AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ್ಯಸಿಡ್​ ಹಾಕಲು ಮಾಜಿ ಪ್ರಿಯಕರ ನನ್ನನ್ನು ದಾರಿಯಲ್ಲಿ ಅಟ್ಟಾಡಿಸಿಕೊಂಡು ಹೋಗಿದ್ದ; ಕರಾಳ ಸತ್ಯ ಬಿಚ್ಚಿಟ್ಟ ಬಿಗ್​ ಬಾಸ್​ ಸ್ಪರ್ಧಿ

ಬಿಗ್​ ಬಾಸ್​ ಒಟಿಟಿ ಶೋನಲ್ಲಿ ಅಕ್ಷರಾ ಸಿಂಗ್​ ಕಾಣಿಸಿಕೊಂಡಿದ್ದರು. ಆದರೆ, ಅವರು ಅಷ್ಟು ಹೈಲೈಟ್​ ಆಗಿಲ್ಲ. ಈಗ ಅವರು ಮನೆ ಇಂದ ಹೊರ ಬಂದಿದ್ದು, ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ.

‘ಆ್ಯಸಿಡ್​ ಹಾಕಲು ಮಾಜಿ ಪ್ರಿಯಕರ ನನ್ನನ್ನು ದಾರಿಯಲ್ಲಿ ಅಟ್ಟಾಡಿಸಿಕೊಂಡು ಹೋಗಿದ್ದ; ಕರಾಳ ಸತ್ಯ ಬಿಚ್ಚಿಟ್ಟ ಬಿಗ್​ ಬಾಸ್​ ಸ್ಪರ್ಧಿ
‘ಆ್ಸಸಿಡ್​ ಹಾಕಲು ಮಾಜಿ ಪ್ರಿಯಕರ ನನ್ನನ್ನು ದಾರಿಯಲ್ಲಿ ಅಟ್ಟಡಿಸಿಕೊಂಡು ಹೋಗಿದ್ದ; ಕರಾಳ ಸತ್ಯ ಬಿಚ್ಚಿಟ್ಟ ಬಿಗ್​ ಬಾಸ್​ ಸ್ಪರ್ಧಿ
TV9 Web
| Edited By: |

Updated on: Sep 13, 2021 | 3:07 PM

Share

ನಟ-ನಟಿಯರ ಜೀವನ ಅಷ್ಟು ಸುಲಭವಲ್ಲ. ಖಾಸಗಿ ಜೀವನದ ಬಗ್ಗೆ ಹೊರಗೆ ಹೇಳಿಕೊಳ್ಳೋಕೆ ಅನೇಕರು ಹಿಂಜರಿಯುತ್ತಾರೆ. ಆದರೆ, ಕೆಲ ನಟ-ನಟಿಯರು ಈ ಬಗ್ಗೆ ಎಲ್ಲವನ್ನೂ ಓಪನ್​ ಆಗಿ ಹೇಳಿಕೊಳ್ಳುತ್ತಾರೆ. ಭೋಜ್​ಪುರಿ ನಟಿ ಅಕ್ಷರಾ ಸಿಂಗ್​ ತಮ್ಮ ಮಾಜಿ ಪ್ರಿಯಕರ ನೀಡಿದ ತೊಂದರೆ ಬಗ್ಗೆ ಹೇಳಿಕೊಂಡಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಶಾಕ್​ ಆಗಿದ್ದಾರೆ.

ಬಿಗ್​ ಬಾಸ್​ ಒಟಿಟಿ ಶೋನಲ್ಲಿ ಅಕ್ಷರಾ ಸಿಂಗ್​ ಕಾಣಿಸಿಕೊಂಡಿದ್ದರು. ಆದರೆ, ಅವರು ಅಷ್ಟು ಹೈಲೈಟ್​ ಆಗಿಲ್ಲ. ಈಗ ಅವರು ಮನೆ ಇಂದ ಹೊರ ಬಂದಿದ್ದು, ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ಜೀವನದಲ್ಲಾದ ಕಹಿ ಘಟನೆ ಒಂದನ್ನು ಹೇಳಿಕೊಂಡಿದ್ದಾರೆ. ಅವರು ಈ ಮೊದಲು ಪ್ರೀತಿ ಮಾಡಿದ್ದರು. ಆದರೆ, ಕಾರಣಾಂತರಗಳಿಂದ ಅವರ ಲವ್​ ಲೈಫ್​ ಮುರಿದು ಬಿದ್ದಿತ್ತು. ಆದರೆ, ಇಲ್ಲಿಗೆ ಮುಗಿದಿಲ್ಲ. ಅವರು ಪ್ರೀತಿಸಿದ್ದ ಹುಡುಗ ಈ ನಟಿಗೆ ತುಂಬಾನೇ ತೊಂದರೆ ಕೊಟ್ಟಿದ್ದ.

‘ಬ್ರೇಕಪ್​ ಆದ ನಂತರ ವೃತ್ತಿ ಜೀವನವನ್ನು ನಾಶ ಮಾಡುತ್ತೇನೆ, ಕೊಲೆ ಮಾಡುತ್ತೇನೆ ಎನ್ನುವ ಬೆದರಿಕೆ ಬಂತು. ಈ ಬಗ್ಗೆ ನನ್ನ ತಂದೆ ಜತೆ ನಾನು ಮಾತನಾಡಿದ್ದೆ. ಅವರು ನನಗೆ ಸ್ಫೂರ್ತಿ ನೀಡಿದ್ದರು. ನೀನು ನನ್ನ ಕೊಲೆ ಮಾಡುತ್ತೀಯಾ ಎಂದರೆ ಮಾಡು ಎಂದು ನಾನು ಮಾಜಿ ಪ್ರಿಯಕರನಿಗೆ ಹೇಳಿದ್ದೆ. ಏಕೆಂದರೆ, ಸಾವಿನ ಬಗ್ಗೆ ಇದ್ದ ಭಯ ಹೋಗಿತ್ತು. ನನ್ನ ಮಾಜಿ ಪ್ರಿಯಕರ ನನ್ನ ಮೇಲೆ ಆಸಿಡ್​ ದಾಳಿಗೆ ಪ್ರಯತ್ನಿಸಿದ್ದ. ಆತನ ಗೆಳೆಯರಿಗೆ ಆ್ಯಸಿಡ್​ ಬಾಟಲಿ ಕೊಟ್ಟು ಕಳಿಸಿದ್ದ’ ಎಂದಿದ್ದಾರೆ ಅವರು.

‘ಆ್ಯಸಿಡ್​ ಹಾಕೋಕೆ ಬಂದಾಗ ನಾನು ದಾರಿಯಲ್ಲಿ ಓಡಿದ್ದೆ. ಈ ರೀತಿ ಯಾವುದೇ ಮಹಿಳೆಗೂ ಆಗದಿರಲಿ ಎಂದು ದೇವರ ಬಳಿ ಕೇಳಿಕೊಂಡಿದ್ದೆ. ನಂತರ ನನ್ನ ಪ್ರಿಯಕರ ಮತ್ತು ಗೆಳೆಯರಿಂದ ತಪ್ಪಿಸಿಕೊಂಡೆ. ಇದಾದ ನಂತರ ನಾನು ಖಿನ್ನತೆಗೆ ಒಳಗಾಗಿದ್ದೆ’ ಎಂದಿದ್ದಾರೆ ಅಕ್ಷರಾ.

ಅಕ್ಷರಾ ಇತ್ತೀಚೆಗೆ ಬಿಗ್​ ಬಾಸ್​ನಿಂದ ಎಲಿಮಿನೇಟ್​ ಆಗಿದ್ದರು. ಶಮಿತಾ ಶೆಟ್ಟಿ ಹಾಗೂ ಮೂಸೆ ಜಟ್ಟಾನ ಜತೆ ಇವರು ಹೆಚ್ಚು ಕಾಣಿಸಿಕೊಂಡಿದ್ದರು. ಆದರೆ, ಅವರು ಹೈಲೈಟ್​ ಆಗಿಲ್ಲ.

ಇದನ್ನೂ ಓದಿ: ಮೊದಲ ಬಾಯ್​ಫ್ರೆಂಡ್​ ಮೃತಪಟ್ಟಿದ್ದು ಹೇಗೆ? ಅಳುತ್ತಲೇ ಶಮಿತಾ ಶೆಟ್ಟಿ ಬಿಚ್ಚಿಟ್ರು ಶಾಕಿಂಗ್​ ವಿಚಾರ

ಮತ್ತೊಂದು ಹುಡುಗಿ ಜತೆ ಆಪ್ತತೆ; ಮುರಿದು ಬಿತ್ತು ಶಮಿತಾ ಶೆಟ್ಟಿ-ರಾಕೇಶ್ ಬಾಪಟ್ ಸಂಬಂಧ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!