AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ ಬಾಸ್​ ಒಟಿಟಿ ಸೀಸನ್​​ 1’: ದೊಡ್ಮನೆಗೆ ಎಂಟ್ರಿ ನೀಡುವ ಸೆಲೆಬ್ರಿಟಿಗಳು ಇವರೇನಾ?

Bigg Boss Kannada OTT: ಈ ಬಾರಿ ‘ಬಿಗ್​ ಬಾಸ್ ಒಟಿಟಿ’ ಶೋ​ನಲ್ಲಿ ಸಂಪೂರ್ಣ ಸೆಲೆಬ್ರಿಟಿಗಳೇ ಇರಲಿದ್ದಾರೆ. ಪತ್ರಿಕೋದ್ಯಮ, ಸೋಶಿಯಲ್​ ಮೀಡಿಯಾ, ಸಿನಿಮಾ, ಕಿರುತೆರೆ, ರೇಡಿಯೋ ಮುಂತಾದ ಕ್ಷೇತ್ರದ ಜನಪ್ರಿಯ ವ್ಯಕ್ತಿಗಳಿಗೆ ಅವಕಾಶ ನೀಡಲಾಗುತ್ತಿದೆ.

‘ಬಿಗ್​ ಬಾಸ್​ ಒಟಿಟಿ ಸೀಸನ್​​ 1’: ದೊಡ್ಮನೆಗೆ ಎಂಟ್ರಿ ನೀಡುವ ಸೆಲೆಬ್ರಿಟಿಗಳು ಇವರೇನಾ?
ಬಿಗ್ ಬಾಸ್ ಕನ್ನಡ ಒಟಿಟಿ
TV9 Web
| Updated By: ಮದನ್​ ಕುಮಾರ್​|

Updated on:Aug 05, 2022 | 1:27 PM

Share

ಕಿರುತೆರೆ ಲೋಕದ ದೊಡ್ಡ ರಿಯಾಲಿಟಿ ಶೋ ಎನಿಸಿಕೊಂಡಿರುವ ‘ಬಿಗ್​ ಬಾಸ್​’ (Bigg Boss Kannada) ಕಾರ್ಯಕ್ರಮಕ್ಕೆ ಎಲ್ಲ ಭಾಷೆಯಲ್ಲೂ ಅಭಿಮಾನಿಗಳಿದ್ದಾರೆ. ಪ್ರತಿ ವರ್ಷ ಹೊಸತನವನ್ನು ಮೈಗೂಡಿಸಿಕೊಂಡು ಬರುತ್ತಿರುವ ಈ ಶೋ ಈಗ ಒಟಿಟಿ ಮೂಲಕ ಪ್ರಸಾರಕ್ಕೆ ಅಣಿಯಾಗಿದೆ. ಹಿಂದಿಯಲ್ಲಿ ಕಳೆದ ವರ್ಷ ಈ ಪ್ರಯೋಗ ನಡೆದಿತ್ತು. ಈಗ ಕನ್ನಡದಲ್ಲೂ ಮೊದಲ ಬಾರಿಗೆ ಬಿಗ್​ ಬಾಸ್​ ಒಟಿಟಿ (Bigg Boss Kannada OTT) ಪ್ರಾರಂಭ ಆಗುತ್ತಿದೆ. ಆಗಸ್ಟ್​ 6ರಂದು ಸಂಜೆ ಈ ಶೋಗೆ ಅದ್ದೂರಿ ಚಾಲನೆ ಸಿಗಲಿದೆ. ಈ ಬಾರಿ ಯಾರೆಲ್ಲ ಸ್ಪರ್ಧಿಸಲಿದ್ದಾರೆ ಎಂಬ ಕೌತುಕ ಮೂಡಿದೆ. ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಊಹಾಪೂಹಗಳು ಹರಿದಾಡುತ್ತಿವೆ. ಸಂಭಾವ್ಯ ಸ್ಪರ್ಧಿಗಳ ಪಟ್ಟಿಯನ್ನು ‘ಟೈಮ್ಸ್​ ಆಫ್​ ಇಂಡಿಯಾ’ ಪ್ರಕಟ ಮಾಡಿದೆ. ಅದರ ಪ್ರಕಾರ, ರವಿ ಶ್ರೀವತ್ಸ, ಮಿಮಿಕ್ರಿ ಗೋಪಿ, ಗಾಯಕಿ ಆಶಾ ಭಟ್​, ರೇಖಾ ವೇದವ್ಯಾಸ್​ ಮುಂತಾದವರು ಭಾಗವಹಿಸಲಿದ್ದಾರೆ. ಕಿಚ್ಚ ಸುದೀಪ್​ (Kichcha Sudeep) ನಡೆಸಿಕೊಡಲಿರುವ ಈ ಶೋ ನೋಡಲು ಫ್ಯಾನ್ಸ್​ ಕಾಡಿದ್ದಾರೆ.

ಕಿರುತೆರೆ ನಟಿ ನಮ್ರತಾ ಗೌಡ ಅವರು ಈ ಬಾರಿಯ ಬಿಗ್​ ಬಾಸ್​ ಒಟಿಟಿಗೆ ಎಂಟ್ರಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅದೇ ರೀತಿ, ನಟ ತರುಣ್​ ಚಂದ್ರ ಅವರಿಗೂ ಆಫರ್ ಹೋಗಿದೆಯಂತೆ. ಖ್ಯಾತ ನಟಿ ರೇಖಾ ವೇದವ್ಯಾಸ್​ ಅವರು ಕೂಡ ಈ ರಿಯಾಲಿಟಿ ಶೋನಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವಿಚಾರದ ಬಗ್ಗೆ ವಾಹಿನಿ ಕಡೆಯಿಂದಾಗಲೀ, ಸೆಲೆಬ್ರಿಟಿಗಳ ಕಡೆಯಿಂದಾಗಲಿ ಯಾವುದೇ ಹೇಳಿಕೆ ಹೊರಬಿದ್ದಿಲ್ಲ.

ಈ ಬಾರಿ ಬಿಗ್​ ಬಾಸ್​ನಲ್ಲಿ ಸಂಪೂರ್ಣ ಸೆಲೆಬ್ರಿಟಿಗಳೇ ಇರಲಿದ್ದಾರೆ. ಪತ್ರಿಕೋದ್ಯಮ, ಸೋಶಿಯಲ್​ ಮೀಡಿಯಾ, ಸಿನಿಮಾ, ಕಿರುತೆರೆ, ರೇಡಿಯೋ ಮುಂತಾದ ಕ್ಷೇತ್ರದ ಜನಪ್ರಿಯ ವ್ಯಕ್ತಿಗಳಿಗೆ ಅವಕಾಶ ನೀಡಲಾಗುವುದು. ರೀಲ್ಸ್​ನಲ್ಲಿ ಫೇಮಸ್​ ಆದ ಭೂಮಿಕಾ ಬಸವರಾಜ್​, ನಟ-ನಿರ್ದೇಶಕ ನವೀನ್​ ಕೃಷ್ಣ, ಕಿರುತೆರೆ ನಟಿ ಸಾನ್ಯಾ ಅಯ್ಯರ್​ ಮುಂತಾದವರ ಹೆಸರುಗಳು ಕೂಡ ಕೇಳಿಬರುತ್ತಿದೆ.

ಇದನ್ನೂ ಓದಿ
Image
Bigg Boss OTT: ಬಿಗ್​​ ಬಾಸ್​ ಶೋ ಹಿಂದೆ ಸುದೀಪ್​ಗೆ ಹಲವು ಚಾಲೆಂಜ್​; ವೇದಿಕೆಯಲ್ಲಿ ಎಲ್ಲವನ್ನೂ ವಿವರಿಸಿದ ಕಿಚ್ಚ
Image
‘ಬಿಗ್​ ಬಾಸ್ ಒಟಿಟಿ’ಯಲ್ಲಿ ಸುದೀಪ್ ಎಷ್ಟು ದಿನ ಇರುತ್ತಾರೆ, ಸಂಭಾವನೆ ಎಷ್ಟು? ಸುದ್ದಿಗೋಷ್ಠಿಯಲ್ಲಿ ಸಿಕ್ತು ಉತ್ತರ
Image
Coffee Nadu Chandu: ‘ಕಾಫಿ ನಾಡು ಚಂದು ಬಿಗ್​ ಬಾಸ್​ಗೆ ಬರಲಿ’: ಪರಮೇಶ್ವರ್​ ಗುಂಡ್ಕಲ್​ ಬಳಿ ಬೇಡಿಕೆ ಇಟ್ಟ ಫ್ಯಾನ್ಸ್​
Image
BBK 9: ಈ ಬಾರಿ ಕನ್ನಡ ಬಿಗ್​ ಬಾಸ್​ನಲ್ಲಿ ಯಾರೆಲ್ಲ ಇರಬೇಕು? ಈಗಲೇ ಶುರುವಾಗಿದೆ ಚರ್ಚೆ

ಕನ್ನಡದ ವೀಕ್ಷಕರಿಗೆ ‘ಬಿಗ್​ ಬಾಸ್​ ಒಟಿಟಿ’ ಹೊಸದು. ಇದರ ನಿಯಮಗಳಲ್ಲಿ ಕೂಡ ಒಂದಷ್ಟು ಬದಲಾವಣೆ ಇರಲಿದೆ. ದಿನ 24 ಗಂಟೆಗಳ ಕಾಲವೂ ಸ್ಪರ್ಧಿಗಳ ಚಟುವಟಿಕೆಗಳನ್ನು ವೀಕ್ಷಕರು ನೋಡಬಹುದು. ‘ವೂಟ್​ ಸೆಲೆಕ್ಟ್’ ಮೂಲಕ ಈ ಶೋ ಪ್ರಸಾರ ಆಗಲಿದೆ. ಅಂದಾಜು 16 ಸ್ಪರ್ಧಿಗಳಿಗೆ ಅವಕಾಶ ಸಿಗಲಿದೆ. ‘ಬಿಗ್​ ಬಾಸ್​ ಒಟಿಟಿ’ ಮುಗಿದ ಬಳಿಕ ‘ಕಲರ್ಸ್​ ಕನ್ನಡ’ದಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:27 pm, Fri, 5 August 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!