ಭಿಕ್ಷೆ ಬೇಡುತ್ತಿದ್ದ ಈ ವ್ಯಕ್ತಿ ಬಿಗ್​ ಬಾಸ್​​ಗೆ ಸ್ಪರ್ಧಿ; ಈ ಕಲಾವಿದನ ಬದುಕು ಎಷ್ಟು ಕಷ್ಟ ಇತ್ತು ಗೊತ್ತಾ?

Bigg Boss OTT kannada: ‘ಸೆಲೆಬ್ರಿಟಿ ಲೈಫ್ ಕೆಲವೊಮ್ಮೆ ಚುಚ್ಚುತ್ತೆ. ಯಾವ ಪಾತ್ರ ಸಿಕ್ಕರೂ ಮಾಡ್ತೀನಿ. ಜೀವನ ನಡೆಸಬೇಕಿದೆ. ಈ ಅವಕಾಶದಿಂದ ಜೀವನ ಬದಲಾಗಬಹುದು ಎಂಬ ಉದ್ದೇಶ ಇದೆ’ ಎಂದಿದ್ದಾರೆ ಲೋಕೇಶ್.

ಭಿಕ್ಷೆ ಬೇಡುತ್ತಿದ್ದ ಈ ವ್ಯಕ್ತಿ ಬಿಗ್​ ಬಾಸ್​​ಗೆ ಸ್ಪರ್ಧಿ; ಈ ಕಲಾವಿದನ ಬದುಕು ಎಷ್ಟು ಕಷ್ಟ ಇತ್ತು ಗೊತ್ತಾ?
Follow us
| Updated By: ರಾಜೇಶ್ ದುಗ್ಗುಮನೆ

Updated on:Aug 06, 2022 | 9:01 PM

Bigg Boss OTT Kannada Season 1: ಬಿಗ್ ಬಾಸ್ ಮನೆಗೆ ಬರುವ ಅನೇಕ ಸ್ಪರ್ಧಿಗಳ ಹಿಂದೆ ಒಂದು ಕಷ್ಟದ ಕಥೆ ಇರುತ್ತದೆ. ಮುಂದೆ ಒಂದು ದೊಡ್ಡ ಕನಸು ಇರುತ್ತದೆ. ಅದೇ ರೀತಿ ಈಗ ‘ಬಿಗ್ ಬಾಸ್​​ ಒಟಿಟಿ’ಗೆ ಎಂಟ್ರಿ ಕೊಟ್ಟ ಲೋಕೇಶ್ ಅವರು ಈ ಸಾಲಿಗೆ ಸೇರುತ್ತಾರೆ. ಅವರ ಹಿಂದೆ ಒಂದು ಕಣ್ಣೀರ ಕಥೆ ಇದೆ. ದೊಡ್ಮನೆಯಿಂದ ಬದುಕು ಬದಲಾಗಬಹುದು ಎಂಬ ಕನಸಿದೆ. ಅವರು ತಮ್ಮ ಕಷ್ಟದ ಜೀವನದ ಬಗ್ಗೆ ಮಾತನಾಡಿದ್ದಾರೆ.

‘ಮೊದಲು ನನ್ನ ಕಂಡರೆ ಎಲ್ಲರೂ ನೆಗ್ಲೆಟ್ ಮಾಡುತ್ತಿದ್ದರು. ಈಗ ಸೆಲ್ಫೀ ಕೇಳುತ್ತಾರೆ. ನನ್ನ ಕಥೆಯಿಂದ ಕೆಲವರಿಗೆ ಸ್ಫೂರ್ತಿ ಸಿಗಬಹುದು. ನನ್ನ ತಂದೆಗೆ ಮೊದಲ ಹೆಂಡತಿ ತೀರಿಕೊಂಡರು. ಅವರು ಮತ್ತೆ ಮದುವೆ ಆದರು. ಆ ಜೋಡಿಗೆ ಹುಟ್ಟಿದವನು ನಾನು. 9ನೇ ವಯಸ್ಸಿಗೆ ಮನೆ ಬಿಟ್ಟು ಹೋದೆ. ರೈಲು ಹತ್ತಿ ಬೇರೆ ಬೇರೆ ಊರಿಗೆ ಹೋಗುತ್ತಿದೆ’ ಎಂದು ಕಷ್ಟದ ಕಥೆ ಹೇಳಿಕೊಂಡಿದ್ದಾರೆ ಅವರು.

‘ನಾನು ಪೇಪರ್ ಆಯ್ದುಕೊಂಡು ಜೀವನ ಮಾಡಿದ್ದೀನಿ. ಭಿಕ್ಷೆ ಬೇಡಿದ್ದೀನಿ. ಮೂಕ ಎಂದು ಹೇಳಿಕೊಂಡು ದುಡ್ಡು ಕೇಳಿದ್ದೇನೆ. ಭಿಕ್ಷೆ ಬೇಡುತ್ತಾ ನನ್ನ ನಟನೆ ಆರಂಭ ಆಯಿತು. ಬೆಂಗಳೂರಿನ ಕಬ್ಬನ್ ಪಾರ್ಕ್​ನಲ್ಲಿ ದುಡ್ಡು ಕೇಳುತ್ತಿದ್ದೆ. ನಾನು ಮೂಕ ಎಂದು ಎಲ್ಲರೂ ದುಡ್ಡು ಕೊಡುತ್ತಿದ್ದರು. ಒಂದು ಟ್ರಸ್ಟ್​​ನವರು ನನ್ನನ್ನು ಕರೆದುಕೊಂಡು ಹೋಗಿ ಆಶ್ರಯ ಕೊಟ್ಟರು. ಅವರು ಇರಲಿಲ್ಲ ಎಂದರೆ ನಾನು ಇಲ್ಲಿಯವರೆಗೆ ಬರುತ್ತಿರಲಿಲ್ಲ’ ಎಂದಿದ್ದಾರೆ ಲೋಕೇಶ್.

ಇದನ್ನೂ ಓದಿ: ‘ಬಿಗ್ ಬಾಸ್ ಒಟಿಟಿ ಸ್ಪರ್ಧಿ’ ಸಾನ್ಯಾ ಅಯ್ಯರ್ ಸಖತ್ ಬೋಲ್ಡ್​; ಇಲ್ಲಿವೆ ಚಿತ್ರಗಳು

‘ಸೆಲೆಬ್ರಿಟಿ ಲೈಫ್ ಕೆಲವೊಮ್ಮೆ ಚುಚ್ಚುತ್ತೆ. ಯಾವ ಪಾತ್ರ ಸಿಕ್ಕರೂ ಮಾಡ್ತೀನಿ. ಜೀವನ ನಡೆಸಬೇಕಿದೆ. ಈ ಅವಕಾಶದಿಂದ ಜೀವನ ಬದಲಾಗಬಹುದು ಎಂಬ ಉದ್ದೇಶ ಇದೆ’ ಎಂದಿದ್ದಾರೆ ಅವರು.

Published On - 9:01 pm, Sat, 6 August 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ