AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿಕ್ಷೆ ಬೇಡುತ್ತಿದ್ದ ಈ ವ್ಯಕ್ತಿ ಬಿಗ್​ ಬಾಸ್​​ಗೆ ಸ್ಪರ್ಧಿ; ಈ ಕಲಾವಿದನ ಬದುಕು ಎಷ್ಟು ಕಷ್ಟ ಇತ್ತು ಗೊತ್ತಾ?

Bigg Boss OTT kannada: ‘ಸೆಲೆಬ್ರಿಟಿ ಲೈಫ್ ಕೆಲವೊಮ್ಮೆ ಚುಚ್ಚುತ್ತೆ. ಯಾವ ಪಾತ್ರ ಸಿಕ್ಕರೂ ಮಾಡ್ತೀನಿ. ಜೀವನ ನಡೆಸಬೇಕಿದೆ. ಈ ಅವಕಾಶದಿಂದ ಜೀವನ ಬದಲಾಗಬಹುದು ಎಂಬ ಉದ್ದೇಶ ಇದೆ’ ಎಂದಿದ್ದಾರೆ ಲೋಕೇಶ್.

ಭಿಕ್ಷೆ ಬೇಡುತ್ತಿದ್ದ ಈ ವ್ಯಕ್ತಿ ಬಿಗ್​ ಬಾಸ್​​ಗೆ ಸ್ಪರ್ಧಿ; ಈ ಕಲಾವಿದನ ಬದುಕು ಎಷ್ಟು ಕಷ್ಟ ಇತ್ತು ಗೊತ್ತಾ?
TV9 Web
| Edited By: |

Updated on:Aug 06, 2022 | 9:01 PM

Share

Bigg Boss OTT Kannada Season 1: ಬಿಗ್ ಬಾಸ್ ಮನೆಗೆ ಬರುವ ಅನೇಕ ಸ್ಪರ್ಧಿಗಳ ಹಿಂದೆ ಒಂದು ಕಷ್ಟದ ಕಥೆ ಇರುತ್ತದೆ. ಮುಂದೆ ಒಂದು ದೊಡ್ಡ ಕನಸು ಇರುತ್ತದೆ. ಅದೇ ರೀತಿ ಈಗ ‘ಬಿಗ್ ಬಾಸ್​​ ಒಟಿಟಿ’ಗೆ ಎಂಟ್ರಿ ಕೊಟ್ಟ ಲೋಕೇಶ್ ಅವರು ಈ ಸಾಲಿಗೆ ಸೇರುತ್ತಾರೆ. ಅವರ ಹಿಂದೆ ಒಂದು ಕಣ್ಣೀರ ಕಥೆ ಇದೆ. ದೊಡ್ಮನೆಯಿಂದ ಬದುಕು ಬದಲಾಗಬಹುದು ಎಂಬ ಕನಸಿದೆ. ಅವರು ತಮ್ಮ ಕಷ್ಟದ ಜೀವನದ ಬಗ್ಗೆ ಮಾತನಾಡಿದ್ದಾರೆ.

‘ಮೊದಲು ನನ್ನ ಕಂಡರೆ ಎಲ್ಲರೂ ನೆಗ್ಲೆಟ್ ಮಾಡುತ್ತಿದ್ದರು. ಈಗ ಸೆಲ್ಫೀ ಕೇಳುತ್ತಾರೆ. ನನ್ನ ಕಥೆಯಿಂದ ಕೆಲವರಿಗೆ ಸ್ಫೂರ್ತಿ ಸಿಗಬಹುದು. ನನ್ನ ತಂದೆಗೆ ಮೊದಲ ಹೆಂಡತಿ ತೀರಿಕೊಂಡರು. ಅವರು ಮತ್ತೆ ಮದುವೆ ಆದರು. ಆ ಜೋಡಿಗೆ ಹುಟ್ಟಿದವನು ನಾನು. 9ನೇ ವಯಸ್ಸಿಗೆ ಮನೆ ಬಿಟ್ಟು ಹೋದೆ. ರೈಲು ಹತ್ತಿ ಬೇರೆ ಬೇರೆ ಊರಿಗೆ ಹೋಗುತ್ತಿದೆ’ ಎಂದು ಕಷ್ಟದ ಕಥೆ ಹೇಳಿಕೊಂಡಿದ್ದಾರೆ ಅವರು.

‘ನಾನು ಪೇಪರ್ ಆಯ್ದುಕೊಂಡು ಜೀವನ ಮಾಡಿದ್ದೀನಿ. ಭಿಕ್ಷೆ ಬೇಡಿದ್ದೀನಿ. ಮೂಕ ಎಂದು ಹೇಳಿಕೊಂಡು ದುಡ್ಡು ಕೇಳಿದ್ದೇನೆ. ಭಿಕ್ಷೆ ಬೇಡುತ್ತಾ ನನ್ನ ನಟನೆ ಆರಂಭ ಆಯಿತು. ಬೆಂಗಳೂರಿನ ಕಬ್ಬನ್ ಪಾರ್ಕ್​ನಲ್ಲಿ ದುಡ್ಡು ಕೇಳುತ್ತಿದ್ದೆ. ನಾನು ಮೂಕ ಎಂದು ಎಲ್ಲರೂ ದುಡ್ಡು ಕೊಡುತ್ತಿದ್ದರು. ಒಂದು ಟ್ರಸ್ಟ್​​ನವರು ನನ್ನನ್ನು ಕರೆದುಕೊಂಡು ಹೋಗಿ ಆಶ್ರಯ ಕೊಟ್ಟರು. ಅವರು ಇರಲಿಲ್ಲ ಎಂದರೆ ನಾನು ಇಲ್ಲಿಯವರೆಗೆ ಬರುತ್ತಿರಲಿಲ್ಲ’ ಎಂದಿದ್ದಾರೆ ಲೋಕೇಶ್.

ಇದನ್ನೂ ಓದಿ: ‘ಬಿಗ್ ಬಾಸ್ ಒಟಿಟಿ ಸ್ಪರ್ಧಿ’ ಸಾನ್ಯಾ ಅಯ್ಯರ್ ಸಖತ್ ಬೋಲ್ಡ್​; ಇಲ್ಲಿವೆ ಚಿತ್ರಗಳು

‘ಸೆಲೆಬ್ರಿಟಿ ಲೈಫ್ ಕೆಲವೊಮ್ಮೆ ಚುಚ್ಚುತ್ತೆ. ಯಾವ ಪಾತ್ರ ಸಿಕ್ಕರೂ ಮಾಡ್ತೀನಿ. ಜೀವನ ನಡೆಸಬೇಕಿದೆ. ಈ ಅವಕಾಶದಿಂದ ಜೀವನ ಬದಲಾಗಬಹುದು ಎಂಬ ಉದ್ದೇಶ ಇದೆ’ ಎಂದಿದ್ದಾರೆ ಅವರು.

Published On - 9:01 pm, Sat, 6 August 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್