AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bajrang Dal: ‘ಆಶ್ರಮ್​’ ತಂಡದ ಮೇಲೆ ಭಜರಂಗ ದಳದ ದಾಳಿ; ಸಿಬ್ಬಂದಿಗೆ ಥಳಿತ, ಪ್ರಕಾಶ್​ ಝಾ ಮೇಲೆ ಹಲ್ಲೆ

Ashram 3: ಭೊಪಾಲ್​ನಲ್ಲಿ ‘ಆಶ್ರಮ್​ 3’ ಶೂಟಿಂಗ್ ನಡೆಯುತ್ತಿತ್ತು. ಹಳೇ ಜೈಲಿನಲ್ಲಿ ಕೆಲವು ಸೆಟ್​ಗಳನ್ನು ಹಾಕಲಾಗಿತ್ತು. ಚಿತ್ರೀಕರಣದ ಸ್ಥಳಕ್ಕೆ ಬಂದ ಭಜರಂಗ ದಳದ ಕಾರ್ಯಕರ್ತರು ವೆಬ್​ ಸಿರೀಸ್​ ತಂಡದವರನ್ನು ಮನಬಂದಂತೆ ಥಳಿಸಿದ್ದಾರೆ.

Bajrang Dal: ‘ಆಶ್ರಮ್​’ ತಂಡದ ಮೇಲೆ ಭಜರಂಗ ದಳದ ದಾಳಿ; ಸಿಬ್ಬಂದಿಗೆ ಥಳಿತ, ಪ್ರಕಾಶ್​ ಝಾ ಮೇಲೆ ಹಲ್ಲೆ
‘ಆಶ್ರಮ್’ ತಂಡದ ಮೇಲೆ ಭಜರಂಗ ದಳದ ದಾಳಿ
TV9 Web
| Edited By: |

Updated on: Oct 25, 2021 | 8:11 AM

Share

ಬಾಲಿವುಡ್​ ನಿರ್ದೇಶಕ ಪ್ರಕಾಶ್​ ಝಾ ಮಾಡುವ ಸಿನಿಮಾಗಳು ಒಂದಿಲ್ಲೊಂದು ರೀತಿಯಲ್ಲಿ ವಿವಾದ ಮಾಡಿಕೊಳ್ಳುತ್ತವೆ. ಈಗ ಅವರು ವೆಬ್​ ಸಿರೀಸ್​ ಲೋಕದಲ್ಲಿ ಸಕ್ರಿಯರಾಗಿದ್ದು, ಅಲ್ಲಿಯೂ ಕಿರಿಕ್​ ಆಗಿದೆ. ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಆಶ್ರಮ್​ 3’ ವೆಬ್​ ಸರಣಿಯ ಶೀರ್ಷಿಕೆ ಮತ್ತು ಕಥೆ ಬಗ್ಗೆ ಭಜರಂಗ ದಳದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಶೂಟಿಂಗ್​ ಸ್ಥಳಕ್ಕೆ ನುಗ್ಗಿ ಹಲ್ಲೆ ಕೂಡ ಮಾಡಿದ್ದಾರೆ. ನಾಯಕ ಬಾಬಿ ಡಿಯೋಲ್​​ ಮೇಲೆ ಹಲ್ಲೆ ಮಾಡುವ ಉದ್ದೇಶದೊಂದಿಗೆ ಈ ದಾಳಿ ನಡೆದಿದೆ. ಆದರೆ ಅವರ ಕೈಗೆ ಬಾಬಿ ಡಿಯೋಲ್​ ಸಿಕ್ಕಿಲ್ಲ.

ಭೊಪಾಲ್​ನಲ್ಲಿ ‘ಆಶ್ರಮ್​ 3’ ಶೂಟಿಂಗ್ ನಡೆಯುತ್ತಿತ್ತು. ಹಳೇ ಜೈಲಿನಲ್ಲಿ ಕೆಲವು ಸೆಟ್​ಗಳನ್ನು ಹಾಕಲಾಗಿತ್ತು. ಚಿತ್ರೀಕರಣದ ಸ್ಥಳಕ್ಕೆ ಬಂದ ಭಜರಂಗ ದಳದ ಕಾರ್ಯಕರ್ತರು ವೆಬ್​ ಸಿರೀಸ್​ ತಂಡದ ಸಿಬ್ಬಂದಿಯನ್ನು ಮನಬಂದಂತೆ ಥಳಿಸಿದ್ದಾರೆ. ಶೂಟಿಂಗ್​ ಉಪಕರಣಗಳಿಗೆ ಹಾನಿ ಮಾಡಿದ್ದಾರೆ. ನಿರ್ದೇಶಕ ಪ್ರಕಾಶ್​ ಝಾ ಮುಖಕ್ಕೆ ಮಸಿ ಬಳಿಯಲಾಗಿದೆ. ‘ಬಾಬಿ ಡಿಯೋಲ್​ ಎಲ್ಲಿ’ ಎಂದು ಅವರೆಲ್ಲ ಕೂಗುತ್ತಿದ್ದರು ಎಂದು ವರದಿ ಆಗಿದೆ.

‘ಈ ವೆಬ್​ ಸರಣಿಗೆ ಆಶ್ರಮ್​ ಎಂದು ಹೆಸರಿಟ್ಟು, ಆಶ್ರಮದ ಗುರುಗಳು ಮಹಿಳೆಯರನ್ನು ಶೋಷಿಸುವ ದೃಶ್ಯಗಳನ್ನು ತೋರಿಸಲಾಗಿದೆ. ಚರ್ಚ್​ ಅಥವಾ ಮದರಾಸ ಬಗ್ಗೆ ಇದೇ ರೀತಿ ತೋರಿಸುವ ಧೈರ್ಯ ಇವರಲ್ಲಿ ಇದೆಯೇ? ‘ಆಶ್ರಮ್​ 1’ ಮತ್ತು ‘ಆಶ್ರಮ್​ 2’ ಬಳಿಕ ಈಗ ‘ಆಶ್ರಮ್​ 3’ ಮಾಡುತ್ತಿದ್ದಾರೆ. ಇದನ್ನು ಚಿತ್ರೀಕರಿಸಲು ನಾವು ಬಿಡಲ್ಲ. ಸದ್ಯಕ್ಕೆ ಪ್ರಕಾಶ್​ ಝಾ ಮುಖಕ್ಕೆ ಮಸಿ ಬಳಿದಿದ್ದೇವೆ. ಬಾಬಿ ಡಿಯೋಲ್​ಗಾಗಿ ಹುಡುಕುತ್ತಿದ್ದೇವೆ. ತಮ್ಮ ಸಹೋದರ ಸನ್ನಿ ಡಿಯೋಲ್​ ಅವರನ್ನು ನೋಡಿ ಬಾಬಿ ಡಿಯೋಲ್​ ಕಲಿಯಬೇಕು. ಅವರು ಎಂಥೆಂಥ ದೇಶಭಕ್ತಿ ಸಿನಿಮಾ ಮಾಡಿದ್ದಾರೆ’ ಎಂದು ಭಜರಂಗ ದಳದ ಮುಖಂಡ ಸುಶೀಲ್​ ಹೇಳಿದ್ದಾರೆ.

ನಿರ್ದೇಶಕ ಪ್ರಕಾಶ್​ ಝಾ ಅವರು ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ನೀಡಿಲ್ಲ. ಆದರೂ ಕೂಡ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. ವೆಬ್​ ಸರಣಿ ತಂಡದವರಿಗೆ ಪೂರ್ತಿ ಭದ್ರತೆ ನೀಡಿ, ಶೂಟಿಂಗ್​ಗೆ ತೊಂದರೆ ಆಗದಂತೆ ನೋಡಿಕೊಳ್ಳುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ. ಭಜರಂಗ ದಳದವರು ಹಲ್ಲೆ ಮಾಡುತ್ತಿರುವ ವಿಡಿಯೋ ಕೂಡ ಲಭ್ಯವಾಗಿದ್ದು, ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಇದನ್ನೂ ಓದಿ:

ಜೈಲಲ್ಲಿ ರಾಮ-ಸೀತೆಯ ಪುಸ್ತಕ ಓದುತ್ತಿರುವ ಆರ್ಯನ್​ ಖಾನ್​; ಜಾಮೀನು ಸಿಗದೇ ಸ್ಟಾರ್​ ಪುತ್ರ ಕಂಗಾಲು

ಶಿಲ್ಪಾ ಶೆಟ್ಟಿ ಮನೆಯಲ್ಲಿ ನವರಾತ್ರಿ ವೈಭವ; ಮಕ್ಕಳಿಗೆ ಕಲಿಸುತ್ತಿರುವ ಪಾಠ ಎಂಥದ್ದು?

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ