AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಬಿಗ್ ಬಾಸ್ ಆಕಾಂಕ್ಷಿಗಳೇ?; ಹಾಗಿದ್ದರೆ ಕಲರ್ಸ್ ಕನ್ನಡ ನೀಡಿದೆ ವಿಶೇಷ ಸೂಚನೆ

Bigg Boss Kannada OTT: ದೊಡ್ಮನೆಗೆ ಹೋಗಬೇಕು ಎಂದು ಅನೇಕರು ನಾನಾ ರೀತಿಯ ಕಸರತ್ತು ನಡೆಸುತ್ತಾರೆ. ಇದರ ಲಾಭ ಪಡೆಯಲು ಅನೇಕ ದುಷ್ಟರು ಹೊಂಚು ಹಾಕುತ್ತಿರುತ್ತಾರೆ. ಈ ಕಾರಣಕ್ಕೆ ಕಲರ್ಸ್ ಕನ್ನಡ ವಾಹಿನಿ ಈ ಬಗ್ಗೆ ಎಚ್ಚರಿಕೆ ನೀಡಿದೆ.

ನೀವು ಬಿಗ್ ಬಾಸ್ ಆಕಾಂಕ್ಷಿಗಳೇ?; ಹಾಗಿದ್ದರೆ ಕಲರ್ಸ್ ಕನ್ನಡ ನೀಡಿದೆ ವಿಶೇಷ ಸೂಚನೆ
ಬಿಗ್ ಬಾಸ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 21, 2022 | 12:11 PM

‘ಬಿಗ್ ಬಾಸ್ ಕನ್ನಡ’ (Bigg Boss Kannada) ಈಗಾಗಲೇ 8 ಸೀಸನ್​ಗಳನ್ನು ಪೂರ್ಣಗೊಳಿಸಿದೆ. ಈಗ ಇದೇ ಮೊದಲ ಬಾರಿಗೆ ಕನ್ನಡದಲ್ಲಿ ‘ಬಿಗ್ ಬಾಸ್ ಒಟಿಟಿ’ (Bigg Boss OTT) ಪ್ರಸಾರ ಕಾಣುತ್ತಿದೆ. ಈ ಬಗ್ಗೆ ವಾಹಿನಿಯವರು ಇನ್ನಷ್ಟೇ ಅಧಿಕೃತ ಘೋಷಣೆ ಮಾಡಬೇಕಿದೆ. ಈ ಮಧ್ಯೆ ಕಲರ್ಸ್​ ಕನ್ನಡ ವಾಹಿನಿ ವಿಶೇಷ ಸೂಚನೆ ಒಂದನ್ನು ಹೊರಡಿಸಿದೆ. ವಾಹಿನಿಯು ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಬಿಗ್​ ಬಾಸ್​ಗೆ ಹೋಗಬೇಕು ಎಂಬುದು ಅನೇಕರ ಕನಸು. ಈ ವೇದಿಕೆಗೆ ಎಂಟ್ರಿ ಪಡೆದರೆ ಸಾಕಷ್ಟು ಜನಪ್ರಿಯತೆ ಸಿಗುತ್ತದೆ. ಸಿನಿಮಾಗಳಿಂದ ಆಫರ್ ಸಿಗುತ್ತದೆ. ಹೀಗಾಗಿ, ದೊಡ್ಮನೆಗೆ ಹೋಗಬೇಕು ಎಂದು ಅನೇಕರು ನಾನಾ ರೀತಿಯ ಕಸರತ್ತು ನಡೆಸುತ್ತಾರೆ. ಇದರ ಲಾಭ ಪಡೆಯಲು ಅನೇಕ ದುಷ್ಟರು ಹೊಂಚು ಹಾಕುತ್ತಿರುತ್ತಾರೆ. ಬಿಗ್ ಬಾಸ್ ಮನೆಗೆ ಕಳುಹಿಸುತ್ತೇನೆ ಎಂದು ನಂಬಿಸಿ ಹಣ ಕಿತ್ತುಕೊಂಡ ಪ್ರಕರಣಗಳೂ ಇವೆ. ಈ ಕಾರಣಕ್ಕೆ ಕಲರ್ಸ್ ಕನ್ನಡ ವಾಹಿನಿ ಈ ಬಗ್ಗೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
‘ಬಡ್ಡೀಸ್​’ ಚಿತ್ರದಲ್ಲಿ ಆ್ಯಕ್ಷನ್​ ಹೀರೋ ಆಗಿ ಅಬ್ಬರಿಸ್ತಾರೆ ‘ಕನ್ನಡತಿ’ ನಟ ಕಿರಣ್​ ರಾಜ್​; ಜೂನ್​ 24ಕ್ಕೆ ರಿಲೀಸ್​
Image
ಹಿಂದಿಗೆ ಡಬ್​ ಆಗುತ್ತಿದೆ ‘ಕನ್ನಡತಿ’ ಧಾರಾವಾಹಿ; ಕಿರಣ್​ ರಾಜ್​-ರಂಜನಿ ರಾಘವನ್ ಫ್ಯಾನ್ಸ್​ಗೆ ಹೆಮ್ಮೆ​
Image
‘ಅವಕಾಶ ಇದ್ದಿದ್ರೆ ನಾನು ಒಂದು ಝೂ ಮಾಡ್ತಿದ್ದೆ’; ‘ಕನ್ನಡತಿ’ ನಟ ಕಿರಣ್​ ರಾಜ್​

‘ಬಿಗ್ ಬಾಸ್ ಆಕಾಂಕ್ಷಿಗಳ ಗಮನಕ್ಕೆ. ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನೀವು ಯಾರಿಗೂ ಹಣ ಕೊಡಬೇಕಾಗಿಲ್ಲ. ಸ್ಪರ್ಧಿಗಳನ್ನು ಆರಿಸುವ ಹೊಣೆಯನ್ನು ಕಲರ್ಸ್ ಕನ್ನಡವು ಯಾವುದೇ ಸಂಸ್ಥೆ ಅಥವಾ ವ್ಯಕ್ತಿಗೆ ವಹಿಸಿಲ್ಲ. ಕಲರ್ಸ್ ಕನ್ನಡ ತಂಡವೇ ನೇರವಾಗಿ ಸ್ಪರ್ಧಿಗಳನ್ನು ಆಯ್ಕೆ ಮಾಡುತ್ತದೆ. ಹಾಗಾಗಿ ಈ ಸಂಬಂಧ ಯಾವುದೇ ಆಡಿಷನ್ ನಡೆಸಲಾಗುತ್ತಿಲ್ಲ. ಬಿಗ್​ ಬಾಸ್ ಮನೆಗೆ ಕಳಿಸುವ ಭರವಸೆ ನೀಡಿ ಯಾರಾದರೂ ನಿಮ್ಮಿಂದ ಹಣ ಕೇಳಿದರೆ ತಕ್ಷಣ ಅಂಥವರ ವಿರುದ್ಧ ಪೊಲೀಸರಿಗೆ ದೂರು ಕೊಡಿ, ಪ್ರವೇಶ ಶುಲ್ಕ, ಠೇವಣಿ, ತರಬೇತಿ -ಇಂಥ ಯಾವುದೇ ಹೆಸರಿನಲ್ಲೂ ನಾವು ಸ್ಪರ್ಧಿಗಳಿಂದ ಹಣ ಪಡೆಯುವುದಿಲ್ಲ ಎಂಬುದು ನೆನಪಿರಲಿ. ಬಿಗ್ ಬಾಸ್ ಕುರಿತ ಸರಿಯಾದ ಮಾಹಿತಿಗೆ ಕಲರ್ಸ್ ಕನ್ನಡ ವಾಹಿನಿ ಅಥವಾ ವೂಟ್‌ನ ಅಧಿಕೃತ ಸೋಶಿಯಲ್ ಮೀಡಿಯಾ ಹ್ಯಾಂಡಲ್‌ಗಳನ್ನು ಮಾತ್ರ ಪರಿಗಣಿಸಿ’ ಎಂದು ಕೋರಲಾಗಿದೆ.

ಇದನ್ನೂ ಓದಿ: ‘ಕನ್ನಡತಿ’ ಧಾರಾವಾಹಿಯಿಂದ ಹೊರ ನಡೆದ ರಕ್ಷಿತ್; ‘ಬಿಗ್ ಬಾಸ್​’ ಎಂಟ್ರಿ ಬಗ್ಗೆ ಶುರು ಆಗಿದೆ ಚರ್ಚೆ

ಮೊದಲು ‘ಬಿಗ್​ ಬಾಸ್ ಒಟಿಟಿ’ ಪ್ರಸಾರ ಕಂಡಿದ್ದು ಹಿಂದಿಯಲ್ಲಿ. ಅಲ್ಲಿ ಇದಕ್ಕೆ ಮೆಚ್ಚುಗೆ ವ್ಯಕ್ತವಾಯಿತು. ಈ ಕಾರಣಕ್ಕೆ ಈ ಪ್ರಯೋಗವನ್ನು ಈಗ ಕನ್ನಡದಲ್ಲೂ ಮಾಡಲಾಗುತ್ತಿದೆ. ವೂಟ್​ ಮೂಲಕ ಈ ಶೋ ಪ್ರಸಾರ ಕಾಣಲಿದೆ ಅನ್ನೋದು ವಿಶೇಷ. ಈಗಾಗಲೇ ಇದರ ಪ್ರೋಮೋ ಶೂಟ್ ಆಗಿದೆ.

Published On - 11:46 am, Thu, 21 July 22

ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ