AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬರ್ತಿದೆ ಎರಡು ಡಿಸಾಸ್ಟರ್ ಸಿನಿಮಾ; ಇಲ್ಲಾದರೂ ಸಿಗುತ್ತಾ ಗೆಲುವು?

‘ಭೋಲಾ ಶಂಕರ್’ ಹಾಗೂ ‘ರಾಮಬಾಣಂ’ ಸಿನಿಮಾಗಳು ಥಿಯೇಟರ್​​ನಲ್ಲಿ ಅಟ್ಟರ ಫ್ಲಾಪ್ ಎನಿಸಿಕೊಂಡಿದೆ. ಈಗ ಈ ಎರಡೂ ಸಿನಿಮಾಗಳು ಒಟಿಟಿಗೆ ಬಂದಿವೆ. ಇಲ್ಲಾದರೂ ಸಿನಿಮಾನ ಜನರು ನೋಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಇಂದಿನಿಂದ (ಸೆಪ್ಟೆಂಬರ್ 15) ಚಿತ್ರಗಳು ಒಟಿಟಿಯಲ್ಲಿ ಪ್ರಸಾರ ಕಾಣುತ್ತಿವೆ.

ಒಟಿಟಿಗೆ ಬರ್ತಿದೆ ಎರಡು ಡಿಸಾಸ್ಟರ್ ಸಿನಿಮಾ; ಇಲ್ಲಾದರೂ ಸಿಗುತ್ತಾ ಗೆಲುವು?
ರಾಮ ಬಾಣಂ-ಭೋಲಾ ಶಂಕರ್
ರಾಜೇಶ್ ದುಗ್ಗುಮನೆ
|

Updated on: Sep 15, 2023 | 8:06 AM

Share

ದೊಡ್ಡ ಬಜೆಟ್​ನಲ್ಲಿ, ದೊಡ್ಡ ಸ್ಟಾರ್​ಗಳನ್ನು ಇಟ್ಟುಕೊಂಡು ಸಿನಿಮಾ ಮಾಡಿದರೆ ಸಿನಿಮಾ ಗೆದ್ದೇ ಬಿಡುತ್ತದೆ ಎನ್ನುವ ಯಾವುದೇ ಗ್ಯಾರಂಟಿ ಇಲ್ಲ. ಇದಕ್ಕೆ ತಾಜಾ ಉದಾಹರಣೆ ‘ಭೋಲಾ ಶಂಕರ್’ (Bhola Shankar) ಹಾಗೂ ‘ರಾಮಬಾಣಂ’ ಸಿನಿಮಾ. ಎರಡೂ ಸಿನಿಮಾಗಳು ಥಿಯೇಟರ್​​ನಲ್ಲಿ ಅಟ್ಟರ ಫ್ಲಾಪ್ ಎನಿಸಿಕೊಂಡಿದೆ. ಈಗ ಈ ಎರಡೂ ಸಿನಿಮಾಗಳು ಒಟಿಟಿಗೆ ಬಂದಿವೆ. ಇಲ್ಲಾದರೂ ಸಿನಿಮಾನ ಜನರು ನೋಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಇಂದಿನಿಂದ (ಸೆಪ್ಟೆಂಬರ್ 15) ಚಿತ್ರಗಳು ಒಟಿಟಿಯಲ್ಲಿ ಪ್ರಸಾರ ಕಾಣುತ್ತಿವೆ.

‘ಭೋಲಾ ಶಂಕರ್’

ಚಿರಂಜೀವಿ ಅವರಿಗೆ ಇತ್ತೀಚೆಗೆ ದೊಡ್ಡ ಮಟ್ಟದ ಯಶಸ್ಸು ಸಿಗಲಿಲ್ಲ. ಅವರ ನಟನೆಯ ‘ಭೋಲಾ ಶಂಕರ್’ ಸಿನಿಮಾ ಡಿಸಾಸ್ಟರ್ ಪರ್ಫಾರ್ಮೆನ್ಸ್ ನೀಡಿತು. ಚಿರಂಜೀವಿ ಜೊತೆ ತಮನ್ನಾ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್ ಆಗಲಿದೆ. ಈ ಚಿತ್ರವನ್ನು ಜನರು ಯಾವ ರೀತಿಯಲ್ಲಿ ಸ್ವಾಗತಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಮೆಹೆರ್ ರಮೇಶ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ರಾಮಬಾಣಂ

ಗೋಪಿಚಂದ್ ಅವರು ಅಲ್ಲೊಂದು ಇಲ್ಲೊಂದು ಹಿಟ್ ಸಿನಿಮಾ ನೀಡುತ್ತಾರೆ. ಅವರ ಹಲವು ಸಿನಿಮಾಗಳು ಫ್ಲಾಪ್ ಆಗಿವೆ. ‘ರಾಮಬಾಣಂ’ ಸಿನಿಮಾ ಕೂಡ ಸೋತಿದೆ. ಈ ಚಿತ್ರವನ್ನು ಜನರು ಇಷ್ಟಪಡಲಿಲ್ಲ. ಈ ಸಿನಿಮಾ ಆಹಾ ಒಟಿಟಿ ಮೂಲಕ ಪ್ರಸಾರ ಕಾಣುತ್ತಿದೆ. ಅಲ್ಲಿಯೂ ಈ ಚಿತ್ರ ಜನಮೆಚ್ಚುಗೆ ಪಡೆಯುತ್ತದೆ ಎನ್ನುವ ಯಾವುದೇ ನಂಬಿಕೆ ಅಭಿಮಾನಿಗಳಿಗೆ ಉಳಿದುಕೊಂಡಿಲ್ಲ.

ಇದನ್ನೂ ಓದಿ: ಫ್ಲಾಪ್​ನಲ್ಲಿ ತಮ್ಮ ದಾಖಲೆಯನ್ನು ತಾವೇ ಮುರಿದ ಚಿರಂಜೀವಿ ಭೋಲಾ ಶಂಕರ್ ಸಿನಿಮಾದ ನಷ್ಟವೆಷ್ಟು?

ಇದಲ್ಲದೆ ಇನ್ನೂ ಹಲವು ಸಿನಿಮಾಗಳು ಒಟಿಟಿಯಲ್ಲಿ ರಿಲೀಸ್ ಆಗುತ್ತಿವೆ. ಸೂಪರ್ ಹಿಟ್ ಸಿನಿಮಾ ‘ಕೌಸಲ್ಯ ಸುಪ್ರಜಾ ರಾಮ’ ಒಟಿಟಿಗೆ ಬರುತ್ತಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಾಣಲಿದೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಜೀ5 ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ‘ಬೊಂಬೈ ಮೆರಿ ಜಾನ್’ ಸೀಸನ್ 1 ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ