AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದೇನಾ ಸಭ್ಯತೆ?’; ಬಿಗ್ ಬಾಸ್ ಮನೆಯಲ್ಲಿ ಅರ್ಧ ನಿಮಿಷ ಲಿಪ್ ಕಿಸ್ ಮಾಡಿದ ಸ್ಪರ್ಧಿಗಳು

ಆಕಾಂಕ್ಷಾ ಹಾಗೂ ಜದ್ ಮಧ್ಯೆ ಏನೋ ನಡೆಯುತ್ತಿದೆ. ಇದು ಅಭಿಮಾನಿಗಳಿಗೂ ಸ್ಪಷ್ಟವಾಗಿದೆ. ಹೀಗಿರುವಾಗಲೇ ಇವರು ಲಿಪ್ ಲಾಕ್ ಮಾಡಿದ್ದಾರೆ.

‘ಇದೇನಾ ಸಭ್ಯತೆ?’; ಬಿಗ್ ಬಾಸ್ ಮನೆಯಲ್ಲಿ ಅರ್ಧ ನಿಮಿಷ ಲಿಪ್ ಕಿಸ್ ಮಾಡಿದ ಸ್ಪರ್ಧಿಗಳು
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on:Jun 30, 2023 | 10:33 AM

Share

‘ಬಿಗ್ ಬಾಸ್’ (Bigg Boss) ಮನೆಯಲ್ಲಿ ಜಗಳಗಳು, ಕಿತ್ತಾಟಗಳು ಕಾಮನ್. ಅದೇ ರೀತಿ ರೊಮ್ಯಾನ್ಸ್ ಕೂಡ ಇಲ್ಲಿ ಸರ್ವೇ ಸಾಮಾನ್ಯ. ದೊಡ್ಮನೆಯಲ್ಲಿ ಅನೇಕ ಲವ್ ಕಹಾನಿಗಳು ಹುಟ್ಟಿಕೊಂಡ ಉದಾಹರಣೆ ಇದೆ. ಕೆಲವೊಮ್ಮೆ ಸ್ಪರ್ಧಿಗಳು ನಡೆದುಕೊಳ್ಳುವ ರೀತಿ ಮಿತಿಮೀರುತ್ತದೆ. ಈಗ ‘ಹಿಂದಿ ಬಿಗ್ ಬಾಸ್ ಒಟಿಟಿ 2’ನಲ್ಲಿ (Bigg Boss OTT) ಹಾಗೆಯೇ ಆಗಿದೆ. ಅರ್ಧ ನಿಮಿಷಕ್ಕೂ ಅಧಿಕ ಕಾಲ ಆಕಾಂಕ್ಷಾ ಪುರಿ ಹಾಗೂ ಜದ್ ಹದೀದ್ ಅವರು ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅನೇಕರು ಟೀಕೆ ಮಾಡಿದ್ದಾರೆ. ‘ಇದೇನಾ ಸಭ್ಯತೆ’ ಎಂದು ಪ್ರಶ್ನೆ ಮಾಡಿದ್ದಾರೆ.

ಆಕಾಂಕ್ಷಾ ಹಾಗೂ ಜದ್ ಮಧ್ಯೆ ಏನೋ ನಡೆಯುತ್ತಿದೆ. ಇದು ಅಭಿಮಾನಿಗಳಿಗೂ ಸ್ಪಷ್ಟವಾಗಿದೆ. ಹೀಗಿರುವಾಗಲೇ ಅವಿನಾಶ್ ಸಚ್​​ದೇವ್ ಅವರು ‘ಜದ್​​ಗೆ ಆಕಾಂಕ್ಷಾ ಕಿಸ್ ಮಾಡಬೇಕು’ ಎಂದು ಸವಾಲು ಹಾಕಿದರು. ಈ ಬೆನ್ನಲ್ಲೇ ಇಬ್ಬರೂ ಲಿಪ್ ಲಾಕ್ ಮಾಡಿಕೊಂಡಿದ್ದಾರೆ. ಈ ವೇಳೆ ಪೂಜಾ ಭಟ್ ಮಾತ್ರ ಇರಿಸುಮುರುಸುಗೊಂಡರು. ನಿಲ್ಲಿಸಿ ನಿಲ್ಲಿಸಿ ಎಂದು ಕೂಗಿದರು. ಉಳಿದವರೆಲ್ಲರೂ ಇದನ್ನು ಎಂಜಾಯ್ ಮಾಡುತ್ತಿದ್ದರು.

ಬಿಗ್ ಬಾಸ್ ಫ್ಯಾಮಿಲಿ ಶೋ ಎಂದು ಸಲ್ಮಾನ್ ಖಾನ್ ಅನೇಕ ಬಾರಿ ಹೇಳಿದ್ದಾರೆ. ಆದರೆ, ಈ ರೀತಿಯ ಘಟನೆಗಳು ನಡೆದರೆ ಅದು ಫ್ಯಾಮಿಲಿ ಶೋ ಹೇಗಾಗುತ್ತದೆ ಎಂಬುದು ಅನೇಕರ ಪ್ರಶ್ನೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ಅನೇಕರು ಸಲ್ಮಾನ್ ಖಾನ್ ಅವರನ್ನು ನೇರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಅವಾಂತರ:  ಲೈವ್​ನಲ್ಲಿ ಸಹ ಸ್ಪರ್ಧಿಯ ಬಾಡಿನ ಬೇಕಾಬಿಟ್ಟಿ ಮುಟ್ಟಿದ ಮಾಡೆಲ್ ವಿರುದ್ಧ ಟೀಕೆ

‘ಬಿಗ್ ಬಾಸ್’ ಶೋ ಸ್ಕ್ರಿಪ್ಟೆಡ್ ಅನ್ನೋದು ಅನೇಕರ ಆರೋಪ. ಇದಕ್ಕೆ ಪೂರಕವಾದ ಘಟನೆ ನಡೆಯುತ್ತಿದೆ. ಟಿವಿಗೆ ಹೋಲಿಕೆ ಮಾಡಿದರೆ ಒಟಿಟಿಯಲ್ಲಿ ಬಿಗ್ ಬಾಸ್​ ನೋಡುವವರ ಸಂಖ್ಯೆ ಕಡಿಮೆ. ಈ ಕಾರಣಕ್ಕೆ ಪ್ರೇಕ್ಷಕರನ್ನು ಸೆಳೆಯಲು ಈ ರೀತಿಯ ತಂತ್ರ ಮಾಡಲಾಗುತ್ತಿದೆ ಅನ್ನೋದು ಅನೇಕರ ಆರೋಪ. ಇನ್ನು, ಒಟಿಟಿಯಲ್ಲಿ ಯಾವುದೇ ಕಟ್ಟಳೆಗಳು ಇಲ್ಲ. ಇದರಿಂದಲೂ ಈ ರೀತಿಯ ಘಟನೆಗಳು ನಡೆಯುತ್ತಿವೆ. ಸದ್ಯ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:22 am, Fri, 30 June 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ