AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂಗಲಾನ್’ ಸಿನಿಮಾ ಮೇಲಿನ ನಿಷೆಧ ತೆರವು, ಒಟಿಟಿ ಬಿಡುಗಡೆಗೆ ತೆರೆದ ದಾರಿ

‘ತಂಗಲಾನ್’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿದೆ. ಆದರೆ ಸಿನಿಮಾದ ವಿರುದ್ಧ ಪ್ರಕರಣ ದಾಖಲಾದ ಕಾರಣ ಒಟಿಟಿಗೆ ಬಿಡುಗಡೆ ಆಗಿರಲಿಲ್ಲ. ಈಗ ಸಿನಿಮಾದ ಮೇಲೆ ಹೇರಲಾಗಿದ್ದ ತಾತ್ಕಾಲಿಕ ನಿಷೇಧವನ್ನು ತೆರವು ಮಾಡಲಾಗಿದೆ.

‘ತಂಗಲಾನ್’ ಸಿನಿಮಾ ಮೇಲಿನ ನಿಷೆಧ ತೆರವು, ಒಟಿಟಿ ಬಿಡುಗಡೆಗೆ ತೆರೆದ ದಾರಿ
ಮಂಜುನಾಥ ಸಿ.
|

Updated on: Oct 24, 2024 | 6:56 AM

Share

ಚಿಯಾನ್ ವಿಕ್ರಂ ನಟಿಸಿ, ಪಾ ರಂಜಿತ್ ನಿರ್ದೇಶನ ಮಾಡಿರುವ ‘ತಂಗಲಾನ್’ ಸಿನಿಮಾ ಆಗಸ್ಟ್ 15 ರಂದು ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿತ್ತು. ಕೋಲಾರದ ಚಿನ್ನದ ಗಣಿಯ ಕತೆ ಒಳಗೊಂಡಿದ್ದ ‘ತಂಗಲಾನ್’ ಸಿನಿಮಾವನ್ನು ತಮಿಳಿನ ‘ಕೆಜಿಎಫ್’ ಎಂದೇ ಪ್ರಚಾರ ಮಾಡಲಾಗಿತ್ತು. ಸಿನಿಮಾವು ಚಿನ್ನದ ಗಣಿಯ ಆರಂಭದ ದಿನಗಳ ಕತೆಯನ್ನು ಒಳಗೊಂಡಿತ್ತು. ಬುಡಕಟ್ಟು ಜನಾಂಗ, ಅವರ ನಂಬಿಕೆ, ಜೀವನ, ಬ್ರಿಟೀಷರು ಚಿನ್ನದ ಗಣಿ ಅರಸಿ ಬರುವುದು ಇನ್ನತರೆ ವಿಷಯಗಳನ್ನು ಸಿನಿಮಾ ಒಳಗೊಂಡಿತ್ತು. ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಹಿಟ್ ಆದ ಬಳಿಕ ಸಿನಿಮಾದ ಮೇಲೆ ದೂರು ದಾಖಲಿಸಲಾಗಿತ್ತು. ಸಿನಿಮಾ ಒಟಿಟಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ತಡೆ ನೀಡಿತ್ತು, ಈಗ ಆ ತಡೆಯನ್ನು ತೆರವು ಮಾಡಲಾಗಿದೆ.

ಸಿನಿಮಾದಲ್ಲಿ ವೈಷ್ಣವರಿಗೆ ಅಪಮಾನ ಮಾಡಲಾಗಿದೆ. ವೈಷ್ಣವ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡುವ ದೃಶ್ಯಗಳು ಸಿನಿಮಾದಲ್ಲಿ ಇವೆಯಾದ್ದರಿಂದ ಸಿನಿಮಾದ ಮೇಲೆ ನಿಷೇಧ ಹೇರಬೇಕು ಎಂದು ತಿರುವಳ್ಳಾವೂರ್​ನ ವ್ಯಕ್ತಿಯೊಬ್ಬರು ಮದ್ರಾಸ್ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದರು. ಅರ್ಜಿಯನ್ನು ಪರಿಗಣಿಸಿದ್ದ ನ್ಯಾಯಾಲಯವು ‘ತಂಗಲಾನ್’ ಸಿನಿಮಾ ಮೇಲೆ ತಾತ್ಕಾಲಿಕ ನಿಷೇಧ ಹೇರಿತ್ತು, ಇದೇ ಕಾರಣದಿಂದ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗಿರಲಿಲ್ಲ.

ಕೆಲ ದಿನಗಳ ಹಿಂದೆ ಅರ್ಜಿಯ ವಿಚಾರಣೆ ನಡೆದು, ‘ತಂಗಲಾನ್’ ಸಿನಿಮಾಕ್ಕೆ ಸಿಬಿಎಫ್​ಸಿ ಈಗಾಗಲೇ ಪ್ರಮಾಣ ಪತ್ರ ನೀಡಿದೆಯಾದ್ದರಿಂದ ಸಿನಿಮಾದ ಮೇಲೆ ನಿಷೇಧ ಹೇರುವಂತಿಲ್ಲ ಎಂದು ನಿರ್ಣಯಿಸಿ, ಹೇರಲಾಗಿದ್ದ ತಾತ್ಕಾಲಿಕ ನಿಷೇಧವನ್ನು ತೆರವು ಮಾಡಲಾಗಿದೆ. ಸಿನಿಮಾದ ಡಿಜಿಟಲ್ ಹಕ್ಕನ್ನು ನೆಟ್​ಫ್ಲಿಕ್ಸ್​ ಖರೀದಿ ಮಾಡಿದ್ದು, ಸಿನಿಮಾ ದೀಪಾವಳಿಗೆ ನೆಟ್​ಫ್ಲಿಕ್ಸ್​ನಲ್ಲಿ ತೆರೆಗೆ ಬರಲಿದೆ.

ಇದನ್ನೂ ಓದಿ:‘ತಂಗಲಾನ್’ ಚಿತ್ರಕ್ಕೆ ಮೊದಲ ಆಫರ್ ಹೋಗಿದ್ದು ಕನ್ನಡದ ಈ ನಟಿಗೆ

ಸಿನಿಮಾದ ದೃಶ್ಯವೊಂದರಲ್ಲಿ ಬುದ್ಧ ಹಾಗೂ ವೈಷ್ಣವರ ಕುರಿತಾದ ದೃಶ್ಯವೊಂದಿದೆ. ಆ ದೃಶ್ಯದಲ್ಲಿ ಪಾತ್ರಧಾರಿಯೊಬ್ಬ ವೈಷ್ಣವ ಸಮುದಾಯದವರ ಬಗ್ಗೆ ಹಾಸ್ಯ ಮಾಡುವ ಸಂಭಾಷಣೆಯೊಂದಿದೆ. ಅಲ್ಲದೆ, ವೈಷ್ಣವ ಮತಕ್ಕಿಂತಲೂ ಬೌದ್ಧ ಮತ ಶ್ರೇಷ್ಠ ಎಂಬ ಹೋಲಿಕೆಯ ದೃಶ್ಯವೂ ಇದೆ ಎನ್ನಲಾಗಿದೆ. ಇದೇ ಕಾರಣಕ್ಕೆ ಸಿನಿಮಾದ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

‘ತಂಗಲಾನ್’ ಸಿನಿಮಾದಲ್ಲಿ ಚಿಯಾನ್ ವಿಕ್ರಂ ಜೊತೆಗೆ ಮಲಯಾಳಂ ನಟಿ ಪಾರ್ವತಿ ಮೆನನ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾವನ್ನು ಪಾ ರಂಜಿತ್ ನಿರ್ದೇಶನ ಮಾಡಿದ್ದು, ಜ್ಞಾನವೇಲು ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ‘ತಂಗಲಾನ್’ ಸಿನಿಮಾ ಬಗ್ಗೆ ಮಾತನಾಡಿರುವ ಜ್ಞಾನವೇಲು. ‘ತಂಗಲಾನ್’ ದೊಡ್ಡ ಸಿನಿಮಾ ಆಗಿರುವ ಕಾರಣ ನೆಟ್​ಫ್ಲಿಕ್ಸ್​ನವರು ಸಿನಿಮಾವನ್ನು ದೀಪಾವಳಿಗೆ ಬಿಡುಗಡೆ ಮಾಡಲು ಯೋಜಿಸಿದ್ದಾರೆ. ದೀಪಾವಳಿಗೆ ಸಿನಿಮಾ ಒಟಿಟಿಗೆ ಬರಲಿದೆ’ ಎಂದು ಖಾತ್ರಿ ಪಡಿಸಿದ್ದರು. ಅದರ ಬೆನ್ನಲ್ಲೆ ಈಗ ಸಿನಿಮಾದ ಮೇಲೆ ಹೇರಲಾಗಿದ್ದ ತಾತ್ಕಾಲಿಕ ನಿಷೇಧ ತೆರವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ