Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬರ್ತಿದೆ ಎರಡು ಡಿಸಾಸ್ಟರ್ ಸಿನಿಮಾ; ಇಲ್ಲಾದರೂ ಸಿಗುತ್ತಾ ಗೆಲುವು?

‘ಭೋಲಾ ಶಂಕರ್’ ಹಾಗೂ ‘ರಾಮಬಾಣಂ’ ಸಿನಿಮಾಗಳು ಥಿಯೇಟರ್​​ನಲ್ಲಿ ಅಟ್ಟರ ಫ್ಲಾಪ್ ಎನಿಸಿಕೊಂಡಿದೆ. ಈಗ ಈ ಎರಡೂ ಸಿನಿಮಾಗಳು ಒಟಿಟಿಗೆ ಬಂದಿವೆ. ಇಲ್ಲಾದರೂ ಸಿನಿಮಾನ ಜನರು ನೋಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಇಂದಿನಿಂದ (ಸೆಪ್ಟೆಂಬರ್ 15) ಚಿತ್ರಗಳು ಒಟಿಟಿಯಲ್ಲಿ ಪ್ರಸಾರ ಕಾಣುತ್ತಿವೆ.

ಒಟಿಟಿಗೆ ಬರ್ತಿದೆ ಎರಡು ಡಿಸಾಸ್ಟರ್ ಸಿನಿಮಾ; ಇಲ್ಲಾದರೂ ಸಿಗುತ್ತಾ ಗೆಲುವು?
ರಾಮ ಬಾಣಂ-ಭೋಲಾ ಶಂಕರ್
Follow us
ರಾಜೇಶ್ ದುಗ್ಗುಮನೆ
|

Updated on: Sep 15, 2023 | 8:06 AM

ದೊಡ್ಡ ಬಜೆಟ್​ನಲ್ಲಿ, ದೊಡ್ಡ ಸ್ಟಾರ್​ಗಳನ್ನು ಇಟ್ಟುಕೊಂಡು ಸಿನಿಮಾ ಮಾಡಿದರೆ ಸಿನಿಮಾ ಗೆದ್ದೇ ಬಿಡುತ್ತದೆ ಎನ್ನುವ ಯಾವುದೇ ಗ್ಯಾರಂಟಿ ಇಲ್ಲ. ಇದಕ್ಕೆ ತಾಜಾ ಉದಾಹರಣೆ ‘ಭೋಲಾ ಶಂಕರ್’ (Bhola Shankar) ಹಾಗೂ ‘ರಾಮಬಾಣಂ’ ಸಿನಿಮಾ. ಎರಡೂ ಸಿನಿಮಾಗಳು ಥಿಯೇಟರ್​​ನಲ್ಲಿ ಅಟ್ಟರ ಫ್ಲಾಪ್ ಎನಿಸಿಕೊಂಡಿದೆ. ಈಗ ಈ ಎರಡೂ ಸಿನಿಮಾಗಳು ಒಟಿಟಿಗೆ ಬಂದಿವೆ. ಇಲ್ಲಾದರೂ ಸಿನಿಮಾನ ಜನರು ನೋಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಇಂದಿನಿಂದ (ಸೆಪ್ಟೆಂಬರ್ 15) ಚಿತ್ರಗಳು ಒಟಿಟಿಯಲ್ಲಿ ಪ್ರಸಾರ ಕಾಣುತ್ತಿವೆ.

‘ಭೋಲಾ ಶಂಕರ್’

ಚಿರಂಜೀವಿ ಅವರಿಗೆ ಇತ್ತೀಚೆಗೆ ದೊಡ್ಡ ಮಟ್ಟದ ಯಶಸ್ಸು ಸಿಗಲಿಲ್ಲ. ಅವರ ನಟನೆಯ ‘ಭೋಲಾ ಶಂಕರ್’ ಸಿನಿಮಾ ಡಿಸಾಸ್ಟರ್ ಪರ್ಫಾರ್ಮೆನ್ಸ್ ನೀಡಿತು. ಚಿರಂಜೀವಿ ಜೊತೆ ತಮನ್ನಾ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್ ಆಗಲಿದೆ. ಈ ಚಿತ್ರವನ್ನು ಜನರು ಯಾವ ರೀತಿಯಲ್ಲಿ ಸ್ವಾಗತಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಮೆಹೆರ್ ರಮೇಶ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ರಾಮಬಾಣಂ

ಗೋಪಿಚಂದ್ ಅವರು ಅಲ್ಲೊಂದು ಇಲ್ಲೊಂದು ಹಿಟ್ ಸಿನಿಮಾ ನೀಡುತ್ತಾರೆ. ಅವರ ಹಲವು ಸಿನಿಮಾಗಳು ಫ್ಲಾಪ್ ಆಗಿವೆ. ‘ರಾಮಬಾಣಂ’ ಸಿನಿಮಾ ಕೂಡ ಸೋತಿದೆ. ಈ ಚಿತ್ರವನ್ನು ಜನರು ಇಷ್ಟಪಡಲಿಲ್ಲ. ಈ ಸಿನಿಮಾ ಆಹಾ ಒಟಿಟಿ ಮೂಲಕ ಪ್ರಸಾರ ಕಾಣುತ್ತಿದೆ. ಅಲ್ಲಿಯೂ ಈ ಚಿತ್ರ ಜನಮೆಚ್ಚುಗೆ ಪಡೆಯುತ್ತದೆ ಎನ್ನುವ ಯಾವುದೇ ನಂಬಿಕೆ ಅಭಿಮಾನಿಗಳಿಗೆ ಉಳಿದುಕೊಂಡಿಲ್ಲ.

ಇದನ್ನೂ ಓದಿ: ಫ್ಲಾಪ್​ನಲ್ಲಿ ತಮ್ಮ ದಾಖಲೆಯನ್ನು ತಾವೇ ಮುರಿದ ಚಿರಂಜೀವಿ ಭೋಲಾ ಶಂಕರ್ ಸಿನಿಮಾದ ನಷ್ಟವೆಷ್ಟು?

ಇದಲ್ಲದೆ ಇನ್ನೂ ಹಲವು ಸಿನಿಮಾಗಳು ಒಟಿಟಿಯಲ್ಲಿ ರಿಲೀಸ್ ಆಗುತ್ತಿವೆ. ಸೂಪರ್ ಹಿಟ್ ಸಿನಿಮಾ ‘ಕೌಸಲ್ಯ ಸುಪ್ರಜಾ ರಾಮ’ ಒಟಿಟಿಗೆ ಬರುತ್ತಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಾಣಲಿದೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಜೀ5 ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ‘ಬೊಂಬೈ ಮೆರಿ ಜಾನ್’ ಸೀಸನ್ 1 ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ