Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ ಬಾಸ್​ ಒಟಿಟಿ ಸೀಸನ್​​ 1’: ದೊಡ್ಮನೆಗೆ ಎಂಟ್ರಿ ನೀಡುವ ಸೆಲೆಬ್ರಿಟಿಗಳು ಇವರೇನಾ?

Bigg Boss Kannada OTT: ಈ ಬಾರಿ ‘ಬಿಗ್​ ಬಾಸ್ ಒಟಿಟಿ’ ಶೋ​ನಲ್ಲಿ ಸಂಪೂರ್ಣ ಸೆಲೆಬ್ರಿಟಿಗಳೇ ಇರಲಿದ್ದಾರೆ. ಪತ್ರಿಕೋದ್ಯಮ, ಸೋಶಿಯಲ್​ ಮೀಡಿಯಾ, ಸಿನಿಮಾ, ಕಿರುತೆರೆ, ರೇಡಿಯೋ ಮುಂತಾದ ಕ್ಷೇತ್ರದ ಜನಪ್ರಿಯ ವ್ಯಕ್ತಿಗಳಿಗೆ ಅವಕಾಶ ನೀಡಲಾಗುತ್ತಿದೆ.

‘ಬಿಗ್​ ಬಾಸ್​ ಒಟಿಟಿ ಸೀಸನ್​​ 1’: ದೊಡ್ಮನೆಗೆ ಎಂಟ್ರಿ ನೀಡುವ ಸೆಲೆಬ್ರಿಟಿಗಳು ಇವರೇನಾ?
ಬಿಗ್ ಬಾಸ್ ಕನ್ನಡ ಒಟಿಟಿ
Follow us
TV9 Web
| Updated By: ಮದನ್​ ಕುಮಾರ್​

Updated on:Aug 05, 2022 | 1:27 PM

ಕಿರುತೆರೆ ಲೋಕದ ದೊಡ್ಡ ರಿಯಾಲಿಟಿ ಶೋ ಎನಿಸಿಕೊಂಡಿರುವ ‘ಬಿಗ್​ ಬಾಸ್​’ (Bigg Boss Kannada) ಕಾರ್ಯಕ್ರಮಕ್ಕೆ ಎಲ್ಲ ಭಾಷೆಯಲ್ಲೂ ಅಭಿಮಾನಿಗಳಿದ್ದಾರೆ. ಪ್ರತಿ ವರ್ಷ ಹೊಸತನವನ್ನು ಮೈಗೂಡಿಸಿಕೊಂಡು ಬರುತ್ತಿರುವ ಈ ಶೋ ಈಗ ಒಟಿಟಿ ಮೂಲಕ ಪ್ರಸಾರಕ್ಕೆ ಅಣಿಯಾಗಿದೆ. ಹಿಂದಿಯಲ್ಲಿ ಕಳೆದ ವರ್ಷ ಈ ಪ್ರಯೋಗ ನಡೆದಿತ್ತು. ಈಗ ಕನ್ನಡದಲ್ಲೂ ಮೊದಲ ಬಾರಿಗೆ ಬಿಗ್​ ಬಾಸ್​ ಒಟಿಟಿ (Bigg Boss Kannada OTT) ಪ್ರಾರಂಭ ಆಗುತ್ತಿದೆ. ಆಗಸ್ಟ್​ 6ರಂದು ಸಂಜೆ ಈ ಶೋಗೆ ಅದ್ದೂರಿ ಚಾಲನೆ ಸಿಗಲಿದೆ. ಈ ಬಾರಿ ಯಾರೆಲ್ಲ ಸ್ಪರ್ಧಿಸಲಿದ್ದಾರೆ ಎಂಬ ಕೌತುಕ ಮೂಡಿದೆ. ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಊಹಾಪೂಹಗಳು ಹರಿದಾಡುತ್ತಿವೆ. ಸಂಭಾವ್ಯ ಸ್ಪರ್ಧಿಗಳ ಪಟ್ಟಿಯನ್ನು ‘ಟೈಮ್ಸ್​ ಆಫ್​ ಇಂಡಿಯಾ’ ಪ್ರಕಟ ಮಾಡಿದೆ. ಅದರ ಪ್ರಕಾರ, ರವಿ ಶ್ರೀವತ್ಸ, ಮಿಮಿಕ್ರಿ ಗೋಪಿ, ಗಾಯಕಿ ಆಶಾ ಭಟ್​, ರೇಖಾ ವೇದವ್ಯಾಸ್​ ಮುಂತಾದವರು ಭಾಗವಹಿಸಲಿದ್ದಾರೆ. ಕಿಚ್ಚ ಸುದೀಪ್​ (Kichcha Sudeep) ನಡೆಸಿಕೊಡಲಿರುವ ಈ ಶೋ ನೋಡಲು ಫ್ಯಾನ್ಸ್​ ಕಾಡಿದ್ದಾರೆ.

ಕಿರುತೆರೆ ನಟಿ ನಮ್ರತಾ ಗೌಡ ಅವರು ಈ ಬಾರಿಯ ಬಿಗ್​ ಬಾಸ್​ ಒಟಿಟಿಗೆ ಎಂಟ್ರಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅದೇ ರೀತಿ, ನಟ ತರುಣ್​ ಚಂದ್ರ ಅವರಿಗೂ ಆಫರ್ ಹೋಗಿದೆಯಂತೆ. ಖ್ಯಾತ ನಟಿ ರೇಖಾ ವೇದವ್ಯಾಸ್​ ಅವರು ಕೂಡ ಈ ರಿಯಾಲಿಟಿ ಶೋನಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವಿಚಾರದ ಬಗ್ಗೆ ವಾಹಿನಿ ಕಡೆಯಿಂದಾಗಲೀ, ಸೆಲೆಬ್ರಿಟಿಗಳ ಕಡೆಯಿಂದಾಗಲಿ ಯಾವುದೇ ಹೇಳಿಕೆ ಹೊರಬಿದ್ದಿಲ್ಲ.

ಈ ಬಾರಿ ಬಿಗ್​ ಬಾಸ್​ನಲ್ಲಿ ಸಂಪೂರ್ಣ ಸೆಲೆಬ್ರಿಟಿಗಳೇ ಇರಲಿದ್ದಾರೆ. ಪತ್ರಿಕೋದ್ಯಮ, ಸೋಶಿಯಲ್​ ಮೀಡಿಯಾ, ಸಿನಿಮಾ, ಕಿರುತೆರೆ, ರೇಡಿಯೋ ಮುಂತಾದ ಕ್ಷೇತ್ರದ ಜನಪ್ರಿಯ ವ್ಯಕ್ತಿಗಳಿಗೆ ಅವಕಾಶ ನೀಡಲಾಗುವುದು. ರೀಲ್ಸ್​ನಲ್ಲಿ ಫೇಮಸ್​ ಆದ ಭೂಮಿಕಾ ಬಸವರಾಜ್​, ನಟ-ನಿರ್ದೇಶಕ ನವೀನ್​ ಕೃಷ್ಣ, ಕಿರುತೆರೆ ನಟಿ ಸಾನ್ಯಾ ಅಯ್ಯರ್​ ಮುಂತಾದವರ ಹೆಸರುಗಳು ಕೂಡ ಕೇಳಿಬರುತ್ತಿದೆ.

ಇದನ್ನೂ ಓದಿ
Image
Bigg Boss OTT: ಬಿಗ್​​ ಬಾಸ್​ ಶೋ ಹಿಂದೆ ಸುದೀಪ್​ಗೆ ಹಲವು ಚಾಲೆಂಜ್​; ವೇದಿಕೆಯಲ್ಲಿ ಎಲ್ಲವನ್ನೂ ವಿವರಿಸಿದ ಕಿಚ್ಚ
Image
‘ಬಿಗ್​ ಬಾಸ್ ಒಟಿಟಿ’ಯಲ್ಲಿ ಸುದೀಪ್ ಎಷ್ಟು ದಿನ ಇರುತ್ತಾರೆ, ಸಂಭಾವನೆ ಎಷ್ಟು? ಸುದ್ದಿಗೋಷ್ಠಿಯಲ್ಲಿ ಸಿಕ್ತು ಉತ್ತರ
Image
Coffee Nadu Chandu: ‘ಕಾಫಿ ನಾಡು ಚಂದು ಬಿಗ್​ ಬಾಸ್​ಗೆ ಬರಲಿ’: ಪರಮೇಶ್ವರ್​ ಗುಂಡ್ಕಲ್​ ಬಳಿ ಬೇಡಿಕೆ ಇಟ್ಟ ಫ್ಯಾನ್ಸ್​
Image
BBK 9: ಈ ಬಾರಿ ಕನ್ನಡ ಬಿಗ್​ ಬಾಸ್​ನಲ್ಲಿ ಯಾರೆಲ್ಲ ಇರಬೇಕು? ಈಗಲೇ ಶುರುವಾಗಿದೆ ಚರ್ಚೆ

ಕನ್ನಡದ ವೀಕ್ಷಕರಿಗೆ ‘ಬಿಗ್​ ಬಾಸ್​ ಒಟಿಟಿ’ ಹೊಸದು. ಇದರ ನಿಯಮಗಳಲ್ಲಿ ಕೂಡ ಒಂದಷ್ಟು ಬದಲಾವಣೆ ಇರಲಿದೆ. ದಿನ 24 ಗಂಟೆಗಳ ಕಾಲವೂ ಸ್ಪರ್ಧಿಗಳ ಚಟುವಟಿಕೆಗಳನ್ನು ವೀಕ್ಷಕರು ನೋಡಬಹುದು. ‘ವೂಟ್​ ಸೆಲೆಕ್ಟ್’ ಮೂಲಕ ಈ ಶೋ ಪ್ರಸಾರ ಆಗಲಿದೆ. ಅಂದಾಜು 16 ಸ್ಪರ್ಧಿಗಳಿಗೆ ಅವಕಾಶ ಸಿಗಲಿದೆ. ‘ಬಿಗ್​ ಬಾಸ್​ ಒಟಿಟಿ’ ಮುಗಿದ ಬಳಿಕ ‘ಕಲರ್ಸ್​ ಕನ್ನಡ’ದಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:27 pm, Fri, 5 August 22

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್