AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬರ್ತಿದೆ ಎರಡು ಡಿಸಾಸ್ಟರ್ ಸಿನಿಮಾ; ಇಲ್ಲಾದರೂ ಸಿಗುತ್ತಾ ಗೆಲುವು?

‘ಭೋಲಾ ಶಂಕರ್’ ಹಾಗೂ ‘ರಾಮಬಾಣಂ’ ಸಿನಿಮಾಗಳು ಥಿಯೇಟರ್​​ನಲ್ಲಿ ಅಟ್ಟರ ಫ್ಲಾಪ್ ಎನಿಸಿಕೊಂಡಿದೆ. ಈಗ ಈ ಎರಡೂ ಸಿನಿಮಾಗಳು ಒಟಿಟಿಗೆ ಬಂದಿವೆ. ಇಲ್ಲಾದರೂ ಸಿನಿಮಾನ ಜನರು ನೋಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಇಂದಿನಿಂದ (ಸೆಪ್ಟೆಂಬರ್ 15) ಚಿತ್ರಗಳು ಒಟಿಟಿಯಲ್ಲಿ ಪ್ರಸಾರ ಕಾಣುತ್ತಿವೆ.

ಒಟಿಟಿಗೆ ಬರ್ತಿದೆ ಎರಡು ಡಿಸಾಸ್ಟರ್ ಸಿನಿಮಾ; ಇಲ್ಲಾದರೂ ಸಿಗುತ್ತಾ ಗೆಲುವು?
ರಾಮ ಬಾಣಂ-ಭೋಲಾ ಶಂಕರ್
ರಾಜೇಶ್ ದುಗ್ಗುಮನೆ
|

Updated on: Sep 15, 2023 | 8:06 AM

Share

ದೊಡ್ಡ ಬಜೆಟ್​ನಲ್ಲಿ, ದೊಡ್ಡ ಸ್ಟಾರ್​ಗಳನ್ನು ಇಟ್ಟುಕೊಂಡು ಸಿನಿಮಾ ಮಾಡಿದರೆ ಸಿನಿಮಾ ಗೆದ್ದೇ ಬಿಡುತ್ತದೆ ಎನ್ನುವ ಯಾವುದೇ ಗ್ಯಾರಂಟಿ ಇಲ್ಲ. ಇದಕ್ಕೆ ತಾಜಾ ಉದಾಹರಣೆ ‘ಭೋಲಾ ಶಂಕರ್’ (Bhola Shankar) ಹಾಗೂ ‘ರಾಮಬಾಣಂ’ ಸಿನಿಮಾ. ಎರಡೂ ಸಿನಿಮಾಗಳು ಥಿಯೇಟರ್​​ನಲ್ಲಿ ಅಟ್ಟರ ಫ್ಲಾಪ್ ಎನಿಸಿಕೊಂಡಿದೆ. ಈಗ ಈ ಎರಡೂ ಸಿನಿಮಾಗಳು ಒಟಿಟಿಗೆ ಬಂದಿವೆ. ಇಲ್ಲಾದರೂ ಸಿನಿಮಾನ ಜನರು ನೋಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಇಂದಿನಿಂದ (ಸೆಪ್ಟೆಂಬರ್ 15) ಚಿತ್ರಗಳು ಒಟಿಟಿಯಲ್ಲಿ ಪ್ರಸಾರ ಕಾಣುತ್ತಿವೆ.

‘ಭೋಲಾ ಶಂಕರ್’

ಚಿರಂಜೀವಿ ಅವರಿಗೆ ಇತ್ತೀಚೆಗೆ ದೊಡ್ಡ ಮಟ್ಟದ ಯಶಸ್ಸು ಸಿಗಲಿಲ್ಲ. ಅವರ ನಟನೆಯ ‘ಭೋಲಾ ಶಂಕರ್’ ಸಿನಿಮಾ ಡಿಸಾಸ್ಟರ್ ಪರ್ಫಾರ್ಮೆನ್ಸ್ ನೀಡಿತು. ಚಿರಂಜೀವಿ ಜೊತೆ ತಮನ್ನಾ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್ ಆಗಲಿದೆ. ಈ ಚಿತ್ರವನ್ನು ಜನರು ಯಾವ ರೀತಿಯಲ್ಲಿ ಸ್ವಾಗತಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಮೆಹೆರ್ ರಮೇಶ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ರಾಮಬಾಣಂ

ಗೋಪಿಚಂದ್ ಅವರು ಅಲ್ಲೊಂದು ಇಲ್ಲೊಂದು ಹಿಟ್ ಸಿನಿಮಾ ನೀಡುತ್ತಾರೆ. ಅವರ ಹಲವು ಸಿನಿಮಾಗಳು ಫ್ಲಾಪ್ ಆಗಿವೆ. ‘ರಾಮಬಾಣಂ’ ಸಿನಿಮಾ ಕೂಡ ಸೋತಿದೆ. ಈ ಚಿತ್ರವನ್ನು ಜನರು ಇಷ್ಟಪಡಲಿಲ್ಲ. ಈ ಸಿನಿಮಾ ಆಹಾ ಒಟಿಟಿ ಮೂಲಕ ಪ್ರಸಾರ ಕಾಣುತ್ತಿದೆ. ಅಲ್ಲಿಯೂ ಈ ಚಿತ್ರ ಜನಮೆಚ್ಚುಗೆ ಪಡೆಯುತ್ತದೆ ಎನ್ನುವ ಯಾವುದೇ ನಂಬಿಕೆ ಅಭಿಮಾನಿಗಳಿಗೆ ಉಳಿದುಕೊಂಡಿಲ್ಲ.

ಇದನ್ನೂ ಓದಿ: ಫ್ಲಾಪ್​ನಲ್ಲಿ ತಮ್ಮ ದಾಖಲೆಯನ್ನು ತಾವೇ ಮುರಿದ ಚಿರಂಜೀವಿ ಭೋಲಾ ಶಂಕರ್ ಸಿನಿಮಾದ ನಷ್ಟವೆಷ್ಟು?

ಇದಲ್ಲದೆ ಇನ್ನೂ ಹಲವು ಸಿನಿಮಾಗಳು ಒಟಿಟಿಯಲ್ಲಿ ರಿಲೀಸ್ ಆಗುತ್ತಿವೆ. ಸೂಪರ್ ಹಿಟ್ ಸಿನಿಮಾ ‘ಕೌಸಲ್ಯ ಸುಪ್ರಜಾ ರಾಮ’ ಒಟಿಟಿಗೆ ಬರುತ್ತಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಾಣಲಿದೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಜೀ5 ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ‘ಬೊಂಬೈ ಮೆರಿ ಜಾನ್’ ಸೀಸನ್ 1 ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ