AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK: ‘ನೀನು ಹಾಲು ಇದ್ದಂಗೆ, ಒಮ್ಮೆಲೆ ಉಕ್ಕುತ್ತೀಯ’: ಸೋನು ಗೌಡ ವ್ಯಕ್ತಿತ್ವವನ್ನು ಈ ರೀತಿ ಬಣ್ಣಿಸಿದ ಗುರೂಜಿ

Sonu Srinivas Gowda: ನಾಲ್ಕನೇ ವಾರದಲ್ಲಿ ಸೋನು ಶ್ರೀನಿವಾಸ್​ ಗೌಡ ಜೈಲು ಸೇರಿದರು. ಎಲ್ಲರೂ ಸೇರಿ ತಮಗೆ ಕಳಪೆ ಪಟ್ಟ ಕೊಟ್ಟರು ಎಂಬ ಕಾರಣಕ್ಕೆ ಅವರು ತುಂಬ ಬೇಸರ ಮಾಡಿಕೊಂಡರು.

BBK: ‘ನೀನು ಹಾಲು ಇದ್ದಂಗೆ, ಒಮ್ಮೆಲೆ ಉಕ್ಕುತ್ತೀಯ’: ಸೋನು ಗೌಡ ವ್ಯಕ್ತಿತ್ವವನ್ನು ಈ ರೀತಿ ಬಣ್ಣಿಸಿದ ಗುರೂಜಿ
ಆರ್ಯವರ್ಧನ್ ಗುರೂಜಿ, ಸೋನು ಶ್ರೀನಿವಾಸ್ ಗೌಡ
TV9 Web
| Edited By: |

Updated on: Sep 04, 2022 | 5:27 PM

Share

ವೂಟ್​ ಸೆಲೆಕ್ಟ್​ ಮೂಲಕ ಪ್ರಸಾರ ಆಗುತ್ತಿರುವ ‘ಬಿಗ್​ ಬಾಸ್​ ಕನ್ನಡ ಒಟಿಟಿ’ (Bigg Boss Kannada OTT) ಶೋ ಈಗ ನಾಲ್ಕನೇ ವಾರವನ್ನು ಯಶಸ್ವಿಯಾಗಿ ಪೂರೈಸುತ್ತಿದೆ. ಆರನೇ ವಾರಕ್ಕೆ ಈ ಕಾರ್ಯಕ್ರಮ ಮುಕ್ತಾಯ ಆಗಲಿದೆ. ಹಲವು ಬಗೆಯ ವ್ಯಕ್ತಿತ್ವ ಇರುವ ಸ್ಪರ್ಧಿಗಳು ಈ ಶೋನಲ್ಲಿ ಭಾಗಿ ಆಗಿದ್ದಾರೆ. ವೈರಲ್​ ಹುಡುಗಿ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಅವರು ಸಖತ್​ ಹೈಲೈಟ್​ ಆಗುತ್ತಿದ್ದಾರೆ. ತಮಗೆ ಅನಿಸಿದ್ದನ್ನು ನೇರವಾಗಿ ಹೇಳುವ ಮೂಲಕ ಅವರ ಕೆಲವರ ವಿರೋಧವನ್ನೂ ಕಟ್ಟಿಕೊಂಡಿದ್ದಾರೆ. ಬಿಗ್ ಬಾಸ್​ಗೂ ಎದುರುತ್ತರ ನೀಡಿ ಸೋನು ಬೈಯಿಸಿಕೊಂಡಿದ್ದಾರೆ. ಕಳಪೆ ಆಟ ಪ್ರದರ್ಶಿಸಿ ಜೈಲು ಶಿಕ್ಷೆಯನ್ನೂ ಅನುಭವಿಸಿದ್ದಾರೆ. ಒಟ್ಟಾರೆ ಸೋನು ಗೌಡ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಆರ್ಯವರ್ಧನ್​ ಗುರೂಜಿ (Aryavardhan Guruji) ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ.

ನಾಲ್ಕನೇ ವಾರದಲ್ಲಿ ಸೋನು ಶ್ರೀನಿವಾಸ್​ ಗೌಡ ಜೈಲು ಸೇರಿದರು. ಎಲ್ಲರೂ ಸೇರಿ ತಮಗೆ ಕಳಪೆ ಪಟ್ಟ ಕೊಟ್ಟರು ಎಂಬ ಕಾರಣಕ್ಕೆ ಅವರು ತುಂಬ ಬೇಸರ ಮಾಡಿಕೊಂಡರು. ಜೈಲಿನಲ್ಲಿ ಇದ್ದಷ್ಟು ಹೊತ್ತು ಅವರು ಸಿಟ್ಟು ಮಾಡುಕೊಂಡೇ ಇದ್ದರು. ಈ ವೇಳೆ ಅವರನ್ನು ಸಮಾಧಾನ ಮಾಡಲು ಅನೇಕರು ಪ್ರಯತ್ನಿಸಿದರು. ಆರ್ಯವರ್ಧನ್​ ಗುರೂಜಿ ಕೂಡ ಆಗಾಗ ಬಂದು ಮಾತನಾಡಿಸಿದರು.

‘ನಾನು ಗಮನಿಸಿದಂತೆ ನೀನು ಒಂಥರ ಹಾಲು ಇದ್ದಂಗೆ. ಸಿಟ್ಟಾದರೆ ಒಂದೇ ಸಲ ಉಕ್ಕುತ್ತೀಯ. ಪಾತ್ರೆ ಸರಿ ಇಲ್ಲ ಎಂದರೆ ಒಂದೇ ಸಲ ಒಡೆದು ಹೋಗ್ತೀಯ’ ಎಂದು ಆರ್ಯವರ್ಧನ್​ ಗುರೂಜಿ ಹೇಳಿದರು. ಆ ಮಾತು ಕೇಳಿ ಸೋನುಗೆ ನಗು ಬಂತು. ‘ಆದರೆ ನಾನು ಮತ್ತೆ ಹಾಲಾಗಲು ಟ್ರೈ ಮಾಡಲ್ಲ. ಮಾತಾಡ್ತೀನಿ, ನಾರ್ಮಲ್​ ಆಗಿ ಇರ್ತೀನಿ. ಆದರೆ ಮೊದಲು ಇದಷ್ಟು ಪ್ರೀತಿ, ಮೊದಲು ಇದ್ದಷ್ಟು ಕಾಳಜಿ ತೋರಿಸಲ್ಲ. ಅಷ್ಟು ಪ್ರೀತಿ ಇದ್ದಿದ್ದಕ್ಕಾಗಿಯೇ ನನಗೆ ಈ ಜಾಗ’ ಎಂದು ಸೋನು ಗೌಡ ಹೇಳಿದ್ದಾರೆ.

ಸೋನು ಗೌಡ ಮತ್ತು ರಾಕೇಶ್​ ಅಡಿಗ ನಡುವೆ ಉತ್ತಮ ಬಾಂಧವ್ಯ ಬೆಳೆದಿದೆ. ಸೋನು ಜೈಲಿಗೆ ಹೋಗಿದ್ದಕ್ಕೆ ರಾಕೇಶ್​ಗೆ ಬೇಸರ ಆಗಿದೆ. ಹಾಗಾಗಿ ಅವರ ಕೂಡ ಬೇರೆ ಯಾವುದೇ ಆಹಾರ ತಿನ್ನದೇ ಬರೀ ರಾಗಿ ಗಂಜಿ ತಿಂದುಕೊಂಡು ಕಾಲ ಕಳೆದಿದ್ದಾರೆ. ‘ಇದು ಯಾವ ರೀತಿ ಲವ್​ ಸ್ಟೋರಿಯೋ ಗೊತ್ತಾಗ್ತಾ ಇಲ್ಲ’ ಎಂದು ಸಾನ್ಯಾ ಐಯ್ಯರ್​ ಹೇಳಿದರು. ‘ಇದು ಲವ್​ ಅಲ್ಲಮ್ಮ, ಜೈಲಿಗೆ ಕಳಿಸಿದ್ದಕ್ಕೆ ಶಿಕ್ಷೆ’ ಎಂದು ರಾಕೇಶ್​ ಸಮಜಾಯಿಷಿ ನೀಡಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್