿತ್ರರಂಗದ ಬೆಳವಣಿಗೆಗೆ ಅವರು ಸಾಥ್​ ನೀಡುತ್ತಲೇ ಬಂದಿದ್ದಾರೆ. ಈಗ ಕನ್ನಡದ ಹೊಸ ಒಟಿಟಿ ಪ್ಲಾಟ್​ಫಾರ್ಮ್​ಗೆ ‘ಹ್ಯಾಟ್ರಿಕ್​ ಹೀರೋ’ ಪ್ರೋತ್ಸಾಹ ನೀಡಿದ್ದಾರೆ. ‘ಟಾಕೀಸ್​’ ಎಂಬ ಒಟಿಟಿಯನ್ನು ಶಿವಣ್ಣ ಲಾಂಚ್​ ಮಾಡಿದ್ದಾರೆ. ಇತ್ತೀಚೆಗೆ ನಡೆದ ಕಾರ್ಯಕ್ರಮಕ್ಕೆ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಸ್ವಯಂ ಪ್ರಭ ಸಂಸ್ಥೆಯ ರತ್ನಾಕರ್ ಕಾಮತ್​ ಅವರು ಆರಂಭಿಸಿರುವ ‘ಟಾಕೀಸ್​’ಗೆ ಶಿವರಾಜ್​ಕುಮಾರ್​ ಶುಭ ಹಾರೈಸಿದರು. ಇಂದಿನ ಕಾಲದಲ್ಲಿ ಒಟಿಟಿ ವೇದಿಕೆಯ (OTT platform) ಪ್ರಾಮುಖ್ಯತೆ ಬಗ್ಗೆ ಅವರು ಮಾತನಾಡಿದರು. ಎಕ್ಸ್​ಕ್ಲೂಸಿವ್​ ಆಗಿ ಕನ್ನಡದ ಕಂಟೆಂಟ್​ಗಳಿಗಾಗಿ ‘ಟಾಕೀಸ್​’ (Talkies Kannada OTT) ಆರಂಭ ಆಗಿದೆ. ಇದರಲ್ಲಿ ಹಲವು ವಿಶೇಷತೆಗಳಿವೆ. ಹಾಗಾಗಿ ಶಿವಣ್ಣ ಅವರು ಈ ತಂಡದ ಬೆನ್ನು ತಟ್ಟಿದ್ದಾರೆ. ಇಂಥ ಕಾರ್ಯಗಳಿಗೆ ತಮ್ಮ ಬೆಂಬಲ ಯಾವಾಗಲೂ ಇರಲಿದೆ ಎಂದು ಅವರು ಭರವಸೆ ನೀಡಿದರು.

ಈ ಮೊದಲು ತುಳು ಸಿನಿಮಾ ಮತ್ತು ಕಿರುಚಿತ್ರಗಳನ್ನು ಪ್ರಸಾರ ಮಾಡುತ್ತಿದ್ದ ‘ಟಾಕೀಸ್​’ ಈಗ ತನ್ನ ವ್ಯಾಪ್ತಿ ಹಿರಿದಾಗಿಸಿಕೊಂಡಿದೆ. ಕನ್ನಡಕ್ಕೂ ಕಾಲಿಟ್ಟಿದ್ದು, ಸಕಲ ತಯಾರಿಯೊಂದಿಗೆ ಕಾರ್ಯಾರಂಭ ಮಾಡಿದೆ. ಇದರಲ್ಲಿ ಕನ್ನಡದ ಅನೇಕ ಒರಿಜಿನಲ್​ ಕಂಟೆಂಟ್​ಗಳು ಲಭ್ಯ ಆಗುತ್ತಿವೆ. ಖ್ಯಾತ ಕಲಾವಿದರು ನಟಿಸಿರುವ ಸಿನಿಮಾ, ಕಿರುಚಿತ್ರ, ವೆಬ್​ ಸೀರಿಸ್​ಗಳನ್ನು ಪ್ರೇಕ್ಷಕರು ‘ಟಾಕೀಸ್​’ನಲ್ಲಿ ನೋಡಬಹುದು.

ವಿಜಯ್​ ರಾಘವೇಂದ್ರ, ಪ್ರಮೋದ್​ ಶೆಟ್ಟಿ, ರಂಜನಿ ರಾಘವನ್​, ಮಂಜು ಪಾವಗಡ, ವೈಷ್ಣವಿ ಗೌಡ, ಭೂಮಿ ಶೆಟ್ಟಿ, ಹರೀಶ್​ ರಾಜ್​ ಸೇರಿದಂತೆ 1200ಕ್ಕೂ ಅಧಿಕ ಕಲಾವಿದರು ‘ಟಾಕೀಸ್​’ ಜೊತೆ ಕೈ ಜೋಡಿಸಿದ್ದಾರೆ. 700ಕ್ಕೂ ಹೆಚ್ಚು ತಂತ್ರಜ್ಞರು ಕೆಲಸ ಮಾಡಿದ್ದಾರೆ. 200ಕ್ಕೂ ಅಧಿಕ ದಿನಗಳ ಪರಿಶ್ರಮದಿಂದ ಈ ಒಟಿಟಿ ಶುರುವಾಗಿದೆ. 400ಕ್ಕಿಂತಲೂ ಹೆಚ್ಚಿನ ಕನ್ನಡ ಸಿನಿಮಾಗಳು ಇದರಲ್ಲಿ ಲಭ್ಯವಾಗುತ್ತಿವೆ. ಇದರ ಜೊತೆಗೆ ಇನ್ನೂ ಹೊಸ ಹೊಸ ಮನರಂಜನಾ ಕಂಟೆಂಟ್​ಗಳನ್ನು ನಿರ್ಮಿಸುವ ಗುರಿಯೊಂದಿಗೆ ‘ಟಾಕೀಸ್​’ ಮುಂದಡಿ ಇಟ್ಟಿದೆ. ಇದರಿಂದ ಸಾಕಷ್ಟು ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಅವಕಾಶ ಸಿಗಲಿದೆ.

‘ಟಾಕೀಸ್​’ ಬಗ್ಗೆ ಶಿವರಾಜ್​ಕುಮಾರ್​ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ‘ಕನ್ನಡಿಗರಿಂದ ಕನ್ನಡಿಗರಿಗೋಸ್ಕರ ಎಂಬ ಆಶಯದೊಂದಿಗೆ ಈ ಟಾಕೀಸ್​ ಒಟಿಟಿ ಶುರುವಾಗಿದೆ. ಇದರಿಂದ ಕನ್ನಡಿಗರಿಗೆ ಉದ್ಯೋಗ ಸಿಗುತ್ತದೆ. ಇದು ಬೇರೆ ಭಾಷೆಯ ಒಟಿಟಿಗಿಂತಲೂ ಕಮ್ಮಿ ಇಲ್ಲದಂತೆ ಬೆಳೆಯುತ್ತದೆ ಎಂಬ ನಂಬಿಕೆ ನನಗಿದೆ. ಈ ಅವಕಾಶವನ್ನು ಕನ್ನಡದ ಕಲಾವಿದರು ಮತ್ತು ತಂತ್ರಜ್ಞರು ಉಪಯೋಗ ಮಾಡಿಕೊಳ್ಳಬೇಕು. ಓಕೆ ಆಗದಿದ್ದರೂ ಪರವಾಗಿಲ್ಲ. ಧೈರ್ಯವಾಗಿ ಕಥೆ ಹೇಳಿ. ಒಳ್ಳೊಳ್ಳೆಯ ವೆಬ್​ ಸಿರೀಸ್​ ಕನ್ನಡದಲ್ಲಿ ನಿರ್ಮಾಣ ಆಗಲಿ. ನಮ್ಮಲ್ಲೂ ಸಾಕಷ್ಟು ಜನ ಬುದ್ಧಿವಂತರು ಇದ್ದಾರೆ. ಅವರ ಪ್ರತಿಭೆಯನ್ನು ಗುರುತಿಸಲು ಬಂದಿರುವ ರತ್ನಾಕರ್​ ಕಾಮತ್​ ಅವರಿಗೆ ಧನ್ಯವಾಗಳು’ ಎಂದು ಶಿವಣ್ಣ ಹೇಳಿದ್ದಾರೆ.

ಲಾಕ್​ಡೌನ್​ ಬಳಿಕ ಒಟಿಟಿ ಪ್ಲಾಟ್​ಫಾರ್ಮ್​ಗಳ ಬಳಕೆ ಹೆಚ್ಚಿದೆ. ಮುಂದಿನ ದಿನಗಳಲ್ಲಿ ಶಿವರಾಜ್​ಕುಮಾರ್​ ಅವರು ಕೂಡ ವೆಬ್​ ಸರಣಿಗಳಲ್ಲಿ ನಟಿಸಲಿದ್ದಾರೆ. ಆ ಬಗ್ಗೆ ಇದೇ ವೇದಿಕೆಯಲ್ಲಿ ಅವರು ಮಾಹಿತಿ ಹಂಚಿಕೊಂಡರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ:

‘ಕೆಜಿಎಫ್​ 2’ ಎದುರು ಸೋತ ‘ಬೀಸ್ಟ್​’ ಚಿತ್ರಕ್ಕೆ ಈಗ ಉಳಿದಿದ್ದು ಒಟಿಟಿ ಆಯ್ಕೆ ಮಾತ್ರ; ಯಾವಾಗ ರಿಲೀಸ್​?

1ನೇ ಸೀಸನ್​ಗೆ 40 ಲಕ್ಷ ರೂ, 2ನೇ ಸೀಸನ್​ಗೆ 20 ಕೋಟಿ ರೂ. ಸಂಬಳ ಪಡೆದ ‘ಪಾತಾಳ್​ ಲೋಕ್​’ ನಟ

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ