AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಿನೇಷನ್​ನಿಂದ ಈವಾರ ಸೇಫ್ ಆದ ರೂಪೇಶ್​; ಸಂಕಷ್ಟದಲ್ಲಿ ಸೋನು ಶ್ರೀನಿವಾಸ್ ಗೌಡ

ಐದು ಮಂದಿ ಕಡಿಮೆ ಆಗಿರುವುದರಿಂದ ಮನೆಯಲ್ಲಿ ಸ್ಪರ್ಧೆ ಹೆಚ್ಚಾಗಿದೆ. ಈ ವಾರ ರೂಪೇಶ್ ಅವರು ನಾಮಿನೇಷನ್​ನಿಂದ ಬಚಾವ್ ಆಗುವ ಮೂಲಕ ಮುಂದಿನ ವಾರಕ್ಕೆ ಮುಂದುವರಿದಿದ್ದಾರೆ.  

ನಾಮಿನೇಷನ್​ನಿಂದ ಈವಾರ ಸೇಫ್ ಆದ ರೂಪೇಶ್​; ಸಂಕಷ್ಟದಲ್ಲಿ ಸೋನು ಶ್ರೀನಿವಾಸ್ ಗೌಡ
ಸೋನು-ರೂಪೇಶ್
TV9 Web
| Edited By: |

Updated on: Aug 29, 2022 | 9:07 PM

Share

‘ಬಿಗ್ ಬಾಸ್ ಒಟಿಟಿ’ (Bigg Boss OTT) ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಹೊಸ ವಾರದ ಮೊದಲ ದಿನವೇ ಎಲಿಮಿನೇಷನ್​ಗೆ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಕೆಲವರು ನೇರವಾಗಿ ನಾಮಿನೇಟ್ ಆದರೆ, ಇನ್ನೂ ಕೆಲವರನ್ನು ಸ್ಪರ್ಧಿಗಳು ನಾಮಿನೇಟ್ ಮಾಡಿದ್ದಾರೆ. ಈ ವಾರ 11 ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿದ್ದಾರೆ. ಆ ಪೈಕಿ 8 ಮಂದಿ ಎಲಿಮಿನೇಷನ್​ಗೆ ನಾಮಿನೇಟ್ ಆಗಿದ್ದಾರೆ.

ಈಗಾಗಲೇ ಮೂರು ವಾರಗಳಲ್ಲಿ ಐದು ಮಂದಿ ಎಲಿಮಿನೇಟ್ ಆಗಿದ್ದಾರೆ. ಐದು ಮಂದಿ ಪೈಕಿ ಇಬ್ಬರು ಗಾಯಗೊಂಡು ಎಲಿಮಿನೇಟ್ ಆಗಿದ್ದಾರೆ. ಅರ್ಜುನ್ ಹಾಗೂ ಲೋಕೇಶ್ ಅವರು ಗಾಯಗೊಂಡು ಔಟ್ ಆದರು. ಐದು ಮಂದಿ ಕಡಿಮೆ ಆಗಿರುವುದರಿಂದ ಮನೆಯಲ್ಲಿ ಸ್ಪರ್ಧೆ ಹೆಚ್ಚಾಗಿದೆ. ಈ ವಾರ ರೂಪೇಶ್ ಅವರು ನಾಮಿನೇಷನ್​ನಿಂದ ಬಚಾವ್ ಆಗುವ ಮೂಲಕ ಮುಂದಿನ ವಾರಕ್ಕೆ ಮುಂದುವರಿದಿದ್ದಾರೆ.  ಈ ವಾರ ಜಶ್ವಂತ್ ಬೋಪಣ್, ಚೈತ್ರಾ ಹಳ್ಳಿಕೇರಿ, ಅಕ್ಷತಾ, ಸಾನ್ಯಾ ಐಯ್ಯರ್, ರಾಕೇಶ್ ಅಡಿಗ, ಸೋನು ಶ್ರೀನಿವಾಸ್ ಗೌಡ, ನಂದಿನಿ, ಜಯಶ್ರೀ ಆರಾಧ್ಯ ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ.

ಜಶ್ವಂತ್ ಅವರು ಹೆಚ್ಚು ವೋಟ್ ಪಡೆದು ನಾಮಿನೇಟ್ ಆಗಿದ್ದಾರೆ. ಅವರು ಕಳೆದ ಮೂರು ವಾರಗಳಿಂದ ನಾಮಿನೇಟ್ ಆಗಿಲ್ಲ. ಈ ಕಾರಣಕ್ಕೆ ಮನೆಯವರು ಅವರನ್ನು ನಾಮಿನೇಟ್ ಮಾಡಿದ್ದಾರೆ. ಚೈತ್ರಾ ಅವರು ಸೇಫ್ ಗೇಮ್ ಆಡುತ್ತಿದ್ದಾರೆ ಎಂಬ ಕಾರಣಕ್ಕೆ ನಾಮಿನೇಟ್ ಆದರು. ಸೋನು ಶ್ರೀನಿವಾಸ್ ಗೌಡ, ಅಕ್ಷತಾ, ರಾಕೇಶ್ ಹೆಚ್ಚು ವೋಟ್ ಪಡೆದು ಡೇಂಜರ್​ಜೋನ್​ಗೆ ಬಂದರು.

ಇದನ್ನೂ ಓದಿ
Image
Sonu Srinivas Gowda: ರಾತ್ರಿ 2.15ಕ್ಕೆ ಸೋನು ಗೌಡ ಜತೆ ಮಾತಾಡಲು ಬಂದ ರಾಕೇಶ್; ವೈರಲ್​ ಹುಡುಗಿಯ ಪ್ರತಿಕ್ರಿಯೆ ಹೇಗಿತ್ತು?​
Image
Sonu Srinivas Gowda: ಮೂಡ್ ಇಲ್ಲ ಅಂದ್ರೆ ಸೋನು ಶ್ರೀನಿವಾಸ್​ ಗೌಡ 3 ದಿನ ಸ್ನಾನ ಮಾಡಲ್ಲ; ಎಲ್ಲರ ಎದುರು ಸತ್ಯ ಬಯಲು
Image
Sonu Srinivas Gowda: ‘ನೀವು ಹೀಗೆ ಮಾಡಿದ್ರೆ ಈ ಶೋ ನಡೆಯಲ್ಲ’: ಸುದೀಪ್​ ಕೋಪಕ್ಕೆ ಕಾರಣವಾಯ್ತು ಸೋನು ಗೌಡ ವರ್ತನೆ
Image
Sonu Srinivas Gowda: ‘ಸೋನು ಬಾತ್​ ರೂಮ್​ ಯಾಕೆ ಹುಡುಕಲಿಲ್ಲ?’: ವೇದಿಕೆ ಮೇಲೆ ಸುದೀಪ್​ ಕೇಳಿದ್ರು ನೇರ ಪ್ರಶ್ನೆ

ಕ್ಯಾಪ್ಟನ್​ಗೆ ಒಬ್ಬರನ್ನು ನೇರವಾಗಿ ನಾಮಿನೇಟ್ ಮಾಡುವ ಅವಕಾಶವನ್ನು ಬಿಗ್ ಬಾಸ್ ನೀಡಿದರು. ಈ ವೇಳೆ ಅವರು ನಂದಿನಿಯನ್ನು ನೇರವಾಗಿ ನಾಮಿನೇಟ್ ಮಾಡಿದರು. ಇನ್ನು, ಜಯಶ್ರೀ ಅವರು ಕಳೆದ ವಾರವೇ ನಾಮಿನೇಟ್ ಆಗಿದ್ದರು. ಅವರು ಟಾಸ್ಕ್ ಆಡುವಾಗ ಸ್ಪರ್ಧಿಗಳ ಕಣ್ಣಿಗೆ ನೀರು ಹಾಗೂ ಪರ್ಫ್ಯೂಮ್ ಎರಚಿದ್ದರು. ಇದರಿಂದ ಮನೆಯವರ ಕಣ್ಣಿಗೆ ತೊಂದರೆ ಉಂಟಾಗಿತ್ತು. ಈ ಕಾರಣದಿಂದ ಅವರು ನೇರವಾಗಿ ನಾಮಿನೇಟ್ ಆಗಿದ್ದರು.

ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ರೂಪೇಶ್ ಶೆಟ್ಟಿಗೆ ಹೆಚ್ಚುತ್ತಿದೆ ಫ್ಯಾನ್​​ ಬೇಸ್; ವಿಫಲವಾಗಲಿದೆ ಮನೆಯವರ ತಂತ್ರ?

ರೂಪೇಶ್ ಅವರು ಬಿಗ್ ಬಾಸ್ ಮನೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರಿಗೆ ಮನೆಯ ಹೊರಗೆ ಹೆಚ್ಚು ಫ್ಯಾನ್ಸ್ ಇದ್ದಾರೆ. ಈ ವಾರ ಅವರು ಸೇಫ್ ಆಗಿರುವುದರಿಂದ ಫೈನಲ್​ಗೆ ಮತ್ತಷ್ಟು ಹತ್ತಿರ ಆಗಿದ್ದಾರೆ.

Follow Us
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು