AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bajrang Dal: ‘ಆಶ್ರಮ್​’ ತಂಡದ ಮೇಲೆ ಭಜರಂಗ ದಳದ ದಾಳಿ; ಸಿಬ್ಬಂದಿಗೆ ಥಳಿತ, ಪ್ರಕಾಶ್​ ಝಾ ಮೇಲೆ ಹಲ್ಲೆ

Ashram 3: ಭೊಪಾಲ್​ನಲ್ಲಿ ‘ಆಶ್ರಮ್​ 3’ ಶೂಟಿಂಗ್ ನಡೆಯುತ್ತಿತ್ತು. ಹಳೇ ಜೈಲಿನಲ್ಲಿ ಕೆಲವು ಸೆಟ್​ಗಳನ್ನು ಹಾಕಲಾಗಿತ್ತು. ಚಿತ್ರೀಕರಣದ ಸ್ಥಳಕ್ಕೆ ಬಂದ ಭಜರಂಗ ದಳದ ಕಾರ್ಯಕರ್ತರು ವೆಬ್​ ಸಿರೀಸ್​ ತಂಡದವರನ್ನು ಮನಬಂದಂತೆ ಥಳಿಸಿದ್ದಾರೆ.

Bajrang Dal: ‘ಆಶ್ರಮ್​’ ತಂಡದ ಮೇಲೆ ಭಜರಂಗ ದಳದ ದಾಳಿ; ಸಿಬ್ಬಂದಿಗೆ ಥಳಿತ, ಪ್ರಕಾಶ್​ ಝಾ ಮೇಲೆ ಹಲ್ಲೆ
‘ಆಶ್ರಮ್’ ತಂಡದ ಮೇಲೆ ಭಜರಂಗ ದಳದ ದಾಳಿ
TV9 Web
| Edited By: |

Updated on: Oct 25, 2021 | 8:11 AM

Share

ಬಾಲಿವುಡ್​ ನಿರ್ದೇಶಕ ಪ್ರಕಾಶ್​ ಝಾ ಮಾಡುವ ಸಿನಿಮಾಗಳು ಒಂದಿಲ್ಲೊಂದು ರೀತಿಯಲ್ಲಿ ವಿವಾದ ಮಾಡಿಕೊಳ್ಳುತ್ತವೆ. ಈಗ ಅವರು ವೆಬ್​ ಸಿರೀಸ್​ ಲೋಕದಲ್ಲಿ ಸಕ್ರಿಯರಾಗಿದ್ದು, ಅಲ್ಲಿಯೂ ಕಿರಿಕ್​ ಆಗಿದೆ. ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಆಶ್ರಮ್​ 3’ ವೆಬ್​ ಸರಣಿಯ ಶೀರ್ಷಿಕೆ ಮತ್ತು ಕಥೆ ಬಗ್ಗೆ ಭಜರಂಗ ದಳದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಶೂಟಿಂಗ್​ ಸ್ಥಳಕ್ಕೆ ನುಗ್ಗಿ ಹಲ್ಲೆ ಕೂಡ ಮಾಡಿದ್ದಾರೆ. ನಾಯಕ ಬಾಬಿ ಡಿಯೋಲ್​​ ಮೇಲೆ ಹಲ್ಲೆ ಮಾಡುವ ಉದ್ದೇಶದೊಂದಿಗೆ ಈ ದಾಳಿ ನಡೆದಿದೆ. ಆದರೆ ಅವರ ಕೈಗೆ ಬಾಬಿ ಡಿಯೋಲ್​ ಸಿಕ್ಕಿಲ್ಲ.

ಭೊಪಾಲ್​ನಲ್ಲಿ ‘ಆಶ್ರಮ್​ 3’ ಶೂಟಿಂಗ್ ನಡೆಯುತ್ತಿತ್ತು. ಹಳೇ ಜೈಲಿನಲ್ಲಿ ಕೆಲವು ಸೆಟ್​ಗಳನ್ನು ಹಾಕಲಾಗಿತ್ತು. ಚಿತ್ರೀಕರಣದ ಸ್ಥಳಕ್ಕೆ ಬಂದ ಭಜರಂಗ ದಳದ ಕಾರ್ಯಕರ್ತರು ವೆಬ್​ ಸಿರೀಸ್​ ತಂಡದ ಸಿಬ್ಬಂದಿಯನ್ನು ಮನಬಂದಂತೆ ಥಳಿಸಿದ್ದಾರೆ. ಶೂಟಿಂಗ್​ ಉಪಕರಣಗಳಿಗೆ ಹಾನಿ ಮಾಡಿದ್ದಾರೆ. ನಿರ್ದೇಶಕ ಪ್ರಕಾಶ್​ ಝಾ ಮುಖಕ್ಕೆ ಮಸಿ ಬಳಿಯಲಾಗಿದೆ. ‘ಬಾಬಿ ಡಿಯೋಲ್​ ಎಲ್ಲಿ’ ಎಂದು ಅವರೆಲ್ಲ ಕೂಗುತ್ತಿದ್ದರು ಎಂದು ವರದಿ ಆಗಿದೆ.

‘ಈ ವೆಬ್​ ಸರಣಿಗೆ ಆಶ್ರಮ್​ ಎಂದು ಹೆಸರಿಟ್ಟು, ಆಶ್ರಮದ ಗುರುಗಳು ಮಹಿಳೆಯರನ್ನು ಶೋಷಿಸುವ ದೃಶ್ಯಗಳನ್ನು ತೋರಿಸಲಾಗಿದೆ. ಚರ್ಚ್​ ಅಥವಾ ಮದರಾಸ ಬಗ್ಗೆ ಇದೇ ರೀತಿ ತೋರಿಸುವ ಧೈರ್ಯ ಇವರಲ್ಲಿ ಇದೆಯೇ? ‘ಆಶ್ರಮ್​ 1’ ಮತ್ತು ‘ಆಶ್ರಮ್​ 2’ ಬಳಿಕ ಈಗ ‘ಆಶ್ರಮ್​ 3’ ಮಾಡುತ್ತಿದ್ದಾರೆ. ಇದನ್ನು ಚಿತ್ರೀಕರಿಸಲು ನಾವು ಬಿಡಲ್ಲ. ಸದ್ಯಕ್ಕೆ ಪ್ರಕಾಶ್​ ಝಾ ಮುಖಕ್ಕೆ ಮಸಿ ಬಳಿದಿದ್ದೇವೆ. ಬಾಬಿ ಡಿಯೋಲ್​ಗಾಗಿ ಹುಡುಕುತ್ತಿದ್ದೇವೆ. ತಮ್ಮ ಸಹೋದರ ಸನ್ನಿ ಡಿಯೋಲ್​ ಅವರನ್ನು ನೋಡಿ ಬಾಬಿ ಡಿಯೋಲ್​ ಕಲಿಯಬೇಕು. ಅವರು ಎಂಥೆಂಥ ದೇಶಭಕ್ತಿ ಸಿನಿಮಾ ಮಾಡಿದ್ದಾರೆ’ ಎಂದು ಭಜರಂಗ ದಳದ ಮುಖಂಡ ಸುಶೀಲ್​ ಹೇಳಿದ್ದಾರೆ.

ನಿರ್ದೇಶಕ ಪ್ರಕಾಶ್​ ಝಾ ಅವರು ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ನೀಡಿಲ್ಲ. ಆದರೂ ಕೂಡ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. ವೆಬ್​ ಸರಣಿ ತಂಡದವರಿಗೆ ಪೂರ್ತಿ ಭದ್ರತೆ ನೀಡಿ, ಶೂಟಿಂಗ್​ಗೆ ತೊಂದರೆ ಆಗದಂತೆ ನೋಡಿಕೊಳ್ಳುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ. ಭಜರಂಗ ದಳದವರು ಹಲ್ಲೆ ಮಾಡುತ್ತಿರುವ ವಿಡಿಯೋ ಕೂಡ ಲಭ್ಯವಾಗಿದ್ದು, ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಇದನ್ನೂ ಓದಿ:

ಜೈಲಲ್ಲಿ ರಾಮ-ಸೀತೆಯ ಪುಸ್ತಕ ಓದುತ್ತಿರುವ ಆರ್ಯನ್​ ಖಾನ್​; ಜಾಮೀನು ಸಿಗದೇ ಸ್ಟಾರ್​ ಪುತ್ರ ಕಂಗಾಲು

ಶಿಲ್ಪಾ ಶೆಟ್ಟಿ ಮನೆಯಲ್ಲಿ ನವರಾತ್ರಿ ವೈಭವ; ಮಕ್ಕಳಿಗೆ ಕಲಿಸುತ್ತಿರುವ ಪಾಠ ಎಂಥದ್ದು?

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ