AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ ಮನೆಯಲ್ಲಿ ಇರೋದು 9 ಜನ, ಆಗಿದೆ ಎರಡು ಗುಂಪು, ಭುಗಿಲೆದ್ದ ಅಸಮಾಧಾನ

ಈ ವಾರ ರೂಪೇಶ್ ಕ್ಯಾಪ್ಟನ್ ಆಗಿರುವುದರಿಂದ ಅವರ ನಿರ್ಧಾರಗಳನ್ನು ಅನೇಕರು ವಿರೋಧಿಸುತ್ತಿದ್ದಾರೆ. ಎರಡೂ ಗುಂಪುಗಳ ಮಧ್ಯೆ ಅಸಮಾಧಾನ ಭುಗಿಲೆದ್ದಿದೆ.

ಬಿಗ್ ಬಾಸ್​ ಮನೆಯಲ್ಲಿ ಇರೋದು 9 ಜನ, ಆಗಿದೆ ಎರಡು ಗುಂಪು, ಭುಗಿಲೆದ್ದ ಅಸಮಾಧಾನ
ಬಿಗ್ ಬಾಸ್ ಮನೆ
TV9 Web
| Edited By: |

Updated on:Sep 07, 2022 | 9:16 PM

Share

‘ಬಿಗ್ ಬಾಸ್​ ಕನ್ನಡ ಒಟಿಟಿ’ (Bigg Boss OTT) ಐದನೇ ವಾರಕ್ಕೆ ಕಾಲಿಟ್ಟಿದೆ. ಈಗಾಗಲೇ ಏಳು ಮಂದಿ ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದಾರೆ. ಮನೆಯಲ್ಲಿ ಇರುವ 9 ಮಂದಿ ಮಧ್ಯೆ ಟಫ್ ಕಾಂಪಿಟೇಷನ್ ನಡೆಯುತ್ತಿದೆ. ಈ ಮಧ್ಯೆ ಮನೆಯಲ್ಲಿ ಎರಡು ಗುಂಪಾಗಿದೆ. ಎರಡೂ ಗುಂಪಿನಲ್ಲಿ ನಾಲ್ಕು ಮಂದಿ ಇದ್ದಾರೆ. ಒಬ್ಬರು ಯಾವ ಗುಂಪಲ್ಲೂ ಗುರುತಿಸಿಕೊಳ್ಳುತ್ತಿಲ್ಲ. ಈ ವಾರ ಬಿಗ್ ಬಾಸ್ (Bigg Boss) ಮನೆಯಿಂದ ಯಾರೆಲ್ಲ ಔಟ್ ಆಗುತ್ತಾರೆ ಅನ್ನೋದು ಸದ್ಯದ ಕುತೂಹಲ.

ಮನೆಯಲ್ಲಿ ರೂಪೇಶ್ ಶೆಟ್ಟಿ, ನಂದಿನಿ, ಜಶ್ವಂತ್ ಬೋಪಣ್ಣ ಹಾಗೂ ಸಾನ್ಯಾ ಅಯ್ಯರ್ ಒಟ್ಟಾಗಿ ಇದ್ದಾರೆ. ಇವರು ನಾಲ್ಕು ಜನ ಕ್ಲೋಸ್ ಆಗಿದ್ದಾರೆ. ಇವರದ್ದು ಒಂದು ಗುಂಪು ಎಂದು ಸೋನು ಶ್ರೀನಿವಾಸ್ ಗೌಡ ಪರಿಗಣಿಸಿದ್ದಾರೆ. ಈ ಕಾರಣಕ್ಕೆ ತಮ್ಮದೇ ಗುಂಪನ್ನು ಕಟ್ಟಿಕೊಂಡು ಅವರನ್ನು ವಿರೋಧಿಸಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

ಸೋನು ಶ್ರೀನಿವಾಸ್ ಗೌಡ, ಜಯಶ್ರೀ ಆರಾಧ್ಯ, ಸೋಮಣ್ಣ ಮಾಚಿಮಾಡ, ರಾಕೇಶ್ ಒಂದು ಗುಂಪಾಗಿದ್ದಾರೆ. ರೂಪೇಶ್ ಮತ್ತು ಅವರ ತಂಡದವರ ಹೇಳಿಕೆಯನ್ನು ಇವರು ವಿರೋಧಿಸುತ್ತಲೇ ಬಂದಿದ್ದಾರೆ. ಈ ವಾರ ರೂಪೇಶ್ ಕ್ಯಾಪ್ಟನ್ ಆಗಿರುವುದರಿಂದ ಅವರ ನಿರ್ಧಾರಗಳನ್ನು ಅನೇಕರು ಟೀಕಿಸುತ್ತಿದ್ದಾರೆ. ಎರಡೂ ಗುಂಪುಗಳ ಮಧ್ಯೆ ಅಸಮಾಧಾನ ಭುಗಿಲೆದ್ದಿದೆ.

ಇದನ್ನೂ ಓದಿ
Image
ದೊಡ್ಮನೆಯಲ್ಲಿ ಎದೆ ಬಡಿದುಕೊಂಡು ಅತ್ತ ಜಯಶ್ರೀ; ಬಿಗ್​ ಬಾಸ್​ ಶೋನಲ್ಲಿ ಅಂಥದ್ದೇನಾಯ್ತು?
Image
BBK: ಬಿಗ್​ ಬಾಸ್​ಗೆ ಅವಮಾನ ಮಾಡಿದ ಸೋನು ಗೌಡ; ಮುಲಾಜಿಲ್ಲದೇ ಕ್ಲಾಸ್​ ತೆಗೆದುಕೊಂಡ ಕಿಚ್ಚ ಸುದೀಪ್​
Image
ಬಿಗ್​ ಬಾಸ್​ನಲ್ಲಿ ಹುಡುಗರಿಗೆ ಹೊರಗಿನಿಂದ ಸಿಗುತ್ತಿದೆ ಆ ಒಂದು ವಸ್ತು; ಸೋನು ಹೇಳಿಯೇ ಬಿಟ್ರು
Image
‘ಬಿಗ್​ ಬಾಸ್​ ಒಟಿಟಿ’ ಮನೆಯೊಳಗೆ ನಿಜವಾಗಿ ಏನೆಲ್ಲ ನಡೆಯಿತು? ಎಲ್ಲವನ್ನೂ ವಿವರಿಸಿದ ಸ್ಫೂರ್ತಿ ಗೌಡ

ಇನ್ನು, ಆರ್ಯವರ್ಧನ್ ಗುರೂಜಿ ಅವರು ಈ ಎರಡೂ ಗುಂಪಿನಿಂದ ಹೊರಗಿದ್ದಾರೆ. ಅವರು ಎರಡೂ ಗುಂಪಿನ ಜತೆ ಚೆನ್ನಾಗಿ ಬೆರೆಯುತ್ತಿದ್ದಾರೆ. ರೂಪೇಶ್ ಅವರನ್ನು ಮಗ ಎಂದು ಪರಿಗಣಿಸಿದ್ದಾರೆ ಗುರೂಜಿ. ಇನ್ನು, ಸೋನು ಶ್ರೀನಿವಾಸ್ ಗೌಡ, ಸೋಮಣ್ಣ ಜತೆಗೂ ಆರ್ಯವರ್ಧನ್ ಚೆನ್ನಾಗಿದ್ದಾರೆ. ಅಡುಗೆ ಮನೆಯಲ್ಲಿ ಹೆಚ್ಚು ಸಮಯ ಕಳೆಯುವ ಮೂಲಕ ಅವರು ಎರಡೂ ಗುಂಪಿಂದ ಹೊರಗಿದ್ದಾರೆ.

ಈಗಾಗಲೇ ಒಂದು ಗುಂಪಲ್ಲಿ ರೂಪೇಶ್ ಹಾಗೂ ಸಾನ್ಯಾ ಸೇಫ್ ಆಗಿದ್ದಾರೆ. ಇನ್ನು ಮತ್ತೊಂದು ಗುಂಪಲ್ಲಿ ರಾಕೇಶ್ ಅವರು ಸೇಫ್ ಆಗಿದ್ದಾರೆ. ಉಳಿದ ಆರು ಮಂದಿಯಲ್ಲಿ ಒಂದಷ್ಟು ಸ್ಪರ್ಧಿಗಳು ಔಟ್ ಆಗಲಿದ್ದಾರೆ. ಈ ವಾರವೂ ಕಳೆದ ವಾರದಂತೆ ಡಬಲ್ ಎಲಿಮಿನೇಷನ್ ಇರಲಿದೆ ಎನ್ನಲಾಗುತ್ತಿದೆ. ಈ ವಾರ ಉಳಿದುಕೊಂಡವರು ಫಿನಾಲೆ ವೀಕ್​ಗೆ ತೆರಳಲಿದ್ದಾರೆ.

ಇದನ್ನೂ ಓದಿ: ‘ನೀನು ನಾನು ಬೆಸ್ಟ್ ಫ್ರೆಂಡ್ಸ್ ಅಲ್ಲ’-ರೂಪೇಶ್; ‘ನಿನ್ನನ್ನು ಕಳೆದುಕೊಳ್ಳೋಕೆ ಇಷ್ಟ ಇಲ್ಲ’-ಸಾನ್ಯಾ

ಸೆಪ್ಟೆಂಬರ್ 17 ಹಾಗೂ 18 ಬಿಗ್ ಬಾಸ್ ಒಟಿಟಿ ಫಿನಾಲೆ ನಡೆಯಲಿದೆ. ಈ ಪೈಕಿ ಕೆಲವರು ಟಿವಿ ಸೀಸನ್​ಗೆ ಕಾಲಿಡಲಿದ್ದಾರೆ. ಟಿವಿ ಸೀಸನ್​ಗೆ ಯಾರೆಲ್ಲ ಹೊಸ ಸ್ಪರ್ಧಿಗಳು ಬರಲಿದ್ದಾರೆ ಎಂಬ ಕುತೂಹಲವೂ ಮೂಡಿದೆ.

Published On - 9:09 pm, Wed, 7 September 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್